tag:blogger.com,1999:blog-28181532190588342502024-03-20T17:54:50.582-07:00ಮೌನದ ಮಾತುಬಚ್ಚಿಟ್ಟ ಮಾತನ್ನು ಬಿಚ್ಚಿಡುವ ಯತ್ನ...ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.comBlogger28125tag:blogger.com,1999:blog-2818153219058834250.post-33904668777593448512010-09-24T02:17:00.000-07:002010-09-24T02:37:13.509-07:00<span style="font-weight: bold; color: rgb(0, 0, 102);font-size:180%;" >ಬಹಿಷ್ಕೃತರ ಬದುಕಿನ <span style="color: rgb(204, 0, 0);">ಬೆಳಕಿಂಡಿ</span></span><br /><br /><span style="font-size:130%;"><span style="font-weight: bold;">ಲೈಂಗಿಕ ಕಾರ್ಯಕರ್ತರೇ ನಡೆಸುವ ವಿಶಿಷ್ಟ ಹೊಟೇಲ್ ಅರಮನೆಗಳ ನಗರಿ ಮೈಸೂರಿನಲ್ಲಿದೆ. ಅಲ್ಲಿಗೆ ಇತ್ತೀಚಿಗೆ ಭೇಟಿ ನೀಡಿದ್ದೆ. </span></span><br /><br />ಬೆಳಗ್ಗಿನ ಉಪಾಹಾರಕ್ಕೆಂದು ಆ ಹೊಟೇಲ್ ಒಳಗಡೆ ಕಾಲಿಡುತ್ತಿದ್ದಂತೆ, ಎದುರಿಗಿದ್ದ ದೃಶ್ಯ ಸಾಮಾನ್ಯವಾಗಿರಲಿಲ್ಲ. ಹೊಟೇಲ್ ಎದುರುಭಾಗದಲ್ಲೇ ಕುಳಿತಿದ್ದ ಕ್ಯಾಶಿಯರ್ ಗ್ರಾಹಕರನ್ನು ಸ್ವಾಗತಿಸುತ್ತಿದ್ದದ್ದು, ಸರ್ವರ್ಗಳು ತಿಂಡಿ-ತಿನಿಸುಗಳನ್ನು ಪೂರೈಸಲು ಸಜ್ಜುಗೊಂಡದ್ದು, ಅಂತೆಯೇ ಬಾಣಸಿಗರು ಎಲ್ಲಾ ತಿಂಡಿ-ತಿನಿಸುಗಳೊಂದಿಗೆ ಸಿದ್ಧಗೊಂಡಿದ್ದದ್ದು ಹೊಟೇಲ್ವೊಂದರಲ್ಲಿ ಕಂಡುಬರುವಂತಹ ಸಾಮಾನ್ಯ ದೃಶ್ಯವೇ ಆಗಿತ್ತು. ಆದರೆ ಈ<a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEgdVmjWXZ_JQ5JmyrXw57tHK0WvpijjpvtCvpy-Q910DM1dGPyxsJwPerCgjwWjdPten8nK0iOvHEbswS8Vycv6cSYoEwmM-sAn9xK7U4hSNbglCRcLXAhbG_qWI2fvgK6TtoCqzOf-BO4/s1600/IMG_4898.JPG"><br /></a> ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದ ಕಾರ್ಮಿಕರು ಮಾತ್ರ ಸಾಮಾನ್ಯರಾಗಿರಲಿಲ್ಲ. ಸಮಾಜದಲ್ಲೆದುರಾಗಿದ್ದ ಎಲ್ಲಾ ಅಡೆತಡೆಗಳನ್ನು ಹಿಂದಿಕ್ಕಿ ಮುನ್ನುಗ್ಗಿದ ಆ ಕಾರ್ಮಿಕರು ನಿಜಕ್ಕೂ ಅಸಾಮಾನ್ಯರಾಗೇ ಕಂಡುಬಂದಿದ್ದರು.<br />ವಿಶ್ವವಿಖ್ಯಾತ ಐತಿಹಾಸಿಕ ಮೈಸೂರು ಅರಮನೆಯ ಹಿಂದಿನ ರಸ್ತೆಯ ಅಂತಿಮ ತಿರುವಿನಲ್ಲಿ ನೆಲೆಗೊಂಡಿರುವ ಹೊಟೇಲ್ ’ಆಶೋದಯ’ ಈ ಎಲ್ಲಾ ವಿಭಿನ್ನ, ಅಪರೂಪದ ವೈಶಿಷ್ಟ್ಯತೆಗಳಿಗೆ ಸಾಕ್ಷಿಯಾಗಿದೆ. ಪುರುಷ-ಸ್ತ್ರೀ ಲೈಂಗಿಕ ಕಾರ್ಯಕರ್ತೆಯರು, ಲಿಂಗಪರಿವರ್ತಿತರು ಮತ್ತು ಮಂಗಳಮುಖಿಯರು ಈ ಹೊಟೇಲ್ನ ಕಾರ್ಮಿಕರು! ಈ ಹೊಟೇಲನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಕೂಡ ಅವರದ್ದೇ. ಇಲ್ಲಿ ಲೈಂಗಿಕ ಕಾರ್ಯಕರ್ತರ ಜೊತೆಗೆ ಸಾಮಾನ್ಯ ವರ್ಗದ ಜನರು ಕೂಡ ಸರ್ವರ್, ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದು, ಸಮಾಜದಿಂದ ಹೊರತಳ್ಳಲ್ಪಟ್ಟ, ಬಹಿಷ್ಕಾರಕ್ಕೊಳಗಾದ ಲೈಂಗಿಕ ಕಾರ್ಯಕರ್ತರ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಆಶೋದಯ ಎಂಬ ಹೆಸರಿಗೆ ತಕ್ಕಂತೆ ತುಳಿತಕ್ಕೊಳಗಾದ ವರ್ಗದ ಭರವಸೆಯ ಆಶಾಕಿರಣವೇ ‘ಹೊಟೇಲ್ ಆಶೋದಯ.’<br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEimIDleO2Q0B-4I0q-VI96XvsFSLuxNj9GVnS6il6DNJF2ci5ruilkf6ZEUepmoXUJ3yttCp32nu-lIhvvUzyzlueDRxqzQOlipwZQZpNBU0qiD2NcRErnSWcrs75D8Pef9kYq8Jjzrsf0/s1600/IMG_4892.JPG"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEimIDleO2Q0B-4I0q-VI96XvsFSLuxNj9GVnS6il6DNJF2ci5ruilkf6ZEUepmoXUJ3yttCp32nu-lIhvvUzyzlueDRxqzQOlipwZQZpNBU0qiD2NcRErnSWcrs75D8Pef9kYq8Jjzrsf0/s320/IMG_4892.JPG" alt="" id="BLOGGER_PHOTO_ID_5520409738289723298" border="0" /></a><br />ಲೈಂಗಿಕ ಕಾರ್ಯಕರ್ತರೂ ಮುಖ್ಯವಾಹಿನಿಯಲ್ಲಿ ಸ್ಥಾನ ಪಡೆಯಬೇಕೆಂಬ ಉದ್ದೇಶದಿಂದಲೇ ಆರಂಭವಾದ ’ಆಶೋದಯ’ ಎಂಬ ಸರ್ಕಾರೇತರ ಸಂಸ್ಥೆಯ ಕೂಸು ಈ ’ಹೊಟೇಲ್ ಆಶೋದಯ’. ಸಾಮಾನ್ಯರಂತೆ ನಾವು ಕೂಡ ಹೊಟೇಲ್ ಉದ್ಯಮ ಆರಂಭಿಸಿ ಏಕೆ ನಮ್ಮ ಸಮುದಾಯದ ಜನರಿಗೆ ಹಾಗೂ ಸಾರ್ವಜನಿಕ ವರ್ಗಕ್ಕೆ ನೆರವಾಗರಬಾರದು ಎಂದುಕೊಂಡು ಈ ಹೊಟೇಲನ್ನು ಆರಂಭಿಸಿದೆವು ಎಂದು ವಿವರಣೆ ನೀಡಿದರು ಲೈಂಗಿಕ ಕಾರ್ಯಕರ್ತ ಮತ್ತು ಆಶೋದಯ ಸಂಸ್ಥೆ ಸದಸ್ಯ ಪ್ರಕಾಶ್. ಹೊಟೇಲ್ ಪ್ರಾರಂಭವಾದಲ್ಲಿಂದ ಕ್ಯಾಶಿಯರ್ ಜವಾಬ್ದಾರಿ ಪ್ರಕಾಶ್ ಹೆಗಲ ಮೇಲಿತ್ತಾದರೂ, ಆಶೋದಯದ ಅಂಗ ಸಂಸ್ಥೆ ‘ಅಮೂಲ್ಯ ಜೀವನ್ ನೆಟ್ವರ್ಕ್’ನಲ್ಲಿ ಬಿಡುವಿಲ್ಲದ ಕೆಲಸಗಳಿದ್ದ ಕಾರಣ ಕ್ಯಾಶಿಯರ್ ವ್ಯವಹಾರಗಳನ್ನು ಸಾರ್ವಜನಿಕ ವರ್ಗದ ಹಿರಿಯ ನಾಗರಿಕ ತಿಮ್ಮಯ್ಯ ಆಚಾರ್ ಅವರು ನಿರ್ವಹಿಸುತ್ತಿದ್ದಾರೆ. ಹಾಗಿದ್ದರೂ ಪ್ರಕಾಶ್ ಕೆಲವೊಮ್ಮೆ ಬಂದು ಕ್ಯಾಶಿಯರ್ ಕೆಲಸ ಮಾಡುವುದರ ಜೊತೆಗೆ, ಸಾಂಬಾರ್ ಹಂಡೆಯಲ್ಲಿ ಸೌಟು ಅಲ್ಲಾಡಿಸುವುದುಂಟು!<br /><br />ಮುಂಜಾನೆಯಂದ ಸಂಜೆ ೫ ಅಥವಾ ೫.೩೦ರ ತನಕ ಆಶೋದಯ ಹೊಟೇಲ್ ಹಾಗೂ ಕಚೇರಿ ತೆರೆದಿರುತ್ತದೆ. ಆ ಬಳಿಕ ಇಲ್ಲಿನ ಲೈಂಗಿಕ ಕಾರ್ಯಕರ್ತರು ತಮ್ಮ ವೃತ್ತಿಗೆ ತೆರಳುತ್ತಾರೆ. ಹೊಟೇಲ್ನಲ್ಲಿ ಕಾರ್ಯ ನಿರ್ವಹಿಸುವ ಒಟ್ಟು ಎಂಟು ಮಂದಿಯಲ್ಲಿ ಐವರು ಲೈಂಗಿಕ ಕಾರ್ಯಕರ್ತರಾಗಿದ್ದು ಹೊಟೇಲ್ ಕೆಲಸಗಳನ್ನು ಒಂದು ಸೇವೆಯಾಗಿ ಸ್ವೀಕರಿಸಿದ್ದಾರೆ. ಇನ್ನುಳಿದ ಮೂರು ಮಂದಿ ಸಾರ್ವಜನಿಕ ವರ್ಗದವರಾಗಿದ್ದು, ಹೊಟೇಲ್ ಕೆಲಸವೇ ಅವರ ವೃತ್ತಿ. ಈ ಎಲ್ಲಾ ಕಾರ್ಮಿಕರು ದಿನಗೂಲಿಯನ್ನೇ ಪಡೆಯುತ್ತಿದ್ದಾರೆ. ಉತ್ತಮ ಲಾಭ ಕಂಡುಬಂದಲ್ಲಿ ಅವರ ಆದಾಯ ಮಟ್ಟವೂ ಏರುತ್ತದೆ.<br /><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEjFHs5LVNqPEuyZ9jjCZx_LWm2tOe5_sAE0jDbxkRYegmIgXiFWLu5ndi9UtQrSg4Uc5xGouHV3CZvXh_K9YnfkeV77z_UT5-TCTx2FJDvEXyoO3oojhF10ge8mI-Ds5JNvKi5pumoh7JU/s1600/IMG_4908.JPG"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEjFHs5LVNqPEuyZ9jjCZx_LWm2tOe5_sAE0jDbxkRYegmIgXiFWLu5ndi9UtQrSg4Uc5xGouHV3CZvXh_K9YnfkeV77z_UT5-TCTx2FJDvEXyoO3oojhF10ge8mI-Ds5JNvKi5pumoh7JU/s320/IMG_4908.JPG" alt="" id="BLOGGER_PHOTO_ID_5520411226965812866" border="0" /></a><br /><br />ಲೈಂಗಿಕ ಕಾರ್ಯಕರ್ತರ ಮೇಲಿನ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸುವ ಉದ್ದೇಶ ಮತ್ತು ಎಲ್ಲಾ ಲೈಂಗಿಕ ಕಾರ್ಯಕರ್ತರನ್ನು ಒಗ್ಗೂಡಿಸಿ ಒಂದೇ ವೇದಿಕೆಗೆ ತರುವ ಮಹತ್ವಾಕಾಂಕ್ಷೆ ೨೦೦೪ರಲ್ಲಿ ಆಶೋದಯ ಸಂಸ್ಥೆಯ ಹುಟ್ಟಿಗೆ ನಾಂದಿ ಹಾಡಿತು.<br />ಡಾ. ಸುಶೇನಾ, ಡಾ. ಸುಂದರ್ ರಾಮನ್, ಸೆಂಥಿಲ್ ಹಾಗೂ ಕಾವೇರಿ ಎಂಬ ನಾಲ್ಕು ಮಂದಿ ನಮ್ಮ ಪ್ರಧಾನ ಸಮಿತಿಯಲ್ಲಿದ್ದರು. ಆರಂಭದಲ್ಲಿ ನಾವೇ ಕೆಲವು ಲೈಂಗಿಕ ಕಾರ್ಯಕರ್ತರು ಈ ಸಂಸ್ಥೆಯಲ್ಲಿದ್ದೆವು ಮತ್ತು ಸಾಮಾನ್ಯ ಸಮುದಾಯದ ಕೆಲವರು ತಾಂತ್ರಿಕ ನೆರವು ನೀಡುತ್ತಿದ್ದರು. ದಿನ ಸಾಗಿದಂತೆ ಮೈಸೂರಿನ ಹಲವು ಲೈಂಗಿಕ ಕಾರ್ಯಕರ್ತ/ರ್ತೆಯರು ನಮ್ಮ ಸಂಸ್ಥೆ ಸೇರಲಾರಂಭಿಸಿದರು ಎಂದು ವಿವರಿಸಿದರು ಆಶೋದಯದ ಉಪ ನಿರ್ದೇಶಕ, ಹೊಟೇಲ್ ಯೋಜನೆಯ ಸಂಯೋಜಕ ಮತ್ತು ಲೈಂಗಿಕ ಕಾರ್ಯಕರ್ತ ಅಕ್ರಂ ಪಾಶಾ.<br /><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEgdVmjWXZ_JQ5JmyrXw57tHK0WvpijjpvtCvpy-Q910DM1dGPyxsJwPerCgjwWjdPten8nK0iOvHEbswS8Vycv6cSYoEwmM-sAn9xK7U4hSNbglCRcLXAhbG_qWI2fvgK6TtoCqzOf-BO4/s1600/IMG_4898.JPG"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEgdVmjWXZ_JQ5JmyrXw57tHK0WvpijjpvtCvpy-Q910DM1dGPyxsJwPerCgjwWjdPten8nK0iOvHEbswS8Vycv6cSYoEwmM-sAn9xK7U4hSNbglCRcLXAhbG_qWI2fvgK6TtoCqzOf-BO4/s320/IMG_4898.JPG" alt="" id="BLOGGER_PHOTO_ID_5520410172878899106" border="0" /></a><br /><br />ಆಶೋದಯ ಅಕ್ಯಾಡೆಮಿಯಲ್ಲಿ ಪಾಶಾ ಅವರು ಶೈಕ್ಷಣಿಕ ತರಬೇತುದಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ವೈಯಕ್ತಿಕ ಅನುಭವಗಳನ್ನೇ ಆಧಾರವಾಗಿಟ್ಟುಕೊಂಡು ಇಲ್ಲಿನ ಮಹಿಳಾ, ಲಿಂಗಪರಿವರ್ತಿತ ಹಾಗೂ ಪುರುಷ ಲೈಂಗಿಕ ಕಾರ್ಯಕರ್ತರಿಗೆ ಏಡ್ಸ್ ತಡೆಗಟ್ಟುವ ಕುರಿತಾದ ಆರೋಗ್ಯ, ಕಾನೂನು ವಿಚಾರ ಹಾಗೂ ಕೌಶಲ್ಯವೃದ್ಧಿಗೆ ತರಬೇತಿ ನೀಡುತ್ತೇವೆ ಎನ್ನುತ್ತಾರೆ ಪಾಶಾ.<br />ಏಡ್ಸ್ ಮಹಾಮಾರಿ ಹರಡದಂತೆ ಸಂರಕ್ಷಣಾ ಸೂತ್ರಗಳನ್ನು ಬಳಸಿಕೊಂಡೇ ವೇಶ್ಯಾಟಿಕೆಯಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ಹೇಳುವ ಇಲ್ಲಿನ ಸದಸ್ಯರು, ಕಾಂಡೊಮ್ ಬಳಸದೆ ಯಾವುದೇ ಲೈಂಗಿಕ ಚಟುವಟಿಕೆಯಲ್ಲಿ ಇಲ್ಲಿನ ಕಾರ್ಯಕರ್ತರು ಪಾಲ್ಗೊಳ್ಳುವುದಿಲ್ಲ ಎಂದು ವಾದಿಸುತ್ತಾರೆ. ೨೦೦೪ರಲ್ಲಿ ನಮ್ಮ ಸಂಸ್ಥೆ ಮೂಲಕ ಏಡ್ಸ್ ಪ್ರಮಾಣದ ಕುರಿತು ಸಮೀಕ್ಷೆ ನಡೆಸಲಾಗಿತ್ತು. ಅಂದು ಕಂಡುಬಂದಿದ್ದ ಪ್ರಮಾಣ ಯಾವುದೇ ಕಾರಣಕ್ಕೆ ಏರಿಕೆಯಾಗಬಾರದು ಎಂದು ನಾವಂದುಕೊಂಡಿದ್ದೆವು. ನಾವು ಅದರಲ್ಲಿ ಯಶಸ್ವಿಯಾಗಿದ್ದೇವೆ ಎಂದು ಟಿಎಸ್ಐ ಜೊತೆ ಆಶೋದಯ ಸಂಸ್ಥೆ ತಾಂತ್ರಿಕ ಸಲಹೆಗಾರ್ತಿ ಫಾತಿಮಾ ಅವರು ಮಾಹಿತಿ ಹಂಚಿಕೊಂಡರು.<br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEikNezLpuoGjVcf6_ZGDaxkp0YtJaOUxDP8LEY9hzRtBE3fWztsVBZOHMVrKrWhn5qZkxnQneTsrvFRCT7T-lrANJiD3ASqY5HV51Ex6t49O4p9ppeXWVN5t6OWNiwDi2AzC4jyk6KrCiY/s1600/IMG_4905.JPG"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEikNezLpuoGjVcf6_ZGDaxkp0YtJaOUxDP8LEY9hzRtBE3fWztsVBZOHMVrKrWhn5qZkxnQneTsrvFRCT7T-lrANJiD3ASqY5HV51Ex6t49O4p9ppeXWVN5t6OWNiwDi2AzC4jyk6KrCiY/s320/IMG_4905.JPG" alt="" id="BLOGGER_PHOTO_ID_5520410494080465346" border="0" /></a><br />ಹೊಟೇಲ್ ಉದ್ಯಮದಿಂದ ಬರುವ ಹೆಚ್ಚಿನ ಹಣವನ್ನು ಆಶೋದಯದ ’ಕೇರ್ ಹೋಂ’ ನಿರ್ವಹಣೆಗೆಂದು ಮೀಸಲಿಡಲಾಗುತ್ತದೆ. ಹೊಟೇಲ್ ಆರಂಭವಾದಂದಿನಿಂದ ಇಂದಿನವರೆಗೆ ಇಲ್ಲಿನ ಹಣವನ್ನು ನಾವು ಶೋಷಿತ ಲೈಂಗಿಕ ಕಾರ್ಯಕರ್ತರ ನೆರವಿಗಾಗಿ ಬಳಸಿಕೊಂಡಿದ್ದೇವೆ. ಹಲವು ಅನಾರೋಗ್ಯ ಪೀಡಿತ ಕಾರ್ಯಕರ್ತರು ನಮ್ಮ ಕೇರ್ ಹೋಮ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನಕ್ಕೊಂದು ಬಾರಿ ವೈದ್ಯರು ಕೇರ್ ಹೋಮ್ಗೆ ಭೇಟಿ ನೀಡುತ್ತಿರುತ್ತಾರೆ. ಬಡ ಲೈಂಗಿಕ ಕಾರ್ಯಕರ್ತರಿಗೆ ಕೇರ್ ಹೋಮ್ ಹೊಸ ಬದುಕನ್ನು ಒದಗಿಸಿದೆ ಎಂದು ಆಶೋದಯದ ಕಾರ್ಯವಿಸ್ತರಣೆ ಕುರಿತು ಲೈಂಗಿಕ ಕಾರ್ಯಕರ್ತೆ ನಾಗರತ್ನಮ್ಮ ಅವರು ಮಾಹಿತಿ ನೀಡಿದರು. ಮಂಡ್ಯ ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಕೇರ್ ಹೋಮ್ ಕಾರ್ಯ ನಿರ್ವಹಿಸುತ್ತಿದೆ.<br /><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEihuFcwtmSVLwOry9IX20BF1Kv5v4TeCA_TSBgCINEkwkn_jF0t-RFkCyn9axEiJWAylPB_j9VrTOFd7vrGado51nr2qj0YCHUAQdYzsD6XczoHTHmld8PayKyWyq92034E5h7cxh58Klo/s1600/IMG_4884.JPG"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEihuFcwtmSVLwOry9IX20BF1Kv5v4TeCA_TSBgCINEkwkn_jF0t-RFkCyn9axEiJWAylPB_j9VrTOFd7vrGado51nr2qj0YCHUAQdYzsD6XczoHTHmld8PayKyWyq92034E5h7cxh58Klo/s320/IMG_4884.JPG" alt="" id="BLOGGER_PHOTO_ID_5520410899293756258" border="0" /></a><br /><br />ಲೈಂಗಿಕ ಕಾರ್ಯಕರ್ತೆ ಶಶಿಕಲಾ ಅವರಿಗೆ ಆಶೋದಯ ಸೇರುವ ಮುನ್ನ ಕಾಂಡೊಮ್ ಎಂದರೆ ಏನೆಂದೇ ತಿಳಿದಿರಲಿಲ್ಲ. ಸುರಕ್ಷಿತ ಲೈಂಗಿಕ ಸಂಪರ್ಕಕ್ಕೆ ಬಳಸಲಾಗುವ ವಿಧಾನಗಳ ಬಗ್ಗೆ ನನಗೆ ಏನೂ ಗೊತ್ತಿರಲಿಲ್ಲ. ಆದರೆ ಆಶೋದಯ ಸೇರಿದ ಬಳಿಕ ನನಗೆ ಕಾಂಡೊಮ್ ಬಗ್ಗೆ ಅರಿವು ಮೂಡಿಸಿದರು. ಮೊದಲೆಲ್ಲಾ ನಮ್ಮ ಗ್ರಾಹಕರು ಕರೆದ ಕೂಡಲೇ ನಾನು ವೇಶ್ಯಾವಾಟಿಕೆಗೆ ತೆರಳುತ್ತಿದ್ದೆ ಎಂದು ಆಶೋದಯದಿಂದಾದ ಪ್ರಯೋಜನದ ಬಗ್ಗೆ ಶಶಿಕಲಾ ಹೇಳಿಕೊಂಡರು. ಒಂದು ವೇಳೆ ತಮ್ಮ ಗಿರಾಕಿಗಳಲ್ಲಿ ಕಾಂಡೊಮ್ ಇಲ್ಲ ಎಂದಾದರೆ ಈ ಕಾರ್ಯಕರ್ತರೇ ಕಾಂಡೊಮ್ ಇಟ್ಟುಕೊಂಡಿರುತ್ತಾರೆ. ಕಾಂಡೊಮ್ ಬಳಕೆ ಬೇಡ ಎಂದರೆ ನಾವು ಸೆಕ್ಸ್ಗೆ ಒಪ್ಪುವುದಿಲ್ಲ ಎನ್ನುತ್ತಾರೆ ಅವರು.<br /><br />ಹೊಟೇಲ್ ಆಶೋದಯದಲ್ಲಿ ಗ್ರಾಹಕರಿಗೆ ಉಣಬಡಿಸುವ ಜೊತೆಗೆ ಕ್ಯಾಟರಿಂಗ್ ಸೇವೆಯನ್ನೂ ಒದಗಿಸಲಾಗುತ್ತಿದೆ. ಹಲವು ವಿದ್ಯಾಸಂಸ್ಥೆಗಳು, ಪಾಲಿಕೆ ಕಚೇರಿ ಹಾಗೂ ವಿವಿಧ ಕಂಪನಿಗಳಿಗೆ ಇಲ್ಲಿಂದ ಆಹಾರಗಳನ್ನು ಪೂರೈಸಲಾಗುತ್ತಿದೆ. ಅವರ ಈ ಸೇವೆಗೆ ಉತ್ತಮ ಪ್ರತಿಕ್ರಿಯೆಯೂ ಕೇಳಿಬಂದಿದೆ.<br />ಆರಂಭದ ದಿನಗಳಲ್ಲಿ ಕೇವಲ ಲೈಂಗಿಕ ಕಾರ್ಯಕರ್ತರೇ ಹೊಟೇಲ್ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಆದರೆ ಹೊಟೇಲ್ನ್ನು ಸಾರ್ವಜನಿಕ ವರ್ಗ ಒಪ್ಪುತ್ತಿದ್ದಂತೆಯೇ ಕೆಲವರು ಇಲ್ಲಿ ಕೆಲಸಕ್ಕಾಗಿ ಮುಂದೆ ಬಂದರು. ಇದು ನಿಜಕ್ಕೂ ನಮ್ಮಲ್ಲಿ ಅಚ್ಚರಿ ತಂದಿತ್ತು. ಸಾರ್ವಜನಿಕ ಹಾಗೂ ಲೈಂಗಿಕ ಕಾರ್ಯಕರ್ತರ ಸಮುದಾಯದ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಹೊಟೇಲ್ ಆಶೋದಯದ ಪಾತ್ರ ಬಹುದೊಡ್ಡದು ಎಂದು ಉದ್ಯಮವನ್ನು ಕೊಂಡಾಡಿದರು ಹಿರಿಯ ಸದಸ್ಯೆ ರತ್ನಮ್ಮ. ಮೊದಲು ರತ್ನಮ್ಮ ಅವರೇ ಮುಂದೆ ನಿಂತು ಅಡುಗೆ ಕಾರ್ಯದಿಂದ ಹಿಡಿದು, ಹೊಟೇಲ್ ಕೆಲಸಗಳನ್ನು ನಿರ್ವಹಿಸುತ್ತಿದ್ದರು. ಆದರೆ ಈಗ ಅವರು ತಮ್ಮ ಜವಾಬ್ದಾರಿಯನ್ನು ಇತರರಿಗೂ ವಹಿಸಿ ಅವರಿಗೂ ವೇದಿಕೆ ಒದಗಿಸಿದ್ದಾರೆ. ರತ್ನಮ್ಮ ಅವರು ಆಶೋದಯದ ಮಾಜಿ ಅಧ್ಯಕ್ಷೆ ಕೂಡ. ಸದ್ಯ ಯಶೋಧ ಅವರು ಸಂಸ್ಥೆಯಲ್ಲಿ ನಡೆದ ಚುನಾವಣೆ ಮೂಲಕ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ.<br /><br />ಆಶೋದಯ ಹೊಟೇಲ್ ಕಟ್ಟಡದ ಮೇಲ್ಭಾಗದಲ್ಲೇ ಆಶೋದಯ ಸಂಸ್ಥೆಯ ಕಚೇರಿಯಿದ್ದು, ಹೆಚ್ಚಿನೆಲ್ಲಾ ಸದಸ್ಯರು ದಿನಂಪ್ರತಿ ಇಲ್ಲಿಗೆ ಭೇಟಿ ನೀಡಿ ತಮ್ಮ ಅನುಭವ, ನೋವು, ಭಾವನೆ ಹಾಗೂ ಸಮಸ್ಯೆಗಳನ್ನು ಸಂಸ್ಥೆಯ ಇತರ ಸದಸ್ಯರೊಂದಿಗೆ ಹಂಚಿಕೊಳ್ಳುತ್ತಾರೆ. ಈ ವಿಚಾರ ವಿನಿಮಯದಿಂದಾಗಿ ಕಾರ್ಯಕರ್ತರ ಹಲವು ಸಮಸ್ಯೆಗಳಿಗೆ ಪರಿಹಾರ ಪ್ರಾಪ್ತಿಯಾಗಿದೆ. ತಮ್ಮ ಸಂಗಾತಿಗಳೊಂದಿಗಿನ ಭಿನ್ನಾಭಿಪ್ರಾಯಗಳನ್ನು ಕೂಡ ಲೈಂಗಿಕ ಕಾರ್ಯಕರ್ತರು ನಿವಾರಿಸಿಕೊಳ್ಳುವಲ್ಲಿ ಆಶೋದಯ ಸಹಕಾರಿಯಾಗಿದೆ ಎಂದು ಸದಸ್ಯರು ನೆನೆಸಿಕೊಳ್ಳುತ್ತಾರೆ. ಆಶೋದಯದ ಮೂಲಕ ಹೊಸಬದುಕನ್ನು ಕಂಡುಕೊಂಡಿರುವ ಹಲವು ಕಾರ್ಯಕರ್ತರು ಇಂದು ತಮ್ಮ ಕುಟುಂಬದೊಂದಿಗೆ ನೆಲೆಸಿದ್ದಾರೆ ಎಂಬುದು ಇಲ್ಲಿನ ಅಚ್ಚರಿಗಳಲ್ಲೊಂದು. ಮೈಸೂರಿನಲ್ಲಿರುವ ಒಂದು ಆಶೋದಯ ದೇಶದ ಎಲ್ಲಾ ಲೈಂಗಿಕ ಕಾರ್ಯಕರ್ತರನ್ನು ತಲುಪಲು ಸಾಧ್ಯವಿಲ್ಲ. ಇಂತಹ ಹಲವು ಆಶೋದಯಗಳ ಜನನವಾಗಬೇಕು ಎಂದು ಅಭಿಪ್ರಾಯಪಡುತ್ತಾರೆ ಕಾರ್ಯಕರ್ತ ಜಿನೇಂದ್ರ.<br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEgqpJRypdC6CBYG6nVCAahXxxXe6bRwMCow2r6gDeKjifOaWgs3xaOPHPYoxorN4lWQUJfelZaRMMMOXnKH_1aRkLzFfJIqZL1bUbtwSmgIrRTWQrRNmGUoUnAIXkyu25O00SX87z4t2vA/s1600/IMG_4890.JPG"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEgqpJRypdC6CBYG6nVCAahXxxXe6bRwMCow2r6gDeKjifOaWgs3xaOPHPYoxorN4lWQUJfelZaRMMMOXnKH_1aRkLzFfJIqZL1bUbtwSmgIrRTWQrRNmGUoUnAIXkyu25O00SX87z4t2vA/s320/IMG_4890.JPG" alt="" id="BLOGGER_PHOTO_ID_5520411573957857922" border="0" /></a><br />ಅನಾಥ ಮಕ್ಕಳಿಗೆ ರಕ್ಷಣೆ ನೀಡುವುದು, ಅಪರಿಚಿತ, ಅನಾಥ ಲೈಂಗಿಕ ಕಾರ್ಯಕರ್ತರು ನಿಧನ ಹೊಂದಿದಾಗ ಶವಸಂಸ್ಕಾರ ನೆರವೇರಿಸುವುದು ಸೇರಿದಂತೆ ಅಕ್ರಮ ಮಕ್ಕಳ ಸಾಗಣೆ, ಮಕ್ಕಳು (೧೮ ವರ್ಷದಿಂದ ಕೆಳಗೆ) ಲೈಂಗಿಕ ಚಟುವಟಿಕೆಯಲ್ಲಿ ತೊಡಗುವ ವಿರುದ್ಧವೂ ಧ್ವನಿ ಎತ್ತುವ ಕಾರ್ಯ ಆಶೋದಯ ಸದಸ್ಯರಿಂದ ನಡೆಯುತ್ತಿದೆ. ಕಳೆದ ವರ್ಷ ಭೀಕರ ಮುಸಲಧಾರೆಯಿಂದ ಕಂಗೆಟ್ಟಿದ್ದ ಉತ್ತರ ಕರ್ನಾಟಕದ ಸಂತ್ರಸ್ತರಿಗೆಂದೇ ಆಶೋದಯ ರೂ ೫೦,೦೦೦ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿ ಮಾನವೀಯತೆ ಮೆರೆದಿತ್ತು.<br /><br />ವೇಶ್ಯಾವಾಟಿಕೆ ನಮ್ಮ ವೃತ್ತಿ. ಇದನ್ನು ಸಮಾಜ ಒಪ್ಪಿಕೊಳ್ಳಬೇಕು. ಯಾರೂ ಕೂಡ ನಮ್ಮ ಮೇಲೆ ಕನಿಕರ ತೋರುವ ಅಗತ್ಯವಿಲ್ಲ. ಪ್ರಾಮಾಣಿಕ ಮಾರ್ಗದಲ್ಲೇ ನಾವು ನಮ್ಮ ವೃತ್ತಿಯನ್ನು ನಡೆಸಿಕೊಂಡು ಬರುತ್ತಿದ್ದೇವೆ. ಒತ್ತಾಯದ ಲೈಂಗಿಕ ಸಂಪರ್ಕಕ್ಕೆ ನಾವು ಮುಂದಾಗಿಲ್ಲ ಮತ್ತು ಯಾರ ಹಣವನ್ನೂ ಕಬಳಿಸಿಲ್ಲ ಎಂದು ಲಿಂಗಪರಿವರ್ತಿತ ಗಿರಿಜಾ ಹೇಳುತ್ತಾರೆ.<br /><br />ವಿಶ್ವಬ್ಯಾಂಕ್ ನೀಡಿದ್ದ ರೂ. ೧.೫ ಲಕ್ಷ ನೆರವಿನಿಂದ ೨೦೦೮ರಲ್ಲಿ ಹೊಟೇಲ್ ಆಶೋದಯ ಅಸ್ತಿತ್ವಕ್ಕೆ ಬಂತು. ಅಂದಿನಿಂದ ಲೈಂಗಿಕ ಕಾರ್ಯಕರ್ತರು ತಮ್ಮ ಮನೋಧರ್ಮವನ್ನೇ ಬದಲಿಸಿಕೊಂಡಿದ್ದಾರೆ. ಹಲವರಲ್ಲಿ ಕೀಳರಿಮೆ ಮಾಯವಾಗಿದೆ. ತಾವೂ ಸಮಾಜದ ಒಂದು ಭಾಗವಾಗಿದ್ದೇವೆ ಎಂಬ ಹರ್ಷ ರಾರಾಜಿಸುತ್ತಿದೆ. ಬದುಕನ್ನು ಕಟ್ಟುವಲ್ಲಿ ಸೋತು ಹೆಣಗಾಡುವ ಲೈಂಗಿಕ ಕಾರ್ಯಕರ್ತರಿಗೆ ಭರವಸೆಯ ಬೆಳಕಿಂಡಿಯಾಗಿರುವ ಮೈಸೂರಿನ ಆಶೋದಯ ಶೋಷಿತ ವರ್ಗಕ್ಕೆ ಹೊಸ ಬದುಕೊಂದನ್ನು ಕಟ್ಟಿಕೊಟ್ಟಿದೆ.ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com3tag:blogger.com,1999:blog-2818153219058834250.post-19330604772518557442010-09-09T02:15:00.000-07:002010-09-09T02:40:39.911-07:00<span style="color: rgb(153, 0, 0);font-size:180%;" ><span style="font-weight: bold;">ಬಡವನ ಮೇಲೆ ಬುಲ್ಡೋಜರ್</span></span><br /><br /><span style="font-weight: bold;"> ‘ಅಭಿವೃದ್ಧಿ ಹೆಸರಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ. ವಿಶೇಷ ವಿತ್ತ ವಲಯ ನಿರ್ಮಾಣಕ್ಕಾಗಿ ಎರಡನೇ ಹಂತದ ೨೦೩೫ ಎಕರೆ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಕೆಐಎಡಿಬಿ ತನ್ನ ‘ಕರ್ತವ್ಯಕ್ಕೆ ಸಿದ್ಧಗೊಂಡಿದೆ. ಹಳ್ಳಿಗರೂ ಕೂಡ ‘ಯುದ್ಧಕ್ಕೆ ಸಿದ್ಧರಾಗಿದ್ದಾರೆ </span><br /><br />ಒಂಜಿ ಸಾಮಾನು ದಾದಾಂಡಲ ದೀಕ ಪಂಡ ಜಾಗ ಇಜ್ಜಿ ಮಾರ್ರೆ... ತೂಲೆ ಇರೆಗ್ ಕೊರ್ನ ಪೆಲಕ್ಕಾಯಿನ್ ಸೊಳೆ ಪಾಡ್ರೆ ತಡ್ಪೆ ಸಮೆತ ಇಜ್ಜಿ (ಏನಾದರೂ ಸಾಮಗ್ರಿ ಇಡೋಣ ಎಂದರೆ ಈಗ ಜಾಗವಿಲ್ಲ... ನಿಮಗೆ ಕೊಟ್ಟ ಹಲಸಿನ ಸೊಳೆಯನ್ನು ಇಡಲು ಒಂದು ತಡ್ಪೆ ಕೂಡ ಇಲ್ಲ) ಎಂದು ಮೇರಿ ಪತ್ರಾವೋ ಅವರು ಅಡುಗೆ ಕೋಣೆ ಬಳಿ ನಿಂತು ತಮ್ಮ ಸೆರಗಿನಿಂದ ಕಣ್ಣೀರನ್ನು ಒರೆಸುತ್ತಿದ್ದ ದೃಶ್ಯವೇ ಎಂಆರ್ಪಿಎಲ್ ಮತ್ತು ಕೆಐಎಡಿಬಿ ತಂದಿಟ್ಟಿರುವ ಅವಾಂತರಗಳನ್ನು ಬಯಲುಗೊಳಿಸಿದ್ದವು.ಮೇರಿ ಪತ್ರಾವೋ ಗ್ರೆಗರಿ ಪತ್ರಾವೋ ಅವರ ತಾಯಿ. ಏಪ್ರಿಲ್ ೨೮ರಂದು ಕೆಐಎಡಿಬಿ ಅಧಿಕಾರಿಗಳ ನೇತೃತ್ವದಲ್ಲಿ ಮನೆ ಕೆಡವಲು ಮುಂದಾಗಿದ್ದ ಅಧಿಕಾರಿಗಳನ್ನು ಗ್ರೆಗರಿ ಕುಟುಂಬ ಅಂಗಲಾಚಿ ಬೇಡಿಕೊಂಡಿದ್ದರೂ, ಆ ಮನೆಯನ್ನು ನೆಲಸಮಗೊಳಿಸಲಾಗಿತ್ತು. ಕೆಐಎಡಿಬಿ, ಮೇರಿ ಪತ್ರಾವೋ ಸೇರಿದಂತೆ ಅವರ ಕುಟುಂಬದ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪ ಮಾಡಿ ಪ್ರಕರಣವನ್ನೂ ದಾಖಲಿಸಿತ್ತು. ನಾನು ಮನೆಯನ್ನು ಕೆಡವಬೇಡಿ ಎಂದು ವಿರೋಧ ವ್ಯಕ್ತಪಡಿಸಿದಾಗ ಆ ಜನ ನನ್ನ ಕೈಯನ್ನು ಹಿಡಿದು ಎಳೆದಿದ್ದರ ನೋವು ನನಗೆ ಇಂದೂ ಕಾಡುತ್ತಿದೆ ಎಂದು ೭೫ ವರ್ಷದ ಮೇರಿ ಪತ್ರಾವೋ ನೋವು ಹಂಚಿಕೊಂಡರು.<br /><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEg99w9jw4ly-R4RTEBB5IGGAgYwt2ruKmPdtmNqot0nSryKjnZUU-oebtXrGYtitfqjWO4m3jduzofidLsnE8UQ7Mp4Bfpn4Wx6_kIvzOuDT3qInPY-JZ2alp5XyESIC2WJJwyA790jKx4/s1600/IMG_6947.jpg"><img style="display: block; margin: 0px auto 10px; text-align: center; cursor: pointer; width: 400px; height: 300px;" src="https://blogger.googleusercontent.com/img/b/R29vZ2xl/AVvXsEg99w9jw4ly-R4RTEBB5IGGAgYwt2ruKmPdtmNqot0nSryKjnZUU-oebtXrGYtitfqjWO4m3jduzofidLsnE8UQ7Mp4Bfpn4Wx6_kIvzOuDT3qInPY-JZ2alp5XyESIC2WJJwyA790jKx4/s400/IMG_6947.jpg" alt="" id="BLOGGER_PHOTO_ID_5514842651815434994" border="0" /></a><br /><br />ಸಾವಯವ ಕೃಷಿ ಮೂಲಕ ಜೀವನಕ್ಕೆ ಒಂದು ಪ್ರಾಮಾಣಿಕ ದಾರಿ ಕಂಡುಕೊಂಡಿದ್ದ ಹೋರಾಟ ಮನೋಭಾವದ, ಸ್ವಾವಲಂಬಿ ಕೃಷಿಕ ಗ್ರೆಗರಿ ಪತ್ರಾವೋ. ಆದರೆ ಯಾವಾಗ ಅವರ ಜಮೀನಿನ ಮೇಲೆ ಎಸ್ಇಝಡ್, ಎಂಆರ್ಪಿಎಲ್ ಮತ್ತು ಕೆಐಎಡಿಬಿ ಕರಾಳ ಕಣ್ಣುಗಳು ಬಿದ್ದವೋ ಅಂದಿನಿಂದ ಪತ್ರಾವೋ ಕುಟುಂಬ ನೆಮ್ಮದಿಯಾಗಿ ಉಂಡಿಲ್ಲ. ಅಂತಿಮವಾಗಿ ಇದೇ ವರ್ಷದ ಏಪ್ರಿಲ್ ೨೮ರಂದು ಕೆಐಎಡಿಬಿ ಮನೆ ಕೆಡವಲು ಯಾವುದೇ ಮುಂಚಿತ ಮಾಹಿತಿ ನೀಡದೆ ಮತ್ತು ಪರ್ಯಾಯ ವ್ಯವಸ್ಥೆಯನ್ನೂ ಮಾಡದೇ ಏಕಾಏಕಿಯಾಗಿ ಬಂದು ಪತ್ರಾವೋ ಕುಟುಂಬದ ಮನೆಯನ್ನೇ ಧ್ವಂಸಗೊಳಿಸಿತು. ಗ್ರೆಗರಿ ಪತ್ರಾವೋ ಪ್ರಕಾರ ಮನೆಯ ಪಂಚನಾಮೆಯನ್ನೂ ಮಾಡಲಾಗಿಲ್ಲ. ಮೇರಿ ಪತ್ರಾವೋ ಅವರು ನನ್ನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಪೆಟ್ಟಿಗೆಯಲ್ಲಿದ್ದ ೮೦ ಸಾವಿರ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಾರೆ. ಕನಿಷ್ಠ ಅವುಗಳನ್ನು ಸುಭದ್ರವಾಗಿ ತೆಗೆದಿಟ್ಟುಕೊಳ್ಳಲು ಅವಕಾಶವನ್ನೂ ನೀಡಲಿಲ್ಲ ಎನ್ನುತ್ತಾರೆ ಗ್ರೆಗರಿ ಪತ್ರಾವೋ.<br /><br />ಕೃಷಿ ಕುಟುಂಬ ಎಂದ ಮೇಲೆ ಅವರ ಮನೆಯಲ್ಲಿ ಜಾನುವಾರುಗಳು ಸೇರಿದಂತೆ ಕೃಷಿ ಮಾಡಲು ಬೇಕಾದ ಎಲ್ಲಾ ಸಾಮಗ್ರಿಗಳು ಇರುತ್ತವೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲದಂತೆ ವರ್ತಿಸಿದ ಕೆಐಎಡಿಬಿ ಅದೇ ದಿನ ಪತ್ರಾವೋ ಕುಟುಂಬವನ್ನು ಎಸ್ಇಝಡ್ ಪರ ಕೆಲಸ ಮಾಡುತ್ತಿರುವ ಗುತ್ತೇದಾರ ಯಾದವ ಕೋಟ್ಯಾನ್ ಅವರ ಮನೆಯಲ್ಲಿ ಉಳಿದುಕೊಳ್ಳುವಂತೆ ಸೂಚಿಸಿತು. ಆ ಹೊತ್ತಿಗೆ ಗ್ರೆಗರಿ ಮನೆಯಲ್ಲಿದ್ದ ಸಾಮಗ್ರಿಗಳನ್ನಲ್ಲಾ ಕೋಟ್ಯಾನ್ ನಿವಾಸಕ್ಕೆ ಕೊಂಡೊಯ್ದಾಗಿತ್ತು. ಆದರೆ ಬೇರೆ ಗ್ರಾಮದಲ್ಲಿರುವ ಕೋಟ್ಯಾನ್ ನಿವಾಸಕ್ಕೆ ತೆರಳಲು ನಿರಾಕರಿಸಿದ ಪತ್ರಾವೋ ಆ ರಾತ್ರಿಯಂದು ಧೋ ಎಂದು ಸುರಿಯುತ್ತಿದ್ದ ಮಳೆಯೊಂದಿಗೆ ಮರವೊಂದರ ಅಡಿಯಲ್ಲೇ ದಿನ ಕಳೆದರು. ಪರಿಣಾಮವಾಗಿ ಅಸ್ವಸ್ಥಗೊಂಡಿದ್ದ ಮೇರಿ ಪತ್ರಾವೋ ಮಾರನೇ ದಿನ ಆಸ್ಪತ್ರೆ ಸೇರಿದ್ದರು. ನಂತರದ ೧೫ ದಿನಗಳನ್ನು ನೆಲಸಮಗೊಂಡಿದ್ದ ಮನೆಯ ಬಳಿಯೇ ಇರುವ ಸಣ್ಣ ತಗಡಿನ ಶೆಡ್ಡಲ್ಲೇ ತಮ್ಮ ೨ ಕೋಣ, ೨ ಎತ್ತು, ಆರು ದನ, ೩ ಕರು, ೪ ನಾಯಿ, ೫೦-೬೦ ಕೋಳಿ ಮತ್ತು ೨ ಪ್ರೀತಿಯ ಬೆಕ್ಕುಗಳೊಂದಿಗೆ ಪತ್ರಾವೋ ಕುಟುಂಬ ಅಲ್ಲೇ ದಿನಕಳೆಯಿತು.<br />ಒಟ್ಟಾರೆ ಪತ್ರಾವೋ ಕುಟುಂಬ ಇಂದು ದಿಕ್ಕಾಪಾಲಾಗಿ, ತಮ್ಮ ಹಳೆ ಮನೆಯ ಬಳಿ ಇರುವ ಶೆಡ್ಡೊಂದರಲ್ಲಿ ದಿನದೂಡುತ್ತಿದೆ. ಆ ಶೆಡ್ಡಿಗೆ ಟಿಎಸ್ಐ ಭೇಟಿ ನೀಡಿದ್ದಾಗ ಮನೆ ಮುಂದೆಯೇ ಕೋಳಿಗಳು, ನಾಯಿ, ಬೆಕ್ಕುಗಳು ಅತ್ತಿತ್ತ ಓಡಾಡುತ್ತಿದ್ದವು. ಅವುಗಳಿಗೆ ಉಳಿದುಕೊಳ್ಳಲು ಬೇರೆ ಜಾಗವಿಲ್ಲ.<br /><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEhHDLrfFjkhLVrhAQoSeKVhfJKkFUQnq25fCHNssD6KUdBOPziAgfChGxN9gwlsgoU5kC13sMDJ8ExvLtHWqAzDcBJB_29fotvRaYJnO-59iyjfHAJ-h0mJ2oC-d4KqVcz72h0K74-1gkY/s1600/IMG_6936.jpg"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEhHDLrfFjkhLVrhAQoSeKVhfJKkFUQnq25fCHNssD6KUdBOPziAgfChGxN9gwlsgoU5kC13sMDJ8ExvLtHWqAzDcBJB_29fotvRaYJnO-59iyjfHAJ-h0mJ2oC-d4KqVcz72h0K74-1gkY/s320/IMG_6936.jpg" alt="" id="BLOGGER_PHOTO_ID_5514842994873637826" border="0" /></a><br /><br />ನನ್ನ ಜಾಗವನ್ನು ಬಿಟ್ಟು ನಾನು ಎಲ್ಲಿಗೂ ಕದಲುವುದಿಲ್ಲ ಎಂದು ಗ್ರೆಗರಿ ಹೇಳುವುದಕ್ಕೂ ಕಾರಣವಿದೆ. ಅವರು ಮಾಡಿರುವ ಕೃಷಿ ಪ್ರತಿಯೊಬ್ಬ ರೈತನಿಗೂ ಮಾದರಿ ಎಂದರೆ ಅತಿಶಯೋಕ್ತಿ ಎನಿಸದು. ಗ್ರೆಗರಿ ಅವರು ಹೇಳಿದಂತೆಯೇ ಅವರು ತಮ್ಮ ಜಮೀನಿನಲ್ಲಿ ಸುಮಾರು ೪೦೦೦ ಅಡಿಕೆ ಮರ, ೨೫೦ ತೆಂಗಿನ ಮರ, ೨೦೦೦ ವೆನಿಲಾ ಬಳ್ಳಿ, ೨೫೦ ಬಾಳೆಗಿಡ, ೫೦೦ ವೀಳ್ಯದ ಎಲೆ ಬಳ್ಳಿ, ಮೂರು ಕಾಲದಲ್ಲೂ ಬೆಳೆಯಲಾಗುವ ಭತ್ತ, ೧೦೦೦ ಗೇರು ಮರ, ೬೫ ಮಾವಿನ ಮರ, ೫೦-೬೦ ಹಲಸಿನ ಮರ, ೧೫ ಹುಣಸೆ ಮರ, ೨-೩ ಸಂಪಿಗೆ ಮರ, ೫೦ ಪುನರ್ಪುಳಿ ಮರ, ೨೫ ನೊರೆಕ್ಕಾಯಿ ಮರ, ೫೦ ಮಲ್ಲಿಗೆ ಗಿಡ, ೭-೮ ಪಪ್ಪಾಯಿ ಮರ, ೫೦ ಹೆಬ್ಬಲಸು, ೧೨ ಜೀಗುಜ್ಜೆ ಮರ ಸೇರಿದಂತೆ ಹಲವು ಕೃಷಿ ಮಾಡಿದ್ದಾರೆ. ಹಾಗಿರುವಾಗ ಸರ್ಕಾರ ೨.೨೪ ಕೋಟಿ ರೂ ಹಣ ಕೊಟ್ಟರೂ ಅದು ನನಗೆ ಬೇಡ ಎನ್ನುವ ಗ್ರೆಗರಿ ಮಾತಿನಲ್ಲಿ ಖಂಡಿತಾ ತಥ್ಯವಿದೆ.<br /><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEj8eQnTsD4UTZNPpsoVmtgZEWvuB4ulIWW0EU0-hevshc3w7xyU0lkAntI-ZkmgMT6OkTLBOfJTSRqYLaHDDFIMaHHW_KbTNjX_MI8Od4P5kceWDpqUBummfQFkRRAfLzeuK-azNIMfrcQ/s1600/IMG_6978.jpg"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEj8eQnTsD4UTZNPpsoVmtgZEWvuB4ulIWW0EU0-hevshc3w7xyU0lkAntI-ZkmgMT6OkTLBOfJTSRqYLaHDDFIMaHHW_KbTNjX_MI8Od4P5kceWDpqUBummfQFkRRAfLzeuK-azNIMfrcQ/s320/IMG_6978.jpg" alt="" id="BLOGGER_PHOTO_ID_5514843668946635714" border="0" /></a><br /><br />ಹಾಗೆ ನೋಡಿದರೆ ಏಕ ಬೆಳೆ ಬೆಳೆವ ಅಥವಾ ಬರಡು ಭೂಮಿಯಲ್ಲಿ ಮಾತ್ರ ಕೈಗಾರಿಕೆಗಳನ್ನು ನಡೆಸಬೇಕು ಎಂದು ಕಾನೂನಿದೆ. ಹಾಗಾದರೆ ಈ ಕಾನೂನು ಗ್ರೆಗರಿ ಪತ್ರಾವೋ ಕುಟುಂಬಕ್ಕೆ ಏಕೆ ಅನ್ವಯವಾಗಿಲ್ಲ?<br /><br />ಅಂತಿಮವಾಗಿ ರೈತನೊಬ್ಬ ದಶಕಗಳಿಂದಲೂ ಭೂಮಿ ನೀಡುವುದಿಲ್ಲ ಎಂದು ಎಸ್ಇಝಡ್, ಎಂಆರ್ಪಿಎಲ್ ಮತ್ತು ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಇಲಾಖೆ) ವಿರುದ್ಧ ಹೋರಾಟ ನಡೆಸಿದ್ದರ ಫಲವಾಗಿ ದೊರೆತ ಪುರಸ್ಕಾರ ಇದು! ೧೮೮೬ರ ಇಸವಿಯ ಹಂಚನ್ನು ಬಳಸಿ ಕಟ್ಟಿದ್ದ ಮನೆ ಇಂದು ನಾಮಾವಶೇಷವಾಗಿ ನೆಲಸಮಗೊಂಡಿದ್ದರೂ ಕೆಐಎಡಿಬಿ ಮನೆ ಧ್ವಂಸಗೊಳಿಸಲು ಬಳಸಿಕೊಂಡಿದ್ದ ಮಾರ್ಗ ಮಾತ್ರ ನಿಜಕ್ಕೂ ಪ್ರಶ್ನಾರ್ಹ. ಕೆಐಎಡಿಬಿ ಮತ್ತು ಪೊಲೀಸರು ಬಂದಿದ್ದ ವೇಳೆ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಉಲ್ಲಾಸ್ ಭಂಡಾರಿ ಮತ್ತು ರಾಜೇಶ್ ಅಲಿಯಾಸ್ ಜೂನಿಯರ್ ಉಪೇಂದ್ರ ಎಂದು ಖ್ಯಾತಿವೆತ್ತ ಗೂಂಡಾಗಳು ಏತಕ್ಕಾಗಿ ಗ್ರೆಗರಿ ನಿವಾಸದ ಬಳಿ ಬಂದಿದ್ದರು? ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಇನ್ಸ್ಪೆಕ್ಟರ್ ಬೆಳ್ಳಿಯಪ್ಪ ಅವರು ತಮ್ಮ ಕೆಲಸಕ್ಕೆ ಗೂಂಡಾಗಳನ್ನು ಬಳಸಿಕೊಂಡದ್ದು ವಿಡಿಯೋ ಚಿತ್ರೀಕರಣದಲ್ಲೂ ಸಾಬೀತಾಗಿದೆ. ಆದರೆ ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ ಕೃಷ್ಣಮೂರ್ತಿ ಅವರಿಗೆ ಈ ಗೂಂಡಗಳು ಯಾರೆಂದೇ ಗೊತ್ತಿಲ್ಲ!<br /><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEjOWRICq48bUXneAYDQUiOb_Dmd4HwhslUrxu4wVoIKZ7jeZ0YE_wgkIVfzklDlLQtu7JuO-x-YpCzUiI39x1W9OzHzOcU0UN7VWZdzvzXoDEMG_vPqyY8ULcwdcpcaAU504uqj4O8cA4I/s1600/IMG_7015.jpg"><img style="display: block; margin: 0px auto 10px; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEjOWRICq48bUXneAYDQUiOb_Dmd4HwhslUrxu4wVoIKZ7jeZ0YE_wgkIVfzklDlLQtu7JuO-x-YpCzUiI39x1W9OzHzOcU0UN7VWZdzvzXoDEMG_vPqyY8ULcwdcpcaAU504uqj4O8cA4I/s320/IMG_7015.jpg" alt="" id="BLOGGER_PHOTO_ID_5514844814708359410" border="0" /></a><br />ಅಭಿವೃದ್ಧಿಗಾಗಿ ಪತ್ರಾವೋ ಕುಟುಂಬ ತನ್ನ ಭೂಮಿಯನ್ನು ಕೊಟ್ಟಿರುವ ಬಗೆಯನ್ನು ಒಮ್ಮೆ ಗಮನಿಸಿ: ಮೇರಿ ಪತ್ರಾವೋ ಅವರು ತೋಕೂರಿನಲ್ಲಿದ್ದ ತಮ್ಮ ೨.೪೦ ಎಕರೆ ಭೂಪ್ರದೇಶವನ್ನು ಕೊಂಕಣ ರೈಲ್ವೇ ಯೋಜನೆಗೆ, ಹಾಗೇ ತಕೂರಿನಲ್ಲಿದ್ದ ೨.೬೨ ಎಕರೆ ಪ್ರದೇಶವನ್ನು ಜಾಸ್ಕೋ ಸಂಸ್ಥೆಗೆಂದು ನೀಡಿದ್ದಾರೆ. ಆದರೆ ಆ ಪ್ರದೇಶವನ್ನು ಬಳಿಕ ನಾಗಾರ್ಜುನ ಯೋಜನೆಗೆ ಹಸ್ತಾಂತರಿಸಲಾಯಿತು. ೧೯೮೪ರಲ್ಲಿ ಕೆಐಎಡಿಬಿ ಎಂಆರ್ಪಿಎಲ್ಗೆಂದು ಪತ್ರಾವೋ ಅವರ ೧೪.೨೭ ಎಕರೆ ಭೂಮಿಯನ್ನು ನೀಡಲು ನೊಟೀಸ್ ಜಾರಿ ಮಾಡಿತು. ೧೯೯೬ರಲ್ಲಿ ಎಂಆರ್ಪಿಎಲ್ ೧೪.೨೭ ಎಕರೆ ಪ್ರದೇಶದಲ್ಲಿನ ೫೨ ಸೆಂಟ್ಸ್ ಜಾಗವನ್ನು ವಶಪಡಿಸಿಕೊಂಡಿತು. ೨೦೦೯ರಲ್ಲಿ ೧.೪೫ ಎಕರೆ ಭೂಪ್ರದೇಶ ಯುಪಿಸಿಎಲ್ (ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್) ಯೋಜನೆಗೆ ನಿಗದಿಯಾಯಿತು. ಈ ಮಧ್ಯೆ ೨೦೦೭ರಲ್ಲಿ ಕೆಐಎಡಿಬಿ ಹಲವು ವಿವಿಧ ಸರ್ವೇ ನಂಬರ್ ವ್ಯಾಪ್ತಿಯಲ್ಲಿ ಬರುವ ಪೆರ್ಮುದೆ ಹಾಗೂ ಕಳವಾರು ಗ್ರಾಮದ ೧೭೧ ಎಕರೆ ಭೂಪ್ರದೇಶವನ್ನು ಎಸ್ಇಝಡ್ಗೆ ಹಸ್ತಾಂತರಿಸುವುದಾಗಿ ನೊಟೀಸ್ ಜಾರಿ ಮಾಡಿತು. ಅದರಲ್ಲಿ ಗ್ರೆಗರಿ ಅವರ ಭೂಮಿಗೂ ನೊಟೀಸ್ ಜಾರಿಯಾಗಿತ್ತು. ಆದರೆ ಇಂದು ಅವರ ಮನೆ ನೆಲಸಮಗೊಂಡಿರುವುದು ಎಂಆರ್ಪಿಎಲ್ ಯೋಜನೆ ವಿಸ್ತರಣೆಗಾಗಿ.<br /><br />ಈ ಬಗ್ಗೆ ವಿಶೇಷ ಭೂಸ್ವಾಧೀನ ಅಧಿಕಾರಿ ಕೃಷ್ಣಮೂರ್ತಿ ಅವರಲ್ಲಿ ಕೇಳಿದರೆ, ಎಸ್ಇಝಡ್ ಈ ಭೂಮಿಯನ್ನು ನಮಗೆ ಸರಂಡರ್ ಮಾಡಿತು. ಹಾಗಾಗಿ ಇದನ್ನು ಎಆರ್ಪಿಎಲ್ ಬಳಸಿಕೊಳ್ಳಲಿದೆ ಎಂದರು. ಒಟ್ಟಾರೆ ಈ ಎಲ್ಲಾ ಭೂ ಹಸ್ತಾಂತರ ಹಾಗೂ ದಶಕಗಳ ಕಾಲದ ಹೋರಾಟದಿಂದ ಕಂಗೆಟ್ಟಿರುವ ಗ್ರೆಗರಿ ತಮ್ಮಲ್ಲಿ ಒಂದು ರಾಶಿ ದಾಖಲೆ ಪತ್ರಗಳನ್ನು ಹಿಡಿದುಕೊಂಡು ಕೋರ್ಟು-ಕಚೇರಿ ಎಂದು ಇಂದಿಗೂ ತಿರುಗಾಡುತ್ತಲೇ ಇದ್ದಾರೆ.<br /><br />ಕೆಐಎಡಿಬಿ ಅಮಾನವೀಯ, ಅನಾಗರಿಕ ವರ್ತನೆಗೆ ಶಿಕ್ಷೆಯಾಗಲೇಬೇಕು, ರೈತನ ಬದುಕಿನ ಸ್ವರೂಪವನ್ನೇ ಹಾಳು ಮಾಡಿದ ಇವರು ಖಂಡಿತಾ ಮನುಷ್ಯರಲ್ಲ, ರಾಕ್ಷಸರು. ರೈತರ ಶಾಪ ಇವರಿಗೆ ತಟ್ಟದೆ ಇರುವುದಿಲ್ಲ ಎಂದು ಗುಡುಗುತ್ತಾರೆ ಪತ್ರಾವೋ. ಪತ್ರಾವೋ ಕುಟುಂಬ ಕರ್ತವ್ಯಕ್ಕೆ ಅಡ್ಡಿಪಡಿಸಿತು ಎಂದು ಕೆಐಎಡಿಬಿ ಮೇರಿ ಪತ್ರಾವೋ ವಿರುದ್ಧ ಕೇಸು ದಾಖಲು ಮಾಡಿದ್ದರೂ, ನಾವು ಕೇಸು ದಾಖಲು ಮಾಡಿಯೇ ಇಲ್ಲ ಎಂದು ವಿಶೇಷ ಭೂಸ್ವಾಧೀನ ಅಧಿಕಾರಿ ಎಸ್. ಕೃಷ್ಣಮೂರ್ತಿ ಟಿಎಸ್ಐಗೆ ತಿಳಿಸಿದ್ದಾರೆ. ಏಪ್ರಿಲ್ ೨೯ರಂದು ಅವರು ಕೇಸು ದಾಖಲು ಮಾಡಿದ್ದಾರೆಂದೇ ನಾವು ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದು ಎನ್ನುತ್ತಾರೆ ಗ್ರೆಗರಿ ಪತ್ರಾವೋ. ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಎದುರು ೨೫ ದಿನಗಳ ನಿರಂತರ ಉಪವಾಸ ಸತ್ಯಾಗ್ರಹ ಮಾಡಿದ್ದ ಗ್ರೆಗರಿ ಮನೆ ಧ್ವಂಸ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಆಗ್ರಹಿಸಿರುವ ಹಿನ್ನೆಲೆಯಲ್ಲಿ ಮೈಸೂರು ಪ್ರಾದೇಶಿಕ ಆಯುಕ್ತರು ತನಿಖೆ ನಡೆಸುತ್ತಿದ್ದಾರೆ.<br /><br />ಗಮನಿಸಬೇಕಾದ ಅಂಶ ಎಂದರೆ ಪತ್ರಾವೋ ಕುಟುಂಬ ಭೂಮಿ ಕಳೆದುಕೊಂಡಿರುವುದು ಮೊದಲನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ. ಈ ಹಂತಕ್ಕೆ ಈಗಾಗಲೇ ೧೮೦೦ ಎಕರೆ ಭೂಮಿ ವಶಪಡಿಸಿಕೊಂಡಾಗಿದ್ದು ಅಲ್ಲಿ ದೊಡ್ಡ ಮಟ್ಟದ ಕೈಗಾರಿಕೆಗಳೂ ಆರಂಭವಾಗಿವೆ.<br /><br />ಎರಡನೇ ಹಂತದಲ್ಲಿ ೨೦೩೫ ಎಕರೆ ಭೂ ಸ್ವಾಧೀನಕ್ಕೆ ಈಗಾಗಲೇ ಕೆಐಎಡಿಬಿ ಸಿದ್ಧತೆ ಮಾಡಿಕೊಂಡಿದ್ದು ಹಲವಾರು ಕುಟುಂಬಗಳು ತಮ್ಮ ಕೃಷಿ ಪ್ರದೇಶಗಳನ್ನು ಕಳೆದುಕೊಳ್ಳಲಿವೆ. ಕುಡುಬಿ ಜನಾಂಗದವರು ನೆಲೆಸಿರುವ ಕುಡುಬಿಪದವಿನಲ್ಲಿನ ೧೫.೩೪ ಎಕರೆ ಭೂಪ್ರದೇಶವನ್ನು ಅದಾಗಲೇ ಎರಡು ವರ್ಷಗಳ ಹಿಂದೆ ವಶಪಡಿಸಿಕೊಳ್ಳಲಾಗಿದೆ. ಆ ಜನಾಂಗದ ಭೂಮಿ ಸೇರಿದಂತೆ ಹಲವು ಕುಟುಂಬಗಳ ಬದುಕೇ ಬಂಜರಾಗಿಬಿಟ್ಟಿದೆ.<br /><br />ಪೆರ್ಮುದೆ ಗ್ರಾಮದಲ್ಲಿನ ಸುಮಾರು ೭ ಎಕರೆ ಪ್ರದೇಶದಲ್ಲಿ ಅತ್ಯಂತ ಸುಂದರ ಮಾದರಿಯಲ್ಲಿ ಕೃಷಿ ಮಾಡಿಕೊಂಡಿರುವ ಲಾರೆನ್ಸ್ ಅವರ ಮನೆ ಬಳಿ ತೆರಳಿದರೆ ಹಚ್ಚಹಸಿರು ಎದ್ದುಕಾಣುತ್ತದೆ. ಅವರು ಮಾಡಿರುವ ಕೃಷಿ ನಮಗೆಲ್ಲಾ ಮಾದರಿ ಎಂದು ಹೇಳುವ ಪೆರ್ಮುದೆಯ ಶಾಲೆಯೊಂದರಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಉಪಾಧ್ಯಾಯರು ನಾನು ಖಂಡಿತಾ ಈ ಭೂಮಿಯನ್ನು ಬಿಟ್ಟುಕೊಡುವುದಿಲ್ಲ. ಅದೇನೆ ಆಗಲಿ ನಾವು ಹೋರಾಟಕ್ಕೆ ಸಿದ್ಧ ಎನ್ನುತ್ತಾರೆ. ನಮ್ಮ ಮಾತುಕತೆಯನ್ನು ಗಮನಿಸುತ್ತಿದ್ದ ಉಪಾಧ್ಯಾಯರ ೮೩ ವರ್ಷದ ತಾಯಿ ವರದ ಅವರು, ನಾನು ಸತ್ತರೆ ಇಲ್ಲೇ ಸಾಯುವುದು. ನನ್ನ ಪ್ರಾಣವನ್ನಾದರೂ ನೀಡುವೆ, ಆದರೆ ಭೂಮಿಯನ್ನಲ್ಲ. ಇದೇನು ಅವರ ಅಪ್ಪನ ಮನೆ ಆಸ್ತಿಯಾ ಎಂದು ಪ್ರಶ್ನಿಸಿದರು. ಆದರೆ ಕೆಐಎಡಿಬಿ ಪ್ರಕಾರ ಇಲ್ಲಿರುವುದು ಫಲವತ್ತಾದ ಭೂಮಿ ಅಲ್ಲ. ಬೆಟ್ಟಗುಡ್ಡಗಳಿಂದ ಕೂಡಿದ್ದ ಭೂಮಿಯಲ್ಲಿ ನೀವೆಂತಹ ಕೃಷಿ ಮಾಡುತ್ತೀರಿ ಎಂಬುದು ಕೆಐಎಡಿಬಿ ಅಧಿಕಾರಿಗಳ ಪ್ರಶ್ನೆ. ಆದರೆ ವಾಸ್ತವ ಹಾಗಿಲ್ಲ, ಅದು ಫಲವತ್ತಾದ ಜಾಗವೇ ಎಂಬುದು ಕೆಐಎಡಿಬಿಗೂ ಗೊತ್ತು, ಎಸ್ಇಝಡ್ಗೂ ಗೊತ್ತು. ಭೂಸ್ವಾಧೀನವನ್ನು ವಿರೋಧಿಸುತ್ತಿರುವ ಕುಟುಂಬಗಳಿಗೂ ಗತಿಯೂ ಗ್ರೆಗರಿ ಪತ್ರಾವೋ ಕುಟುಂಬಕ್ಕೇ ಉಂಟಾದ ಗತಿಯಾದಲ್ಲಿ ಅಚ್ಚರಿಯೇನಿಲ್ಲ ಬಿಡಿ.<br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEhQy0VcP1bN80FG0UvlVvrW_llFlkFg822sc-vmZvNpS66VRpoN5tHMXobOxhvxNDdi8LQzmUTUU9ooBasflFbPe0B7e4w_t0dLBbtMVFc3i6Gdv_lYQJvT8ah8jVpHMF0ECR_N010sFLY/s1600/IMG_7020.jpg"><img style="display: block; margin: 0px auto 10px; text-align: center; cursor: pointer; width: 400px; height: 300px;" src="https://blogger.googleusercontent.com/img/b/R29vZ2xl/AVvXsEhQy0VcP1bN80FG0UvlVvrW_llFlkFg822sc-vmZvNpS66VRpoN5tHMXobOxhvxNDdi8LQzmUTUU9ooBasflFbPe0B7e4w_t0dLBbtMVFc3i6Gdv_lYQJvT8ah8jVpHMF0ECR_N010sFLY/s400/IMG_7020.jpg" alt="" id="BLOGGER_PHOTO_ID_5514845314962703842" border="0" /></a><br /><span style="font-size:130%;"><span style="font-weight: bold;">ವಿದ್ಯಾರ್ಥಿಗಳ ಭವಿಷ್ಯವೇ ಡೋಲಾಯಮಾನ!</span></span><br />ಎಂಎಸ್ಇಝಡ್ ವ್ಯಾಪ್ತಿಯಲ್ಲಿ ಬರುವ ಕುಟುಂಬಗಳು ಅಂದರೆ ಕೈಗಾರಿಕೆಗಳಿಗೆ ಭೂಮಿ ನೀಡಿರುವ ಕುಟುಂಬದವರಿಗೆ ಉದ್ಯೋಗ ನೀಡಲಿದ್ದೇವೆ ಎಂದು ಎಸ್ಇಝಡ್ ಭರವಸೆ ನೀಡಿತ್ತು. ಇದಕ್ಕಾಗಿ ೧೦ನೇ ತರಗತಿ ಪಾಸಾಗಿರುವ ಅಲ್ಲಿನ ಕುಟುಂಬದ ಮಕ್ಕಳಿಗೆ ಮಂಗಳೂರಿನ ಯೆಯ್ಯಾಡಿ ಬಳಿ ಇರುವ ಕೆಪಿಟಿ (ಕರ್ನಾಟಕ ಪಾಲಿಟೆಕ್ನಿಕ್)ಯಲ್ಲಿ ವಿಶೇಷವಾಗಿ ಸ್ಪೆಷಲ್ ಕೋರ್ಸಸ್ ಇನ್ ಕೆಮಿಕಲ್, ಮೆಕ್ಯನಿಕಲ್ ಅಂಡ್ ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಷಯದಲ್ಲಿ ಮೂರು ವರ್ಷಗಳ ತರಬೇತಿ ಶಿಕ್ಷಣವನ್ನು ನೀಡುತ್ತಿದೆ. ಈಗಾಗಲೇ ಶಿಕ್ಷಣದ ೫ ಸೆಮೆಸ್ಟರ್ಗಳು ಮುಗಿದಿದ್ದು ಒಂದು ಸೆಮೆಸ್ಟರ್ ಬಾಕಿ ಇದೆ. ಆದರೆ ಸಮಸ್ಯೆ ತಲೆದೋರಿರುವುದು ಶಿಕ್ಷಣದಲ್ಲಲ್ಲ. ಆದರೆ ನೀಡಿದ್ದ ಉದ್ಯೋಗ ಭರವಸೆ ಕೇವಲ ಭರವಸೆಯಾಗಿಯೇ ಉಳಿಯಲಿದೆ ಎಂಬುದು ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿದೆ.<br /><br />ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳನ್ನು ಮಾತನಾಡಿಸಲೆಂದು ಟಿಎಸ್ಐ ‘ಕೆಪಿಟಿಗೆ ಭೇಟಿ ನೀಡಿದ್ದಾಗ ಅಲ್ಲಿ ವಿದ್ಯಾರ್ಥಿಗಳಿರಲಿಲ್ಲ. ಆ ಕಾಲೇಜಿನ ಪ್ರಾಂಶುಪಾಲರಲ್ಲಿ ಕೇಳಿದಾಗ, ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿದ್ದಾರೆ ಎಂದರು.<br />ಎಲ್ಲಾ ಮಕ್ಕಳಿಗೆ ಉದ್ಯೋಗ ದೊರಕುವುದು ಸಾಧ್ಯವಿಲ್ಲ ಎಂಬುದು ವಿದ್ಯಾರ್ಥಿಗಳಿಗೆ ಮನದಟ್ಟಾಗಿದೆ. ಎಸ್ಇಝಡ್ ತನ್ನ ನಿರೀಕ್ಷೆಯ ಪ್ರಮಾಣದಷ್ಟು ಅಭಿವೃದ್ಧಿ ಸಾಧಿಸಲು ವಿಫಲವಾಗಿದೆ. ವಿದ್ಯಾರ್ಥಿಗಳಿಗೆ ವಿಶೇಷವಾಗಿ ನೀಡಲಾಗುತ್ತಿರುವ ಶಿಕ್ಷಣದ ಅವಧಿಯೂ ಕೊನೆಗೊಳ್ಳುವ ದಿನಗಳು ದೂರವಿಲ್ಲ. ಹಾಗಾಗಿ ಮನನೊಂದ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಎಸ್ಇಝಡ್ ನೇರ ಹೊಣೆಯಾಗಬೇಕು ಎನ್ನುತ್ತಾರೆ ಹೆಸರು ಹೇಳಲಿಚ್ಛಿಸಿದ ‘ಕೆಪಿಟಿಯ ಓರ್ವ ಸಿಬ್ಬಂದಿ.<br /><br />ಕಾಲೇಜು ನೀಡಿರುವ ದಾಖಲೆ ಪ್ರಕಾರ ಇಲ್ಲಿ ಎಂಎಸ್ಇಝಡ್ ವ್ಯಾಪ್ತಿಗೆ ಒಳಪಟ್ಟ ೪೦೯ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ೩೧೯ ವಿದ್ಯಾರ್ಥಿ ಮತ್ತು ೮೯ ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ತರಗತಿ ಬಹಿಷ್ಕರಿಸಿದ್ದ ವಿದ್ಯಾರ್ಥಿಗಳು ಟಿಎಸ್ಐ ಭೇಟಿ ನೀಡಿದ್ದ ಒಂದು ದಿನದ ನಂತರ ಅಂದರೆ ಜುಲೈ ೨೭ರಂದು ತಮ್ಮ ತರಗತಿ ಬಹಿಷ್ಕಾರ ಹಿಂತೆಗೆದುಕೊಂಡಿದ್ದರು. ಪೆರ್ಮುದೆಯ ಸಂಯುಕ್ತ ಹಿತರಕ್ಷಣಾ ಸಮಿತಿ, ಎಸ್ಇಝಡ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಲಿದ್ದೇವೆ ಎಂದು ಮುಖ್ಯಮಂತ್ರಿಯವರ ಆಪ್ತಸಹಾಯಕ ಹಾಗೂ ಎಂಎಸ್ಇಝಡ್ನ ನಿರ್ದೇಶಕ ಮತ್ತು ಸಂಯೋಜಕ ಐ.ಎಸ್.ಎನ್. ಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಹಾಗೇ ಇನ್ನು ೧೦-೧೨ ದಿನಗಳೊಳಗಾಗಿ ತಾವು ಅಲ್ಲಿಗೆ ಬರುವುದಾಗಿಯೂ ಅವರು ಹೇಳಿದ್ದರು ಎನ್ನಲಾಗಿದೆ.<br /><br />ಟಿಎಸ್ಐಗೆ ಮಾಹಿತಿ ನೀಡಿದ ಸಿಬ್ಬಂದಿ ಪ್ರಕಾರ ಎಂಎಸ್ಇಝಡ್ ವಿದ್ಯಾರ್ಥಿಗಳಿಗೆ ಎಂಎಸ್ಇಝಡ್ನಲ್ಲಿ ಬಿಟ್ಟರೆ ಬೇರೆಲ್ಲೂ ಕೆಲಸ ಸಿಗುವುದು ತುಂಬಾ ಕಷ್ಟದ ಮಾತು. ಏಕೆಂದರೆ ಅವರಲ್ಲಿ ಕೈಗಾರಿಕೆಗೆ ಬೇಕಾಗುವ ಕೌಶಲ್ಯ ಇಲ್ಲ. ಹಾಗೇ ಅವರಿಗೆ ಕಡಿಮೆ ಅಂಕಗಳನ್ನು ನೀಡಬಾರದು ಎಂದು ಎಸ್ಇಝಡ್ ತಾಕೀತು ಮಾಡಿದೆ. ಒಟ್ಟಾರೆ ಕೆಪಿಟಿಯಲ್ಲಿ ಬೋಧಿಸುತ್ತಿರುವ ಉಪನ್ಯಾಸಕರು ಈ ಕೆಲಸಕ್ಕೆ ಹೆಚ್ಚುವರಿ ವೇತನ ಪಡೆಯುತ್ತಿದ್ದಾರೆ. ಸಂಸ್ಥೆಗೂ ಕೂಡ ಲಾಭವಾಗಿದೆ. ನಷ್ಟವಾಗುವುದು ಮಾತ್ರ ಖಂಡಿತಾ ವಿದ್ಯಾರ್ಥಿಗಳಿಗೆ. ಏಕೆಂದರೆ ಇಲ್ಲಿನ ಸರ್ಟಿಫಿಕೇಟ್ನ್ನು ಹಿಡಿದುಕೊಂಡು ಹೋದರೆ ಖಂಡಿತ ಅವರಿಗೆ ಬೇರೆ ಕಡೆ ಉದ್ಯೋಗ ಸಿಗದು. ಇದು ಎಸ್ಇಝಡ್ ಅಧಿಕಾರಿಗಳು ಗ್ರಾಮಸ್ಥರು ಹಳ್ಳಿ ಜನರನ್ನು ತಮ್ಮ ವಿರುದ್ಧ ತಿರುಗಿಬೀಳದಂತೆ ಮಾಡಿಕೊಂಡಿರುವ ತಂತ್ರವಷ್ಟೇ.<br /><br />ಒಟ್ಟಾರೆ ಕಡಲೂರಿನಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಅಭಿವೃದ್ಧಿಯ ಹೆಸರಲ್ಲಿ ಹಳ್ಳಿಗರು ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕೆಪಿಟಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಭವಿಷ್ಯವೇ ಡೋಲಾಯಮಾನವಾಗಿಬಿಟ್ಟಿದೆ. ಅದರ ನಡುವೆಯೇ ಪೆರ್ಮುದೆ, ಕುತ್ತೆತ್ತೂರು, ದೇಲಂತಬೆಟ್ಟು, ತೆಂಕ ಎಕ್ಕಾರಿನ ನಿವಾಸಿಗಳು ತಮ್ಮ ಮನೆಬಿಟ್ಟುಕೊಡಲು ಸಜ್ಜುಗೊಳ್ಳಬೇಕಿದೆ. ಮಂಗಳೂರಿನ ಹಳ್ಳಿಗಾಡಿನಲ್ಲಿ ಉಬ್ಬುಬ್ಬಿ ವಿಶಾಲವಾಗಿ ಹರಡಿ ಹೋಗಿದ್ದ ಹಚ್ಚಹಸಿರಿನ ವಸುಂಧರೆ <img src="file:///C:/Users/Raghav/Desktop/my%20files/mangalore/IMG_6976.jpg" alt="" />ಎಸ್ಇಝಡ್, ಎಂಆರ್ಪಿಎಲ್ ಸೇರಿದಂತೆ ಕೈಗಾರಿಕಾ ಕಂಪನಿಗಳ ಕಬಂಧಬಾಹುಗಳಲ್ಲಿ ಸಿಲುಕಿ ತನ್ನ ದಿನಗಳನ್ನು ಎಣಿಸಿಕೊಳ್ಳಬೇಕಿದೆ.<br /><img src="file:///C:/Users/Raghav/Desktop/my%20files/mangalore/IMG_7016.jpg" alt="" /><img src="file:///C:/Users/Raghav/Desktop/my%20files/mangalore/IMG_6977.jpg" alt="" />ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com1tag:blogger.com,1999:blog-2818153219058834250.post-6618232965160154452010-01-28T20:51:00.000-08:002010-01-28T20:58:54.843-08:00<span style="color: rgb(0, 102, 0);font-size:180%;" ><span style="font-weight: bold;">ಸ್ವಯಂಕೃತ ಅಪರಾಧದ ಫಲವುಂಡ ಪಾಕ್!</span></span><br /><br /><br /><span style="color: rgb(0, 0, 153);">ಇದನ್ನು ಪಾಕಿಸ್ತಾನಿಗಳು ಸ್ವಯಂಕೃತವಾಗಿ ತಂದುಕೊಂಡ ದುಸ್ಥಿತಿ ಎನ್ನಬೇಕೇ ಅಥವಾ ಮನೆಗೆ ಬಾ ಅತಿಥಿ ಎಂದು ಆಮಂತ್ರಣ ನೀಡಿ ಕೊನೆಗೆ ಅವರ ಮುಖವನ್ನೂ ನೋಡದೇ ‘ನೀನು ಯಾರು’? ಎಂಬ ಭಾರತದ ಸೋಗಲಾಡಿ ವರ್ತನೆ ಎನ್ನಬೇಕೆ?</span><br /><br /><span style="color: rgb(0, 0, 153);">ಐಪಿಎಲ್ ಎಂಬ ಆಧುನಿಕ ಕ್ರಿಕೆಟ್ನ ಮಹಾಮೇಳದಲ್ಲಿ ತಾನೂ ಭಾಗವಹಿಸಬೇಕೆಂಬ ಅಗಾಧ ಹುಮ್ಮಸ್ಸಿನ ಮುಖ ಹೊತ್ತಿದ್ದ ಪಾಕಿಸ್ತಾನ, ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಮತ್ತು ಪಾಕಿಸ್ತಾನಿ ಆಟಗಾರರು ಇಂದು ಅವಮಾನದ ಮುಖ ಹೊತ್ತು ಅಸಮಾಧಾನದ ಹಾಗೂ ಆಶಾಭಂಗದ ನಿರ್ಜೀವ ಕಳೆಯಿಂದ ಕಾಣುತ್ತಿದ್ದಾರೆ. ಅವರು ಬೇಸರ ವ್ಯಕ್ತಪಡಿಸಿರುವುದನ್ನು ನೋಡಿದರೆ ನೈಜ ಕ್ರಿಕೆಟ್ ಅಭಿಮಾನಿಯೊಬ್ಬನಿಗೆ ಬೇಸರವಾಗದೇ ಇರದು. ಅದೂ ಅಲ್ಲದೆ ಶಹೀದ್ ಅಫ್ರಿದಿಯಂತಹ ಹೇಳಿ ಮಾಡಿಸಿದ ಟಿ-೨೦ ಆಟಗಾರನನ್ನು ಫ್ರಾಂಚೈಸಿಗಳು ನಮಗೆ ಬೇಡ ಎಂದಾಗ, ಅಲ್ಲಿ ಏನೋ ಒಳ ರಾಜಕೀಯ ಇದೆ ಎಂಬ ಅನುಮಾನ ಮೂಡದೇ ಇರಲು ಸಾಧ್ಯವಿಲ್ಲ. ಹಾಗಾದರೆ ಇಲ್ಲಿ ತಪ್ಪು ನಮ್ಮವರದ್ದೇ? ಪಾಕ್ ಆಟಗಾರರಿಗೆ ಐಪಿಎಲ್-೩ರಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿ, ಕೊನೆಗೆ ’ಇಲ್ಲ’ ಎಂದದ್ದು ನಮ್ಮ ತಪ್ಪಾಯಿತೇ?</span><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEghOgEOzrZuHvPir6PXRTaPhpucLEiOgx1uJG35_gwDMELVSG_VbL0DfkbnscuHECVKxvn5PorMr8Jotp8rVa-HVdtEaNI8gWGmC7Wl0gWRq92hfFcFMmEr7EzqCk0hAXfNbDIfwVRJKc8/s1600-h/Pak+players.jpg"><img style="margin: 0px auto 10px; display: block; text-align: center; cursor: pointer; width: 400px; height: 323px;" src="https://blogger.googleusercontent.com/img/b/R29vZ2xl/AVvXsEghOgEOzrZuHvPir6PXRTaPhpucLEiOgx1uJG35_gwDMELVSG_VbL0DfkbnscuHECVKxvn5PorMr8Jotp8rVa-HVdtEaNI8gWGmC7Wl0gWRq92hfFcFMmEr7EzqCk0hAXfNbDIfwVRJKc8/s400/Pak+players.jpg" alt="" id="BLOGGER_PHOTO_ID_5432021247200223522" border="0" /></a><br /><span style="color: rgb(0, 0, 153);">ಹಾಗೆ ನೋಡಿದರೆ ಸದಾ ತಮ್ಮ ತಪ್ಪನ್ನು ಮರೆಮಾಚುವ ಪಾಕಿಸ್ತಾನಿಗಳು ಐಪಿಎಲ್ ೨ರಲ್ಲಿ ಭಾಗವಹಿಸಿರಲಿಲ್ಲ. ಏಕೆ? ಅದಕ್ಕೆ ಕಾರಣಗಳೇನು ಎಂಬುದು ಇಡೀ ಲೋಕಕ್ಕೆ ಗೊತ್ತು. ಹಾಗಾದರೆ ನಾವು (ಪಾಕಿಸ್ತಾನ) ಐಪಿಎಲ್ನಲ್ಲಿ ಭಾಗವಹಿಸುವುದು ಸಮಯೋಚಿತವೇ? ಪರಿಸ್ಥಿತಿ ಇಂದು ಸುಧಾರಿಸಿದೆಯೇ? ಎಂಬುದರ ಬಗ್ಗೆ ಯೋಚಿಸಿ, ಮೆದುಳಿಗೆ ಕೊಂಚ ಕೆಲಸ ಕೊಟ್ಟಿದ್ದರೆ, ಪಾಕಿಸ್ತಾನದ ಮಂದಿ ಅವಮಾನ ಎಂದು ಘೀಳಿಡುವ ಅವಶ್ಯಕತೆಯೇ ಬರುತ್ತಿತ್ತೇ...?</span><br /><br /><span style="color: rgb(0, 0, 153);">೨೦೦೮ರಲ್ಲಿ ಮುಂಬೈ ಮೇಲೆ ದಾಳಿ ನಡೆಸಿದ್ದರ ಹಿನ್ನೆಲೆಯಲ್ಲಿ ಐಪಿಎಲ್- ೨ರಿಂದ ಪಾಕ್ ಆಟಗಾರರನ್ನು ಹೊರಗಿಟ್ಟಾಗಲೇ ಪಾಕ್ ಕ್ರಿಕೆಟ್ ಸಂಸ್ಥೆಗೆ ’ಬುದ್ಧಿ’ ಬರಬೇಕಿತ್ತು ಮತ್ತು ವಾಸ್ತವವನ್ನು ಅರ್ಥಮಾಡಿಕೊಳ್ಳಬೇಕಿತ್ತು. ಐಪಿಲ್ ಭಾರತದ ಕೂಸು, ಇದರಲ್ಲಿ ನಮ್ಮ ತಕರಾರು ಬೇಡ. ಉತ್ತಮ ದ್ವಿಪಕ್ಷೀಯ ಸಂಬಂಧದಿಂದ ಎಲ್ಲವೂ ಒಳ್ಳೆಯಾದದರೆ ಆ ಬಳಿಕವಷ್ಟೇ ಐಪಿಎಲ್ನಲ್ಲಿ ಭಾಗವಹಿಸುವಿಕೆ ಎಂದು ಪಾಕ್ ಚಿಂತನೆ ನಡೆಸಬಹುದಿತ್ತು. ಆದರೆ ಇಂದು ಭಾರತ-ಪಾಕ್ ಸಂಬಂಧ ಹಳಸಿದೆ. ರಾಜತಾಂತ್ರಿಕ ಹಾಗೂ ಸಾರ್ವಜನಿಕವಾಗೇ ದ್ವೇಷಾಗ್ನಿ ಉಕ್ಕಿ ಹರಿಯುತ್ತಿದೆ. ಮುಂಬೈ ದಾಳಿ ಬಗ್ಗೆ ಪಾಕಿಸ್ತಾನದ ಕೈವಾಡದ ಬಗ್ಗೆ ಪುರಾವೆಗಳು ಲಭ್ಯವಿದ್ದರೂ ಪಾಕ್ ಸರ್ಕಾರ ಜವಾಬ್ದಾರಿ ಹೊತ್ತಿಲ್ಲ. ಅಂಗೈಯಲ್ಲಿ ಹುಣ್ಣಿಟ್ಟುಕೊಂಡು ಮುಚ್ಚಿಡಲು ಪ್ರಯತ್ನಿಸುತ್ತಿರುವ ಪಾಕಿಸ್ತಾನ ವಾಸ್ತವವನ್ನು ಅರಿಯಬೇಕಿತ್ತು. ಐಪಿಲ್ಗೆ ಬರುತ್ತೀರಾ ಎಂದು ನಮ್ಮವರು ಆಹ್ವಾನವಿಟ್ಟಾಗ, ನೋ, ಥ್ಯಾಂಕ್ಸ್ ಎಂದಿದ್ದರೆ ಅದು ಪ್ರಬುದ್ಧ ನಡೆ ಎನಿಸುತ್ತಿತ್ತು.</span><br /><br /><span style="color: rgb(0, 0, 153);">ಇನ್ನು ರಾಜತಾಂತ್ರಿಕ ಹಿನ್ನೆಲೆಯಲ್ಲಿ ನೋಡಿದರೆ ಮುಂಬೈ ದಾಳಿಯಲ್ಲಿ ಪಾಕಿಸ್ತಾನದ ನೇರ ಕೈವಾಡ ಇದೆ ಎಂಬುದನ್ನು ಅಮೆರಿಕದ ಫೆಡರಲ್ ತನಿಖಾ ಏಜೆನ್ಸಿಗಳು ಸಾರಿ ಹೇಳಿವೆ. ಕಂಬಿಗಳ ಹಿಂದೆ ಕುಳಿತಿರುವ ಅಜ್ಮಲ್ ಅಮೀರ್ ಕಸಬ್ ಎಂಬ ನರಭಕ್ಷಕ ’ಅರೆ ಹುಚ್ಚ’ನಂತೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದರೂ, ನೂರಾರು ಮಂದಿ ಅಮಾಯಕರ ಪ್ರಾಣವನ್ನೇ ಕಿತ್ತುಕೊಂಡ, ಮುಗ್ಧ ಜೀವಗಳನ್ನು ಅನಾಥರನ್ನಾಗಿ ಮಾಡಿದ್ದನ್ನು ಮರೆಯಲು ಸಾಧ್ಯವಿದೆಯೇ? ಅಮಾಯಕರನ್ನು ಕ್ಷಣಕ್ಷಣವೂ ದುಃಖದ ಕರಾಳ ಕಡಲಲ್ಲಿ ನೊಂದು ಬೆಂದು ಬೆಂಡಾಗುವಂತೆ ಮಾಡಿದ ‘ಜಿಹಾದಿ’ ಉಗ್ರರನ್ನು ಬಗಲಲ್ಲಿಟ್ಟುಕೊಂಡೇ ‘ತಮಾಷೆ’ ನೋಡುತ್ತಿರುವ ಪಾಕಿಸ್ತಾನಿಗಳು ಭಾರತದ ಮಂದಿ ನಮ್ಮನ್ನು ಅವಮಾನ ಮಾಡಿದ್ದಾರೆ ಎಂದು ಲೋಕದಲ್ಲೆಲ್ಲಾ ಬೊಬ್ಬೆ ಇಟ್ಟರೆ ಭಾರತೀಯರು ಮೈ ಪರಚಿಕೊಳ್ಳದೆ ಇನ್ನೇನು ತಾನೆ ಮಾಡಲು ಸಾಧ್ಯ?</span><br /><br /><span style="color: rgb(0, 0, 153);">ಆದರೆ ಎಲ್ಲದಕ್ಕೂ ಪಾಕ್ ಕ್ರಿಕೆಟ್ ಸಂಸ್ಥೆ ಅಥವಾ ಪಾಕ್ ಆಟಗಾರರನ್ನು ದೂರುವುದೂ ಇಲ್ಲಿ ಸಮಂಜಸ ಎನಿಸದು. ಏಕೆಂದರೆ ಪಾಕ್ ಆಟಗಾರರೊಂದಿಗೆ ಆಗಲೀ ಅಥವಾ ಕ್ರಿಕೆಟ್ ಮಂಡಳಿ ನಡುವೆ ಇಲ್ಲಿ ಬಿಕ್ಕಟ್ಟಿರುವುದಲ್ಲ. ರಾಜತಾಂತ್ರಿಕ ನೆಲೆಯಲ್ಲಿ ಭಾರತ-ಪಾಕ್ ಸಂಬಂಧ ನೆಲಕಚ್ಚಿದೆ ಹಾಗೂ ಮುಖ್ಯವಾಗಿ ೨೬/೧೧ರ ನರಮೇಧದ ಬಳಿಕ ಪಾಕ್ ಮೇಲಿನ ಭಾರತೀಯರ ಮನೋಧರ್ಮ ಬದಲಾಗಿದೆ. ಆ ನೆಲೆಯಲ್ಲಿ ನೋಡಿದರೆ ಪಾಕ್ ರಾಜತಾಂತ್ರಿಕ ನಾಯಕರೇ ಸದ್ಯದ ಮಟ್ಟಿಗೆ ಭಾರತದಲ್ಲಿ ಕ್ರಿಕೆಟ್ ಬೇಡ ಎಂದೇ ಪ್ರತಿಕ್ರಿಯಿಸಬೇಕಿತ್ತು. ಆದರೆ ಭವಿಷ್ಯದ ಬಗ್ಗೆ ಕಿಂಚಿತ್ತೂ ಯೋಚಿಸದೆ, ನಿರ್ಧಾರ ತೆಗೆದುಕೊಂಡು, ಈಗ ಐಪಿಎಲ್ ಫ್ರಾಂಚೈಸಿಗಳು ನಮ್ಮನ್ನು ಅವಮಾನ ಮಾಡಿದರು, ಇಲ್ಲಿ ನವದೆಹಲಿಯ ಕೈವಾಡ ಇದೆ ಎಂದು ಹುಚ್ಚೆದ್ದು ಅಪವಾದ ಹೊರಿಸಿದರೆ ಪರಿಣಾಮ ಯಾವ ಮಟ್ಟಕ್ಕೆ ಹೋಗಬಹುದು ಎಂಬುದನ್ನು ಪಾಕ್ ನಾಯಕರು ಅರಿತಿದ್ದಾರಾ?</span><br /><br /><span style="color: rgb(0, 0, 153);">ಇನ್ನು ಆಸ್ಟ್ರೇಲಿಯದಲ್ಲಿ ಭಾರತೀಯರ ವಿರುದ್ಧ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಬೈನ ಶಿವಸೇನೆ ಆಸ್ಟ್ರೇಲಿಯದ ಆಟಗಾರರು ಐಪಿಎಲ್ನಲ್ಲಿ ಅದು ಹೇಗೆ ಆಟವಾಡುತ್ತಾರೋ ನಾವೂ ನೋಡುತ್ತೇವೆ ಎಂಬ ಸವಾಲು ಹಾಕಿದ್ದಾರೆ. ಒಂದುವೇಳೆ ಅವರು ಪಾಲ್ಗೊಂಡದ್ದೇ ಆದಲ್ಲಿ ಮುಂಬೈನಲ್ಲಿ ಹಿಂಸಾಚಾರ ನಡೆಯುವ ಎಲ್ಲಾ ಸಾಧ್ಯತೆಗಳು ಸ್ಪಷ್ಟವಾಗಿವೆ. ಹಾಗಾಗಿ ದ್ವೇಷಾಗ್ನಿಯ ಜ್ವಾಲೆ ಭುಗಿಲೆದ್ದ ಇಂದಿನ ದಿನಗಳಲ್ಲಿ ಪಾಕಿಸ್ತಾನವೂ ಎಚ್ಚೆತ್ತುಕೊಳ್ಳಬೇಕಿತ್ತು. ಬದಲಾಗಿ ತನ್ನ ಬುಡವನ್ನೇ ನೆಟ್ಟಗಿಟ್ಟುಕೊಳ್ಳದಿರುವ ಪಾಕ್, ಭಾರತದ ತಪ್ಪನ್ನೇ ವೈಭವಿಸಿ ಮಾತನಾಡಿದರೆ, ಅದು ಮುರ್ಖತನದ ಪರಮಾವಧಿ ಎನ್ನದೆ ವಿಧಿಯಿಲ್ಲ.</span><br /><br /><span style="color: rgb(0, 0, 153);">ಐಪಿಎಲ್ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಪಾಕಿಸ್ತಾನದ ೧೧ ಕ್ರಿಕೆಟ್ ಆಟಗಾರರಿಗೆ ಯಾವೊಬ್ಬ ಪ್ರಾಂಚೈಸಿಯೂ ಮಣೆ ಹಾಕದಿರುವುದು ‘ರಾಷ್ಟ್ರೀಯ ಅವಮಾನ’ ಎಂದಿರುವ ಪಾಕಿಸ್ತಾನಕ್ಕೆ, ಆಟಗಾರರನ್ನು ಖರೀದಿಸುವುದು ಪ್ರಾಂಚೈಸಿಗಳಿಗೆ ಬಿಟ್ಟ ವಿಚಾರ ಎಂಬ ಸಾಮಾನ್ಯ ವಿಷಯವೂ ಗೊತ್ತ್ತಿಲ್ಲವೇ? ಆಸ್ಟ್ರೇಲಿಯದ ಆಟಗಾರರು ಐಪಿಎಲ್ನಲ್ಲಿ ಭಾಗವಹಿಸುವ ಬಗ್ಗೆಯೇ ಬಿಕ್ಕಟ್ಟು ಉಂಟಾಗಿರುವಾಗ ಇನ್ನೊಂದು ಬಿಕ್ಕಟ್ಟು ಉಂಟಾದರೇನು ಮಾಡುವುದು? ಎನ್ನುವ ಭಯ ಫ್ರಾಂಚೈಸಿಗಳಿಗೂ ಇತ್ತು. ಜೊತೆಗೆ ಭದ್ರತೆ ಸಮಸ್ಯೆ ಹಾಗೂ ಯಾವುದೇ ಅಡೆತಡೆಗಳಿಲ್ಲದೆ ಐಪಿಎಲ್ ನಡೆಯಬೇಕೆಂಬ ಉದ್ದೇಶದಿಂದಲೇ ಪಾಕ್ ಆಟಗಾರರನ್ನು ಫ್ರಾಂಚೈಸಿಗಳು ಗಣನೆಗೆ ತೆಗೆದುಕೊಂಡಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ವಿಚಾರ ಪಾಕಿಸ್ತಾನಕ್ಕೂ ತಿಳಿದೇ ಇರುತ್ತದೆ. ಭಯೋತ್ಪಾದನೆಯಿಂದ ದಿಕ್ಕೆಟ್ಟಿರುವ ಭಾರತಕ್ಕೆ ಪಾಕ್ ಮೇಲೆ ಸಹಜವಾಗಿಯೇ ದ್ವೇಷವಿದೆ ಎಂಬ ತೆರೆದ ವಾಸ್ತವಗಳು ಪಾಕಿಗಳಿಗೆ ತಿಳಿದಿರಲಿಲ್ಲವೇ?</span><br /><span style="color: rgb(0, 0, 153);">ಅಷ್ಟಕ್ಕೂ ಐಪಿಎಲ್ ಆಟಗಾರರ ಖರೀದಿಯಲ್ಲಿನ ಈ ಘಟನೆಗೆ ರಾಜಕೀಯ ಬಣ್ಣ ಹಚ್ಚಿದ್ದು ಇಲ್ಲಿ ಪಾಕಿಸ್ತಾನವೇ ಎಂಬುದೂ ಕಣ್ಣೆದುರಿಗಿನ ವಾಸ್ತವ. ಭಾರತದ ವರ್ತನೆ ನಿಜಕ್ಕೂ ಖಂಡನಾರ್ಹ. ಏಟಿಗೆ ಇದಿರೇಟು ನೀಡಿಯೇ ನೀಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ಕ್ರೀಡಾ ಸಚಿವ ಇಜಾಸ್ ಜಕ್ರಾನಿ, ಯಾವ ಉದ್ದೇಶವಿಟ್ಟುಕೊಂಡು ಆ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದನ್ನು ಅವರೇ ಬಲ್ಲರು. ಆದರೆ ಪಾಕಿಸ್ತಾನದ ಇಂದಿನ ವಾಸ್ತವವನ್ನು ಎದುರಿಗಿಟ್ಟು ವಿಶ್ಲೇಷಿಸಿದ್ದರೆ ಅವರು ಖಂಡಿತಾ ಆ ಬಗೆಯ ಹೇಳಿಕೆ ನೀಡುತ್ತಿರಲಿಲ್ಲ. ತಮ್ಮೊಳಗಿನ ಸಮಸ್ಯೆ ಏನು ಎಂಬುದನ್ನು ಪರಾಮರ್ಶಿಸಿ ಅವಲೋಕಿಸಿದ್ದರೆ ಆ ಮಟ್ಟಿನ ಬೇಜವಾಬ್ದಾರಿಯ ಮಾತು ನಾಲಗೆಯಿಂದ ಹೊರಚಿಮ್ಮುತ್ತಿರಲಿಲ್ಲ!</span><br /><br /><span style="color: rgb(0, 0, 153);">ಪಾಕ್ ಕ್ರೀಡಾ ಸಚಿವರಿಗೆ ಒಂದು ಪ್ರಶ್ನೆ. ಒಂದು ವೇಳೇ ಇಂದಿನ ಬಿಕ್ಕಟ್ಟಿನ ದಿನಗಳಲ್ಲಿ ಪಾಕಿಸ್ತಾನದಲ್ಲೇ ನೀವು ಐಪಿಎಲ್ ಮಾದರಿಯ ಪಿಪಿಎಲ್ ಆರಂಭ ಮಾಡಿದರೆ ಹೇಗಿರಬಹುದು? ನಿಮ್ಮ ಫ್ರಾಂಚೈಸಿಗಳು ಕೋಟಿಗಟ್ಟಲೆ ಹಣ ನೀಡುತ್ತೇವೆ ಎಂದು ಆಹ್ವಾನ ನೀಡಿದರೂ ಅದೆಷ್ಟು ದೇಶದ ಆಟಗಾರರು ಆಹ್ವಾನವನ್ನು ಖುಷಿಯಿಂದ ಒಪ್ಪಿಯಾರು? ಶ್ರೀಲಂಕಾ ಆಟಗಾರರ ಮೇಲೆ ಗುಂಡಿನ ದಾಳಿ ನಡೆಸಿದ್ದ ಕಳೆದ ವರ್ಷದ ಘಟನೆ ನೆನೆಸಿಕೊಂಡರೆ ಜೀವದ ಬಗ್ಗೆ ಭಯವಿದ್ದವನು ಪಾಕಿಸ್ತಾನಕ್ಕೆ ಬರಲಾದರೂ ಸಾಧ್ಯವಿದೆಯೇ? ಇಂದಿನ ಜಟಿಲ ಬಿಕ್ಕಟ್ಟು ಹಾಗೂ ಅಭದ್ರತೆಯ ಕರಿನೆರಳ ಪಾಕಿಸ್ತಾನದಲ್ಲಿ ಕ್ರಿಕೆಟ್ ಬಿಡಿ, ಯಾವ ಆಟವನ್ನಾಡಲೂ ವಿದೇಶಿಗರು ಬಯಸುವುದಿಲ್ಲ. ಈ ವಿಷಯವನ್ನು ಇಜಾಸ್ ಅವರು ನೆನಪಿಟ್ಟುಕೊಳ್ಳಲಿ. ಭಾರತಕ್ಕೆ ಬುದ್ಧಿ ಕಲಿಸುತ್ತೇವೆ ಎಂದು ಉಸುರುವ ಬದಲು ನಿಮ್ಮಲ್ಲಿನ ಬಿಕ್ಕಟ್ಟು ನಿವಾರಣೆ ಬಗೆ ಹೇಗೆ ಎಂಬ ಬಗ್ಗೆ ಯೋಚಿಸಿ ಅಥವಾ ಸಂಬಂಧಪಟ್ಟವರಿಗೆ ಆ ಕುರಿತು ಬುದ್ಧಿ ಹೇಳಿ.</span><br /><br /><span style="color: rgb(0, 0, 153);">ಇವೆಲ್ಲದರ ನಡುವೆ, ಪಾಕಿಸ್ತಾನದಲ್ಲಿ ಭಾರತದ ವಿರುದ್ಧ ಈಗಾಗಲೇ ವಿರೋಧ ವ್ಯಕ್ತವಾಗಿದೆ. ಕೇಬಲ್ ಟಿವಿ ಮಾಲೀಕರೂ ಐಪಿಎಲ್ನ್ನು ಪ್ರಸಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಸರಿಯಾಗಿ ಪಾಕಿಸ್ತಾನ ಕಬಡ್ಡಿ ಫೆಡರೇಷನ್ (ಪಿಕೆಬಿ) ಭಾರತದ ಕಬಡ್ಡಿ ಪ್ರವಾಸವನ್ನು ರದ್ದುಗೊಳಿಸಿದೆ. ಭಾರತಕ್ಕೆ ಬರುವುದಿಲ್ಲ ಎಂದು ‘ಪಿಕೆಬಿ’ ಖಂಡತುಂಡವಾಗಿ ಹೇಳಿದೆ. ಜೊತೆಗೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಜಹೀರ್ ಅಬ್ಬಾಸ್ ಪಾಕ್ ಹಾಕಿ ತಂಡ ಫೆಬ್ರವರಿಯಲ್ಲಿ ಭಾರತದಲ್ಲಿ ನಡೆಯಲಿರುವ ’ಹಾಕಿ ವಿಶ್ವಕಪ್’ನಿಂದ ಹೊರಗುಳಿಯಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಕ್ರೀಡಾ ಸಚಿವ ಇಜಾಸ್ ಜಖ್ರಾನಿ ಅವರಲ್ಲಿ ಮಾತುಕತೆ ನಡೆಸುವುದಾಗಿಯೂ ಹೇಳಿದ್ದಾರೆ. ಒಟ್ಟಾರೆ ಪಾಕಿಸ್ತಾನದ ಸ್ವಯಂಕೃತ ಅಪರಾಧ, ಐಪಿಎಲ್ ಸಂಘಟಕರ ತರಾತುರಿಯ ನಿರ್ಧಾರ, ಪಾಕ್ ನಾಯಕರ ಬೇಜವಾಬ್ದಾರಿ ಹೇಳಿಕೆ, ಕ್ರೀಡೆಯಲ್ಲಿ ರಾಜಕೀಯದ ನುಸುಳುವಿಕೆ... ಈ ಎಲ್ಲಾ ವಿಷಜಂತುಗಳು ದ್ವಿಪಕ್ಷೀಯ ಸಂಬಂಧ ಸುಧಾರಣೆ ಎಂಬ ಪದಕ್ಕೇ ಕಲ್ಲೆಸೆದಿವೆ...</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com0tag:blogger.com,1999:blog-2818153219058834250.post-73560535587983578182009-09-12T05:32:00.000-07:002009-09-12T05:54:23.437-07:00<span style="font-weight: bold;font-size:100%;" ><span style="font-size:180%;">Love's Lost...?<br /><span style="font-size:130%;"><br /></span></span></span><span style="font-weight: bold;font-size:85%;" >Here are the Tips.. :-)</span><span style="font-weight: bold;font-size:100%;" ><span style="font-size:180%;"><span style="font-size:130%;"><br /></span></span></span><span style="font-size:100%;"><br /><span style="font-weight: bold;">Recently my friend delivered me some LOVE TIPS from his own</span><br /><span style="font-weight: bold;">LOVE's Bank :-)</span><br /><span style="font-weight: bold;">Here by I have uploaded that in my blog; so that even my comrades</span><span style="font-weight: bold;"> could use these tips for their overwhelming success. :) :)</span></span><span style="font-weight: bold;font-size:100%;" ><br /></span><ul style="color: rgb(0, 0, 153);"><p><span style=";font-family:Arial Unicode MS Western;font-size:100%;" ><br /></span></p><p><span style=";font-family:Arial Unicode MS Western;font-size:100%;" >1. </span><span style=";font-family:Tunga;font-size:100%;" >ಪ್ರೀತಿಯಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನಂಬಿಕೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮುಖ್ಯ</span><span style=";font-family:Arial Unicode MS;font-size:100%;" >. </span><span style=";font-family:Tunga;font-size:100%;" >ಅದು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಂಬಂಧ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಗಟ್ಟಿಮಾಡುತ್ತದೆ</span><span style=";font-family:Arial Unicode MS Western;font-size:100%;" >.</span></p><p><span style=";font-family:Arial Unicode MS Western;font-size:100%;" >2. </span><span style=";font-family:Tunga;font-size:100%;" >ಮಾತು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸುಳ್ಳು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹೇಳಿದರೂ</span><span style=";font-family:Arial Unicode MS;font-size:100%;" >, </span><span style=";font-family:Tunga;font-size:100%;" >ನಲ್ಲನ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕಣ್ಣು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸುಳ್ಳು</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಹೇಳಲಾರದು</span></p><p><span style=";font-family:Arial Unicode MS Western;font-size:100%;" >3. </span><span style=";font-family:Tunga;font-size:100%;" >ಮಧ್ಯವಯಸ್ಕ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮಾನಿನಿಯರೇ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹೆಚ್ಚು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರಚೋದನಕಾರಿ</span><span style=";font-family:Arial Unicode MS;font-size:100%;" > : </span><span style=";font-family:Arial Unicode MS Western;font-size:100%;" >ಸಮೀಕ್ಷೆ</span></p><p><span style=";font-family:Arial Unicode MS Western;font-size:100%;" >4. </span><span style=";font-family:Tunga;font-size:100%;" >ಚುಂಬನಕ್ಕೂ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮುನ್ನ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಬಾಯನ್ನು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಚೆನ್ನಾಗಿ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ತೊಳೆದುಕೊಳ್ಳಿ</span></p><p><span style=";font-family:Arial Unicode MS Western;font-size:100%;" >5. </span><span style=";font-family:Tunga;font-size:100%;" >ಹೊಗಳಿಕೆಗೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕರಗದ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಜೀವಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಇಲ್ಲ</span><span style=";font-family:Arial Unicode MS;font-size:100%;" >. </span><span style=";font-family:Tunga;font-size:100%;" >ಪ್ರೇಯಸಿಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮನಸಾರೆ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಹೊಗಳಿ</span></p><p><span style=";font-family:Arial Unicode MS Western;font-size:100%;" >6. </span><span style=";font-family:Tunga;font-size:100%;" >ಪ್ರೀತಿಯಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪರಸ್ಪರ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕೊಟ್ಟು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ತಗೋ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪಾಲಿಸಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಅನುಸರಿಸಿ</span><span style=";font-family:Arial Unicode MS;font-size:100%;" >,</span><span style=";font-family:Arial Unicode MS Western;font-size:100%;" >ಆನಂದಿಸಿ</span></p><p><span style=";font-family:Arial Unicode MS Western;font-size:100%;" >7. </span><span style=";font-family:Tunga;font-size:100%;" >ಪ್ರೀತಿಯಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕಾಮಕ್ಕಿಂತ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪರಸ್ಪರ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆಸರೆಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಅಗತ್ಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹೆಚ್ಚು</span><span style=";font-family:Arial Unicode MS;font-size:100%;" >, </span><span style=";font-family:Arial Unicode MS Western;font-size:100%;" >ಗಮನಿಸಿ</span></p><p><span style=";font-family:Arial Unicode MS Western;font-size:100%;" >8. </span><span style=";font-family:Tunga;font-size:100%;" >ಸಣ್ಣಪುಟ್ಟ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕಾಣಿಕೆಗಳೇ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರೀತಿಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರಾಮಾಣಿಕತೆಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸೂಚಕ</span><span style=";font-family:Arial Unicode MS Western;font-size:100%;" >.</span></p><p><span style=";font-family:Arial Unicode MS Western;font-size:100%;" >9. </span><span style=";font-family:Tunga;font-size:100%;" >ಪ್ರೇಮದಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕೊನೆವರೆಗೂ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಜತೆಗಿರುವ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆತ್ಮವಿಶ್ವಾಸ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮುಖ್ಯ</span><span style=";font-family:Arial Unicode MS Western;font-size:100%;" >..</span></p><p><span style=";font-family:Arial Unicode MS Western;font-size:100%;" >10.</span><span style=";font-family:Tunga;font-size:100%;" >ಹೆಣ್ಣು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರೀತಿಸುವುದು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಒಮ್ಮೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮಾತ್ರ</span><span style=";font-family:Arial Unicode MS;font-size:100%;" >. </span><span style=";font-family:Tunga;font-size:100%;" >ಗಂಡಿಗೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಅದು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಅರ್ಥ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆಗಬೇಕು</span><span style=";font-family:Arial Unicode MS Western;font-size:100%;" >.</span></p><p><span style=";font-family:Arial Unicode MS Western;font-size:100%;" >11.</span><span style=";font-family:Tunga;font-size:100%;" >ಗಂಡಿನ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕೋಪ</span><span style=";font-family:Arial Unicode MS;font-size:100%;" >, </span><span style=";font-family:Tunga;font-size:100%;" >ಹೆಣ್ಣಿನ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಶಾಂತತೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಮನಾಗಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಬೆರೆತರಷ್ಟೇ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರೀತಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಾಧ್ಯ</span><span style=";font-family:Arial Unicode MS Western;font-size:100%;" >.</span></p><p><span style=";font-family:Arial Unicode MS Western;font-size:100%;" >12.</span><span style=";font-family:Tunga;font-size:100%;" >ನಿರ್ಮಲ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರೇಮದಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕಾಮಕ್ಕೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆಸ್ಪದವಿಲ್ಲ</span><span style=";font-family:Arial Unicode MS;font-size:100%;" >.</span><span style=";font-family:Tunga;font-size:100%;" >ಕಾಮ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕ್ಷಣಿಕ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಅರಿವಿರಲಿ</span></p><p><span style=";font-family:Arial Unicode MS Western;font-size:100%;" >13.</span><span style=";font-family:Tunga;font-size:100%;" >ಪ್ರೀತಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸೋ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹೃದಯಗಳು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮಗುವಿನಂತೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನಿಷ್ಕಪಟವಾಗಿರುತ್ತದೆ</span><span style=";font-family:Arial Unicode MS Western;font-size:100%;" >.</span></p><p><span style=";font-family:Arial Unicode MS Western;font-size:100%;" >14.</span><span style=";font-family:Tunga;font-size:100%;" >ನೀವು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹೆಚ್ಚು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕಾಲ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆನಂದವಾಗಿರಬೇಕೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹಾಗಾದ್ರೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರೀತಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮಾಡಿ</span><span style=";font-family:Arial Unicode MS Western;font-size:100%;" >.<br /></span></p><p><span style=";font-family:Arial Unicode MS Western;font-size:100%;" >15.</span><span style=";font-family:Tunga;font-size:100%;" >ಪ್ರೀತಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮಾಡುವುದರಿಂದ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ದೈಹಿಕ</span><span style=";font-family:Arial Unicode MS;font-size:100%;" >, </span><span style=";font-family:Tunga;font-size:100%;" >ಮಾನಸಿಕ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಮತೋಲನ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಾಧ್ಯ</span><span style=";font-family:Arial Unicode MS Western;font-size:100%;" >.</span></p><p><span style=";font-family:Arial Unicode MS Western;font-size:100%;" >16.</span><span style=";font-family:Tunga;font-size:100%;" >ಪ್ರೇಯಸಿಯನ್ನು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಎಂದೂ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಎಲ್ಲರೆದುರು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಬೈಯಬೇಡಿ</span><span style=";font-family:Arial Unicode MS;font-size:100%;" >. </span><span style=";font-family:Tunga;font-size:100%;" >ಅದು</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಅಪಾಯ</span></p><p><span style=";font-family:Arial Unicode MS Western;font-size:100%;" >17.</span><span style=";font-family:Tunga;font-size:100%;" >ಎರಡು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರಾಮಾಣಿಕ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹೃದಯಗಳ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನಡುವೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಬೆಸೆಯುವ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕೊಂಡಿಯೇ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಪ್ರೀತಿ</span></p><p><span style=";font-family:Arial Unicode MS Western;font-size:100%;" >18.</span><span style=";font-family:Tunga;font-size:100%;" >ಸಂಗಾತಿಯನ್ನು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ದಿನಂಪ್ರತಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆಕೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಇಷ್ಟಪಡುವ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹೆಸರಿನಿಂದ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಕರೆಯಿರಿ</span></p><p><span style=";font-family:Arial Unicode MS Western;font-size:100%;" >19.</span><span style=";font-family:Tunga;font-size:100%;" >ಸಂಗಾತಿಯಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹಣದ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ವಿಚಾರದ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕುರಿತು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಅಧಿಕ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಚರ್ಚೆ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಒಳಿತಲ್ಲ</span></p><p><span style=";font-family:Arial Unicode MS Western;font-size:100%;" >20.</span><span style=";font-family:Tunga;font-size:100%;" >ಪ್ರೀತಿಯಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನಿಮ್ಮ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಹಿಂದಿನ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ತಪ್ಪುಗಳ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಬಗ್ಗೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಚಿಂತಿಸದೆ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಮುಂದುವರಿಯಿರಿ</span></p><p><span style=";font-family:Arial Unicode MS Western;font-size:100%;" >21.</span><span style=";font-family:Tunga;font-size:100%;" >ಗಾತಿಗೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಯಾವುದು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮುಖ್ಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಎಂಬುದನ್ನರಿತು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಅದಕ್ಕೆ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಸ್ಪಂದಿಸಿರಿ</span></p><p><span style=";font-family:Arial Unicode MS Western;font-size:100%;" >22.</span><span style=";font-family:Tunga;font-size:100%;" >ಸಂಗಾತಿಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಭವಿಷ್ಯ</span><span style=";font-family:Arial Unicode MS;font-size:100%;" >, </span><span style=";font-family:Tunga;font-size:100%;" >ಯೋಜನೆಗಳ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕುರಿತು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಚರ್ಚಿಸಿ</span><span style=";font-family:Arial Unicode MS;font-size:100%;" >, </span><span style=";font-family:Arial Unicode MS Western;font-size:100%;" >ಪ್ರತಿಕ್ರಿಯಿಸಿ</span></p><p><span style=";font-family:Arial Unicode MS Western;font-size:100%;" >23.</span><span style=";font-family:Tunga;font-size:100%;" >ನಗುಮುಖದೊಂದಿಗೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸದಾ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಂಗಾತಿಯನ್ನು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕಾರ್ಯದಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಹುರಿದುಂಬಿಸಿ\</span></p><p><span style=";font-family:Arial Unicode MS Western;font-size:100%;" >24.</span><span style=";font-family:Tunga;font-size:100%;" >ಬಾಳಸಂಗಾತಿಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆಯ್ಕೆ</span><span style=";font-family:Arial Unicode MS;font-size:100%;" >, </span><span style=";font-family:Tunga;font-size:100%;" >ಇಚ್ಛೆಗಳ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕುರಿತು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನಿಗಾ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಇರುವುದು</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಅತ್ಯಗತ್ಯ</span></p><p><span style=";font-family:Arial Unicode MS Western;font-size:100%;" >25.</span><span style=";font-family:Tunga;font-size:100%;" >ಪ್ರವಾಸಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ತಾಣಗಳಿಗೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಂಗಾತಿಯನ್ನು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕರೆದೊಯ್ಯುವುದು</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಉತ್ತಮ</span></p><p><span style=";font-family:Arial Unicode MS Western;font-size:100%;" >26.</span><span style=";font-family:Tunga;font-size:100%;" >ಸಂಗಾತಿಗೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನೀವು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಭರವಸೆಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆಶಾಕಿರಣವಾಗಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕಾಣುವಂತೆ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ವರ್ತಿಸಿ</span></p><p><span style=";font-family:Arial Unicode MS Western;font-size:100%;" >27.</span><span style=";font-family:Tunga;font-size:100%;" >ಹೆಚ್ಚಿನ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕಾರ್ಯಕ್ಕೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಂಗಾತಿಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಅಭಿಪ್ರಾಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಕೇಳುವುದು</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಭರವಸೆದಾಯಕ</span></p><p><span style=";font-family:Arial Unicode MS Western;font-size:100%;" >28.</span><span style=";font-family:Tunga;font-size:100%;" >ವೈಮನಸ್ಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಉಂಟಾದಾಗ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಂಗಾತಿಯಲ್ಲಿ</span><span style=";font-family:Arial Unicode MS;font-size:100%;" > '</span><span style=";font-family:Tunga;font-size:100%;" >ಕ್ಷಮೆ</span><span style=";font-family:Arial Unicode MS;font-size:100%;" >' </span><span style=";font-family:Tunga;font-size:100%;" >ಕೇಳಲು</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಹಿಂಜರಿಯದಿರಿ</span></p><p><span style=";font-family:Arial Unicode MS Western;font-size:100%;" >29.</span><span style=";font-family:Tunga;font-size:100%;" >ನಕಾರಾತ್ಮಕ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನಡೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಪ್ರಣಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಜೀವನದಲ್ಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಒಳಸುಳಿಯದಂತೆ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ನೋಡಿಕೊಳ್ಳಿ</span></p><p><span style=";font-family:Arial Unicode MS Western;font-size:100%;" >30.</span><span style=";font-family:Tunga;font-size:100%;" >ಆಗಾಗ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನಿಮ್ಮ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಸಂಗಾತಿಗೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಉಡುಗೊರೆಗಳನ್ನು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನೀಡಿ</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಪ್ರೋತ್ಸಾಹಿಸುತ್ತಿರಿ</span></p><p><span style=";font-family:Arial Unicode MS Western;font-size:100%;" >31.</span><span style=";font-family:Tunga;font-size:100%;" >ಮು</span><span style=";font-family:Arial Unicode MS Western;font-size:100%;" >ತ್ತಿಡು</span><span style=";font-family:Tunga;font-size:100%;" >ವುದು</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ಯಾವಾಗಲೂ </span><span style=";font-family:Tunga;font-size:100%;" >ನಯವಾಗಿರಲಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಆಕ್ರಮಣ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಒಳ್ಳೆಯದಲ್ಲ</span><span style=";font-family:Arial Unicode MS Western;font-size:100%;" >.</span></p><p><span style=";font-family:Arial Unicode MS Western;font-size:100%;" >32.</span><span style=";font-family:Tunga;font-size:100%;" >ಪ್ರೇಮಿಯ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಬಳಿ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಯಾವ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ವಿಷಯವನ್ನು</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮುಚ್ಚಿಡ</span><span style=";font-family:Arial Unicode MS Western;font-size:100%;" >ಲು ಪ್ರಯತ್ನಿಸಬೇಡಿ</span></p><p><span style=";font-family:Arial Unicode MS Western;font-size:100%;" >33.</span><span style=";font-family:Tunga;font-size:100%;" >ಪ್ರೇಮ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ನಿವೇದನೆ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಮಾಡಲು</span><span style=";font-family:Arial Unicode MS;font-size:100%;" > </span><span style=";font-family:Arial Unicode MS Western;font-size:100%;" >ನೀವು </span><span style=";font-family:Tunga;font-size:100%;" >ಎಂದೂ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ವಾಮಮಾರ್ಗ</span><span style=";font-family:Arial Unicode MS;font-size:100%;" > </span><span style=";font-family:Tunga;font-size:100%;" >ಬಳಸಬೇಡಿ</span><span style=";font-family:Times New Roman;font-size:100%;" >.</span></p><p><span style=";font-family:Times New Roman;font-size:100%;" >34. </span><span style=";font-family:Tunga;font-size:100%;" >ಪ್ರತಿದಿನ ಮುಂಜಾನೆ ನಿಮ್ಮ ಪ್ರೇಯಸಿಯ ಸ್ಮರಿಸಿರಿ. ಮಾತು ಹಿತವಾಗಿರಲಿ.</span></p></ul> <p style="color: rgb(0, 0, 153);"><span style=";font-family:Times New Roman;font-size:100%;" > 35. </span><span style=";font-family:Tunga;font-size:100%;" >ಆರ್ಥಿಕ ಬಿಕ್ಕಟ್ಟಿನಲ್ಲಿ ದುಂದುವೆಚ್ಚ ಮಾಡದೆ, ಸಂಬಂಧ ಉಳಿ</span><span style=";font-family:Times New Roman;font-size:100%;" >ಸಿ</span></p> <p style="color: rgb(0, 0, 153);"><span style=";font-family:Times New Roman;font-size:100%;" >36</span><span style=";font-family:Tunga;font-size:100%;" >.</span><span style=";font-family:Times New Roman;font-size:100%;" > </span><span style=";font-family:Tunga;font-size:100%;" >ಜೊತೆಯಲ್ಲಿ ಕೂತು ಊಟ ಮಾಡಿ, ಸಾಮೀಪ್ಯದಲ್ಲಿ ಪ್ರೀತಿ ಹೆಚ್ಚುತ್ತೆ.</span></p> <p style="color: rgb(0, 0, 153);"><span style=";font-family:Times New Roman;font-size:100%;" >37. </span><span style=";font-family:Tunga;font-size:100%;" >ಕಾಮಕೇಳಿಗೆ ಇಳಿಯುವ ಮುನ್ನ ಪ್ರೇಮದಾಟದಲ್ಲಿ ತೊಡಗಿ</span><span style=";font-family:Times New Roman;font-size:100%;" >, </span><span style=";font-family:Tunga;font-size:100%;" >ನೋಯಿಸಬೇಡಿ.</span></p> <p style="color: rgb(0, 0, 153);"><span style=";font-family:Times New Roman;font-size:100%;" >38. </span><span style=";font-family:Tunga;font-size:100%;" >ಪ್ರೇಮಿ ಉದ್ಯೋಗದಲ್ಲಿದ್ದರೆ ಒತ್ತಡ ನಿವಾರಣೆಗೆ ಪರಸ್ಪರ ಮಾ</span><span style=";font-family:Times New Roman;font-size:100%;" >ತಾಡಿ</span><span style=";font-family:Tunga;font-size:100%;" >.</span></p> <p style="color: rgb(0, 0, 153);"><span style=";font-family:Times New Roman;font-size:100%;" >39. </span><span style=";font-family:Tunga;font-size:100%;" >ಗಂಡಿಗೆ ಹೊಗಳುವುದು ಇಷ್ಟ. ಹೆಂಗಸರಿಗೆ ಮಾತು ಕಮ್ಮಿ ಮಾಡಿ ಆಲಿಸಿ</span></p> <p style="color: rgb(0, 0, 153);"><span style=";font-family:Times New Roman;font-size:100%;" >40. </span><span style=";font-family:Tunga;font-size:100%;" >ಹೆಣ್ಣು</span><span style=";font-family:Times New Roman;font-size:100%;" > </span><span style=";font-family:Tunga;font-size:100%;" >ತನ್ನ ಕಷ್ಟ</span><span style=";font-family:Times New Roman;font-size:100%;" > </span><span style=";font-family:Tunga;font-size:100%;" >ಒಂದೇ ಮಾತಿಗೆ ಹೇಳಲ್ಲ. ಸತಾಯಿಸಿ ಕೇಳಿ ಪರಿ</span><span style=";font-family:Times New Roman;font-size:100%;" >ಹರಿಸಿ</span><span style=";font-family:Tunga;font-size:100%;" >.</span></p> <p style="color: rgb(0, 0, 153);"><span style=";font-family:Times New Roman;font-size:100%;" >41. </span><span style=";font-family:Tunga;font-size:100%;" >ಹೆಣ್ಣು ಒಂದಲ್ಲ ಒಂದು ಪ್ರೀತಿಸುತ್ತಾಳೆ. ಆಗಾಗ ಪ್ರವಾಸ ಮಾಡಿ ಮರಿಬೇಡಿ</span></p> <p style="color: rgb(0, 0, 153);"><span style=";font-family:Times New Roman;font-size:100%;" >42. </span><span style=";font-family:Tunga;font-size:100%;" >ಪ್ರೇಮಪತ್ರ ಬರೆಯಿರಿ. ಇಲ್ಲದಿದ್ದರೆ ಪ್ರೀತಿ ಚೀಟಿಗಳನ್ನು ಪ್ರೇಯಸಿಗೆ ನೀಡಿ.</span></p> <p style="color: rgb(0, 0, 153);"><span style=";font-family:Times New Roman;font-size:100%;" >43. </span><span style=";font-family:Tunga;font-size:100%;" >ಮದುವೆ ಪ್ರೀತಿಯ ಕೊನೆ ಹಂತ ಎಂ</span><span style=";font-family:Times New Roman;font-size:100%;" >ದು</span><span style=";font-family:Tunga;font-size:100%;" > ಸುಳ್ಳು ಮಾಡಿ. ಮತ್ತೆ ಪ್ರೇಮಿಸಿ.</span></p> <p style="color: rgb(0, 0, 153);"><span style=";font-family:Times New Roman;font-size:100%;" >44. </span><span style=";font-family:Tunga;font-size:100%;" >ಅಚ್ಚರಿಯ ಉಡುಗೊರೆ ಸದಾ ನೆನಪಲ್ಲಿ ಉಳಿಯಬಲ್ಲದು. ಗಿಫ್ಟ್ ನೀಡುತ್ತಿರಿ.</span></p> <p style="color: rgb(0, 0, 153);"><span style=";font-family:Times New Roman;font-size:100%;" >45. </span><span style=";font-family:Tunga;font-size:100%;" >ದೈನಂದಿನ ಕೆಲಸದಲ್ಲಿ ಪ್ರೀತಿಗೆ ಪ್ರತ್ಯೇಕ ಸಮಯ</span><span style=";font-family:Times New Roman;font-size:100%;" >ವಿಡಿ</span><span style=";font-family:Tunga;font-size:100%;" >.</span><span style=";font-family:Times New Roman;font-size:100%;" > </span><span style=";font-family:Tunga;font-size:100%;" >ಪ್ರೀತಿ ನಿರಂತರ</span></p> <p style="color: rgb(0, 0, 153);"><span style=";font-family:Times New Roman;font-size:100%;" >46. </span><span style=";font-family:Tunga;font-size:100%;" >ಲವ್ ಯೂ ಐಲೈಕ್ ಯೂ ರೀತಿ ಸಣ್ಣ ಸಣ್ಣ ಪ್ರೀತಿ ಮಾತು ಸದಾ ಆಡುತ್ತಿರಿ.</span></p> <p style="color: rgb(0, 0, 153);"><span style=";font-family:Times New Roman;font-size:100%;" >47. </span><span style=";font-family:Tunga;font-size:100%;" >ಹೆಣ್ಣು ಆಸರೆ ಬಯಸುತ್ತಾಳೆ. ಆದರೆ ಅದೆ ಬಲಹೀನತೆ ಎಂದು ಬಿಂಬಿಸಬೇಡಿ. .</span></p> <span style="color: rgb(0, 0, 153);font-family:Times New Roman;font-size:100%;" >48. </span><span style="color: rgb(0, 0, 153);font-family:Tunga;font-size:100%;" >ಪ್ರೇಯಸಿಯ ಮನೆ ಅವರೊಡನೆ ಹತ್ತಿರಾಗಿ, ಎಂದೂ ಕೀಳಾಗಿ ನೋಡಬೇಡಿ.</span> <span style="font-size:100%;"><br /></span><p style="color: rgb(0, 0, 153);"><span style=";font-family:Tunga;font-size:100%;" >49. ಸಂತೋಷವಾಗಿರುವುದೇ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ನಿಮ್ಮ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸಂಗಾತಿಗೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಕೊಡಬಹುದಾದ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ದೊಡ್ಡ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಗಿಫ್ಟ್</span></p><p style="color: rgb(0, 0, 153);"><span style=";font-family:Tunga;font-size:100%;" >50. ದಣಿದ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸಂಗಾತಿಗೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಮುದ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ನೀಡಲು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಮಲಗುವ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಕೋಣೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸುಂದರವಾಗಿರಿಸಿ</span></p> <ul style="color: rgb(0, 0, 153);"><p><span style=";font-family:Tunga;font-size:100%;" >51. ಹೆಣ್ಣಿನ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಮುಂದೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ದಡ್ಡರಂತೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ವರ್ತಿಸಿ</span><span style=";font-family:BRH Kannada;font-size:100%;" >.</span><span style=";font-family:Tunga;font-size:100%;" >ಪ್ರೇಮದಲ್ಲಿಸೋತರೇ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಗೆಲ್ಲಲು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸಾಧ್ಯ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >52. ಹಾಡಲು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಬರದಿದ್ದರೂ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹಾಡುಗಾರರಾಗಿ</span><span style=";font-family:BRH Kannada;font-size:100%;" >, </span><span style=";font-family:Tunga;font-size:100%;" >ಸಂತಸದ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಗಳಿಗೆಯ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸೃಷ್ಟಿಸಿ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >53. ಗೊಂದಲವಿದ್ದಾಗ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸ್ನೇಹಿತರೊಡನೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ವಿಷಯ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹಂಚಿಕೊಳ್ಳಿ</span><span style=";font-family:BRH Kannada;font-size:100%;" >.</span><span style=";font-family:Tunga;font-size:100%;" >ನಿರ್ಧಾರ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ನಿಮ್ಮದಾಗಲಿ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >54. ಹುಡುಗರು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ತಮ್ಮ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸ್ವಭಾವಕ್ಕೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಅನುಗುಣವಾಗಿ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಆದರ್ಶ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹೊಂದಬೇಕು</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >55. ಸಂಬಂಧಗಳ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಚೆನ್ನಾಗಿ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ನಿಭಾಯಿಸಬಲ್ಲ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಮೂಲ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಮಂತ್ರ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ವಿಶ್ವಾಸ</span><span style=";font-family:BRH Kannada;font-size:100%;" >, </span><span style=";font-family:Tunga;font-size:100%;" >ನಂಬಿಕೆ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >56. ಎಲ್ಲಿ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಭಯ</span><span style=";font-family:BRH Kannada;font-size:100%;" >, </span><span style=";font-family:Tunga;font-size:100%;" >ಶಂಕೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಇರುತ್ತೋ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಅಲ್ಲಿಅನುಮಾನ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹುಟ್ಟುತ್ತೆ</span><span style=";font-family:BRH Kannada;font-size:100%;" >. </span><span style=";font-family:Tunga;font-size:100%;" >ಪ್ರೀತಿಗೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಮಾರಕ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >57. ಪ್ರೀತಿ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಒಳ್ಳೆದಕ್ಕೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ನಾಂದಿಯಾಗಿ</span><span style=";font-family:BRH Kannada;font-size:100%;" >, </span><span style=";font-family:Tunga;font-size:100%;" >ಕೆಟ್ಟವರನ್ನು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಒಳ್ಳೆಯವರನ್ನಾಗಿಸುತ್ತದೆ</span><span style=";font-family:BRH Kannada;font-size:100%;" >.</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >58. ಭಾವನಾತ್ಮಕವಾಗಿ</span><span style=";font-family:BRH Kannada;font-size:100%;" >, </span><span style=";font-family:Tunga;font-size:100%;" >ದೈಹಿಕವಾಗಿ</span><span style=";font-family:BRH Kannada;font-size:100%;" >, </span><span style=";font-family:Tunga;font-size:100%;" >ನೈತಿಕವಾಗಿ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಕುಗ್ಗದಂತೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಪ್ರೀತಿಸಿ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >59. ನಿಮ್ಮ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಪ್ರೇಮದ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಪ್ರಪಂಚಕ್ಕೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ವಾಸ್ತವದ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಅರಿವಿರಲಿ</span><span style=";font-family:BRH Kannada;font-size:100%;" >. </span><span style=";font-family:Tunga;font-size:100%;" >ಎಚ್ಚರ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಮೀರದಿರಲಿ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >60. ಪ್ರೇಮಿಯನ್ನು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸಂತೋಷಪಡಿಸಲಾಗದಿದ್ದರೂ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಅಡ್ಡಿಯಿಲ್ಲ</span><span style=";font-family:BRH Kannada;font-size:100%;" >.</span><span style=";font-family:Tunga;font-size:100%;" >ನೋಯಿಸಬೇಡಿ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >61. ಸಂತಸವಿದ್ದಾಗ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಸಂಕಟಗಳ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹೇಳಬೇಡಿ</span><span style=";font-family:BRH Kannada;font-size:100%;" >. </span><span style=";font-family:Tunga;font-size:100%;" >ಸಂಕಟ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹಂಚಿಕೊಳ್ಳದೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಕೊರಗಬೇಡಿ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >62. ಹುಡುಗರನ್ನು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಪ್ರಶ್ನಿಸುವುದು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹುಡುಗಿಯರ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹುಟ್ಟುಗುಣ</span><span style=";font-family:BRH Kannada;font-size:100%;" >. </span><span style=";font-family:Tunga;font-size:100%;" >ಸಹಿಸಿರಿ</span></p></ul> <ul style="color: rgb(0, 0, 153);"><p><span style=";font-family:Tunga;font-size:100%;" >63. ಪ್ರೀತಿ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಒಂದು</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಹಂತ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ದಾಟಿದ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಮೇಲೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಜೀವನದ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಬಗ್ಗೆ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಪರಸ್ಪರ</span><span style=";font-family:BRH Kannada;font-size:100%;" > </span><span style=";font-family:Tunga;font-size:100%;" >ಆಲೋಚಿಸಿ</span></p></ul>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com4tag:blogger.com,1999:blog-2818153219058834250.post-69433874682626849592009-09-06T22:01:00.000-07:002009-09-06T22:11:28.587-07:00<span style="font-weight: bold; color: rgb(153, 0, 0);font-size:180%;" >ಅನ್ನದಾತನ ಆಕ್ರಂದನಕ್ಕೆ ಹೊಣೆ ಯಾರು?</span><br /><br /><span style="color: rgb(51, 0, 0);">ರೈತರು ಪಟ್ಟ ಶ್ರಮಗಳಿಗೆ ಕಿಂಚಿತ್ತೂ ಬೆಲೆ ನೀಡದಿದ್ದರೂ ಅವರನ್ನು ಪುಂ</span><span style="color: rgb(51, 0, 0);">ಖಾನುಪುಂಖವಾಗಿ ಹೊಗಳಿ ಅಟ್ಟಕ್ಕೇರಿಸುವಲ್ಲಿ ನಮ್ಮ ರಾಜಕಾರಣಿಗಳು ಬಹಳ ನಿಸ್ಸೀಮರು. ಕೇವಲ ಮತಗಳನ್ನು ಸೆಳೆಯುವ ಉದ್ದೇಶ, ಅಧಿಕಾರದ ಗದ್ದುಗೆ ಏರುವ ಬಯಕೆ ರಾಜಕಾರಣಿಗಳನ್ನು ಏನು ಬೇಕಾದರೂ ಮಾಡುವಂತೆ ಪ್ರೇರೇಪಿಸುತ್ತದೆ. (ಅಧಿಕಾರ ಸಿಗುತ್ತದೆ ಎಂದಾದರೆ ರಾಜಕಾರಣಿಗಳು ಮಾತ್ರವಲ್ಲ, ಅಧಿ</span><span style="color: rgb(51, 0, 0);">ಕಾರಿ ವರ್ಗಗಳು ಏನು ಮಾಡಲು ಹೇಸುವುದಿಲ್ಲ ಎಂಬುದು ಬೇರೆ ಮಾತು). ಭಾರತ ಇಂದು ಎಷ್ಟೇ ಮುಂದುವರಿದ ರಾಷ್ಟ್ರವಾಗಿ ಇಂದು ಹೊರಹೊಮ್ಮಿದ್ದರೂ, ರೈತರ ಪಾಡು ನಾಯಿ ಪಾಡೇ. ಆಫ್ರಿಕಾ ಖಂಡ ಹಲವು ದೇಶಗಳಲ್ಲಿನ ದೈನ್ಯ ಸ್ಥಿತಿಗೂ ನಮ್ಮ ದೇಶದ ರೈತರ ಸ್ಥಿತಿಗೂ ಹೋಲಿಕೆ ಒಂದೇ. ಅಲ್ಲಿನ ಹಲವು ರಾಷ್ಟ್ರಗಳು</span><span style="color: rgb(51, 0, 0);"> ಇನ್ನೂ ಅಭಿವೃದ್ಧಿ ಎಂದರೆ ಏನೆಂದೇ ಅರಿತಿಲ್ಲ. ಭಾರತದ ರೈತರ ಅಭಿವೃದ್ಧಿಗೆ ಸೂಕ್ತ ವ್ಯವಸ್ಥೆಗಳಿದ್ದರೂ ನಮ್ಮ ರಾಜಕಾರಣಿಗಳಲ್ಲಿ ದೂರದರ್ಶಿತ್ವ ಮತ್ತು ಇಚ್ಛಾಶಕ್ತಿ ಎಂಬುದೇ ಇಲ್ಲ. ಸರ್ಕಾರದ ಅಭಯಕ್ಕಾಗೇ ಭರವಸೆಯ ಮುಖಹೊತ್ತು ಕಾದು ಬಳಲಿ ಬೆಂಡಾಗುವ ನೇಗಿಲಯೋಗಿಗೆ ಅಂತಿಮವಾಗಿ ಸಿಗು</span><span style="color: rgb(51, 0, 0);">ವುದು ಶೂನ್ಯ.</span><br /><br /><span style="color: rgb(51, 0, 0);">ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಾಂತರ ರೂಪಾಯಿ ಬಿಡು</span><span style="color: rgb(51, 0, 0);">ಗಡೆ ಮಾಡಿದರೂ ಏಕೆ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ? ಸರ್ಕಾರದ ಹಣ ಹಾಗಾದರೆ ಎಲ್ಲಿ ಹೋಯಿತು? ಸರ್ಕಾರಿ ಅಧಿಕಾರಿಗಳ ಮನೆಗೆ ಏಕಾಏಕಿಯಾಗಿ ದಾಳಿ ಮಾಡಿದರೆ ಉತ್ತರ ಸಿ</span><span style="color: rgb(51, 0, 0);">ಗುವುದು ಖಂಡಿತ. ಅಧಿಕಾರಿಗಳ ನಾಚಿಕೆಗೇಡಿನ ಕೃತ್ಯಗಳಿಗೆ ರೈತ </span><span style="color: rgb(51, 0, 0);">ಮಾತ್ರ ಮೂಕಸಾಕ್ಷಿಯಾಗಿ ನೋವನ್ನನುಭವಿಸುತ್ತಿದ್ದಾನೆ.<br /><br /></span><a style="color: rgb(51, 0, 0);" onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEjSeWWGQUryyVKxVKm6gFCWkvlbWtPRM1-2xNVZhJytJzZsqBcDDARHge49i9VBnjAl_OlW3CMqwK6tmiDYvdrZKbuJ8rILXBNfyDgYjoWfBxPHIoZXISmN-myh8BehW00VHVqifzdgcSk/s1600-h/Par1211644.jpg"><img style="margin: 0px auto 10px; display: block; text-align: center; cursor: pointer; width: 400px; height: 266px;" src="https://blogger.googleusercontent.com/img/b/R29vZ2xl/AVvXsEjSeWWGQUryyVKxVKm6gFCWkvlbWtPRM1-2xNVZhJytJzZsqBcDDARHge49i9VBnjAl_OlW3CMqwK6tmiDYvdrZKbuJ8rILXBNfyDgYjoWfBxPHIoZXISmN-myh8BehW00VHVqifzdgcSk/s400/Par1211644.jpg" alt="" id="BLOGGER_PHOTO_ID_5378587891494443186" border="0" /></a><br /><span style="color: rgb(51, 0, 0);">ಈ ಬಾರಿ ಮಳೆ ಬಂದಿಲ್ಲ. ಉತ್ತರ ಭಾರತದಲ್ಲಂತೂ </span><span style="color: rgb(51, 0, 0);">ಬರ</span><span style="color: rgb(51, 0, 0);">ದ ಕರಿ</span><span style="color: rgb(51, 0, 0);">ಛಾಯೆಗೆ ರೈತರು ಬೇಸತ್ತುಹೋಗಿದ್ದಾರೆ. ಇತ್ತೀಚೆಗೆ ದೆಹಲಿಯ ದಿಲ್ಶ</span><span style="color: rgb(51, 0, 0);">ದ್ ಗಾರ್ಡನ್ನಲ್ಲಿ ಸುಖಬೀರ್ ಎಂಬ ರೈತನೊಬ್ಬ ಬಸ್ಸಿನ</span><span style="color: rgb(51, 0, 0);">ಲ್ಲಿ ಸಿಕ್ಕಿದ್ದ. ವಿಪರೀತ ಸೆಕೆಯಲ್ಲಿ ಇಬ್ಬರೂ ಬೆಂದುಹೋಗಿದ್ದೆವು. ಕಳೆದ ವರ್ಷದಷ್ಟೂ ಈ ಬಾರಿ ಮಳೆ ಬರಲಿಲ್ಲವಲ್ಲ ಎಂದು ಮಾತಿಗಿಳಿದಾಗ </span><span style="color: rgb(51, 0, 0);">ಆತ, “ಒಂದೆಡೆ ಮಳೆಯೂ ಬರುವುದಿಲ್ಲ, ಇನ್ನೊಂದೆಡೆ ಸರ್ಕಾರಕ್ಕೆ ನಮ್ಮ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. </span><span style="color: rgb(51, 0, 0);">ಸರ್ಕಾರದ ಯಾವೊಂದು ಯೋಜನೆಯೂ ನಮ್ಮ ಹಳ್ಳಿಯನ್ನೂ ತಲುಪಿಯೇ ಇಲ್ಲ</span><span style="color: rgb(51, 0, 0);">” ಎಂದು ಗೋಗರೆದಿದ್ದ. ಅವರ ಹಳ್ಳಿಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಒಬ್ಬ ರೈತ ಬೆಳೆ ನಷ್ಟ, ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದ. ಹೆಂಡತಿಗೆ ವಿಷನೀಡಿ</span><span style="color: rgb(51, 0, 0);">ದ್ದರೂ, ಆಕೆ ಬದುಕಿದ್ದಳು. ಆದರೆ ಆಕೆಯ ಮುಂದಿನ ಬದುಕು ಏನೆಂದು ಕೇಳಿದ್ದಕ್ಕೆ ಈತನಲ್ಲಿ ಉತ್ತರವಿರಲ್ಲ. ಸದ್ಯಕ್ಕೆ ಸ್ಥಳೀ</span><span style="color: rgb(51, 0, 0);">ಯರು ಆಕೆಗೆ ನೆರವಾಗಿದ್ದಾ</span><span style="color: rgb(51, 0, 0);">ರೆ. ಆದರೆ ಭವಿಷ್ಯದಲ್ಲಿ ಆಕೆಗೆ ಗತಿ ಏನು? ಸಾಲದ್ದಕ್ಕೆ ಅವರಿಗೆ ಮಕ್ಕ</span><span style="color: rgb(51, 0, 0);">ಳೂ ಇರಲಿಲ್ಲ.<br /><br /></span><br /><span style="color: rgb(51, 0, 0);">ಉತ್ತರಭಾರತದ ಹಲವೆಡೆ ಜೂನ್ನಿಂದ ಆಗಸ್ಟ್ವರೆಗೆ ಸಾಮಾನ್ಯ ಸರಾಸರಿಗಿಂತ ಶೇಕಡಾ ೩೦ರಷ್ಟು ಕಡಿಮೆ ಮಳೆಯಾಗಿದೆ ಎಂದು ವರದಿಯೊಂದು ಹೇಳಿದೆ. ಆದರೆ ಉತ್ತರ ಪ್ರದೇಶದ ನತದೃಷ್ಟ ಸ್ಥಿತಿ ಹೇಗಿದೆ ಎಂದರೆ ಈ ಬಾರಿ ಶೇಕಡಾ ೬೦ರಷ್ಟು ಕಡಿಮೆ ಮಳೆಯಾಗಿದ್ದು ಇಲ್ಲಿನ ರೈತರು ಕಂಗಾಲಾಗಿ ಹೋಗಿದ್ದು, ಅವರ ದೇಹದಲ್ಲೆಲ್ಲಾ ನಿರಾಶೆಯ ದಟ್ಟ ಕಾರ್ಮೋಡ ಕವಿದಿದೆ. ಉತ್ತರ ಪ್ರದೇಶದ ಅನ್ನದಾತರು ಒಂದೆಡೆ ಅನ್ನಕ್ಕಾಗಿ ಪರದಾಡುತ್ತಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಮಾಯಾವತಿ ಅವರ ‘ಮಹತ್ವಾಕಾಂಕ್ಷೆ’ಯ ಸುಮಾರು ೫೦ ಕೋಟಿ ರೂ ವೆಚ್ಚದ ಪ್ರತಿಮೆ ನೋಯ್ಡಾ ಬಳಿ ನಿರ್ಮಾಣವಾಗುತ್ತಿದೆ. ಇನ್ನೊಂದು ವಿಚಾರ ಎಂದರೆ ದೆಹಲಿಯಲ್ಲಿರುವ ಮಾಯಾವತಿ ಅವರ ನಿವಾಸ ‘ಕೇವಲ’ ನೂರು ಕೋಟಿ ಖರ್ಚಿನಲ್ಲಿ ನಿರ್ಮಾಣವಾಗಿದೆ. ರಾಜರ ಅರೆಮನೆಗಳಿಗೇನೂ ಕಮ್ಮಿಯಿಲ್ಲದಂತಿದೆ ಆ ಮನೆ. ಅದು ಅವರ ವೈಯಕ್ತಿಕ ವಿಚಾರ ಬಿಡಿ! ಆದರೆ ಈಗಿರುವ ಬರ ಪರಿಸ್ಥಿತಿಗೆ ನಗ್ನ ಸಾಕ್ಷಿಯಾಗಿರುವ ಇಲ್ಲಿನ ರೈತರ ಬವಣೆ ಕೇಳುವವರು ಯಾರು? ಮಳೆ ಬರಬೇಕಿದ್ದ ಸಂದರ್ಭದಲ್ಲಿ ಬಿರುಬಿಸಿಲು ಒಬ್ಬೊಬ್ಬ ರೈತರ ಬದುಕನ್ನೇ ಕಿತ್ತುತಿನ್ನುತ್ತಿದೆ. ಒಟ್ಟಾರೆ ಬರ ಪರಿಸ್ಥಿತಿಯಲ್ಲಿ ಬದುಕು ಹೇಳತೀರದಂತಾಗಿದ್ದು, ಹಲವು ಮಂದಿ ಈಗಾಗಲೇ ಬೇರೆಡೆಗೆ ವಲಸೆ ಹೋಗಿಯಾಗಿದೆ.</span><br /><br /><span style="color: rgb(51, 0, 0);">ಒಂದು ವರದಿಯ ಪ್ರಕಾರ ಕಳೆದ ಐದು ವರ್ಷಗಳಲ್ಲಿ ಸುಮಾರು ೧,೦೦,೦೦೦ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಇಷ್ಟೆಲ್ಲಾ ಯೋಜನೆ, ಕಾರ್ಯಕ್ರಮಗಳನ್ನು ಕೈಗೊಂಡರೂ ರೈತರ ಸಾವಿನ ಸಂಖ್ಯೆ ಇಳಿಮುಖ ಕಂಡಿಲ್ಲ ಎಂದಾದರೆ ಇದರ ಅರ್ಥ ಯಾವುದೇ ಯೋಜನೆಯಾಗಲೀ ರೈತರಿಗೆ ತಲುಪುತ್ತಿಲ್ಲ ಎಂಬುದು. ಉಳಿದ ರಾಜ್ಯಗಳಂತೆ ಕರ್ನಾಟಕ ರೈತರು ಕಡುಸಂಕಟದಲ್ಲಿ ಜೀವನಸಾಗಿಸುತ್ತಿದ್ದಾರೆ. ಸರ್ಕಾರೀ ಮೂಲಗಳೇ ಮಾಹಿತಿ ನೀಡಿರುವಂತೆ ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಉಂಟಾದ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಪರಿಣಾಮವಾಗಿ ೧೩೮೭ ಕೋಟಿ ರೂ ಹಣ ನಷ್ಟವಾಗಿದೆ. ಅನಾವೃಷ್ಟಿಗೆ ಅಂದಾಜು ೮೭೧ ಕೋಟಿ ರೂ ನಷ್ಟವಾಗಿದ್ದರೆ, ೫೧೬ ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಈ ಮಧ್ಯೆ ಅನಾವೃಷ್ಟಿ ಮತ್ತು ಅತಿವೃಷ್ಟಿಗೆ ಕ್ರಮವಾಗಿ ೩೯೪ ಕೋಟಿ ರೂ ಹಾಗೂ ೩೧೭ ಕೋಟಿ ರೂ ಹಣ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿದೆ ಎಂದು ಸರ್ಕಾರಿ ಅಧಿಕಾರಿಗಳೇ ತಿಳಿಸಿದ್ದಾರೆ. ಇವೆಲ್ಲದರ ನಡುವೆ ಸರ್ಕಾರ ಇತ್ತೀಚೆಗೆ ೨೦ ಜಿಲ್ಲೆಗಳು ಮತ್ತು ೮೬ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದು, ಕರ್ನಾಟಕದ ಸದ್ಯದ ಪರಿಸ್ಥಿತಿ ಅತ್ಯಂತ ಹೀನಾಯವಾಗಿಬಿಟ್ಟಿದೆ ಎಂಬುದು ಇದರಿಂದಲೇ ಸ್ಪಷ್ಟವಾಗಿದೆ. </span><br /><br /><span style="color: rgb(51, 0, 0);">ಈ ಬಾರಿಯ ಆರ್ಥಿಕ ವರ್ಷದ ಐದು ತಿಂಗಳಲ್ಲೇ ೫೦ಕ್ಕಿಂತಲೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷದ ಜುಲೈ ತಿಂಗಳಲ್ಲಿ ಆತ್ಮಹತ್ಯೆಯ ಅತಿಎಹಚ್ಚು ಪ್ರಕರಣಗಳು ದಾಖಲಾಗಿದ್ದು, ಶಿವಮೊಗ್ಗದಲ್ಲಿ ೭, ತುಮಕೂರು ೬, ಬೆಳಗಾವಿ ಮತ್ತು ಹಾಸನ ೫, ಚಿಕ್ಕಮಗಳೂರು, ಬೀದರ್, ದಾವಣೆಗೆರೆ ಮತ್ತು ಬಿಜಾಪುರದಲ್ಲಿ ೩, ಚಿತ್ರದುರ್ಗ, ದಕ್ಷಿಣಕನ್ನಡ ೨ ಹಾಗೂ ಮೈಸೂರಿನಲ್ಲಿ ಒಂದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ! ಕಳೆದ ಒಂಬತ್ತು ವರ್ಷಗಳಿಂದ ಕರ್ನಾಟಕ ಬರ ಪರಿಸ್ಥಿತಿ ಎದುರಿಸುತ್ತಿರುವ ಕರ್ನಾಟಕ್ಕೆ ಈ ಬಾರಿಯ ಬರ ಇನ್ನಷ್ಟು ಘಾಸಿಗೋಳಿಸಿರುವುದು ದುರಂತ. ೨೦೦೮-೦೯ರಲ್ಲಿ ಸುಮಾರು ೩೩೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇತ್ತೀಚಿನ ವರದಿಗಳಲ್ಲಿ ದಾಖಲಾಗಿದ್ದು, ಸದ್ಯದ ವಿಪರೀತ ಬರ ಪರಿಸ್ಥಿತಿಯಿಂದಾಗಿ ಈ ಸಂಖ್ಯೆ ಇನ್ನಷ್ಟು ಏರಲಿದೆ ಎಂಬ ಆತಂಕ ಕಾಡತೊಡಗಿದೆ.</span><br /><br /><span style="color: rgb(51, 0, 0);">ಹಾಗೆಂದ ಮಾತ್ರಕ್ಕೆ ರೈತರ ಆತ್ಮಹತ್ಯೆಗೆ ಸಂಪೂರ್ಣ ಸರ್ಕಾರವೇ ಹೊಣೆ ಎಂದೆನ್ನಲಾಗದು. ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಹಳ್ಳಿಗಳ ನಿರ್ಲಕ್ಷಿಸುವ ಅಧಿಕಾರಶಾಹಿಯ ದುರ್ವರ್ತನೆಗಳು, ಕೆಲವೊಮ್ಮೆ ತಮ್ಮ ಇತಿ-ಮಿತಿ ಅರಿಯದೆ ತಂದುಕೊಂಡ ಆರ್ಥಿಕ ಹೊರೆಗಳು ರೈತರ ಆತ್ಮಹತ್ಯೆಗಳಿಗೆ ಕಾರಣ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಸಾವುಗಳನ್ನು ತಪ್ಪಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳು ಮಾತ್ರ ಇಂದಿಗೂ ಪ್ರಶ್ನಾರ್ಹವಾಗೇ ಉಳಿದಿವೆ. ಸರ್ಕಾರದ ಚಿಂತನೆ, ಯೋಜನೆಗಳು ಸಕಾಲದಲ್ಲಿ ರೈತರನ್ನು ತಲುಪುವಂತಾಗಿದ್ದಾರೆ ಈ ಪರಿಯ ಅನಾಹುತ ಇಂದು ನಮ್ಮ ಕಣ್ಣಮುಂದಿರುತ್ತಿರಲಿಲ್ಲ. ಹಾಗೆ ನೋಡಿದರೆ ದೇಶದಲ್ಲಿನ ಕೋಟ್ಯಾಧಿಪತಿ ಉದ್ಯಮಿಗಳು, ಎಲ್ಲ ಪಕ್ಷಗಳು, ಪ್ರತಿಯೊಬ್ಬ ರಾಜಕಾರಣಿ, ಏರ್ಕಂಡಿಷನ್ ಕೋಣೆಯಲ್ಲಿ ಕುಳಿತು ಭಾರತ ಪ್ರಕಾಶಿಸುತ್ತಿದೆ ಎಂದು ಬೊಬ್ಬಿಡುವ ಕಾರ್ಪೊರೇಟ್ಗಳು, ನಗರಗಳಲ್ಲಿ ಕುಳಿತು ಝಗಮಗಿಸುವ ಬದುಕಿನೊಂದಿಗೆ ಥಳಥಳಿಸುತ್ತಿರುವ ನಾವು, ಈ ಸಮಾಜ, ವ್ಯವಸ್ಥೆ ಎಲ್ಲರೂ ಅನ್ನದಾತನ ಆಕ್ರಂದನಕ್ಕೆ ಒಂದಲ್ಲಾ ಒಂದು ರೀತಿಯಲ್ಲಿ ನೇರ ಹೊಣೆ. ಇದು ವಾಸ್ತವ ಮತ್ತು ಎಲ್ಲರೂ ಒಪ್ಪಲೇಬೇಕಾದ ಸತ್ಯ.</span><br /><br /><span style="color: rgb(51, 0, 0);">ಗ್ರಾಮೀಣ ಭಾರತವನ್ನು ಸಂಪೂರ್ಣ ನಿರ್ಲಕ್ಷಿಸಿದ್ದರಿಂದಲೇ ಇಂದು ಎಲ್ಲಾ ಕರಾಳ ವಿಪರ್ಯಾಸಗಳಿಗೂ ನಾವು ಸಾಕ್ಷಿಯಾಗುತ್ತಿದ್ದೇವೆ. ಗ್ರಾಮೀಣ ಭಾರತೀಯರನ್ನು ನಾವು ಎಲ್ಲಿರವರೆಗೆ ಕೆಟ್ಟದಾಗಿ ಕಾಣುತ್ತೇವೆ ಎಂದರೆ ನಮ್ಮ ಮನೆ ನಾಯಿಗೂ, ಬಡ ನಿರ್ಗತಿಕನಿಗೂ ವ್ಯತ್ಯಾಸವೇ ಇರುವುದಿಲ್ಲ. ನಮ್ಮ ನಡೆ, ವರ್ತನೆಗಳೇ ನಗರ ಮತ್ತು ಗ್ರಾಮಗಳ ನಡುವಿನ ಕಂದಕವನ್ನು ಇನ್ನಷ್ಟು ಹೆಚ್ಚಿಸಿರುವುದು. ಅದೆಲ್ಲಾ ಇರಲಿ, ಇನ್ನು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕೃಷಿ ಮಾಡುತ್ತೇವೆ ಎಂಬ ಭಾವ ಇಂದಿನ ಯುವಜನಾಂಗದಲ್ಲಂತೂ ಖಂಡಿತಾ ಇಲ್ಲ. ಎಲ್ಲ ಹೆತ್ತವರೂ ತಮ್ಮ ಮಕ್ಕಳು ಡಾಕ್ಟರ್, ಎಂಜಿನಿಯರ್ ಆಗಬೇಕೆಂದೇ ಬಯಸುತ್ತಾರೆ. ಅದಕ್ಕಾಗಿ ಲಕ್ಷಗಟ್ಟಲೆ ಹಣಸುರಿಯಲು ತಯಾರಾಗಿರುತ್ತಾರೆ. ಆದರೆ ಯಾರೊಬ್ಬನೂ ತನ್ನ ಮಗ ಯಶಸ್ವಿ ಕೃಷಿಕ ಆಗಬೇಕೆಂದು ಬಯಸುವುದೇ ಇಲ್ಲ. ಏಕೆಂದರೆ ಎಲ್ಲಿಯವರೆಗೆ ನಮ್ಮ ದೇಶದ ರೈತರೂ ಮುಖ್ಯವಾಹಿನಿಗೆ ಬರುವುದಿಲ್ಲವೋ, ಎಲ್ಲಿಯವೆರೆಗೆ ನಮ್ಮ ರೈತರನ್ನು ‘ನಮ್ಮವರೆಂದು’ ಸ್ವೀಕರಿಸುವುದಿಲ್ಲವೋ, ಎಲ್ಲಿಯವೆರೆಗೆ ನಗರ-ಗ್ರಾಮಗಳ ಅಂತರ ಕಡಿಮೆಯಾಗುವುದಿಲ್ಲವೋ, ಎಲ್ಲಿಯವರೆಗೆ ರೈತ ಆತ್ಮಹತ್ಯೆ ಕೊನೆಗೊಳ್ಳುವುದಿಲ್ಲವೋ, ಅಲ್ಲಿಯವರೆಗೆ ಕೃಷಿ ಎಂದರೆ ಎಲ್ಲರಿಗೂ ಅಲರ್ಜಿಯಾಗಿಯೇ ಇರಲಿದೆ ಮತ್ತು ರೈತನ ಮಗ ರೈತನಾಗಿಯೇ ಇರುತ್ತಾನೆ. ನಮ್ಮ ‘ನ್ಯಾಯ’ವೂ ಇದೇ!! </span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com1tag:blogger.com,1999:blog-2818153219058834250.post-86805975820250032012009-06-20T09:58:00.000-07:002009-06-20T10:06:14.548-07:00<span style="font-size:130%;"><span style="font-weight: bold; color: rgb(153, 0, 0);font-size:180%;" >HOPE STILL ON THE HEAD…</span><br /><br /></span><span style="color: rgb(0, 0, 102);">ಅಬ್ಬಬ್ಬಾ ಎಂಥ ಮಾರಾಯ್ರೆ... ಏನು ಸೆಕೆ ಅಂತೀರಿ..? ಅಯ್ಯಯ್ಯೋ ಇದು ಬಾರೀ ಕಷ್ಟವಪ್ಪಾ. ಹೊಸದಾಗಿ ಈ ದೆಹಲಿಗೆ ಬಂದವರಿಗಂತೂ ಇಂತಹ ವಿಚಿತ್ರ ಸೆಕೆಯನ್ನು ಅನುಭವಿಸುವುದು ತೀರಾ ಕಷ್ಟ. ಅದರಲ್ಲಿ ನೀವಿ</span><span style="color: rgb(0, 0, 102);">ನ್ನು ನೋಯ್ಡಾದಲ್ಲಿ ಬಂದು ನೆಲೆಸಲು ನಿರ್ಧರಿಸಿದರಂತೂ ಬಿಸಿಯ ಬೇಗೆಯನ್ನು ತಡೆಯಲಾ</span><span style="color: rgb(0, 0, 102);">ರದೆ ಒಮ್ಮೆ ನಮ್ಮ ಊರಿಗೆ </span><span style="color: rgb(0, 0, 102);">ಓಡಿ ಹೋಗುವ ಅಂಥ ಅನಿಸದಿದ್ದರೆ ಮತ್ತೆ ನೋಡೋಣ...<br /><br /><br /></span><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEgOZX_BgY-rP__c0qS9cQWC_U0axl250-c3rS2QUAvSHOkCV0yerddn0r9vDsDO-7i_p1HIwWF5TY5mDCxeYNnVe1Edr_tOlkYk01I0NQbx4rCvVf79FEJ4HihAzj_4YD9DbpxXTBPHxJc/s1600-h/yamuna.jpg"><img style="margin: 0px auto 10px; display: block; text-align: center; cursor: pointer; width: 400px; height: 266px;" src="https://blogger.googleusercontent.com/img/b/R29vZ2xl/AVvXsEgOZX_BgY-rP__c0qS9cQWC_U0axl250-c3rS2QUAvSHOkCV0yerddn0r9vDsDO-7i_p1HIwWF5TY5mDCxeYNnVe1Edr_tOlkYk01I0NQbx4rCvVf79FEJ4HihAzj_4YD9DbpxXTBPHxJc/s400/yamuna.jpg" alt="" id="BLOGGER_PHOTO_ID_5349456381255548482" border="0" /></a><br /><span style="color: rgb(0, 0, 102);">ಕಳೆದ ವರ್ಷ ಇದೇ ಹೊತ್ತಿಗೆ ದೆಹಲಿ ಹಾಗೂ ಉತ್ತರ ಭಾರತದ ಹಲವೆಡೆ ಒಳ್ಳೆ ಮಳೆಯಾಗಿತ್ತು. ಹಾಗಾಗಿ ಅಂಥಾ ವಿಪರೀತವಾದ ದೇಹವನ್ನೆಲ್ಲಾ ವಿಚಿತ್ರವಾಗಿ ಕಾಡುವಂತಹ ಸೆಕೆಯನ್ನು ಅನುಭವಿಸಬೇಕಾದಂಥ ದುರ್ಗತಿ ನಮಗೆ ಕಾಡಿರಲಿಲ್ಲ. ಸೆಕೆ ಪ್ರಮಾಣ ಅತ್ಯಂತ ಅಧಿಕ ಮಟ್ಟದಲ್ಲಿರುವಂಥ ಜೂನ್, ಜುಲೈನಂಥ ತಿಂಗಳಲ್ಲೂ ಒಳ್ಳೆ ಮಳೆಯಾಗಿದ್ದರಿಂದ ರಜಾಯಿ ಹೊದ್ದು ಮಲಗಿದ್ದ ನೆನಪು ಇನ್ನೂ ಇದೆ. ಆದರೆ ಇಂದು ಅದು ಯಾವುದರಾ ಅನುಭವ ಇದುವೆರೆಗೆ ಆಗೇ</span><span style="color: rgb(0, 0, 102);"> ಇಲ್ಲ. ಅದೂ ಅಲ್ಲದೆ ನೋಯ್ಡಾಕ್ಕೆ ಬಂದ ನಂತರ ಇಲ್ಲಿನ ಬರಡು ಬದುಕು, ಮರುಭೂಮಿಯಲ್ಲಿ ಇದ್ದಂಥ ಅನುಭವ ನಿಜಕ್ಕೂ ಹೊರಗಿನಿಂದ ಬಂದ ಜನರನ್ನು ವಾಪಸು ಊರಿಗೆ ಹೆಜ್ಜೆ ಹಾಕಲು ಪ್ರೇರೇಪಿಸಿದರೆ ಅದರಲ್ಲಿ ಅಚ್ಚರಿ ಪಡಬೇಕಾದದ್ದು ಏನೂ ಇಲ್ಲ ಬಿಡಿ. ನೋಯ್ಡಾ ಒಂದು ಮಹಾನ್ ಸಿಟಿ ಎಂದು ಕಂಡು ಬಂದರೂ ಇಲ್ಲಿರುವುದು ಬರೀ ಕಾಂಕ್ರಿಟ್ ಕಾಡು ಮಾತ್ರ. ದೊಡ್ಡ ದೊಡ್ಡ ಬಿಲ್ಡಿಂಗ್ಗಳು, ಮುಗಿಲು ಮುಟ್ಟಿದ ಅಪಾರ್ಟ್ಮೆಂಟ್ ಕಟ್ಟಡಗಳು, ಮಿನುಗುವ ಶಿಪ್ರಾ ಮಾಲ್, ಜನರ ಸುಳಿಯಲ್ಲಿ ಹುದುಗಿಹೋಗಿರುವ ಅಟ್ಟಾ ಮಾರ್ಕೆಟ್ ಹಾಗೂ ಗ್ರೇಟ್ ಇಂಡಿಯಾ ಮಾಲ್...ಹೋ ನಾನು ರೋಮನ್ ಸಿಟಿಯಲ್ಲಿದ್ದೇನೋ ಎಂದು ಕಂಡು ಬಂದರೂ ದೆಹಲಿ ನೀಡಿದ </span><span style="font-weight: bold; color: rgb(0, 0, 102);">Liveliness and refreshingly different scena</span><span style="font-weight: bold; color: rgb(0, 0, 102);">rio</span><span style="color: rgb(0, 0, 102);"> ಒಂದು ಕ್ಷಣವೂ ನನಗೆ ಇಲ್ಲಿ ಕಂಡುಬರಲಿಲ್ಲ. ಎಲ್ಲವೂ ಖಾಲಿ ಖಾಲಿ... ಕೆಲವೊಮ್ಮೆ ಮನಸ್ಸಿಗೆ ಖುಷಿ ನೀಡುವ ಮದ್ರಾಸ್ ಕೆಫೆ ಬಿಟ್ಟರೆ, ದುಬಾರಿ ಬೆಲೆಗಳ ದಿನಸಿಗಳು ಇಲ್ಲಿ ಯಾವಾಗಲೂ ನನ್ನ ಜೇಬನ್ನು ಮುಟ್ಟಿ ನೋಡುವಂ</span><span style="color: rgb(0, 0, 102);">ತೆ ಮಾಡುತ್ತವೆ.<br /><br /></span><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEg1kufYhJAK5vShXrJ0hZszwrrY1Gprsurme6mWw3oavBOX5QQz5ESUPDeijanVuJ7oBcqMA2RQuD5k7WcNMW_U7_fZJX_80G9uOIyHqj17t0nr-S6sifdinoBKdbN_148MSP0z7Z8dM6U/s1600-h/Noida-Residential-Property-1.jpg"><img style="margin: 0px auto 10px; display: block; text-align: center; cursor: pointer; width: 400px; height: 263px;" src="https://blogger.googleusercontent.com/img/b/R29vZ2xl/AVvXsEg1kufYhJAK5vShXrJ0hZszwrrY1Gprsurme6mWw3oavBOX5QQz5ESUPDeijanVuJ7oBcqMA2RQuD5k7WcNMW_U7_fZJX_80G9uOIyHqj17t0nr-S6sifdinoBKdbN_148MSP0z7Z8dM6U/s400/Noida-Residential-Property-1.jpg" alt="" id="BLOGGER_PHOTO_ID_5349456795238454610" border="0" /></a><br /><span style="color: rgb(0, 0, 102);">ದೆಹಲಿಯಲ್ಲಿದ್ದಾಗ ತರಕಾರಿ, ಮನೆ ಸಾಮಾನು ಸೇರಿದಂತೆ ಎಲ್ಲವೂ ತುಂಬಾ ಚೀಪ್ ಹಾಗೂ</span><span style="color: rgb(0, 0, 102);"> ಕೈಗೆಟಕುವಂಥ ಬೆಲೆಯಲ್ಲಿ ದೊರಕುತ್ತಿದ್ದವು. ಆದರೆ ಇಲ್ಲಿ ಹಾಗಿಲ್ಲ. ಸದಾ ಸನಿಹದಲ್ಲೇ ಇರುವ, ಈಗ ವಿಷವಾಗಿ ಹರಿಯುತ್ತಿರುವ ಯಮುನಾ ನದಿಯ ವಾಸನೆಯನ್ನು ಮೂಗಿನೊಳಗೆ ಎಳೆದುಕೊಂಡೆ ಏಳಬೇಕಾದ ದುಸ್ಥಿತಿ ನಮ್ಮದು. ಯಾರಾದರೂ ಯಮುನಾ ಇಂದಿಗೂ ಜೀವನದಿಯಾಗಿ ಹರಿಯುತ್ತಿದ್ದಾಳೆ ಎಂದು ಮನಸ್ಸಿನಲ್ಲಿ ಅಂದುಕೊಂಡಿದ್ದರೆ ಒಮ್ಮೆ ಇಲ್ಲಿ ಬಂದು ಇಣುಕುಹಾಕಿ ನೋಡಿ. ವಾಸ್ತವದ ಕಹಿಸತ್ಯಗಳು ಹಾಗೂ ಯಮುನಾಳ ಇಂದಿನ ನಿಜಮುಖ ಇಂದು ಬಯಲಾಗಿದೆ. </span><span style="font-weight: bold; color: rgb(0, 0, 102);">Thanks to man made Developments! </span><span style="color: rgb(0, 0, 102);"> ಯಮುನಾಳನ್ನು ಅಕ್ಷರಶಃ ಅತ್ಯಾಚಾರ ಮಾಡಲಾಗಿದೆ ಎಂದರೂ ಖಂಡಿತಾ ತಪ್ಪೇನಿಲ್ಲ. ವಿಶಾಲವಾಗಿ ನದಿ ಹರಿಯಬೇಕಿದ್ದ ಪ್ರದೇಶಗಳಲ್ಲೆಲ್ಲಾ ಇಂದು ದೊಡ್ಡ ದೊಡ್ಡ ಕಟ್ಟಡಗಳು ತಲೆಎತ್ತಿದ್ದು, ಮುಂಬರುವ ದುರಂತಕ್ಕೆ ನಾವಿಂದೇ ಸಾಕ್ಷಿಯಾಗಬೇಕಾದ ಅನಿವಾರ್ಯ ಸ್ಥಿತಿ ನಮ್ಮಮುಂದೆ ನಿಂತು ರುದ್ರ ನರ್ತನವಾಡುತ್ತಿದೆ. </span><br /><span style="color: rgb(0, 0, 102);">ಈಗ ಇಷ್ಟೆಲ್ಲಾ ಯಾಕೆ ಹೇಳಬೇಕಾಯಿತು ಎಂದರೆ ನನಗೆ ಇಂದಿಗೂ ದೆಹಲಿ ಬೋರ್ ಹೊಡೆಸಿರಲಿಲ್ಲ. ಯಾವತ್ತೂ ಅತ್ತಿತ್ತ ತಿರುಗಾಡುತ್ತಲೇ ಇದ್ದೆ. ಸಿರಿಫೋರ್ಟ್ ಸಾಂಸ್ಕೃತಿಕ ಅಡ್ಡೆ, ಇಂಡಿಯಾ ಗೇಟ್, ಕುತುಬ್ ಮಿನಾರ್, ಸೆಲೆಕ್ಟ್ ಸಿಟಿ ಮೆಟ್ರೋ ಮಾಲ್, ಕಲ್ಕಾಜಿಯ ಮರೆಯಲಾಗದ ಅಲಕಾನಂದ ಮಾರ್ಕೆಟ್, ತನ್ನ ಸ್ವಾದವನ್ನು ಇಂದಿಗೂ ಕಟ್ಟಿಕೊಡುವ ಕಲ್ಕಾಜಿ ಛೋಲೆ ಬಟೋರೆ, ಆ ಜ್ಯೂಸ್ ಅಂಗಡಿ, ಕುಚ್ಚಿಲಕ್ಕಿ ನೀಡಿ ಊರಿನ ಊಟ ನೆನಪಿಸುತ್ತಿದ್ದ ಕೇರಳ ಅಂಕಲ್ ಶಶಿ ಕುಮಾರ್, ದೆಹಲಿಗೆ ಮೊದಲು ಬಂದಾಗ ನಮಗೆ ಮನೆ ತೋರಿಸಿದ್ದ ಸೊಂಟ ಮುರುಕ ಹಾಗೂ ಅವನ ಹೆಂಡತಿ ಮಾರಿಮುತ್ತು, ನಮ್ಮ ಮನೆ ಓನರ್ ರಾಜ್ ಕುಮಾರ್ ಭಯ್ಯ, ಮನೆಯಿಂದ 4 ಕಿ.ಮೀ ದೂರದಲ್ಲಿದ್ದ ನೆಹರೂ ಪ್ಲೇಸ್ ಮತ್ತು ಕಾಂಪ್ಲೆಕ್ಸ್ಸ್, ಮೋಹನ್ ಸಿಂಗ್ ಮಾರ್ಕೆಟ್ನ ತಮಿಳು ಡಾಬಾ, ರಾಜಕೀಯಕ್ಕೆ ಹೆಸರುವಾಸಿಯಾದ ದೆಹಲಿ ಕರ್ನಾಟಕ ಸಂಘ, ವೈವಿಧ್ಯೆತೆಯ ಈ ಮುಖವಾಗಿದ್ದ ಲಜ್ಪತ್ನಗರ್ ಸೆಂಟ್ರಲ್ ಮಾರ್ಕೆಟ್,.. ಅಯ್ಯೋ ಹೇಳಿ ಸುಖವಿಲ್ಲ..ಅವುಗಳ ದರ್ಶನ ಯಾವತ್ತೂ ಆಗುತ್ತಿತ್ತು. ಒಂದು ರೀತಿಯ </span><span style="font-weight: bold; color: rgb(0, 0, 102);">freshness</span><span style="color: rgb(0, 0, 102);"> ಇತ್ತು. ಸಮಯ ಕಳೆಯಲು ಸಾಕಷ್ಟು ಹಾದಿಗಳೂ ಇದ್ದವು.<br /><br /></span><span style="color: rgb(0, 0, 102);">ಆದರೆ ಇಂದು ಯಾಕೋ ಮನಸ್ಸು ಖಾಲಿ ಹೊಡೆಯುತ್ತಿದೆ. ಇಡೀ ದೇಹವೇ ಬೇಸರದಲ್ಲಿ ಬೆಂದು ಹೋದ ಅನುಭವವಾಗುತ್ತಿದೆ. ಆದರೂ ಬಂದದ್ದು ಬರಲಿ ಎಂದು ದಿನದೂಡುತ್ತಲೇ ಇದ್ದೇನೆ. ಬಿರು ಬಿಸಿಲಿನಲ್ಲೂ ಬತ್ತದ ಭರವಸೆಯಂತೆ... ;)</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com5tag:blogger.com,1999:blog-2818153219058834250.post-28722159123468122022009-06-15T22:51:00.000-07:002009-06-16T00:16:08.535-07:00<span style="color: rgb(255, 102, 0);font-size:180%;" ><span style="font-weight: bold;">ಯೆಡ್ಡಿಯವರ "ಸ್ವಾಮಿ"ನಿಷ್ಠೆ</span></span><br /><br /><br /><span style="color: rgb(51, 51, 255);">ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಒಂದಲ್ಲಾ ಒಂದು ವಿವಾದ ಅಥವಾ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳಿಂದ ಸದಾ ಪತ್ರಿಕೆಗಳಿಗೆ ಆಹಾರ</span><span style="color: rgb(51, 51, 255);">ವಾಗುವ ಯೆಡ್ಡಿ, ತಮ್ಮ ‘ಸ್ವಾಮಿ’ ನಿಷ್ಠೆಯಿಂದಲೂ ಹೆಸರುವಾಸಿ. ಅದೇನೋ ನಮ್ಮ ಮುಖ್ಯಮಂತ್ರಿಗಳಿಗೆ ಸ್ವಾಮೀಜಿಗಳೆಂದರೆ ಎಲ್ಲಿಲ್ಲದ ಗೌರವ, ಅಭಿಮಾನ. ಯಾವುದಾದರೂ ಕ್ಷೇತ್ರ ಅಭಿವೃದ್ಧಿ ಆಗಬೇಕೆಂದಿದ್ದರೆ ಅದನ್ನು ಸ್ವಾಮೀಜಿವರ್ಯರಿಗೆ ಅರ್ಪಿಸಿಬಿಡುವಷ್ಟು ಉದಾರವಾದಿ (ಆ ಮೂಲಕ ತಾನು ಅಸಮರ್ಥ ಎಂದು ತೋರಿಸಿಕೊಳ್ಳುವವರೆಗೆ). ಸ್ವಾಮೀಜಿಗಳನ್ನು ಕಂಡರೆ </span><span style="color: rgb(51, 51, 255);">ಸಾಕು ಓಡಿ ಹೋಗಿ ಕೈಮುಗಿದು ಅವರ ಆಶಿರ್ವಾದ ತೆಗೆದುಕೊಳ್ಳದಿದ್ದರೆ ಅವರಿಗೆ ಬಹುಶಃ ದಿನವಿಡೀ ನಿದ್ದೆಬಾರದು. ಹಣದ ರಾಶಿಯನ್ನೇ ಒಂದಲ್ಲಾ ಒಂದು ರೀತಿಯಲ್ಲಿ ಕೊಳ್ಳೆಹೊ</span><span style="color: rgb(51, 51, 255);">ಡೆದು ದುಡ್ಡು ಮಾಡಿರುವ ಮಠ, ಮಠಾಧಿಪತಿಗಳಿಗೆ ರಾಜ್ಯದ ಬೊಕ್ಕಸದಿಂದ ಬೇಕಾಬಿಟ್ಟಿಯಾಗಿ ಧನಸಹಾಯ ಮಾಡುವ ಯೆಡಿಯೂರಪ್ಪನವರು ಈಚೆಗಷ್ಟೇ ಸರ್ಕಾರಿ ದುಡ್ಡಲ್ಲಿ ವರ್ಷಾಚರಣೆ ಆಚರಿಸಿದ್ದಾರೆ. ಮೊದಲ ಆರು ತಿಂಗಳನ್ನು ‘ಆಪರೇಷನ್ ಕಮಲ’ದಲ್ಲಿ ತೊಡಗಿಸಿಕೊಂಡ ಯೆಡ್ಡಿ ಕುಟುಂಬ, ನಂತರದ ಆರು ತಿಂಗಳನ್ನು ಲೋಕಸಭಾ ಚುನಾವಣೆಯಲ್ಲೇ ಕಳೆಯಿತು. ಆ ಮಧ್ಯೆಯೇ ಸಾವಿರಾರು ಕೋಟಿ. ರೂ.ಗಳ ಯೋಜನೆಯನ್ನು ನಿ</span><span style="color: rgb(51, 51, 255);">ರಂತರವಾಗಿ ಘೋಷಿಸುತ್ತಲೇ ಬಂದ ಮುಖ್ಯಮಂತ್ರಿ ಅವರಲ್ಲಿ, ಯಾ</span><span style="color: rgb(51, 51, 255);">ವೆಲ್ಲಾ ಯೋಜನೆಗಳು ಅನುಷ್ಠಾನಗೊಂಡಿವೆ ಎಂದು ನೀವೇ ಕೇಳಿ.</span><br /><span style="color: rgb(51, 51, 255);">ಅದೇನೆ ಇರಲಿ, ಯೆಡ್ಡಿಯವರ ‘ಸ್ವಾಮೀಜಿ’ ಪ್ರೀತಿ ಕುರಿತು ಕೆಲವು ಚಿತ್ರಗಳು ಇಲ್ಲಿವೆ. ಒಮ್ಮೆ ನೋಡಿ. </span><br /><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEhmjIjSTraAk29_4mzpGMkwKglQOh37bGXiJ7_hju98QZ178uPXEVIvFqL9AXyYWcYfjxezGk0s6mRsmH-wuRj9ty5tAgj2ugFLThu09G37E66noKu805YL6YBnjfC8MEpEjfN-8sT56oc/s1600-h/CM+With+saibaba-2.jpg"><img style="margin: 0px auto 10px; display: block; text-align: center; cursor: pointer; width: 400px; height: 267px;" src="https://blogger.googleusercontent.com/img/b/R29vZ2xl/AVvXsEhmjIjSTraAk29_4mzpGMkwKglQOh37bGXiJ7_hju98QZ178uPXEVIvFqL9AXyYWcYfjxezGk0s6mRsmH-wuRj9ty5tAgj2ugFLThu09G37E66noKu805YL6YBnjfC8MEpEjfN-8sT56oc/s400/CM+With+saibaba-2.jpg" alt="" id="BLOGGER_PHOTO_ID_5347802366752463922" border="0" /></a><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEjfuV0oy7uGksk-vyyPGrkkaWFU93Nfzm79KpCAQlI3XAMWeRK7uwkS4T7VTKU-LueEjjf-e566mVuhVA1WP71Pr0mk33p4IAmFDh4eU3d7Jj1WN3GZ1iQ2PWtBb8T9-hKQFcka6AUUItk/s1600-h/CM+inagurated+Madivala+Machideva+Mut+%40+Chitradurga.JPG"><img style="margin: 0px auto 10px; display: block; text-align: center; cursor: pointer; width: 400px; height: 205px;" src="https://blogger.googleusercontent.com/img/b/R29vZ2xl/AVvXsEjfuV0oy7uGksk-vyyPGrkkaWFU93Nfzm79KpCAQlI3XAMWeRK7uwkS4T7VTKU-LueEjjf-e566mVuhVA1WP71Pr0mk33p4IAmFDh4eU3d7Jj1WN3GZ1iQ2PWtBb8T9-hKQFcka6AUUItk/s400/CM+inagurated+Madivala+Machideva+Mut+%40+Chitradurga.JPG" alt="" id="BLOGGER_PHOTO_ID_5347802592290970322" border="0" /></a><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEjtsXlqFyuANVNNUCorFwHBMEoARgJBp4qOi6c1q6gHs1XEJDz5T0Qw50yZHDC5cmh7jInhdm8vZC6xW5cc8UHOKWiyBuK6bvlxWxykMtj5NVo4d_cjCfc-bdDDwI94N_oR2skVSLfhoBo/s1600-h/pic_cmvisit.jpg"><img style="margin: 0px auto 10px; display: block; text-align: center; cursor: pointer; width: 400px; height: 266px;" src="https://blogger.googleusercontent.com/img/b/R29vZ2xl/AVvXsEjtsXlqFyuANVNNUCorFwHBMEoARgJBp4qOi6c1q6gHs1XEJDz5T0Qw50yZHDC5cmh7jInhdm8vZC6xW5cc8UHOKWiyBuK6bvlxWxykMtj5NVo4d_cjCfc-bdDDwI94N_oR2skVSLfhoBo/s400/pic_cmvisit.jpg" alt="" id="BLOGGER_PHOTO_ID_5347820083301107314" border="0" /></a><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEhgpxw3q_dOP95NHNJAd4uR89hxXty2WPp62dUSusiTcurxoMdbN7WAgkyVfelWLTuu5yrVv2syGdA_CbHcw3OZAbUwQlQEsaPb4-JT5m0-O4jCPHYGwfTCGnlGUehDunESj9yfd3vXLNY/s1600-h/cm+met+Sachhidananda+Swami.jpg"><img style="margin: 0px auto 10px; display: block; text-align: center; cursor: pointer; width: 400px; height: 273px;" src="https://blogger.googleusercontent.com/img/b/R29vZ2xl/AVvXsEhgpxw3q_dOP95NHNJAd4uR89hxXty2WPp62dUSusiTcurxoMdbN7WAgkyVfelWLTuu5yrVv2syGdA_CbHcw3OZAbUwQlQEsaPb4-JT5m0-O4jCPHYGwfTCGnlGUehDunESj9yfd3vXLNY/s400/cm+met+Sachhidananda+Swami.jpg" alt="" id="BLOGGER_PHOTO_ID_5347820652964742642" border="0" /></a><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEgl1C4nd-bEdBfPjGu6Fy-B1C13AwvbhQ7ShnJcfbnJ6RdhW5vZfI_PdqATxBFeM4x0osK7o1WaGkgPBmTMbPfrvcuHGIqntF7L4vgC-vIojJTkuP_4AxOwWqO6BgEq4aig8NjrgNi3xbs/s1600-h/CM+visit+to+Sirigere.jpg"><img style="margin: 0px auto 10px; display: block; text-align: center; cursor: pointer; width: 400px; height: 237px;" src="https://blogger.googleusercontent.com/img/b/R29vZ2xl/AVvXsEgl1C4nd-bEdBfPjGu6Fy-B1C13AwvbhQ7ShnJcfbnJ6RdhW5vZfI_PdqATxBFeM4x0osK7o1WaGkgPBmTMbPfrvcuHGIqntF7L4vgC-vIojJTkuP_4AxOwWqO6BgEq4aig8NjrgNi3xbs/s400/CM+visit+to+Sirigere.jpg" alt="" id="BLOGGER_PHOTO_ID_5347802137251789074" border="0" /></a><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEjJ9vlEZDYNfzS0dSqk9-ZqwWq5xabvNCAajwxcVhQvxRX6OoiRaW9BIWDf5LDPCvBBg1fTXiMZQGoDFLw96smjMTM6cLI2YPGtTHzPp4RDRFjt7QkCa6saElnSk_pmi0-3Jx1qk2CH2tI/s1600-h/CM+With+Saibaba-1.JPG"><img style="margin: 0px auto 10px; display: block; text-align: center; cursor: pointer; width: 400px; height: 267px;" src="https://blogger.googleusercontent.com/img/b/R29vZ2xl/AVvXsEjJ9vlEZDYNfzS0dSqk9-ZqwWq5xabvNCAajwxcVhQvxRX6OoiRaW9BIWDf5LDPCvBBg1fTXiMZQGoDFLw96smjMTM6cLI2YPGtTHzPp4RDRFjt7QkCa6saElnSk_pmi0-3Jx1qk2CH2tI/s400/CM+With+Saibaba-1.JPG" alt="" id="BLOGGER_PHOTO_ID_5347801680982747730" border="0" /></a><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEj0UcSllrFSndvKpE0usUjkI_1geR8rsMdpRuOG12hVz6PrgBhF1eAytWcFUUE5kt43lThv6Ax7MNa5-rC7vgbxkV_Zirq2z1kbgXL21Za6ClbDalpyG60MrpB6w5xYYBaBeVuYvh6Mmao/s1600-h/CM+visit+to+Sirigere1.jpg"><img style="margin: 0px auto 10px; display: block; text-align: center; cursor: pointer; width: 400px; height: 266px;" src="https://blogger.googleusercontent.com/img/b/R29vZ2xl/AVvXsEj0UcSllrFSndvKpE0usUjkI_1geR8rsMdpRuOG12hVz6PrgBhF1eAytWcFUUE5kt43lThv6Ax7MNa5-rC7vgbxkV_Zirq2z1kbgXL21Za6ClbDalpyG60MrpB6w5xYYBaBeVuYvh6Mmao/s400/CM+visit+to+Sirigere1.jpg" alt="" id="BLOGGER_PHOTO_ID_5347801388738431714" border="0" /></a><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEimLR3fkR8TUWDmnMsW4Y5hpjXKRLWsbHy05KcEitJKAIK2YKgl4CDrELUOJcDKgJYire4fL8dJ58IoMc90ChZxrcDb3aMS537I66bB7BsrDK4UgWn3Kw00FaWmpPdQ0PahPKWaCCEeI68/s1600-h/CM+discussed+with+Dr+Shivakumara+Swamiji+of+Siddaganga+Mutt+%40+Bangalore.jpg"><img style="margin: 0px auto 10px; display: block; text-align: center; cursor: pointer; width: 400px; height: 274px;" src="https://blogger.googleusercontent.com/img/b/R29vZ2xl/AVvXsEimLR3fkR8TUWDmnMsW4Y5hpjXKRLWsbHy05KcEitJKAIK2YKgl4CDrELUOJcDKgJYire4fL8dJ58IoMc90ChZxrcDb3aMS537I66bB7BsrDK4UgWn3Kw00FaWmpPdQ0PahPKWaCCEeI68/s400/CM+discussed+with+Dr+Shivakumara+Swamiji+of+Siddaganga+Mutt+%40+Bangalore.jpg" alt="" id="BLOGGER_PHOTO_ID_5347801382987705522" border="0" /></a><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEgCG4ybB-D4nsziv5JUAZHy3i-b2QTZb7Ag7QGONIJq7MGPf5WM4T6Sdy8xvAa6Yq1h3MjH4zNUFJcegiVlTfXWNlj18QaTyabwC_IU8FD9W2HD9kYEpSXeORw2CTSSfGdcieHChyphenhyphenH-_JI/s1600-h/cm+met+Ravishankar+Guruji.++2.jpg"><img style="margin: 0px auto 10px; display: block; text-align: center; cursor: pointer; width: 400px; height: 208px;" src="https://blogger.googleusercontent.com/img/b/R29vZ2xl/AVvXsEgCG4ybB-D4nsziv5JUAZHy3i-b2QTZb7Ag7QGONIJq7MGPf5WM4T6Sdy8xvAa6Yq1h3MjH4zNUFJcegiVlTfXWNlj18QaTyabwC_IU8FD9W2HD9kYEpSXeORw2CTSSfGdcieHChyphenhyphenH-_JI/s400/cm+met+Ravishankar+Guruji.++2.jpg" alt="" id="BLOGGER_PHOTO_ID_5347800501044607426" border="0" /></a>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com5tag:blogger.com,1999:blog-2818153219058834250.post-32958384024103322232009-05-21T02:59:00.000-07:002009-05-22T00:25:29.850-07:00<span style="font-size:180%;"><span style="font-weight: bold;">ಬಯಕೆ ಈಡೇರಿದಾಗ...</span></span><br /><br /><span style="font-size:100%;">ಈ ಉಪ್ಪಿಟ್ಟು ತಿನ್ನುವ ಗೀಳು ನನ್ನಲ್ಲಿ ಹೇಗೆ ಹುಟ್ಟಿಕೊಂಡಿತು ಎಂಬುದು ಈಗಲೂ ಅರ್ಥವಾಗದ ಒಗಟು. ಊರಲ್ಲಿದ್ದಾಗ ಯಾವತ್ತೂ ಉಪ್ಪಿಟ್ಟು (ಸಜ್ಜಿಗೆ) ತಿನ್ನಬೇಕೆಂಬ ಹೆಬ್ಬಯಕೆ ಮನ</span><span style="font-size:100%;">ದಲ್ಲಿ ಮನೆಮಾಡಿರಲಿಲ್ಲ. ಆದರೆ ದೆಹಲಿಗೆ ಬಂದ ನಂತರ ಯಾಕೋ ಈ ಉಪ್ಪಿಟ್ಟಿಗೂ ನನಗೂ ಭಾರೀ ನಂಟು ಬೆಳದಂತಿದೆ. ಊರಿನಿಂದ ದೂರವಿದ್ದೇನೆ ಎಂಬ ಕಾರಣಕ್ಕೋ ಅಥವಾ </span><span style="font-size:100%;">ಮೋಹನ್ಸಿಂಗ್ ಮಾರ್ಕೆಟ್ ಬಳಿ ಇರುವ ತಮಿಳು ಡಾಬಾದ ಉಪ್ಮಾ ಮೋಡಿಯೋ ಅಥವಾ ಕರ್ನಾಟಕ ಸಂಘದ ಅಟ್ರಾಕ್ಟಿವ್ ಉಪ್ಮಾವೋ...ಈಗಲೂ ಅರ್ಥವಾಗುತ್ತಿಲ್ಲ. ಆದರೆ ಅಮ್ಮ ಮನೆಯಲ್ಲಿ ಮಾಡಿದ್ದರೂ ನಾನು ಉಪ್ಪಿಟ್ಟು ತಿನ್ನುತ್ತಿದ್ದದ್ದು ತೀರಾ ಅಪರೂಪ. ಬೆಳಗ್ಗಿನ ಉಪಹಾರಕ್ಕಂತೂ ಉಪ್ಪಿಟ್ಟು ಮಾಡಿಬಿಟ್ಟರೆ ಮನೆಯಲ್ಲಿ ಇಡೀ ರಂಪವೇ ಮಾಡಿಬಿಡುತ್ತಿದ್ದೆ. ಹಾಗಿದ್ದಾಗ ಉಪ್ಪಿಟ್ಟಿನ ಮೇಲೆ ಅಪಾರ ಪ್ರೀತಿ ಹುಟ್ಟಿರುವುದು ನಿಜಕ್ಕೂ ಸೋಜಿಗವೆನಿಸುತ್ತದೆ.<br /><br /></span><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEhxBtbuMvoAmCuIPUf2O7AXCSnj_UrmmfJDSFQPPaUkbcvhregEj1Is1SjQxZc3FEokZqXSo0kn7OVMUU8rKRxiX5-Dg61DnZzIC_Ouk7uzvay65Nl0VKn6Ggw1eDow6uBO4Sl3n-0_P-Y/s1600-h/2253130642_0d0a293311.jpg"><img style="margin: 0px auto 10px; display: block; text-align: center; cursor: pointer; width: 320px; height: 213px;" src="https://blogger.googleusercontent.com/img/b/R29vZ2xl/AVvXsEhxBtbuMvoAmCuIPUf2O7AXCSnj_UrmmfJDSFQPPaUkbcvhregEj1Is1SjQxZc3FEokZqXSo0kn7OVMUU8rKRxiX5-Dg61DnZzIC_Ouk7uzvay65Nl0VKn6Ggw1eDow6uBO4Sl3n-0_P-Y/s320/2253130642_0d0a293311.jpg" alt="" id="BLOGGER_PHOTO_ID_5338215929518104018" border="0" /></a><br /><span style="font-size:100%;">ಉಪ್ಪಿಟ್ಟಿನ ಮೇಲಿರುವ ಈ ಪರಿಯ ಮೋಡಿಗೆ ಕಳೆದ ಭಾನುವಾರವೂ ಸಾಕ್ಷಿಯಾಯಿತು. ಆವತ್ತು ಬೆಳಗ್ಗಿನಿಂದ ಎಲ್ಲಾದರೂ ಉಪ್ಪಿಟ್ಟು ತಿನ್ನಲೇಬೇಕೆಂದು ಹೊಟ್ಟೆ, ಮನಸ್ಸು ಬೊಬ್ಬಿಡುತ್ತಲೇ ಇದ್ದವು. ಅದಕ್ಕೆ ಸರಿಯಾಗಿ ಬೆಳಗ್ಗೆ ತಿಂಡಿಯೂ ತಿಂದಿರಲಿಲ್ಲ. ಮಧ್ಯಾಹ್ನ ವಿಜಯ ಕರ್ನಾಟಕದ ವಿನಾಯಕ ಭಟ್ಟರ ಮನೆಯಲ್ಲಿ ಮಧ್ಯಾಹ್ನದ ಭೋಜನ ಮಾಡಿದ್ದೆ. ಜೊತೆಗೆ ಸುನಿಲ್ ಕೂಡ ಇದ್ದ.<br />ಸಂಜೆ ಹೊತ್ತಿಗೆ ದೆಹಲಿಯ ಕನ್ನಡಭವನದಲ್ಲಿ ಆ ದಿನ tv9 ಶಿವಪ್ರಸಾದ್ ಜೊತೆ ಹರಟುತ್ತಿದ್ದಾಗ ಅವರಲ್ಲಿ ಹೇಳಿಯೇ ಬಿಟ್ಟೆ. “ನೋಡಿ ನನಗೆ ನಿಜವಾಗ್ಲೂ ಉಪ್ಪಿಟ್ಟು ತಿನ್ನಬೇಕೆಂದು ಮನಸ್ಸಾಗುತ್ತಿದೆ. ನಡ್ರೀ ಶಿವಪ್ರಸಾದ್ ಎಲ್ಲಿಯಾದ್ರೂ ಹೋಗಿ ಬರೋಣ ಅಂತ...” ಅದಕ್ಕೆ ಅವರು ನೀನ್ಯಾಕೋ ಪ್ರಶಾಂತ್ ನಾಥು ಥರಾ ಆಡ್ತಿದ್ಯಾ ಅಂಥ ನಕ್ಕಿ ಸುಮ್ಮನಾದ್ರು. ಸರಿ, ಸದ್ಯ ಯಾರೂ ಬರುವ ಯೋಚನೆಯಲ್ಲಿಲ್ಲ ಅಂಥ ನಾನೂ ಸುಮ್ಮನಾದೆ. ಮೂಗಿನ ತುದಿಯಲ್ಲಿದ್ದ ಆ ಆಸೆಯನ್ನ ಮತ್ತೆ ಹೊಟ್ಟೆಯಲ್ಲೇ ಹಾಕಿಕೊಂಡಿದ್ದೆ.<br /><br />ಸ್ವಲ್ಪ ಹೊತ್ತಿನ ಬಳಿಕ ಸೋನಿಯಾ ಮೇಡಂ ಅನ್ನು ಮೀಟ್ ಮಾಡಲು ಹೋಗಿದ್ದ, ಗುಲ್ಬರ್ಗಾದಲ್ಲಿ ಬಿಜೆಪಿ ರೇವೂ ನಾಯಕ್ ವಿರುದ್ಧ ಗೆಲುವಿನ ನಗೆ ಬೀರಿದ್ದ ಮಲ್ಲಿಕಾರ್ಜುನ ಖರ್ಗೆ ಕಾರಿಂದಿಳಿದು ನಿಧಾನವಾಗಿ ಒಂದೊಂದೇ ಹೆಜ್ಜೆ ಹಾಕುತ್ತಾ ಪತ್ರಕರ್ತರೊಂದಿಗೆ ಮಾತಿಗಿಳಿದರು. ಆ ಬಳಿಕ ಕನ್ನಡ ಭವನದ ಉಪಾಹಾರ ಹಾಲ್ನಲ್ಲಿ ಕುಳಿತು ಲೋಕಾಭಿರಾಮವಾಗಿ ಮಾತನಾಡುತ್ತಿದ್ದಾಗ, ಕಣ್ಣ ಮುಂದೆ ಉಪ್ಪಿಟ್ಟು ಪ್ರತ್ಯಕ್ಷವಾಗಬೇಕೆ? ರೋಗಿ ಬಯಸಿದ್ದೂ...ವೈದ್ಯ ನೀಡಿದ್ದೂ..ಎಂದು ಹತ್ತಿರದಲ್ಲಿದ್ದ ಜೋಶಿ ಅವರು ಹೇಳಿ ನಗತೊಡಗಿದರು. ಅತ್ತ ಶಿವಪ್ರಸಾದ ಅವರೂ ಕೂಡ, "ಅದಕ್ಕೆ ಹೇಳೋದು, ಸಜ್ಜನರ ಸಹವಾಸ ಹೆಜ್ಜೇನು ಸವಿದಂತೆ” ಎಂದು ಉಪ್ಪಿಟ್ಟು ಮೆಲ್ಲುತ್ತಿದ್ದರು. ಹತ್ತಿರವೇ ಸವಿಯುತ್ತಿದ್ದ ವಿನಾಯಕ ಭಟ್ಟರು, “ಸಜ್ಜನರ ಸಹವಾಸ ಸಜ್ಜಿಗೆ ಸವಿದಂತೆ” ಎಂದು ವಿ.ಕ. ಶೈಲಿಯಲ್ಲೇ ಪ್ರಾಸ ಹುಡುಕಿಕೊಂಡೇ ಜೋಕ್ ಮಾಡಿದರು. ಇತ್ತ ಖರ್ಗೆ ಅವರ ಬೈಟ್ಗೆ ಕಾಯುತ್ತಿದ್ದ ETv ಶ್ರೀನಿವಾಸ ಗೌಡರು, “ಮಗ ಬೇಕಾದಷ್ಟು ತಿನ್ನು” ಅಂತ ಹುರಿದುಂಬಿಸಿದರು. ಇವೆಲ್ಲದರ ಮಧ್ಯೆ “ಇವತ್ತಿನ ಉಪ್ಪಿಟ್ಟು ಭಾರೀ ಚೆನ್ನಾಗಿದೆ” ಎಂದು ವಿನಾಯಕ ಭಟ್ಟರು ಹೊಗಳಿದ್ದಕ್ಕೆ, ಖರ್ಗೆ ಅವರು “ಹೋ” ಎಂದು ನಕ್ಕಿ ಕನ್ನಡಭವನದ ತಿಂಡಿಗೆ ಸರ್ಟಿಫಿಕೇಟ್ ನೀಡಿದವರಲ್ಲಿ ನೀವೇ ಮೊದಲಿಗರು ಎಂದು ಹೇಳಿಯೇ ಬಿಟ್ಟರು. ಒಟ್ಟಾರೆ ಖರ್ಗೆ ಅವರಿಗೆ ಕನ್ನಡಭವನದ ತಿಂಡಿ ತಿನಿಸುಗಳು ಇಷ್ಟವಾಗಿಲ್ಲ ಎಂದಾಯಿತು. ಬಿಡಿ, ಅವರಿಗೆ ಇಷ್ಟವಾದರೇನು, ಬಿಟ್ಟರೇನು... ಅವರ ಕಣ್ಣು ಇದ್ದದ್ದಂತೂ ಉಪ್ಪಿಟ್ಟಿನ ಮೇಲಲ್ಲ. ಬದಲಾಗಿ ಕೇಂದ್ರದಲ್ಲಿನ ಮಂತ್ರಿಗಿರಿ ಮೇಲೆ! ನಾವೆಲ್ಲರಂತೂ ಎರಡೆರಡು ಬಾರಿ ಉಪ್ಪಿಟ್ಟಿನ ರುಚಿ ಸವಿದೆವು.<br /><br />ಏನೇ ಆಗಲಿ, ಉಪ್ಪಿಟ್ಟು ತಿನ್ನಬೇಕೆಂಬ ಆಕಾಶದಷ್ಟಿದ್ದ ಬಯಕೆಯನ್ನು ಈಡೇರಿಸದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಂದು ಥ್ಯಾಂಕ್ಸ್ ಹೇಳಲೇಬೇಕಲ್ಲವೇ...?</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com12tag:blogger.com,1999:blog-2818153219058834250.post-88850813160376359722009-05-05T05:36:00.000-07:002009-05-05T05:47:14.600-07:00<span style="color: rgb(204, 102, 0);font-size:180%;" ><span style="font-weight: bold;">ಬೈಗುಳ</span></span><span style="color: rgb(204, 102, 0);font-size:180%;" ><span style="font-weight: bold;">ಗ</span></span><span style="color: rgb(204, 102, 0);font-size:180%;" ><span style="font-weight: bold;">ಳ</span></span><span style="color: rgb(204, 102, 0);font-size:180%;" ><span style="font-weight: bold;"> ಬೇಗೆಯಲ್ಲಿ ಬೆಂದು ಹೋದಾಗ...</span></span><br /><br /><span style="color: rgb(102, 51, 102);">ಆ ಸೋಷಿಯ</span><span style="color: rgb(102, 51, 102);">ಲ್</span><span style="color: rgb(102, 51, 102);"> </span><span style="color: rgb(102, 51, 102);">ಮಿಸ್ ಇದ್ದರಲ್ಲ, ಅವರಷ್ಟು ನನಗೆ ಕಾಡಿದವರು ಮತ್ತೊಬ್ಬರಿರಲಿಕ್ಕಿಲ್ಲ. ಅಂದೊಮ್ಮೆ ಕನಸಲ್ಲೂ ಬಂದು ನನ್ನ ಹೆದರಿಸಿ ಹೋಗಿದ್ದರು. ಹೈಸ್ಕೂಲ್ ಜೀವನದಲ್ಲಿನ </span><span style="color: rgb(102, 51, 102);">ಅಜರಾಮರ ನೆನಪುಗಳಲ್ಲಿ ಈ ಮಿಸ್ ಮಹತ್ವದ ಸ್ಥಾನ ಪಡೆದಿದ್ದಾರೆ. ಯಾವಾಗ ನೋಡಿದರೂ ಬೈಗುಳ, ಒಂದೇ ಸಮನೆ ಸಜೆಷನ್ ನೀಡುವುದು, ಎಲ್ಲರ ಎದುರು ನಿಲ್ಲಿಸಿ ಇತಿಹಾಸ ಕೆದಕುವುದು, ಅವತ್ತು ಹಾಗೆ ಮಾಡಿದ್ದೆ, ಹೀಗೆ ಮಾಡಿದ್ದೆ ಎಂದು ನನ್ನ ಗೋಳು ಹೊಯ್ಕೊಳ್ಳುತ್ತಲೇ ಇದ್ದರು. ನನಗಂತೂ ಅವರ ಮಾತುಗಳನ್ನು ಕೇಳವುದೆಂದರೆ ಹಸಿ ಹಾಗಲಕಾಯಿ ತಿಂದ ಹಾಗಾಗುತ್ತಿತ್ತು.! ನಾನು ನನ್ನ “ನಾಟಿ” ಮಿತ್ರರು ಮುಂದಿನ ಬೆಂಚಲ್ಲಿ ಕುಳಿತಿದ್ದರೂ ಕಾಮೆಂಟ್ ಪಾಸ್ ಮಾಡುವುದರಲ್ಲಿ ನಿಸ್ಸೀಮರಾಗಿದ್ದ ಕಾರಣ ಅವರು ಬೈಯುವುದರಲ್ಲೂ ಅರ್ಥವಿತ್ತು ಬಿಡಿ..! </span><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEiEttHKsKVZ916oD3MgbiiL6V73MyGVc_eZl1il-yJyayhKWXzpZjy96KLOog_14xfNal3YG52jpuWFxMxLBJUckWWhYOaaV_WJ_aF49khHzCRBFfTBeCdY9QZYBWSiyUuLtna4n-WOwyA/s1600-h/teacher_n.JPG"><img style="margin: 0pt 10px 10px 0pt; float: left; cursor: pointer; width: 197px; height: 228px;" src="https://blogger.googleusercontent.com/img/b/R29vZ2xl/AVvXsEiEttHKsKVZ916oD3MgbiiL6V73MyGVc_eZl1il-yJyayhKWXzpZjy96KLOog_14xfNal3YG52jpuWFxMxLBJUckWWhYOaaV_WJ_aF49khHzCRBFfTBeCdY9QZYBWSiyUuLtna4n-WOwyA/s320/teacher_n.JPG" alt="" id="BLOGGER_PHOTO_ID_5332320250711365346" border="0" /></a><span style="color: rgb(102, 51, 102);">ಆವತ್ತು ಪೇರೆಂಟ್ಸ್ ಟೀಚರ್ಸ್ ಮೀಟಿಂಗ್ ದಿನ. ೧೦ನೇ ಕ್ಲಾಸ್ನ ಕೊನೆಯ ಪೇರೆಂಟ್ಸ್ ಮೀಟಿಂಗ್ ಅದು. ನನಗಂತೂ ಹೈಸ್ಕೂಲ್ ಜೀವನದ ಕರಾಳ ದಿನ ಎನ್ನಬಹುದು. ನಮ್ಮ ಕ್ಲಾಸ್ ಟೀಚರ್ ಕನ್ನಡ ಮಿಸ್ ಆಗಿದ್ದರೂ, ಈ ಸೋಷಿಯಲ್ ಇಡೀ ಕ್ಲಾಸ್ ಎದುರೇ “ರಾಘವ್ ಐ ವಾಂಟ್ ಟು ಸ್ಪೀಕ್ ವಿದ್ ಯುರ್ ಪೇರೆಂಟ್ಸ್, ಸೊ ಯು ಮೀಟ್ ಮಿ ಎಟ್ ದ ಟೈಮ್ ಆಫ್ ಮೀಟಿಂಗ್” ಎಂದು ಬಾಂಬ್ ಎಸೆದಿದ್ದರು. ಆಗಲೇ ನನಗೆ ಹೊಟ್ಟೆಯೊಳಗೆ ನಡುಕ ಆರಂಭವಾಗಿತ್ತು. ಹೇಗಾದರು ಮಾಡಿ ಕನ್ನಡ ಮಿಸ್ ಜೊತೆ ಮಾತನಾಡಿಸಿ ತಂದೆಯನ್ನು ಮನೆಗೆ ಕಳುಹಿಸಿ ಬಿಡಬೇಕು ಎಂದು ನಾನು ಆವಾಗಲೇ ಯೋಜನೆ ಹಾಕಿದ್ದೆ. ನೀವು ಕ್ಲಾಸಲ್ಲಿ ಇದ್ದ ಕಾರಣ ನನ್ನ ತಂದೆ ಕನ್ನಡ ಮಿಸ್ ಅನ್ನು ಮಾತನಾಡಿಸಿ ಹೋದರು ಎಂದು ಸಬೂಬು ನೀಡಬಹುದು ಎಂದು ಯೋಚಿಸಿದ್ದೆ. ಆದರೆ ಅಂದು ಆಗಿದ್ದದ್ದೇ ಬೇರೆ...</span><br /><br /><span style="color: rgb(102, 51, 102);">ಕನ್ನಡ ಮಿಸ್ ತಂದೆ ಬಳಿ ಮಾತನಾಡುತ್ತಿದ್ದರು. “ಏನು ನಿಮ್ಮ ಮಗನಿಗೆ ಕನ್ನಡ ಬಿಟ್ಟು ಉಳಿದ್ರಲ್ಲಿ ಎಲ್ಲಾ ಕಡಿಮೆ ಮಾರ್ಕ್ಸ್ ಇದೆಯಲ್ಲ” ಎಂದು ಒಂದೊಂದೇ ತಗಾದೆ ತೆಗೆಯುತ್ತಾ ಹೋದರು. ಮೀಟಿಂಗ್ನಲ್ಲಿ ನನ್ನ ಮಾರ್ಕ್ಗಳ ಬಗ್ಗೆ ಮಾತನಾಡುವ ಬದಲು ಈ ಮಿಸ್ ನಾನು ಕ್ಲಾಸ್ನಲ್ಲಿ ಏನೆಲ್ಲಾ ಪೀಕಲಾಟಗಳನ್ನು ಮಾಡುತ್ತಿದ್ದೆ ಎಂದು ಹೇಳಲಾರಂಭಿಸಿದರು. ಪಾಪ... ನನ್ನ ತಂದೆಗೆ ಏನು ಹೇಳುವುದೆಂದು ತಿಳಿಯದೆ ನನ್ನನ್ನು ಆಗಾಗ ನೋಡುತ್ತಲೇ ಇದ್ದರು. ತಪ್ಪಿತಸ್ಥನ ಮೋರೆ ಹಾಕಿ ನಾನು ಅವರನ್ನು ನೋಡುತ್ತಿದ್ದೆ.</span><br /><span style="color: rgb(102, 51, 102);">ಅವರಿಗೆ ಏನು ಹೇಳಬೇಕೆಂದು ತೋಚುತ್ತಿರಲಿಲ್ಲ. ಅದಕ್ಕಿಂತ ಮೊದಲು ನನ್ನಲ್ಲಿ ಸಮರ್ಥನೆಗೆ ಉತ್ತರವೂ ಇಲ್ಲ. ಸರಿ, ಮೀಟಿಂಗ್ ಮುಗಿಯಿತು. ಈ ಸೋಷಿಯಲ್ ಮಿಸ್ ಮಾತ್ರ ಬೇರೆ ತರಗತಿಗೆ ಕ್ಲಾಸ್ ತೆಗೆದುಕೊಳ್ಳುತ್ತಿದ್ದರಿಂದ ಆದಷ್ಟು ಬೇಗ ತಂದೆಯನ್ನು ಮನೆಗೆ ಕಳುಹಿಸಿಬಿಡಬೇಕು, ಇಲ್ಲಾಂದ್ರೆ... ನನ್ನದು ಮಾತ್ರವಲ್ಲ ತಂದೆಯನ್ನೂ ತಲೆತಗ್ಗಿಸುವಂತೆ ಮಾಡುತ್ತಾರೆ ಎಂದು ತಿಳಿದಿತ್ತು. </span><br /><br /><span style="color: rgb(102, 51, 102);">ಮೀಟಿಂಗ್ ಹಾಲ್ನಿಂದ ನಾವು ಹೊರಗೆ ಕಾಲಿಡುವುದು...ಎದುರಿನಿಂದ ಸೋಷಿಯಲ್ ಮಿಸ್ ಆಗಮಿಸುವುದು...ಹೋ...! ಅಲ್ಲೇ ಕೈಯನ್ನು ತೊಡೆಗೆ ಬಾರಿಸಿದೆ... ಒಂದು ನಿಮಿಷ ಮೊದಲಾಗಿದ್ದರೆ ಇವರ ಕಣ್ಣಿಂದ ತಪ್ಪಿಸಬಹುದಿತ್ತಲ್ಲ ಎಂದು ಯೋಚಿಸುತ್ತಿದ್ದಂತೆ....“ಓಹ್ ಯುವರ್ ಡ್ಯಾಡ್ ಹ್ಯಾಸ್ ಕಮ್...ವನ್ ಮಿನಿಟ್ ಸರ್ ಐ ವಿಲ್ ಕಮ್ ಟು ಯು ಎಂದು ತಮ್ಮ ಪುಸ್ತಕಗಳನ್ನು ಇಟ್ಟವರೇ... ತಂದೆಯನ್ನು ಎದುರಿಗಿದ್ದ ಕುರ್ಚಿಯಲ್ಲಿ ಕೂರಿಸಿದರು. ನಾನು ಏನೋ ಮಹಾನ್ ತಪ್ಪು ಮಾಡಿದ್ದವನಂತೆ ನಿಧಾನವಾಗಿ ಎರಡೂ ಕಣ್ಣುಗಳನ್ನು ಮಿಟುಕಿಸುತ್ತಾ ಮಿಸ್ಸನ್ನೇ ನೋಡುತ್ತಿದ್ದೆ. </span><br /><span style="color: rgb(102, 51, 102);">ಶುರುವಾಯಿತು ನೋಡಿ...ಬುಲೆಟ್ಸ್..ಬಾಂಬು...ಎಲ್ಲವೂ ನನ್ನನ್ನು ಅಟ್ಯಾಕ್ ಮಾಡುತ್ತಿದ್ದರೆ...ಅಪ್ಪ ಮಾತ್ರ ನನ್ನ ಮಗ ಹೀಗೆಲ್ಲಾ ಮಾಡಿದ್ದಾನಾ ಎಂದು ಸಪ್ಪೆ ಮೋರೆ ಹಾಕಿ ಏನನ್ನೂ ಹೇಳದೆ ಎಲ್ಲವನ್ನು ಕೇಳುತ್ತಿದ್ದರು. </span><br /><br /><span style="color: rgb(102, 51, 102);">“ನೋಡಿ ನಿಮ್ಮ ಮಗನಿಗೆ ಸೋಷಿಯಲ್ನಲ್ಲಿ ಮಾರ್ಕ್ ನೋಡಿ. 25ರಲ್ಲಿ 11 ಮಾರ್ಕು. ಎಲ್ಲಿಗೆ ಸಾಕು? ನಾಡ್ದು ಪ್ರಿಪರೇಟರಿ ಬೇರೆ ಇದೆ... ಹೀಗೆ ಓದಿದ್ರೆ ಕಾಲೇಜಿಗೆ ಹೋಗುವುದಾದ್ರು ಹೇಗೆ..? ಯಾವಾಗ ನೋಡಿದ್ರೂ ಕ್ಲಾಸಲ್ಲಿ ಮಾತಾಡ್ತಲೇ ಇರ್ತಾನೇ...ನಂಗಂತೂ ಹೇಳಿ ಹೇಳಿ ಸಾಕಾಗಿದೆ... ನಮ್ಮ ಮಾತಿಗೆ ಬೆಲೆಯೇ ಕೊಡುದಿಲ್ಲ. ಪೋಲಿಗಳ ಹಾಗೆ ಉಪದ್ರ ತಡಿಲಿಕ್ಕಾಗುದಿಲ್ಲ” ಎಂದು ತಂದೆಯ ಮುಖದತ್ತ ಬಾಂಬನ್ನು ಎಸೆಯುತ್ತಲೇ ಇದ್ದರು. ನಿಜವಾಗಿಯೂ ತಂದೆಗೆ ಅಂದು ತಲೆತಗ್ಗಿಸಿದ್ದರು. ಒಮ್ಮೆ ನನ್ನ ಮುಖ, ಮತ್ತೊಮ್ಮೆ ತಂದೆಯವರ ಮುಖ ನೋಡುತ್ತಾ ಮಿಸ್ ಕಂಪ್ಲೇಂಟುಗಳ ಸುರಿಮಳೆಯನ್ನೇ ಸುರಿಸಿದ್ದರು. ನನ್ನ ತಂದೆಯ ಸಪ್ಪೆ ಮುಖ.. ಎಲ್ಲರ ಎದುರು ನಿಲ್ಲಿಸಿ ಆ ಬೈಗುಳಗಳಿಂದ ಬೇಸತ್ತಿದ್ದ ನನ್ನ ಮನಸ್ಸು ನಿಜಕ್ಕೂ ಕಡಿದುಹೋದ ಬಾಳೇ ಗಿಡದಂತಾಗಿತ್ತು.. ಕಣ್ಣಲ್ಲಿ ನೀರು ಹರಿಯತೊಡಗಿತು. ಯಾವತ್ತು ಮಿಸ್ಗಳು ನನಗೆ ಬೈದಿದ್ದರೂ ನಾನು ಎಂದಿಗೂ ಅತ್ತಿರಲಿಲ್ಲ. ಆದರೆ ಅಪ್ಪನ ಮುಂದೆ...ಅವರ ಮುಖ...ನನ್ನನ್ನು ಗೊಳೋ ಎಂದು ಅಳುವಂತೆ ಮಾಡಿತ್ತು...ಹೊಟ್ಟೆಯೊಳಗಿಂದ ನೇರವಾಗಿ ಬಾಯಿಗೆ ಬರುತ್ತಿದ್ದ ಆ ಅಳುವನ್ನು ನಾನು ಇಂದಿಗೂ ಮರೆತಿಲ್ಲ... ಆ ದಿನ ನಾನು ಒಂದು ಕಡೆ ಕಣ್ಣೀರ ಧಾರೆ ಹರಿಸುತ್ತಿದ್ದರೆ, ಇನ್ನೊಂದು ಬದಿ ಮಿತ್ರ ಮಿಥುನ್ ಕುಮಾರ್ ನೇತ್ರಾವತಿ ನದಿಯನ್ನೇ ಹರಿಸಿದ್ದ. ಆದರೆ ಮಿಸ್ ಮಾತ್ರ ಬೇರೆಯವರಾಗಿದ್ದರು... </span><br /><br /><span style="color: rgb(102, 51, 102);">ನನಗೆ ಏನೂ ಹೇಳದೆ ಮನೆಗೆ ಹೋಗಿದ್ದ ತಂದೆ ನನಗೆ ಮನೆಯಲ್ಲೂ ಬೈಯಲೂ ಇಲ್ಲ... ಒಂದೆರಡು ಬುದ್ಧಿ ಮಾತನ್ನು ಹೇಳಿದ್ದು ಬಿಟ್ಟರೆ ಮತ್ತೇನನ್ನೂ ಅವರು ಹೇಳಿರಲಿಲ್ಲ... ಆ ದಿನ ನನ್ನನ್ನು ಸೋಷಿಯಲ್ ಮಿಸ್ಸೇ ಸಮಾಧಾನ ಪಡಿಸಿದ್ದರು. ಏಕೆಂದರೆ ಅವರಿಗೆ ನನ್ನ ಮೇಲೆ ಎಷ್ಟೇ ಕೋಪವಿದ್ದರೂ, ಅಷ್ಟೇ ಪ್ರಮಾಣದ ಪ್ರೀತಿಯಿದ್ದಕ್ಕೂ ಅದು ಸಾಕ್ಷಿಯಾಗಿತ್ತು. ಸೋಜಿಗವೆಂದರೆ ಪಿಯುಸಿ ಅಧ್ಯಯನಕ್ಕೆ ನಾನು ಉಜಿರೆ ಕಾಲೇಜಿಗೆ ಸೇರಿದಾಗ ನನ್ನ ಪೊಲಿಟಿಕಲ್ ಸೈನ್ಸ್ ಲೆಕ್ಚರರ್ ಆಗಿ ಇವರೇ ಬಂದಿದ್ದರು... ಆದರೆ ಇಲ್ಲಿದ್ದ ವ್ಯತ್ಯಾಸವೆಂದರೆ ಹೈಸ್ಕೂಲಿನ ದಿನಗಳನ್ನು ಇಲ್ಲಿ ಎಂದಿಗೂ ನಾನು ಪುನರಾವರ್ತಿಸಿರಲಿಲ್ಲ!</span><br /><span style="color: rgb(102, 51, 102);">ಸೋಷಿಯಲ್ ಮಿಸ್ ಇಂದಿಗೂ ನನ್ನ ಜೊತೆ ಕಾಂಟ್ಯಾಕ್ಟ್ನಲ್ಲಿದ್ದಾರೆ. ಅವರಿಗೀಗ ಮದುವೆಯಾಗಿ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. </span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com6tag:blogger.com,1999:blog-2818153219058834250.post-18187907005880420772009-04-27T23:12:00.000-07:002009-04-27T23:55:28.538-07:00<span style="color: rgb(204, 0, 0);font-size:180%;" ><span style="font-weight: bold;">“ಕ್ಯಾಬರೇ ಡ್ಯಾನ್ಸ್”ಗೆ ಬೆವೆತು ಒದ್ದೆಯಾಗಿದ್ದೆ!!</span></span><br /><br /><br /><span style="color: rgb(102, 0, 0);">ಈ <span style="font-weight: bold;">‘ಕ್ಯಾ</span></span><span style="color: rgb(102, 0, 0);"><span style="font-weight: bold;">ಬರೇ’</span> ಅನ್ನೋ ಪದಕ್ಕೂ ನನಗೂ ಅವಿನಾಭಾವ ನಂಟು. ಹೈಸ್ಕೂಲ್ಗೆ ಹೋಗುತ್ತಿದ್ದ ಸಮಯದಲ್ಲಿ ಟಿವಿಯಲ್ಲಿ ರಾಜ್</span><span style="color: rgb(102, 0, 0);">ಕುಮಾರ್ ಬಾಂಡ್ ಸಿನಿಮಾಗಳು ನೋಡಿದಾಗ ಅವುಗಳಲ್ಲಿ</span><span style="color: rgb(102, 0, 0);"> ಕ್ಯಾಬರೇ ನೃತ್ಯಗಳಿರುತ್ತಿದ್ದವು. ಆ ವಯಸ್ಸಲ್ಲಿ ಅಂತದ್ದನ್ನು ತಪ್ಪದೇ ನೋಡುತ್ತಲೂ ಇದ್ದೆ. ಈಗಲೂ ನೋಡುವುದಿಲ್ಲ ಎಂದಲ್ಲ; </span><br /><br /><span style="color: rgb(102, 0, 0);">ಅದಿರಲಿ, ೯ನೇ ಕ್ಲಾಸ್ನಲ್ಲಿದ್ದಾಗ ನನ್ನ ಈ ಕ್ಯಾಬರೇ ಪುರಾಣ ದೊಡ್ಡ ಸುದ್ದಿಯೇ ಮಾಡಿತ್ತು. ಕನ್ನಡ ತರಗತಿ ನಡೆಯುತ್ತಿದ್ದ ಸಮಯ</span><span style="color: rgb(102, 0, 0);">. ಮಧ್ಯಾಹ್ನ ೩ ಗಂಟೆಗೆ ಕ್ಲಾಸ್ ಆರಂಭವಾಗಿತ್ತು. ಶಾಲೆ</span><span style="color: rgb(102, 0, 0);">ಯಲ್ಲಿ ಕನ್ನಡ ಮಾತಾಡುವುದಕ್ಕೆ ಇದ್ದ </span><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEghFqcwlYqZIhpmJXBunfeBut0b0uwRBkPjZvT0A59Z_an-izXOGlrMx1hxNoOjUrQ79KeiK_RlyjWURtmuzWAqHYvZ2cizFbjCXqBu7GNYKc3kT_DqAS5FosjdraDrA6vLP1Y6Kn5wHu0/s1600-h/lest.JPG"><img style="margin: 0pt 10px 10px 0pt; float: left; cursor: pointer; width: 61px; height: 167px;" src="https://blogger.googleusercontent.com/img/b/R29vZ2xl/AVvXsEghFqcwlYqZIhpmJXBunfeBut0b0uwRBkPjZvT0A59Z_an-izXOGlrMx1hxNoOjUrQ79KeiK_RlyjWURtmuzWAqHYvZ2cizFbjCXqBu7GNYKc3kT_DqAS5FosjdraDrA6vLP1Y6Kn5wHu0/s320/lest.JPG" alt="" id="BLOGGER_PHOTO_ID_5329632145875403058" border="0" /></a><span style="color: rgb(102, 0, 0);">ಏಕೈಕ ಪಿರಿಡ್ ಅದು. ಉಳಿದ ಕ್ಲಾಸ್ನಲ್ಲೆಲ್ಲಾ ನಾವು ಇಂಗ್ಲೀಷ್ ಮಾತಾಡಬೇಕಾದುದು ಕಡ್ಡಾಯವಾಗಿತ್ತು. ನಮ್ಮ ಕನ್ನಡ ಮಿಸ್ ಪಾಠ ಮಾಡುತ್ತಿದ್ದರು. ಆಗ ನಮ್ಮ ಸ್ಕೂಲ್ ಡೇನೂ ಹತ್ತಿರದಲ್ಲಿತ್ತು. ಪಾಠವನ್ನು ಮಧ್ಯದಲ್ಲಿ ನಿಲ್ಲಿಸಿದ ಮಿಸ್ ಒಂದೇ ಬಾರಿ ಸ್ಕೂಲ್ ಡೇ ಬಗ್ಗೆ ಮಾತಾಡತೊಗಿದರು. ನಮಗೆ ಸಿಕ್ಕಿದ್ದೇ ಅವಕಾಶ ಎಂದು ನಾವು ಹರಟೆ ಹೊಡೆಯಲಾಂಭಿಸಿದೆವು. ನಾನು ಎಡಭಾಗದ ಮುಂದಿನ ಬೆಂಚ್ನಲ್ಲಿ ಕೂತಿದ್ದೆ. ನಾನು ಪಾಠದ ಮಧ್ಯೆ ಡಿಸ್ಟರ್ಬ್ ಮಾಡುತ್ತಿರುತ್ತೇನೆ ಎಂದೇ ಮುಂದಿನ ಬೆಂಚ್ನಲ್ಲಿ ಕೂರಿಸಿದ್ದರು. ನನ್ನ</span><span style="color: rgb(102, 0, 0);"> ಜೊತೆ ಅನೀಶ್ ಮತ್ತು ಅಭಿರಾಮ್ (ನನ್ನಂತೆಯೇ <span style="font-weight: bold;">‘ನಾಟಿ ಸ್ಟೂಡೆಂಟ್’</span> ಎನಿಸಿಕೊಂಡಿದ್ದವರು; ಅಭಿರಾಮ್ ನಮ್ಮಷ್ಟು ನಾಟಿ ಇರಲಿಲ್ಲ) ಕುಳಿತಿದ್ದರು. </span><br /><br /><br /><span style="color: rgb(102, 0, 0);">ಇತ್ತ ಕನ್ನಡ ಮಿಸ್ “ಡ್ಯಾನ್ಸ್ ಟೀಮ್ನಲ್ಲಿರುವವರು ಕ್ಲಾಸ್ ಬಳಿಕ ಪ್ರಾಕ್ಟೀಸ್ ಮಾಡಿ ಬನ್ನಿ” ಎಂದು ಹುಡುಗಿಯರಿಗೆ ಹೇಳಿದರು. ನನ್ನದೇ ಲೋಕದಲ್ಲಿ ತೇಲುತ್ತಿದ್ದ ನನ್ನ ಮನಸ್ಸು ಒಮ್ಮೆಲೆ ನೆಟ್ಟಗಾಯಿತು. ಕಿವಿ ಅತ್ತ ಹೋಯಿತು. “ಯಾವ ಡ್ಯಾನ್ಸ್ ಮಿಸ್... ಯಾವ ಡ್ಯಾನ್ಸ್ ಮಿಸ್...” ಎಂದು ಕೆಲವು ಹುಡುಗರು ಮಿಸ್ನಲ್ಲಿ ಬೊಬ್ಬಿಟ್ಟು ಕೇಳಿದಾಗ ಮಿಸ್ “ಸೈಲೆಂಟ್... ಸೈಲೆಂಟ್” ಅಂದು ಬೊಬ್ಬಿಟ್ಟರು! ಸರಿ; ಎಲ್ಲರೂ ಸೈಲೆಂಟ್ ಆದದ್ದೇ ತಡ...ಮಿಸ್ ಇನ್ನೇನು <span style="font-weight: bold;">'ಸೋಲೋ ಡ್ಯಾನ್ಸ್'</span> ಎಂದು ಹೇಳಬೇಕೆನ್ನುವಷ್ಟರಲ್ಲಿ...</span><br /><span style="color: rgb(102, 0, 0);">ಅದೇನೋ ಗೊತ್ತಿಲ್ಲ...ನಾನು “ಕ್ಯಾಬರೇ ಡ್ಯಾನ್ಸ್” ಎಂದು ಜೋರಾಗಿಯೇ ಇಡೀ ಕ್ಲಾಸ್ಗೆ ಕೇಳುವಂತೆ ಬೊಬ್ಬಿಟ್ಟೆ..ಹತ್ತಿರ ಕೂತಿದ್ದ ಅನೀಶ್ ಮುಸಿ ಮುಸಿ ನಗುತ್ತಾ ನನ್ನ ತೊಡೆಗೇ ಒಂದು ಬಾರಿಸಿದ. “ಅಯ್ಯೋ ಎಂಥಾ ಅಧ್ವಾನವಾಯ್ತು” ಅಂದು ನಾನು ಅಲ್ಲೇ ಬೆವರಿ ಹೋದೆ..</span><br /><br /><span style="color: rgb(102, 0, 0);">ಈ ಕನ್ನಡ ಮಿಸ್ಗೆ ಕೋಪ ಮೂಗಿನ ತುದಿಗೇರಿತ್ತು. ಆಗಲೇ ಅವರ ಮೂಗು ಉದ್ದವಾಗಿ ಕಡು ಕೆಂಪಾಗಿತ್ತು! ನನಗಂತೂ ಮೈಯೆಲ್ಲಾ ನಡುಗಲು ಆರಂಭಿಸಿದ್ದೇ ತಡ... <span style="font-weight: bold;">“ಸ್ಟ್ಯಾಂಡ್ ಅಪ್ ರಾಘವ” </span>ಎಂದು ಮಿಸ್ ನನ್ನನ್ನು ದುರುಗುಟ್ಟಿಸಿ ನೋಡಿದರು. ತಗೋ...ಶುರುವಾಯ್ತು ಬೈಗುಳಗಳ ಸುರಿಮಳೆ... ಪೂರ್ತಿ ಪಿರಿಡ್ ಕೈಮೇಲೆ ಮಾಡಿ ನಿಲ್ಲಿಸಿದರು. ಮೊದಲೇ ಹೆದರಿ ಬೆವರಿದ್ದೆ...ಇದರ ಜೊತೆ ಕೈಯನ್ನೂ ಮೇಲೆ ಮಾಡಬೇಕು ಎಂದು ಪನಿಶ್ಮೆಂಟ್ ಬೇರೆ. ಹಾಗಾಗಿ ನನ್ನ ಕಂಕುಳುಗಳೂ ಬೆವೆತು ಒದ್ದೆಯಾಗಿ ಹೋಗಿದ್ದವು. </span><br /><br /><span style="color: rgb(102, 0, 0);">ಆದರೆ ಈ ಮಿಸ್ ಬೇರೆ ಮಿಸ್ಗಳಂತೆ ಬಟ್ಟೆ ಒಗೆದಂತೆ ಒಗೆಯಲಿಲ್ಲ. ಇನ್ನೇನು ಪ್ರೌಢಾವಸ್ಥೆಗೆ ಕಾಲಿಟ್ಟಿದ್ದ ಹುಡುಗಿಯರು ಬೇರೆ ಕ್ಲಾಸ್ನಲ್ಲಿದ್ದರು. ಅವರ ಮಧ್ಯೆ...ಚೀ..ಚೀ..ಕ್ಯಾಬರೇ ಎಂದರೆ ಹೇಗಾಗಬೇಡ...!? ಅಂತೂ ನಾನು “ಕ್ಯಾಬರೇ” ಅಂದಿದ್ದು ಇನ್ನು ಏನೇನು ಫಜೀತಿಯನ್ನು ಸೃಷ್ಟಿಲಿದೆಯೋ ಎಂದು ಭಯಭೀತನಾಗಿದ್ದೆ. ಅತ್ತ ಅಪ್ಪ ಅಮ್ಮನ ಭಯ ಬೇರೆ.. ಎಲ್ಲಿಯಾದರೂ ಮನೆಯಲ್ಲಿ ಈ ಬಗ್ಗೆ ಹೇಳಿದರೆ...ಅನ್ನುವ ಭಯ...ಈ ಮಧ್ಯೆ ಕ್ಲಾಸ್ನಲ್ಲಿದ್ದ ಹುಡುಗಿಯರನ್ನೂ ಗಮನಿದೇ ಎನೋ ಅಸಭ್ಯವಾಯಿತೋ ಎಂದು ನಾಚಿಕೆಯೂ ಆಯಿತು. </span><br /><br /><span style="color: rgb(102, 0, 0);">ಸರಿ ಕ್ಲಾಸ್ ಮುಗಿಯಿತು... ಎಲ್ಲರೂ ನನ್ನನ್ನು ನೋಡಿ ನಕ್ಕರು...ಎನೋ ಒಂದು ಒಳ್ಳೆ ಎಂಟರ್ಟೈನ್ಮೆಂಟ್ ಕೊಟ್ಟೆ ಅನ್ನುವ ಹಾಗೆ...ನನಗಂತೂ ಪೇರೆಂಟ್ಸ್ ಮೀಟಿಂಗ್ನಲ್ಲಿ ಇದನ್ನೆಲ್ಲಾ ಹೇಳಿದರೆ ಏನು ಮಾಡುವುದು ಅನ್ನುವ ಚಿಂತೆಯಾದರೆ...ಇವರಿಗೆಲ್ಲಾ ಖುಷಿ...</span><br /><span style="color: rgb(102, 0, 0);">ನಂತರ ನೇರ ಮಿಸ್ ಬಳಿ ಹೋದವನು “ಸಾರಿ ಮಿಸ್” ಅಂದೆ...ನಿಜವಾಗಲೂ ಮಿಸ್ ಪಾಪ...ನನಗೆ ಏನೂ ಹೇಳಿಲಿಲ್ಲ...ಇನ್ನು ಹಾಗೆ ಮಾಡಬೇಡ ಎಂದು ಬುದ್ಧಿವಾದ ಹೇಳಿದರು.. ಓಹ್...ಅಬ್ಬಾ ಬದುಕಿದೆ..ಎಂದು ದೊಡ್ಡ ಉಸಿರು ಬಿಟ್ಟೆ ...ಖುಷಿಯಲ್ಲಿ ಉಬ್ಬಿ ಹೋದೆ...ನಗುತ್ತಲೇ ಮನೆಗೆ ಹೋದೆ...</span><br /><br /><span style="color: rgb(102, 0, 0); font-weight: bold;">(ಪೇರೆಂಟ್ಸ್ ಮೀಟಿಂಗ್ನಲ್ಲಿ ಸೋಷಿಯಲ್ ಮಿಸ್ ನನ್ನ ಇತಿಹಾಸ ಕೆದಕಿದ್ದು, ನಾನು ಅಪ್ಪನ ಮುಂದೆ ಗೊಳೋ ಎಂದು ಅತ್ತಿದ್ದು, ಅಪ್ಪನ ಮುಖ ಚಪ್ಪೆಯಾದದ್ದು... ಈ ಬಗ್ಗೆ ಮುಂದೆ ಹೇಳುತ್ತೇನೆ)</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com10tag:blogger.com,1999:blog-2818153219058834250.post-70023859444454296542009-04-27T05:10:00.000-07:002009-04-27T05:59:35.478-07:00<span style="color: rgb(204, 0, 0);font-size:180%;" ><span style="font-weight: bold;">ಮೂತ್ರ ಬರುತ್ತಿದ್ದದ್ದು ಅರ್ಧಕ್ಕೆ ನಿಂತಿತು!!</span></span><br /><br /><span style="color: rgb(51, 51, 255);">ಅವು ನಾನು ಉಜಿರೆಯಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಮಾಡುತ್ತಿದ್ದ ದಿನಗಳು. ನಮ್ಮ ತರಗತಿಯ <span style="font-weight: bold;">‘ನಾಟಿ ಬಾಯ್ಸ್’</span> ಸೆಕ್ಷನ್ನಲ್ಲಿ ಮಹತ್ತರವಾದ ಸ್ಥಾನವನ್ನೇ ಪಡೆದಿದ್ದ ನಾನು ಮಿಸ್ ಹಾಗೂ ಸರ್ಗ</span><span style="color: rgb(51, 51, 255);">ಳ ಕೈಯಿಂದ ಬೈಗುಳಗಳನ್ನು ತಿನ್ನದ ದಿನಗಳೇ ಇರುತ್ತಿರಲಿಲ್ಲ. ಪಾಠ</span><span style="color: rgb(51, 51, 255);"> ಮಾಡುವಾಗ ಒಂದಲ್ಲಾ ಒಂದು ಕಮೆಂಟ್ ಪಾಸ್ ಮಾಡುತ್ತಾ ಅದರಲ್ಲೇ ತೃಪ್ತಿ ಪಡುತ್ತಿದ್ದ ನನಗೆ ಸಿಗುತ್ತಿದ್ದ ಮಾರ್ಕ್ಸ್ ನೋಡಿ ಮನೆಯಲ್ಲಿ ಮಾತ್ರವಲ್ಲ; ಮಿಸ್ಗಳ ಕೈಯಿಂದಲೂ ಸದಾ ಮಂಗಳಾರತಿ ತಪ್ಪುತ್ತಿರಲಿಲ್ಲ. </span><br /><br /><span style="color: rgb(51, 51, 255);">ಈ ಮಿಸ್ಗಳ ಪಾಠ ಕೇಳವುದೇ ಒಂದು ಮಹಾ ಬೋರಿಂಗ್ ಎನಿಸುತ್ತಿದ್ದಾಗ; ಇನ್ನಿವರು ಆನ್ ಸಂಡೆ ಐ ಆಮ್ ಟೇಕಿಂಗ್ ಸ್ಪೆಷಲ್ ಕ್ಲಾಸ್ ಎಂದರೆ ಎಷ್ಟು ಉರಿಯಬೇಡ...? ಆಯ್ತು ಮಿಸ್ ಹೇಳಿದ ಮೇಲೆ ಹೋಗಲ್ಲಾ ಅನ್ನೋಕಾಗುತ್ತಾ? ಹೋಗದಿದ್ದರೆ ಅಮ್ಮನ ಬೆತ್ತದ ರುಚಿ ತಪ್ಪಿಸಲಾಗುತ್ತಾ? </span><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEhcmrEjYkntlTKTVgsqq9FX_ekqlwjKTHwoILlilc70Q835zY8hED9O4meCdEDzv06aa28PLY7K_TTZXIcvGosd5QF98-2SkQsj2D0KZsoq60SgGjd2mjYejYCmDQbmBKAvaAI0nNTtumc/s1600-h/mother-scolding-bad-boy-small.jpg"><img style="margin: 0px auto 10px; display: block; text-align: center; cursor: pointer; width: 288px; height: 219px;" src="https://blogger.googleusercontent.com/img/b/R29vZ2xl/AVvXsEhcmrEjYkntlTKTVgsqq9FX_ekqlwjKTHwoILlilc70Q835zY8hED9O4meCdEDzv06aa28PLY7K_TTZXIcvGosd5QF98-2SkQsj2D0KZsoq60SgGjd2mjYejYCmDQbmBKAvaAI0nNTtumc/s320/mother-scolding-bad-boy-small.jpg" alt="" id="BLOGGER_PHOTO_ID_5329354416046375794" border="0" /></a><br /><span style="color: rgb(51, 51, 255);">ಸರಿ, ಧರ್ಮಸ್ಥಳದಿಂದ ಬಸ್ಸು ಹತ್ತಿ ಉಜಿರೆಗೆ ಹೋಗಿ ಆ ಒಂದು ಸಂಡೆ ಕ್ಲಾಸಲ್ಲಿ ಕೂತದ್ದಾಯಿತು. ಶುರುವಾಯಿತು ಸೈನ್ಸ್ ಕ್ಲಾಸ್. ಮೊದಲೇ ಸದಾ ಆ ಮಿಸ್ನ ಕ್ಲಾಸ್ ಬೋರ್ ಅನಿಸ್ತಿತ್ತು. ಇನ್ನು ಸ್ಪೆಷಲ್ ಕ್ಲಾಸ್ ಅಂದ್ರೆ; ಅಯ್ಯೋ ಕೇಳೋದು ಬೇಡ... ಸಿಲೆಬಸ್ ಮುಗಿಸ್ಬೇಕು ಅನ್ನುವ ಭರದಲ್ಲಿ ಅವರಿದ್ದರೆ...ನಮ್ಮದೇ ಲೋಕದಲ್ಲಿ ನಾವೊಂದಿಷ್ಟು ಪೋಕ್ರಿಗಳು... ನಾನು ಯಾವತ್ತೂ ಪಾಠ ಕೇಳುವುದಿಲ್ಲ ಅನ್ನುವುದು ಅವರಿಗೆ ಗೊತ್ತಿತ್ತು. ಯಾಕೆಂದರೆ ಅವರು ಕೇಳುವ ಒಂದು ಪ್ರಶ್ನೆಗೂ ನನ್ನಲ್ಲಿ ಉತ್ತರ ಇರುತ್ತಿರಲಿಲ್ಲ. ಆ ಸೈನ್ಸ್ ಕೂಡ ಎಷ್ಟು ಓದಿದ್ರೂ ನನ್ನ ಮಂಡೆಗೆ ಹತ್ತುತ್ತಿರಲಿಲ್ಲ. </span><br /><br /><span style="color: rgb(51, 51, 255);">ಹಾಗೇ ಪಾಠ ನಡೀತಾ ಇತ್ತು. ನಾನು ಮಧ್ಯದ ಸಾಲಿನ ನಾಲಕ್ನೇ ಬೆಂಚಿನಲ್ಲಿ ಕೂತಿದ್ದೆ. ನಾನು ಮತ್ತು ನನ್ನ ಪಕ್ಕ ಕೂತಿದ್ದವ ಏನೋ ದೀರ್ಘ ಸಂಭಾಷಣೆಯಲ್ಲಿ ತೊಡಗಿದ್ದೆವು. ನಾನು ಕಿಸ ಕಿಸ ನಗುತ್ತಲೂ ಇದ್ದೆ. ಇಷ್ಟು ಸಾಕಲ್ವಾ ಮಿಸ್ಗೆ...? </span><br /><span style="color: rgb(51, 51, 255);">ರಾಘವ್ ಸ್ಟ್ಯಾಂಡ್ ಅಪ್...! ಒಮ್ಮೆ ತರಗತಿಯಲ್ಲಿ ಮೌನ.. ನಾನು ಯಾವತ್ತಿನಂತೆ ನಿಂತೆ..ಹೀಗೆ ನಿಂತು ಸಾಕಷ್ಟು ಅಭ್ಯಾಸವೂ ಇತ್ತು. ಆದರೆ ಈ ಬಾರಿ ಬೈಗುಳಗಳ ದಾಟಿ ಮಾತ್ರ ಬೇರೆಯದೇ ಆಗಿತ್ತು. ಅಬ್ಬಾ ಆ ಬೈಗುಳಗಳು ಹೇಗಿತ್ತು ಎಂದರೆ; ತರಗತಿಯಲ್ಲಿನ ನನ್ನ ಸಾಧನೆಗಳ ಇತಿಹಾಸವನ್ನೆಲ್ಲಾ ಒಂದೊಂದೆ ಹೆಕ್ಕಿ ತೆಗೆದು; ಒಳ್ಳೆ ಬಟ್ಟೆ ಒಗೆದ ಹಾಗೆ ಒಗೆದರು (ಆದರೆ ಕೊಳೆ ಮಾತ್ರ ಹೋಗದು ಎಂಬುದು ಅವರಿಗೆ ಗೊತ್ತಿರಲಿಲ್ಲವೇನೋ?). ನಾನು ಬಾಹುಬಲಿ ಮೂರ್ತಿಯಂತೆ ಉದ್ದಕ್ಕೆ ನಿಂತಿದ್ದೆ(ಬಟ್ಟೆ ಹಾಕಿದ್ದೆ). ಆದರೆ ಇವರ ಬೈಗಳು ಮಾತ್ರ ನಿಲ್ಲಲೇ ಇಲ್ಲ. ನಂಗೂ ಸಾಕಾಗಿ ಹೋಯಿತು. ನನ್ನ ಅಪ್ಪ ಅಮ್ಮ ಕೂಡ ಆ ರೀತಿ ಬೈದಿರಲಿಕ್ಕಿಲ್ಲ. </span><br /><br /><span style="color: rgb(51, 51, 255);">ಅಯ್ಯೋ ಸಾಕಪ್ಪಾ ಸಾಕು... “ನೀನು ಹಾಗೆ, ನೀನು ಹೀಗೆ...ನೀನೂ ಹಾಳಾಗುದಲ್ದೆ ಇದ್ದವರನ್ನೂ ಹಾಳು ಮಾಡ್ತ್ಯಾ..ಮೊನ್ನೆ ಎಕ್ಸಾಮ್ನಲ್ಲಿ ಮಾರ್ಕ್ ಎಷ್ಟು ಗೊತ್ತಾ ನಿಂಗೆ? ನಾವು ನಮ್ಮ ಎಲ್ಲಾ ಕೆಲಸ ಬಿಟ್ಟು ಬಂದು ನಿಮಗೆ ಒಳ್ಳೆದಾಗಲಿ (?) ಅಂತ ಸ್ಪೆಷಲ್ ಕ್ಲಾಸ್ ತಗೋಂಡ್ರೆ, ನೀನು ಮಾತ್ರ ಯಾವುದೇ ಚಿಂತೆ ಇಲ್ಲದೆ ಬೇರೆಯವರಿಗೂ ಉಪದ್ರ ಕೊಡ್ತ್ಯಲ್ಲಾ......” ಅಬ್ಬಾ.. ನನಿಗಂತೂ ಕಿವಿ ತೂತಾಗುತ್ತಿದೆಯೇನೋ ಅನ್ನಿಸಿತು. </span><br /><span style="color: rgb(51, 51, 255);">ಆದರೆ ಅವರು ಒಂದು ಮಾತು ಹೇಳಿದಾಗಲಂತೂ ನನ್ನ ಎದೆ ಡವಕ್ಕಾಯಿತು. </span><br /><span style="color: rgb(51, 51, 255);">“ನಾಡ್ದು ಪೇರೆಂಟ್ಸ್ ಮೀಟಿಂಗ್ ಬಂದಾಗ ನಿನ್ನ ಅಪ್ಪನತ್ರ ಮಾತಾಡ್ತೇನೇ...” </span><br /><span style="color: rgb(51, 51, 255);">“ಅಯ್ಯೋ ದೇವರೇ ಬಂತಲ್ಲಾ ನನಗೆ ಕೇಡುಗಾಲ” ಎಂದು ಯೋಚಿಸುತ್ತಿದ್ದ ನನಗೆ ಆ ರಾತ್ರಿ ನಿದ್ದೆ ಕೂಡ ಬಂದಿರ್ಲಿಲ್ಲ. ಅವತ್ತಿಡೀ ಆ ಮಿಸ್ನ ಮಂಗಳಾರತಿಯೇ ನನ್ನ ಕಣ್ಮುಂದೆ ಬಂದು ಓಡಾಡುತ್ತಿತ್ತು. ಕ್ಲಾಸಿನುದ್ದಕ್ಕೂ ನಾನು ನಿಂತುಕೊಂಡೇ ಇದ್ದೆ. ೩೦ ನಿಮಿಷಗಳ ಆ ಪ್ರಹಸನದ ಬಳಿಕ ಮಿಸ್ ಪಾಠ ಮುಂದುವರಿಸಿದ್ರು.. ಶಾಲೆ ಬಿಟ್ಟು ಮನೆಗೆ ಹೋಗ್ಬೇಕಾದ್ರೆ ನನ್ನ ಫ್ರೆಂಡ್ಸ್ ಎಲ್ಲಾ; ಅಂತೂ ಕ್ಲಾಸ್ನಲ್ಲಿ ನಮಿಗೆ ನಿದ್ದೆ ಬಾರದ ಹಾಗೆ ಮಾಡಿದ್ದಕ್ಕೆ ಥ್ಯಾಂಕ್ಸ್ ಹೇಳುತ್ತಿದ್ದಾಗ; ಮನಸ್ಸಿನ ಒಂದು ಮೂಲೆಯಲ್ಲಿ ಹೆಮ್ಮೆಯೆನಿಸದೇ ಇರಲಿಲ್ಲ!</span><br /><br /><span style="color: rgb(51, 51, 255);">ಆಯ್ತು.. ಸೋಮವಾರ ಬೆಳಿಗ್ಗೆ ಶಾಲೆಗೆ ಬೇಗ ಬಂದಿದ್ದೆ. ನನ್ನ ಕ್ಲಾಸ್ಮೇಟ್ ಸುಧಾಕರ್ ಮತ್ತು ನಾನು ಹೆಚ್ಚಾಗಿ ೮ ಗಂಟೆಗೆ ಸ್ಕೂಲ್ಗೆ ಬರುತ್ತಿದ್ದೆವು. ಬಂದವ ನಾನು ಮೊದಲು ಟಾಯ್ಲೆಟ್ಗೆ ಮೂತ್ರ ಹೊಯ್ಯಲು ಹೋಗುತ್ತಿದ್ದೆ. ಮೂತ್ರ ಹೊಯ್ಯುತ್ತಿದ್ದಾಗಲೇ ಈ ಸುಧಾಕರ ಬಂದು; “ಹೇ ರಾಘವ ಮಿಸ್ ಈಸ್ ಕಾಲಿಂಗ್ ಯು” ಎಂದು ಮತ್ತೊಂದು ಶಾಕ್ ನೀಡಿದ. ಅವತ್ತು ಬೆಳಗ್ಗೆ ಮಿಸ್ನ ನೋಡಿದ್ರೂ ನಾನು ಗುಡ್ಮಾರ್ನಿಂಗ್ ಹೇಳಿರಲಿಲ್ಲ. ಹಿಂದಿನ ದಿನದ ಸಿಟ್ಟು ಇನ್ನೂ ಆರದಿರದಿದ್ದಾಗ; ಮಿಸ್ಗೆ ‘ಗುಡ್ ಮಾರ್ನಿಗ್’ ಬೇಕೆಂದೇ ನಾನು ಹೇಳಿರಲಿಲ್ಲ. ಅಷ್ಟು ಸಾಕಲ್ವಾ ಮಿಸ್ಗೆ...ತಗೋಳಿ...ಡಿಪಾರ್ಟ್ಮೆಂಟ್ಗೆ ನನ್ನ ಕರೆಸಿದರು. ಇತ್ತ ಅರ್ಧ ಮೂತ್ರ ಬಂದದ್ದು, ಹಾಗೇ ಬಾಕಿಯಾಯ್ತು.. ಮುಂದೆ ಮೂತ್ರ ಬರೆಲೇ ಇಲ್ಲ. ಪ್ಯಾಂಟ್ ಝಿಪ್ ಹಾಕಿ ಸೀದಾ ಡಿಪಾರ್ಟ್ಮೆಂಟ್ಗೆ ಹೋದೆ. </span><br /><br /><span style="color: rgb(51, 51, 255); font-weight: bold;">ಬೆಳಗ್ಗಿನ ಮುಹೂರ್ತ: ೮-೪೦ರ ಸಮಯ.</span><br /><span style="color: rgb(51, 51, 255); font-weight: bold;">ಅವತ್ತಿನ ಸೇವೆ ಆರಂಭ... </span><br /><br /><span style="color: rgb(51, 51, 255);">“ಟೀಚರ್ಸ್ಗೆ ರೆಸ್ಪೆಕ್ಟ್ ಕೊಡಲಿಕ್ಕೆ ಬರದವ್ನು ನೀನೆಂಥ ಸಂಸ್ಕೃತಿ ಕಲ್ತಿದ್ದಿ? ಬಾರೀ ಸಿಟ್ಟು ಬರ್ತದಲ್ಲಾ ನಿಂಗೆ? ಮಿಸ್ ಬಂದ್ರೆ ಗುಡ್ ಮಾರ್ನಿಂಗ್ ಹೇಳದಷ್ಟು ದೊಡ್ಡ ಜನಾ ಆಗಿದ್ಯಾ ನೀನು...?” ಹಾಗೇ ಬೈದು ಬೈದು...ಗಂಟೆ ಒಂಭತ್ತಾಗಿತ್ತು.. ಬೇರೆ ಕ್ಲಾಸ್ನವರು ಬಂದವ್ರೆಲ್ಲಾ ನನ್ನನ್ನು ನೋಡುತ್ತಲೇ ಇದ್ದರು.. ಆ ದಿನ ನನಗೆ ನಿಜವಾಗಲೂ ನಾಚಿಕೆಯಾಗಿತ್ತು...ನಾನು ಜೋರಾಗಿ ಅತ್ತಿದ್ದೆ ಕೂಡ...</span><br /><span style="color: rgb(51, 51, 255);">“ಹೋಗಿ ಹೆಡ್ಮಾಸ್ಟರ್ ಹತ್ತಿರ ಮಾತಾಡು” ಎಂದರು ಮಿಸ್..</span><br /><span style="color: rgb(51, 51, 255);">ನೇರ ಎಚ್.ಎಂ. ಬಳಿ ಹೋದಾಗ, ಅವರು “ನಾನು ನಿನ್ನ ಅಪ್ಪನತ್ರ ಹೇಳ್ತೇನೆ” ಅಂದವರು ಮನೆ ನಂಬರ್ ಕೇಳಿದರು.. ಅಯ್ಯೋ... ನನಗೆ ಭಯವಾಗಿ ಹೋಗಿತ್ತು. ಮನೆಯಲ್ಲಿ ಫೋನ್ ಇಲ್ಲ ಎಂದು ಸುಳ್ಳು ಹೇಳಿದೆ. <span style="font-weight: bold;">“ಗೋ ಗೋ...ಗೋ ಟು ಕ್ಲಾಸ್...ಗೆಟ್ ಲಾಸ್ಟ್...”</span> ಅಂತ ಎಚ್.ಎಂ. ಹೇಳಿದಾಗ ಆ ನಂತರ ಹೋದವನು..ದಿನವಿಡೀ ಯಾವ ಕಾರಣಕ್ಕೂ ಟೀಚರ್ಸ್ ಡಿಪಾರ್ಟ್ಮೆಂಟ್ಗೆ ಮುಖ ಕೂಡ ಹಾಕಿರಲಿಲ್ಲ..</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com6tag:blogger.com,1999:blog-2818153219058834250.post-89567719945805892732009-04-27T02:58:00.000-07:002009-04-27T03:18:36.270-07:00<span style="color: rgb(153, 102, 51);font-size:180%;" ><span style="font-weight: bold;">ಇವರೂ ಆಡುತ್ತಿರುವುದು ಕ್ರಿಕೆಟ್ ಅಲ್ಲವೇ?</span></span><br /><br /><br /><div style="text-align: left;"><span style="color: rgb(0, 0, 153);font-size:100%;" >ಆಸ್ಟ್ರೇಲಿಯದ ಸಿಡ್ನಿ ಓವಲ್ನಲ್ಲಿ ಮೊನ್ನೆ ಇಂಗ್ಲೆಂಡ್ ಮಹಿಳೆಯರ ಮೇಲಾಟ. ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿದ ಇಂಗ್ಲೆಂಡ್ ತಂಡ</span><span style="color: rgb(0, 0, 153);font-size:100%;" >ದ ಮಹಿಳೆಯರು ಹರ್ಷದ ಹೊನಲಲ್ಲಿ ತೇಲುತ್ತಿದ್ದರು. ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ </span><br /></div><div style="text-align: left;"><span style="color: rgb(0, 0, 153);font-size:100%;" >ಮಣ್ಣು ಮುಕ್ಕಿಸಿ ಮಿನುಗುವ ವಿಶ್ವ</span><span style="color: rgb(0, 0, 153);font-size:100%;" >ಕಪ್</span><span style="color: rgb(0, 0, 153);font-size:100%;" > ಕಿರೀಟವನ್ನು ಆಂಗ್ಲರು ಮುಡಿ</span><span style="color: rgb(0, 0, 153);font-size:100%;" >ಗೇರಿಸಿಕೊಂಡ ಆ </span><span style="color: rgb(0, 0, 153);font-size:100%;" >ಕ್ಷಣ ವಿಶ್ವ ಕ್ರಿಕೆಟ್ನಲ್ಲಿ ಇಂಗ್ಲೆಂಡ್ಗೆ </span><span style="color: rgb(0, 0, 153);font-size:100%;" >ಮರೆಯಲಾಗದ ಅಪರೂಪದ ಕ್ಷಣ. ಇಂಗ್ಲೆಂಡ್ ಪುರುಷರ ಕ್ರಿಕೆಟ್ ತಂಡ ಇದುವರೆಗೆ ಒಂದು ವಿಶ್ವಕಪ್ ಕೂಡಾ ಗೆಲ್ಲಲಾಗದ ವಿಪರ್ಯಾಸದ </span><span style="color: rgb(0, 0, 153);font-size:100%;" >ನಡುವೆ ಮಹಿಳೆಯ</span><span style="color: rgb(0, 0, 153);font-size:100%;" >ರು ವಿಶ್ವ ಕ್ರಿಕೆಟ್ನಲ್ಲಿ ಮೂರನೇ ಬಾರಿ ದಿಗ್ವಿಜಯ ಸಾಧಿಸಿದ್ದು ಇಡೀ ಇಂಗ್ಲೆಂಡ್ಗೆ ದಕ್ಕಿದ ಬಹುದೊಡ್ಡ ಕೀರ್ತಿ. ಗೆಲುವಿನ ರನ್</span><span style="color: rgb(0, 0, 153);font-size:100%;" > ಬಾರಿಸುತ್ತಿದ್ದಂತೆ ಶಾಲೆಟ್ ಎಡ್ವರ್ಡ್ಸ್ ನೇತೃತ್ವದ</span><span style="color: rgb(0, 0, 153);font-size:100%;" > ಇಂಗ್ಲೆಂಡ್ ಮಹಿಳೆಯರು ಆಸ್ಟ್ರೇಲಿಯದ ಮೈದಾನದಲ್ಲಿ ಕುಣಿದು ಕುಪ್ಪಳಿಸುತ್ತಿದ್ದರು. ಎಡ್ವರ್ಡ್ಸ್ ಕಣ್ಣಲ್ಲಿ ನೀರು ಹರಿದಿತ್ತು. ಆಕೆಯ ವೃತ್ತಿ ಬದುಕಿನ ಅಪರೂಪದ ಗಳಿಗೆಗೆ ಮಾರ್ಚ್ ೨೨ರಂದು ಓವಲ್ ಸಾಕ್ಷಿಯಾ</span><span style="color: rgb(0, 0, 153);font-size:100%;" >ಗಿ</span><span style="color: rgb(0, 0, 153);font-size:100%;" >ತ್ತು. ಒಟ್ಟಾರೆ ಮಾಧ್ಯಮಗಳ ನಿರ್ಲಕ್ಷದಿಂದ ನಮ್ಮ ದೇಶದಲ್ಲಿ ಹೇಳುವಷ್ಟರ ಮಟ್ಟಿಗೆ ಸುದ್ದಿಯಾಗದ ಮಹಿಳೆಯರ ವಿಶ್ವಕಪ್</span><span style="color: rgb(0, 0, 153);font-size:100%;" > ಯಾ</span><span style="color: rgb(0, 0, 153);font-size:100%;" >ವುದೇ ಅಡತಡೆಗಳಿಲ್ಲದೆ ಯಶಸ್ವಿಯಾಗಿ ನಡೆದದ್ದು ಎಲ್ಲರಲ್ಲೂ</span><span style="color: rgb(0, 0, 153);font-size:100%;" > ಖುಷಿ ತಂದಿದೆ.<br /><br /></span><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEg7ZXSAoNXMhDSVshJi19jESvKlkprhxWUzz910wgqP5GRm98wIwn30T9csjom17qx-LPnTHyWdzCLqFoLDfZ9NwJXWz_k5kVVBvhBmdQM1gyj9mVZSLI90jldnsm-HawGSRvki7b_z0ms/s1600-h/australia-cricket-india-2009-3-14-1-30-8.jpg"><img style="margin: 0px auto 10px; display: block; text-align: center; cursor: pointer; width: 320px; height: 190px;" src="https://blogger.googleusercontent.com/img/b/R29vZ2xl/AVvXsEg7ZXSAoNXMhDSVshJi19jESvKlkprhxWUzz910wgqP5GRm98wIwn30T9csjom17qx-LPnTHyWdzCLqFoLDfZ9NwJXWz_k5kVVBvhBmdQM1gyj9mVZSLI90jldnsm-HawGSRvki7b_z0ms/s320/australia-cricket-india-2009-3-14-1-30-8.jpg" alt="" id="BLOGGER_PHOTO_ID_5329313242388250338" border="0" /></a></div><br /><span style="color: rgb(0, 0, 153);font-size:100%;" >ಭಾರತದ ಮಹಿಳಾ ತಂಡ ಸರಣಿಯ</span><span style="color: rgb(0, 0, 153);font-size:100%;" >ಲ್ಲಿ ಅಮೋಘ ಪ್ರದರ್ಶನ ತೋರಿದ್ದರೂ ಫೈನಲ್ ತಲುಪುವಲ್ಲಿ ಸಫಲವಾಗಲಿಲ್ಲ. ಹಾಗಿದ್ದರೂ ಟೂರ್ನಿಯಲ್ಲಿ ಭಾರತದ ಮಹಿಳೆಯರ ಸಾಧನೆ ಕಡೆ ಕಣ್ಣು </span><span style="color: rgb(0, 0, 153);font-size:100%;" >ಹೊರಳಿಸಿದರೆ ಅವರ ನಿರ್ವಹಣೆ ಬಗ್ಗೆ ಎರಡು ಮಾತಿಲ್ಲ. ವಿಶ್ವದ ನಂಬರ್ ಒನ್ ಬೌಲರ್ ಜುಲಾನ್ ಗೋಸ್ವಾಮಿ ಸಾರಥ್ಯದ ಭಾರತ ತಂಡದ ಸರಾಸರಿ ನಿರ್ವಹಣೆ ಹೊಸ ಭರವಸೆ ಮೂಡಿಸಿದೆ. ಸೂಪರ್ಸಿಕ್ಸ್ನಲ್ಲಿ ವೆಸ್ಟ್ಇಂಡೀಸ್ ತಂಡವನ್ನು ೮೫ ರನ್ಗಳಿಗೆ ಕಟ್ಟಿಹಾಕಿ ಬಗ್ಗುಬಡಿದರೂ, ಇನ್ನೊಂದು ವಿಭಾಗದಲ್ಲಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನವನ್ನು ಸೋಲಿಸಿ, ಫೈನಲ್ಗೆ ಮುಖಮಾಡಿದ್ದರಿಂದ ಭಾರತದ ಮುಂದಿದ್ದ ಅವಕಾಶಗಳು ನೆಲಕಚ್ಚಬೇಕಾಯಿತು. ಆದರೆ ಮೂರನೇ ಸ್ಥಾನಕ್ಕಾಗಿ ಆಸ್ಟ್ರೇಲಿಯ ವಿರುದ್ಧ ನಡೆದ ಸೆಣಸಾಟದಲ್ಲಿ ಭಾರತ ಮತ್ತೊಮ್ಮೆ ವಿಜಯದ ನಗೆ ಬೀರಿತ್ತು.</span><span style="color: rgb(0, 0, 153);font-size:100%;" > ಕಾಂಗರೂಗಳನ್ನು ೧೪೨ ರನ್ನುಗಳಿಗೆ ನಿಯಂತ್ರಿಸಿದ್ದ ಭಾರತದ ಮಹಿಳೆಯರು ಯಶಸ್ವಿಯಾಗಿ ರನ್ ಚೇಸ್ ಮಾಡಿದ್ದರು.<br /><br />ಭಾರತದ ಮಹಿಳೆಯರು ಇಷ್ಟೆಲ್ಲಾ ಸಾಧನೆ ಮಾಡಿದ್ದರೂ, ಕ್ರಿಕೆಟನ್ನು ದೇವರಂತೆ ಪೂಜಿಸುವ ಭಾರತದಲ್ಲಿ ಅದು ಸುದ್ದಿಯಾಗಲೇ ಇಲ್ಲ. ಪಾಕಿಸ್ತಾನ, ಆಸ್ಟ್ರೇಲಿಯ, ಶ್ರೀಲಂಕಾ, ವೆಸ್ಟ್ಇಂಡೀಸ್ ತಂಡಗಳನ್ನು ಭಾರತದ ಮಹಿಳೆಯರು ಸೋಲಿಸಿದರು ಎಂಬುದು ಗಮನಾರ್ಹ ಅಂಶವಾಗಿದ್ದರೂ, ಸುದ್ದಿ ಮಾಧ್ಯಮಗಳಿಗೆ ಇದು ಸುದ್ದಿಯಾಗಲಿಲ್ಲ. ಕಳೆದ ಬಾರಿಯ ವಿಶ್ವಚಾಂಪಿಯನ್ ಕಾಂಗರೂಗಳನ್ನು ಭಾರತ ಎರಡು ಬಾರಿ ಯಶಸ್ವಿಯಾಗಿ ಮಣಿಸಿದರೂ ಮಾಧ್ಯಮಗಳಲ್ಲಿ ಅವು ಬಿತ್ತರವಾದದ್ದು ಕೆಳಸುದ್ದಿಯಾಗಿ ಮಾತ್ರ. ಎಲ್ಲೋ ಒಂದೆರಡು ಮಾಧ್ಯಮಗಳು ೨೦-೨೫ ಸೆಕೆಂಡುಗಳ ಸುದ್ದಿ ನೀಡಿದ್ದು ಬಿಟ್ಟರೆ, ಮಹಿಳೆಯರ ಈ ಸಾಧನೆ ಯಾಕೋ ಮಾಧ್ಯಮಗಳಿಗೆ ಸುದ್ದಿಯಾಗದೇ ಇದ್ದದ್ದು ವಿಪರ್ಯಾಸವೇ ಸರಿ. ನೀವು ಗಮನಿಸಿರಬಹುದು, ವಿಶ್ವಕಪ್ ಕ್ರಿಕೆಟ್ ಮಧ್ಯೆ ಭಾರತ ಪುರುಷರ ತಂಡ ನ್ಯೂಜಿಲೆಂಡ್ ಪ್ರವಾಸದಲ್ಲಿತ್ತು. ಏಕದಿನ ಹಾಗೂ ಟೆಸ್ಟ್ ಪಂದ್ಯಗಳ ವರದಿಗಳು ಮಾಧ್ಯಮಗಳಲ್ಲಿ ಸ್ಪರ್ಧೆಗೆ ಬಿದ್ದಂತೆ ಬಿ</span><span style="color: rgb(0, 0, 153);font-size:100%;" >ತ್ತರವಾಗುತ್ತಿದ್ದವು.<br /><br />ನಾಲ್ಕು ವರ್ಷಗಳಿಗೊಮ್ಮೆ ಸಂಭವಿಸುವ ವಿಶ್ವಕಪ್ ಕ್ರಿಕೆಟ್, ಕ್ರಿಕೆಟ್ ಆಡುವ ಎಲ್ಲಾ ದೇಶದ ಮಹಿಳಾ ಕ್ರಿಕೆಟ್ ಮಣಿಗಳಿಗೆ ತಮ್ಮ ಸಾಮರ್ಥ್ಯ, ಕೌಶಲ್ಯ ಪ್ರದರ್ಶನಕ್ಕೆ ಒಂದು ವೇದಿಕೆಯಾಗುತ್ತದೆ. ಅಪರೂಪಕ್ಕೆ ನಡೆಯುವ ಇಂತಹ ಟೂರ್ನಿಗಳನ್ನು ಸಹಜವಾಗಿ ಜನರು ನೋಡಬಯಸುತ್ತಾರೆ. ಆ ಬಗ್ಗೆ ಹೆಚ್ಚಿನದನ್ನು ತಿಳಿಯಬಯಸುತ್ತಾರೆ ಕೂಡ. ಆದರೆ ‘ಮಹಿಳಾ ಕ್ರಿಕೆಟ್ ಬಗ್ಗೆ ಯಾರು ಕೇಳ್ತಾರೆ ಮಾರಾಯ್ರೆ’ ಅನ್ನುವ ಮಾಧ್ಯಮಗಳ ಪೂರ್ವಗ್ರಹಪೀಡಿತ ಮನೋಭಾವವೇ ಜನರನ್ನೂ ಕೂಡ ಅದರಿಂದ ದೂರ ಉಳಿಯುವಂತೆ ಮಾಡಿವೆ.<br /></span><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEjuhPivGgxK30G0M8MuSomdb0lWegv8qlPq_W8Fl48bmhMz9uFqujcJ_KjySkNwske51tOlo974NSBSqvKbTjfhft66pdxjKza9b-v-5cjAmKZKf-vfHTpp2G8Hrrlq-sa3upIWrjGNe6E/s1600-h/260808-mithali_26082008.jpg"><img style="margin: 0pt 0pt 10px 10px; float: right; cursor: pointer; width: 132px; height: 121px;" src="https://blogger.googleusercontent.com/img/b/R29vZ2xl/AVvXsEjuhPivGgxK30G0M8MuSomdb0lWegv8qlPq_W8Fl48bmhMz9uFqujcJ_KjySkNwske51tOlo974NSBSqvKbTjfhft66pdxjKza9b-v-5cjAmKZKf-vfHTpp2G8Hrrlq-sa3upIWrjGNe6E/s320/260808-mithali_26082008.jpg" alt="" id="BLOGGER_PHOTO_ID_5329311541661494418" border="0" /></a><br /><span style="color: rgb(0, 0, 153);font-size:100%;" >ಮಹಿಳಾ ವಿಶ್ವಕಪ್ ಕ್ರಿಕೆಟ್ಗೆ ೩೬ ವರ್ಷಗಳ ಇತಿಹಾಸವೇ ಇದೆ. ೧೯೭೩ರಲ್ಲಿ ಆರಂಭವಾದ ಮೊದಲ ವಿಶ್ವಕಪ್ ಇದುವರೆಗೆ ತನ್ನ ಪಯಣವನ್ನು ಯಶಸ್ವಿಯಾಗಿ ಮುನ್ನಡೆಸುತ್ತಾ ಬಂದಿದೆ. ಹಾಗೆ ನೋಡಿದರೆ ಪುರುಷರ ವಿಶ್ವಕಪ್ ಆರಂಭವಾದದ್ದು ಮಹಿಳಾ ವಿಶ್ವಕಪ್ ಆದ ಎರಡು ವರ್ಷದ ಬಳಿಕ. ಆದರೆ ‘ಪುರುಷ ಪ್ರಧಾನ’ ಎಂಬ ಮಾತಿಗೆ ತಕ್ಕಂತೆ ಇಂದು ಮುಖ್ಯವಾಹಿನಿಯಲ್ಲಿ ಪ್ರಧಾನವಾಗಿರುವುದು ಪುರುಷರ ಕ್ರಿಕೆಟ್ ಮಾತ್ರ. ಮಹಿಳಾ ಕ್ರಿಕೆಟ್ಗೆ ಪುರುಷರ ಕ್ರಿಕೆಟ್ಗೆ ನೀಡಿ</span><span style="color: rgb(0, 0, 153);font-size:100%;" >ದಷ್ಟು ಆದ್ಯತೆಯನ್ನು ಇದುವೆರೆಗೆ ನೀಡಿಲ್ಲ ಎಂಬುದು ಮಹಿಳೆಯರ ಪಾಲಿಗೆ ಅರಗಿಸಿಕೊ</span><span style="color: rgb(0, 0, 153);font-size:100%;" >ಳ್ಳಲಾಗದ ಸತ್ಯವಾದರೂ, ’ಮಹಿಳಾ ಪ್ರಾತಿನಿಧ್ಯ’ ಎಂದು ಮಾತನಾಡುವ ನಮ್ಮಲ್ಲಿನ ಬಹುತೇಕ ಪುರುಷರು ಇಂತಹಾ ವಿಷಯಗಳಲ್ಲಿ ಮೌನವನ್ನೇ ಉತ್ತರವಾಗಿಸುತ್ತಾರೆ.<br /><br />ಭಾರತೀಯ ಕ್ರಿಕೆಟ್ನ್ನು ಶ್ರೀಮಂತಗೊಳಿಸಿದ ಕೀರ್ತಿ ಕೇವಲ ಪುರುಷ ಕ್ರಿಕೆಟ್ ಆಟಗಾರರಿಗೆ ಮಾತ್ರವಲ್ಲ. ಮಹಿಳೆಯರದ್ದು ಇದರಲ್ಲಿ ಪಾಲಿದೆ ಎಂಬುದಕ್ಕೆ ಜಾಗತಿಕ ಕ್ರಿಕೆಟ್ನಲ್ಲಿ ಮಹಿಳಾ ಕ್ರಿಕೆಟಿಗರು ಮಾಡಿದ ಸಾಧನೆಯತ್ತ ದೃಷ್ಟಿಹಾಯಿಸಿದರೆ ಅರ್ಥವಾಗುತ್ತದೆ. ಪ್ರಸ್ತುತ ಭಾರತ ತಂಡದ ನಾಯಕಿ ಜುಲಾನ್ ಗೋಸ್ವಾಮಿ ಅವರು ಈಗ ವಿಶ್ವದ ನಂಬರ್ ಒನ್ ಬೌಲರ್ ಆಗಿದ್ದಾರೆ. ಹಾಗೇ ಉಪಯುಕ್ತ ಆಲ್ರೌಂಡರ್ ಆಗಿರುವ ಗೋಸ್ವಾಮಿ ರ್ಯಾಂಕಿಂಗ್ ಪಟ್ಟಿಯಲ್ಲಿ ಒಂಭತ್ತನೇ ಸ್ಥಾನ ಪಡೆದಿದ್ದಾರೆ. ಮಿಥಾಲಿ ರಾಜ್ ೩೦೦೦ ಸಾವಿರ ರನ್ ಗಡಿದಾಟಿಸಿದ ವಿಶ್ವದ ಐದನೇ ಆಟಗಾರ್ತಿ ಹಾಗೂ ಐಸಿಸಿ ರ್ಯಾಂಕಿಂಗ್ನ ಬ್ಯಾಟಿಂಗ್ ವಿಭಾಗದಲ್ಲಿ ಎರಡನೇ ಸ್ಥಾನ ಗಳಿಸಿದ್ದಾರೆ. ಆಲ್ರೌಂಡರ್ ಪಟ್ಟಿಯಲ್ಲಿ ಸ್ಥಾನ ಪಡೆದ ಮತ್ತೊಬ್ಬ ಆಟಗಾರ್ತಿ ರುಮೇಲಿ ದಾರ್. ವಿಶ್ವಕಪ್ ಟೂರ್ನಿ ಬಳಿಕ ಐಸಿಸಿ ಬಿಡುಗಡೆ ಮಾಡಿದ ವಿಶ್ವ ಕಪ್ ೧೧ ತಂಡದಲ್ಲಿ ಭಾರತದ ಇಬ್ಬರು ಆಟಗಾರರು ಸ್ಥಾನ ಪಡೆದಿರುವುದೂ ಗಮನಾರ್ಹ ಅಂಶ. ಮಿಥಾಲಿ ರಾಜ್ ಹಾಗೂ ಪ್ರಿಯಾಂಕಾ ರಾಯ್ ಸ್ಥಾನ ಪಡೆದ ಆ ಇಬ್ಬರು ಆಟಗಾರರು.<br /><br />ವರ್ಷದಿಂದ ವರ್ಷಕ್ಕೆ ಭಾರತ ಮಹಿಳಾ ಕ್ರಿಕೆಟ್ ಭರವಸೆ ಮೂಡಿಸುತ್ತಿದ್ದರೂ ಎಲ್ಲೋ ಒಂದು ಕಡೆ ನಾವು ಆ ವಿಭಾಗವನ್ನು ಕಡೆಗಣಿಸುತ್ತಿದ್ದೇವೆ ಎಂಬ ಭಾವನೆ ಕಾಡುತ್ತಿದೆ.<br /><br />ವಿಶ್ವಕಪ್ ಗೆಲ್ಲದಿದ್ದರೂ ತೃಪ್ತಿದಾಯಕ ಪ್ರದರ್ಶನ ತೋರಿದ್ದಾರೆ ಎಂಬ ಮಾತ್ರಕ್ಕಾದರೂ ನಮ್ಮ ಮಾಧ್ಯಮಗಳು ಈ ಆಟಗಾರರನ್ನು ಗುರುತಿಸಬಹುದಿತ್ತು. ಆದರೆ ಇಲ್ಲಿಯವರೆಗೆ ಒಂದು ಮಾಧ್ಯಮದಲ್ಲಾಗಲಿ, ಒಬ್ಬ ಆಟಗಾರ್ತಿಯ ಸಂದರ್ಶನ ಕೂಡ ಬಿತ್ತರವಾಗಿಲ್ಲ, ಪ್ರಕಟವಾಗಿಲ್ಲ. ಇಂಗ್ಲೆಂಡ್ ಮಹಿಳೆಯರು ಉನ್ನತ ಮಟ್ಟದ ಪ್ರದರ್ಶನ ತೋರಲು ಅಲ್ಲಿ ದೊರಕಿರುವ ಪ್ರೋತ್ಸಾಹವೂ ಪ್ರಮುಖ ಕಾರಣ. ಆದರೆ ಭಾರತದಲ್ಲಿ ಹೆಚ್ಚಿನ ಮಂದಿಗೆ ವಿಶ್ವಕಪ್ ಕ್ರಿಕೆಟ್ ಆಸ್ಟ್ರೇಲಿಯದಲ್ಲಿ ನಡೆಯುತ್ತಿದೆ ಎಂದು ತಿಳಿದದ್ದೇ ಇಎಸ್ಪಿನ್ ಹಾಗೂ ಸ್ಟಾರ್ ಚಾನೆಲ್ಗಳಲ್ಲಿ ಕ್ರಿಕೆಟ್ ನೇರ ಪ್ರಸಾರ ಕಂಡ ನಂತರ! ಈ ದುರಂತಕ್ಕೆ ನಗಬೇಕೋ, ಅಳಬೇಕೋ ಎಂದು ತಿಳಿಯುತ್ತಿಲ್ಲ.<br /><br />ಒಂದು ವೇಳೆ ಅದೇ ಪುರುಷರ ತಂಡವಾಗಿದ್ದರೆ, ಅದೇನು ಸುದ್ದಿ, ಸಂದರ್ಶನ...ಇಡೀ ಸುದ್ದಿ ವಾಹಿನಿಗಳು ಆಟಗಾರರ ಬೆನ್ನುಬೀಳುತ್ತಿದ್ದವು. ಬೇಕಾದರೆ ಭಾರತ ಪುರುಷರ ಕ್ರಿಕೆಟ್ ತಂಡ ನ್ಯೂಜಿಲೆಂಡ್ನಿಂದ ವಾಪಸಾಗುವಾಗ ವಿಮಾನ ನಿಲ್ದಾಣದಲ್ಲೇ ಮಾಧ್ಯಮಗಳು ಮೈಕ್ ಹಿಡಿದು ಕಾಯುವುದನ್ನು ಕಾಣಬಹುದು.<br /><br />ಮತ್ತೊಂದು ಬೇಸರದ ಸಂಗತಿ ಎಂದರೆ ನಮ್ಮ ಬಹುತೇಕ ಮಾಧ್ಯಮಗಳು ಆಸ್ಟ್ರೇಲಿಯದಲ್ಲಿ ಮಹಿಳಾ ವಿಶ್ವಕಪ್ ಕ್ರಿಕೆಟ್ ನಡೆಯುತ್ತಿದ್ದರೂ ತಮ್ಮ ಯಾವುದೇ ಪ್ರತಿನಿಧಿಯನ್ನು ಅಲ್ಲಿಗೆ ಕಳುಹಿಸಿಲ್ಲ. ಅದೇ ನ್ಯೂಜಿಲೆಂಡ್ನಲ್ಲಿ ಮಾಧ್ಯಮಗಳ ಪ್ರವಾಹವೇ ಹರಿದಿದೆ! ಮಹಿಳಾ ಕ್ರಿಕೆಟ್-ಪುರುಷರ ಕ್ರಿಕೆಟ್ಗೆ ಇದೇ ವ್ಯತ್ಯಾಸ!<br /><br />ಮಾಧ್ಯಮಗಳ ಹೊಣೆಗೇಡಿ ವರ್ತನೆಯೂ ಒಂದು ರೀತಿಯಲ್ಲಿ ಪ್ರತಿಭೆಗಳ ಕೊಲೆಗೆ ಕಾರಣವಾಗುತ್ತವೆ ಎಂಬುದನ್ನು ನಾವು ಒಪ್ಪಲೇಬೇಕು. ಒಟ್ಟಾರೆ ಮಹಿಳಾ ಹಾಕಿಯಲ್ಲಿ ನಿರೀಕ್ಷಿತ ಪ್ರಮಾಣದ ಸಾಧನೆ ತೋರದೆ ತತ್ತರಿಸಿಹೋಗಿರುವ ಭಾರತ ಕನಿಷ್ಠ ಕ್ರಿಕೆಟ್ನಲ್ಲಾದರೂ ಭರವಸೆಯ ಪ್ರದರ್ಶನ ನೀಡುತ್ತಿದೆ ಎಂಬ ಸಂತೋಷಕ್ಕಾದರೂ ಈ ಕ್ರಿಕೆಟ್ ಮಣಿಗಳನ್ನು ನಾವು ಪ್ರೋತ್ಸಾಹಿಸಬೇಕಾದ ಕಾಲ ಕೂಡಿ ಬಂದಿದೆ. ಬಿಸಿಸಿಐ ಹಾಗೂ ಸರ್ಕಾರವೂ ಈ ಬಗ್ಗೆ ಚಿಂತಿಸಬೇಕಿದೆ. ಬ್ಯಾಟಿಂಗ್ ತಂತ್ರಗಾರಿಕೆ, ಕ್ಷೇತ್ರರಕ್ಷಣೆಯಲ್ಲಿ ಸುಧಾರಣೆ ಹಾಗೂ ಬೌಲಿಂಗ್ ದಾಳಿಯನ್ನು ಇನ್ನಷ್ಟು ಮೊನಚುಗೊಳಿಸಲು ಸಾಕಷ್ಟು ತರಬೇತಿ ಹಾಗೂ ಹೆಚ್ಚುವರಿ ಪಂದ್ಯಗಳನ್ನು ಆಯೋಜಿಸಬೇಕಾದ ಅನಿವಾರ್ಯತೆಯಿದೆ. ಇದರ ಜೊತೆ ಮಾಧ್ಯಮಗಳೂ ತಮ್ಮ ಕರ್ತವ್ಯ ಮೆರೆಯಬೇಕಿದೆ. ಆದರೆ ಕೇವಲ ಟಿಆರ್ಪಿಯತ್ತ ಕಣ್ಣಿಟ್ಟೇ ಸುದ್ದಿ ಮಾಡುವ ಮಾಧ್ಯಮಗಳಿಗೆ ಇದು ಅರ್ಥವಾಗುವುದೇ? </span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com0tag:blogger.com,1999:blog-2818153219058834250.post-55441027273593796612009-02-05T21:22:00.000-08:002009-02-11T20:23:12.993-08:00<span style="font-weight: bold; color: rgb(255, 0, 0);"><span style="color: rgb(51, 204, 0);font-size:180%;" >ಬುಸುಗುಡುವ <span style="color: rgb(255, 0, 0);">ದ್ವೇಷಾಗ್ನಿ </span>ನಡುವೆ ಪ್ರೀತಿ...</span><br /><br /><br /><span style="color: rgb(51, 51, 255);">ಪ್ರಿಯೆ, </span></span><br /><br /><span style="font-weight: bold; color: rgb(51, 51, 255);font-size:180%;" >ನಾ</span><span style="color: rgb(51, 51, 255);">ಡಿದ್ದು ಫೆಬ್ರವರಿ ೧೪. ಅದು ಪ್ರೇಮಿಗಳಿಗಾಗಿ ಮೀಸಲಾದ ದಿನ ಅಂತ ಹೇಳ್ತಾರೆ. ಆದರೆ ಈ ಪತ್ರವನ್ನು ಆ ದಿನದ ಹಿನ್ನೆಲೆಯಲ್ಲಿ ಬರೆಯುತ್ತಿದ್ದೇನೆಂದು ತಿಳಿದುಕೊಳ್ಳಬೇಡ. ಏಕೆಂದರೆ ನಿನಗೇ ಗೊತ್ತು ನನಗೆ ಇಂತಹಾ ದಿನಾಚರಣೆಗಳು ಇಷ್ಟವಿಲ್ಲವೆಂಬುದು. ಪ್ರತಿದಿನವೂ ನಾವು ಪ್ರೀತಿಯನ್ನು ಪೂಜಿಸಿ ಆಚರಿಸುತ್ತಿರುವಾಗ ಇನ್ನು ಪ್ರತ್ಯೇಕ ದಿನ ಬೇಡ ಅಂತ ನೀನು ಕೂಡ ಹೇಳಿದ್ದೆ. ಹಾ...ಅದಿರಲಿ, ನಿನಗೊಂದು ವಿಷಯ ಹೇಳ್ಬೇಕು. ಅದನ್ನು ಈ ಪತ್ರದ ಮೂಲಕವೇ ಹೇಳ್ಬೇಕು ಅಂತ ಈ ಪತ್ರ ಬರೆಯುತ್ತಿದ್ದೇನೆ.</span><br /><br /><span style="color: rgb(51, 51, 255);">ಮೊನ್ನೆ ಹೀಗೆ ಆಫೀಸ್ನಲ್ಲಿ ಕುಳಿತಿದ್ದಾಗ ಥಟ್ಟನೆ ನನ್ನ ಜಿ-ಮೇಲ್ ಚಾಟ್ ಬಾಕ್ಸ್ನಲ್ಲಿ ಪ್ರೀತಿ ಕುರಿತ ಒಂದು ಸಾಲು ಬಂದು ಕೂತಿತು. ಆ ಸಾಲು ಏನೆಂದರೆ; “ಯಾವಾಗ್ಲೂ ಯಾವುದೇ ಸಂಬಂಧದ ಚೌಕಟ್ಟಿಗೆ ಸಿಗದ, ಜಾತಿ-ಧರ್ಮ-ಬಣ್ಣವೆಂಬ ಭೇದದ ಕಂದಕವನ್ನು ದಾಟಿದ, ಹೆಸರೇ ಇಲ್ಲದ ಪ್ರೀತಿ ಮಾತ್ರ ಬದುಕಿನಲ್ಲಿ ಶಾಶ್ವತವಾಗಿ ಉಳಿದುಬಿಡುತ್ತೆ”. ‘ಪ್ರೀತಿ’ ಎಂಬ ಎರಡಕ್ಷರದ ಮಾತೇ ನಮ್ಮಿಬ್ಬರ ನಡುವೆ ಕೋಟಿ ಭಾವನೆಗಳನ್ನು ಹುಟ್ಟಿಸಿರುವಾಗ ಕಾಲೇಜಿನಲ್ಲಿ ಒಟ್ಟಿಗೆ ಕಲಿಯುತ್ತಿದ್ದ ಓರ್ವ ಗೆಳತಿ ಕಳುಹಿಸಿದ್ದ ಆ ಸಾಲು ನನ್ನ ಮನವನ್ನು ಆಕರ್ಷಿಸಿತ್ತು. </span><br /><span style="color: rgb(51, 51, 255);">ಹೌದು ಅದೇ ಶಾಶ್ವತ ಪ್ರೀತಿ. ಅಲ್ಲಿರುವುದು ಸ್ವಾರ್ಥವೆಂದರೆ ಏನೆಂದೇ ಅರಿಯದ, ನಿಷ್ಕಲ್ಮಷ ಭಾವನೆಯ ಸಂಚಾರ. ಅಲ್ಲಿ ಸೃಷ್ಟಿಯಾಗುವುದು ಮನಸ್ಸು ಮನಸ್ಸುಗಳ ನಡುವಿನ ಹಚ್ಚಹಸುರಿನ ನೈಜ ಪ್ರೀತಿ ಅಷ್ಟೆ. </span><br /><br /><span style="color: rgb(51, 51, 255);">ಹಾಗಾದರೆ ಇಂತಹ ಒಂದು ಅತ್ಯಂತ ಸುಲಲಿತ, ವರ್ಣನೆಗೂ ಮೀರಿದ, ಬಾಂಧವ್ಯವನ್ನು ಗಟ್ಟಿಗೊಳಿಸುವ ಪ್ರೀತಿ ನಮ್ಮ ಕೈಗೆಟಕದಾಗಿರುವುದು ಏಕೆ? ಆ ಎರಡಕ್ಷರದ ಪ್ರೀತಿ ಬಹುದೂರದಲ್ಲಿ ನಿಂತು ಜನರೊಂದಿಗೆ ಆಟವಾಡುತ್ತಿರುವಾದದರೂ ಏಕೆ? ಬಿಸಿಲ್ಗುದುರೆಯಂತೆ ಕಾಡುತ್ತಿರುವುದು ಏಕೆ? ಮರೀಚಿಕೆಯಾಗಿ ಮನಸ್ಸಿಗೆ ನೋವುಣಿಸುತ್ತಿರುವುದು ಏಕೆ? ಇತಿಹಾಸವನ್ನೆಲ್ಲಾ ಮರೆತು ಸಂತಸದ ಭವಿಷ್ಯಕ್ಕೆ ನಾಂದಿ ಹಾಡುವ ಪ್ರೀತಿಯ ಹಿಂದೆ ಸಾವಿರಾರು ಮೈಲಿಗಟ್ಟಲೆ ಅಹರ್ನಿಶಿ ಓಡಿ ಬಂದಿದ್ದರೂ ನಮ್ಮ ಕೈಗೆ ಏಕೆ ಸಿಕ್ಕಿಲ್ಲ? </span><br /><br /><span style="color: rgb(51, 51, 255);">ಕಾಲ ಇಷ್ಟು ಬದಲಾಗಿದ್ದರೂ, ಜಗತ್ತಿನಲ್ಲಿ ಹಿಂದೆಂದೂ ಕಂಡರಿಯದಷ್ಟು ಪರಿವರ್ತನೆಯಾಗಿದ್ದರೂ, ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ನಾವು ಅರಿಯುವಷ್ಟು ದೊಡ್ಡವರಾಗಿದ್ದರೂ, ಕೆಲವು ಕಟ್ಟುಪಾಡುಗಳಿಂದ ಹೊರಬರದಿರುವುದು ಅಥವಾ ಯಾರೋ ನಮ್ಮ ಪೂರ್ವಜರು ಹಾಕಿದ ಗೆರೆಯನ್ನು ದಾಟಿ ಮುನ್ನುಗ್ಗದಿರುವುದು ಇಂತಹುದಕ್ಕೆ ಕಾರಣವಾಗಿರಬಹುದೇ? </span><br /><br /><span style="color: rgb(51, 51, 255);">ವಿಶ್ವದೆಲ್ಲೆಡೆ ಹೊತ್ತಿ ಉರಿಯುತ್ತಿರುವ ಎಲ್ಲಾ ಘರ್ಷಣೆ, ಅನಾಹುತ, ವೈರತ್ವ ಅಥವಾ ಇನ್ಯಾವುದೇ ಪರಿಯ ವಿಪರೀತಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಈ ಪ್ರೀತಿಯಿಂದ ಖಂಡಿತಾ ಸಾಧ್ಯವಿದೆ. ಅದನ್ನು ಸಾಧಿಸಲು ಇಂದು ಸಾವಿರಾರು ಮನಸ್ಸುಗಳು ತುಡಿಯುತ್ತಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಹುಳಿ ಹಿಂಡುವ ಕಾರ್ಯ, ಇನ್ನಷ್ಟು ಅನಾಹುತಗಳಿಗೆ ಎಡೆಮಾಡಿಕೊಡುತ್ತಿದೆ. </span><br /><br /><span style="color: rgb(51, 51, 255);">ಮೊನ್ನೆ ಮುಂಬೈನಲ್ಲಿ ಭಯೋತ್ಪಾದಕರು ರುದ್ರನರ್ತನಗೈದು ನೂರಾರು ಜನರನ್ನು ಬಲಿತೆಗೆದುಕೊಂಡಿದ್ದಾಗ ಮನಸ್ಸು ಕರಗಿ ಹೋಗಿತ್ತು. ಜೀವ ತೆತ್ತ ಅಮಾಯಕರ ಮೇಲೆ ಅಗಾಧ ಕನಿಕರ, ಪ್ರೀತಿ ಮೂಡಿತ್ತು. ಅದೇ ಹೊತ್ತಿಗೆ ಹಿಂದೂ-ಮುಸ್ಲಿಂ ನಡುವೆ ಅಂತರ ಮಾತ್ರ ಹೆಚ್ಚುತ್ತಲೇ ಹೋಗಿತ್ತು. ಇನ್ನು ಕಂಧಮಾಲ್, ಮಂಗಳೂರಿನಲ್ಲಿ ಮತಾಂತರ ವಿಷಯವಾಗಿ ಹಿಂದೂ-ಕ್ರಿಶ್ಚಿಯನ್ ಸಮುದಾಯದ ನಡುವೆ ದ್ವೇಷಾಗ್ನಿ ಹೊತ್ತಿ ಉರಿಯಿತು. ಹಲವಾರು ಮಂದಿ ಈ ಅಗ್ನಿಯಲ್ಲಿ ಹೊತ್ತಿ ಉರಿದರು. ಈ ಎರಡು ಸಮುದಾಯದ ನಡುವೆ ಬಹಳ ಆಳಕ್ಕೆ ಇಳಿದಿದ್ದ ದ್ವೇಷ ಇಂದು ಇನ್ನಷ್ಟು ಆಳಕ್ಕೆ ಇಳಿದಿದೆ. ಹಲವು ಮಂದಿ ಮೂಲಭೂತವಾದಿ ಸಂಘಟನೆಗಳನ್ನು ಹಿಗ್ಗಾ-ಮುಗ್ಗ ಜರೆಯುತ್ತಾ ಹೋದರೇ ವಿನಾ ಯಾರೂ ಮೂಲಭೂತ ಪ್ರಶ್ನೆಗೆ ಉತ್ತರ ಹುಡುಕಲು ಪ್ರಯತ್ನಿಸಲಿಲ್ಲ. ಅದೇನೆಂದರೆ ಜನಸಾಮಾನ್ಯರು ಕೂಡ ಏಕೆ ಇಂತಹ ದ್ವೇಷಾಗ್ನಿಗೆ ತಮ್ಮನ್ನು ಒಡ್ಡಿಕೊಳ್ಳುತ್ತಿದ್ದಾರೆ ಎಂಬುದು? ಈಗ ಪ್ರೀತಿ, ಸಹಬಾಳ್ವೆ ಎಂಬುದು ಇಲ್ಲಿ ಗಗನಕುಸುಮವಾಗಿದ್ದು, ಕೋಮುದ್ವೇಷದ ಕೆಂಪು ಜ್ವಾಲೆ ವಿಸ್ತಾರವಾಗಿ ಹರಡಿದೆ. </span><br /><br /><span style="color: rgb(51, 51, 255);">ಇನ್ನು ಗಡಿ ವಿಷಯಗಳತ್ತ ಮುಖ ಮಾಡಿದರೆ ಅಲ್ಲೂ ಪ್ರೀತಿ, ಪ್ರೇಮ ಎಂಬುದು ಮಾಯವಾಗಿದೆ ಅನ್ನಿಸುವುದಕ್ಕಿಂತ, ಪ್ರೀತಿ, ಪ್ರೇಮವನ್ನು ಕದಡುವ ಪ್ರಯತ್ನಗಳು ನಡೆಯುತ್ತಿವೆ ಎಂದನಿಸುತ್ತದೆ. ಅಲ್ಲೂ ಸಂಘಟನೆಗಳದ್ದೇ ಪಾರಮ್ಯ. ಏನೂ ಅರಿಯದ ಮುಗ್ಧ ಮಂದಿಯ ತಲೆಯಲ್ಲಿ ದ್ವೇಷದ ಬೀಜ ಬಿತ್ತುವ ಕರಾಳ ಜಾಲ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದು ನಂಬಿಕೆಗೆ ಅನರ್ಹವಾದ ಮಾತೇನಲ್ಲ. </span><br /><br /><span style="color: rgb(51, 51, 255);">ನಾನು ನಿನಗೆ ಹೇಳ ಹೊರಟಿರುವುದೇನೆಂದರೆ, ಮತ-ಧರ್ಮ-ಬಣ್ಣದ ಹೆಸರಲ್ಲಿ ಮನುಷ್ಯ ಮನುಷ್ಯರ ನಡುವೆ ದ್ವೇಷದ ಬೆಂಕಿ ರೌದ್ರಾವತಾರ ತಾಳಿ, ದೇಶದೆಲ್ಲೆಡೆ ಹಬ್ಬಿ ಹೊಗೆಯಾಡುತ್ತಿರುವಾಗ ಪರಸ್ಪರ ನಂಬುಗೆಯ, ಸಹಬಾಳ್ವೆಯ ಪ್ರೀತಿ ನಮ್ಮ ಜನರಲ್ಲಿ ಮಾಯವಾಗಿ ಹೋಗಿದೆ. ಇಂತಹ ಸಂಕ್ರಮಣ ಸ್ಥಿತಿಯಲ್ಲಿ ನಮ್ಮಿಬ್ಬರ ಪ್ರೀತಿ ಮುನ್ನುಗ್ಗುತ್ತಿದೆ. ಇದುವರೆಗೆ ನಮ್ಮ ಪ್ರೀತಿಗೆ ಜಾತಿ-ಧರ್ಮವೆಂಬ ಕೊಳ್ಳಿ ದೆವ್ವದ ಕೆಂಗಣ್ಣು ಬಿದ್ದಿರಲಿಲ್ಲ. ಆದರೆ ಈಗಾಗುತ್ತಿರುವ ಬೆಳವಣಿಗೆ ನಮ್ಮನ್ನು ಎಚ್ಚರಿಸಿದೆ. ನಮ್ಮಿಬ್ಬರ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ, ಬಾಹ್ಯ ಕರಾಳ ಶಕ್ತಿಗಳು ನಮಗೇನಾದರೂ ಮಾಡಬಹುದು. ಆದರೆ ಅದಕ್ಕೆ ಬಗ್ಗಬೇಕಾಗೇನೂ ಇಲ್ಲ. ಹಾಗಾಗಿ ನೀನು ಹೆದರುವ ಅಗತ್ಯವಿಲ್ಲ. ಕೆಲವು ತಿಂಗಳಲ್ಲಿ ನಾನೂ ನೀನಿದ್ದಲ್ಲಿಗೆ ಬರುತ್ತೇನೆ. ಅಷ್ಟು ದಿನ ಧೈರ್ಯದಿಂದಿರು... ಏಕೆಂದರೆ ನಮ್ಮದು ಯಾವುದೇ ಸಂಬಂಧದ ಚೌಕಟ್ಟಿಗೆ ಸಿಗದ, ಜಾತಿ-ಧರ್ಮ-ಬಣ್ಣವೆಂಬ ಭೇದದ ಕಂದಕವನ್ನು ದಾಟಿದ, ಹೆಸರೇ ಇಲ್ಲದ ಪ್ರೀತಿ...</span><br /><span style="color: rgb(51, 51, 255);"> </span><br /><span style="color: rgb(51, 51, 255);">ಇಂತಿ ನಿನ್ನವ</span><br /><span style="font-weight: bold; color: rgb(51, 51, 255);">ರಾಘು</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com12tag:blogger.com,1999:blog-2818153219058834250.post-36707776989031905262009-01-21T23:22:00.000-08:002009-05-06T03:28:17.334-07:00<span style=";font-family:webdings;font-size:180%;" >ಯಕ್ಷಗಾನ ನೋಡೆಂದು ಮನ ಚಂಡೆ ಬಾರಿಸಿದಾಗ</span><br /><span style="font-size:85%;"><br /></span><span style="font-size:100%;">ಇನ್ನೇನು ಮಲಗಬೇಕು ಅನ್ನುವಷ್ಟರಲ್ಲಿ ತಂದೆ ಫೋನ್ ಮಾಡಿದರು. ಸರಿ, ಹಾಗೆ ಮಾತನಾಡುತ್ತಿದ್ದೆ. ಅವರು ಫೋನ್ನಲ್ಲಿ ಮಾತನಾಡುತ್ತಿದ್ದಾಗ ಯಕ್ಷಗಾನದ ಚೆಂಡೆಯ ಇಂಪು ತಂದೆಯವರ ಮಾತಿನ ಕಂಪಿನೊಂದಿಗೆ ನವಿರಾಗಿ ಕೇಳುತ್ತಿತ್ತು. </span><span style="font-size:100%;">ನಿಜಹೇಳಬೇಕೆಂದರೆ ಯಕ್ಷಗಾನಕ್ಕಿಂತ ಚೆಂಡೆ ಬಡಿಯುವುದನ್ನು ಕೇಳುವುದರಲ್ಲೇ ನಾನು ಹೆಚ್ಚು ಆನಂದವನ್ನು ಕಾಣುತ್ತೇನೆ. ಅದೇನೋ ಗೊತ್ತಿಲ್ಲ. ಚಿಕ್ಕಂದಿನಲ್ಲಿ ಅಪ್ಪ-ಅಮ್ಮನ ಒತ್ತಾಯಕ್ಕೆ ರಾತ್ರಿಯ</span><span style="font-size:100%;">ಲ್ಲಿ ಯಕ್ಷಗಾನ ನೋಡಲು ಹೋಗುತ್ತಿದ್ದಾಗ ಚೆಂಡೆ ಶಬ್ದವನ್ನು ಆಲಿಸುತ್ತಿ</span><span style="font-size:100%;">ದ್ದೆಯೇ ವಿನಾ ರಂಗದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಜಾಸ್ತಿ ತಲೆಕೆಡಿ</span><span style="font-size:100%;">ಕೊಳ್ಳುತ್ತಿರಲಿಲ್ಲ. ಕೆಲವೊಮ್ಮೆ ಆ ಪೌರಾಣಿಕ ಪ್ರಸಂಗಗಳು ಅರ್ಥವಾಗುತ್ತಲೂ ಇರಲಿಲ್ಲ. ಅದು ಬೇರೆ</span><span style="font-size:100%;"> ಪ್ರಶ್ನೆ ಬಿಡಿ.</span><br /><br /><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEgB7U8ARMDI-3scFwL-nP21sm3TJfjOsEH8uW7iMIZRBUjB9wBr5hrhfhIeEeOp64FgRib2pOI7rV3O2MxjBgqOMCUFhyc-t77r4uCI3EejnWQExum2ihaHIxsO8Kgu14oyDsiuvGvB0F4/s1600-h/dm23.jpg"><img style="margin: 0px auto 10px; display: block; text-align: center; cursor: pointer; width: 320px; height: 240px;" src="https://blogger.googleusercontent.com/img/b/R29vZ2xl/AVvXsEgB7U8ARMDI-3scFwL-nP21sm3TJfjOsEH8uW7iMIZRBUjB9wBr5hrhfhIeEeOp64FgRib2pOI7rV3O2MxjBgqOMCUFhyc-t77r4uCI3EejnWQExum2ihaHIxsO8Kgu14oyDsiuvGvB0F4/s320/dm23.jpg" alt="" id="BLOGGER_PHOTO_ID_5294087555451111778" border="0" /></a><br /><span style="font-size:100%;">ತಂದೆ ಕಾರ್ಯನಿಮಿತ್ತ ಯಕ್ಷಗಾನ ನಡೆಯುತ್ತ್ತಿದ್ದ ಸ್ಥಳದ ಬಳಿ ಬಂದಿದ್ದರೂ ಅವರು ಯಕ್ಷಗಾನ ನೋಡಲು ತೆರಳಿರಲಿಲ್ಲ. ಆದರೆ ಆ ಭಾಗವತಿಗೆ ಹಾಗೂ ಚೆಂಡೆಯ ಶಬ್ದ ಮಾತ್ರ ಇಡೀ ಊರಿಗೆ ಕೇಳುತ್ತಿತ್ತು. ತಂದೆಯ ಫೋನ್ನ </span><span style="font-size:100%;">ಮೂಲಕ ಆ ಆನಂದವನ್ನು ನಾನು ಪಡೆಯುವಂತವನಾಗಿದ್ದೆ. ಆ ಹಳ್ಳಿಯಲ್ಲಿದ್ದ ಯಕ್ಷಗಾನ ಅಭಿಮಾನಿಗಳ ಆಸೆ ಪೂರೈಸುತ್ತಿದ್ದ ಯಕ್ಷಗಾನ ತಂಡಕ್ಕೆ ಅಲ್ಲಿನ ನಾಗರಿಕರು ಅಭಿನಂದನೆ ಸಲ್ಲಿಸಿದ್ದರೂ ನಾನು ಕೂಡ ಇಲ್ಲಿ ಬರೆಯುವ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ. ಏಕೆಂದರೆ ಕನಿಷ್ಠ ಕೆಲವು ನಿಮಿಷಗಳ ಮಟ್ಟಿಗಾದರೂ ಈ ಗಿಜಿಗುಡುವ ಯಾಂತ್ರಿಕ ಜೀವನದ ನಡುವೆ ಒಂ</span><span style="font-size:100%;">ದಿಷ್ಟು ಹೊತ್ತು ನನ್ನ ಮನಸ್ಸನ್ನು ಶಾಂತಗೊಳಿಸಿದ್ದಕ್ಕೆ. ಮುಖ್ಯವಾಗಿ ನಾನು ನನ್ನ ತಂದೆಗೆ ಥ್ಯಾಂಕ್ಸ್ ಹೇಳಬೇಕು. ಫೋನ್ ಮಾಡಿ ಆ ಯಕ್ಷಗಾನದ ವೈಭವವನ್ನು ನನ್ನ ಕಿವಿ ಹಾಗೂ ಕಣ್ಣ ಮುಂದಿರಿಸಿದ್ದ</span><span style="font-size:100%;">ಕ್ಕೆ.</span><br /><span style="font-size:100%;"><br />ಅದೆಷ್ಟು ದಿನವಾಯಿತು ನೋಡಿ... ಯಕ್ಷಗಾದ ಸವಿಯುಣದೆ ವರ್ಷಗಳೇ ಕಳೆದಿವೆ. ಶಾಲೆಗೆ,</span><span style="font-size:100%;"> </span><span style="font-size:100%;">ಕಾಲೇಜಿಗೆ ತೆರಳುವ ಸಂದರ್ಭದಲ್ಲಿ ಯಾವತ್ತೂ ಯಕ್ಷಗಾನ</span><span style="font-size:100%;"> ನೋಡಬೇಕೆಂದು ಈ ಪರಿಯ ಆಸಕ್ತಿ ನನ್ನ ಮನದಲ್ಲಿ ಮೂಡಿರಲಿಲ್ಲ</span><span style="font-size:100%;">. ನಮ್ಮ ಸಾಂಪ್ರದಾಯಿಕ ಕಲೆಗಳ ಬಗ್ಗೆ ನಿರ್ಲಕ್ಷವಹಿಸುವ ಯುವಜನಾಂಗದವರಲ್ಲಿ ಅಂದು ನಾನೂ ಒಬ್ಬನಾಗಿದ್ದೆ. ಹಾಗಿದ್ದರೂ ಚಂ</span><span style="font-size:100%;">ಡೆ ಶ</span><span style="font-size:100%;">ಬ್ದ ಕೇಳ</span><span style="font-size:100%;">ಬೇಕೆಂದು ಯಾವತ್ತೂ ಅನಿಸುತ್ತಿತ್ತು.<br /></span><br /><span style="font-size:100%;">ಈ</span><span style="font-size:100%;">ಗೀಗ ಯಕ್ಷ</span><span style="font-size:100%;">ಗಾನವನ್ನು, ಆ ಚಂಡೆಯ ನಿನಾದವನ್ನು ಸ</span><span style="font-size:100%;">ದಾ ಕೇಳಬೇಕೆಂ</span><span style="font-size:100%;">ದು ಮನಸ್ಸು ಒತ್ತಿ ಒತ್ತಿ ಹೇಳುತ್ತಿದೆ. ಎರಡು ವರ್ಷ</span><span style="font-size:100%;">ವಾಯಿತು. </span><span style="font-size:100%;">ಒಂದು ಪ್ರಸಂಗವನ್ನೂ ಸರಿಯಾಗಿ ನೋಡಿಲ್ಲ. ಕಳೆದ ವರ್ಷ ದೆಹಲಿಯಲ್ಲಿ ಕನ್ನಡ ಯಕ್ಷಗಾನ ಏರ್ಪಡಿಸಿದ್ದರು. ಆದರೆ ಅದು ಯಾಕೋ ನನ್ನ ಮನಸ್ಸಿಗೆ ಅಷ್ಟರಮಟ್ಟಿಗೆ ತೃಪ್ತಿ ನೀಡಿರಲಿಲ್ಲ.</span><br /><span style="font-size:100%;"><br />ಅದಿರಲಿ. ತಂದೆಯ ಬಳಿ ಮಾತನಾಡಿದ ಬಳಿಕ ನನ್ನ ಮನದಲ್ಲಿ ಮೂಡಿದ ಪ್ರಶ್ನೆಗಳಿ</span><span style="font-size:100%;">ಗೆ ಈಗಲೂ ನ</span><span style="font-size:100%;">ನಗೆ ಉತ್ತರ ಕಂಡುಕೊಳ್ಳಲಾಗುತ್ತಿಲ್ಲ. ಅದೇಕೆ ಯಕ್ಷಗಾನದ ಮೇಲೆ ಈ ಪರಿಯ ಆಸಕ್ತಿ ಮೂಡಿದೆ? ಯಕ್ಷಗಾನವನ್ನು ಒಮ್ಮೆ ನೋಡಿ ನನ್ನ ಹಸಿವನ್ನು ನೀಗಿಸಿಕೊಳ್ಳಬೇಕೆಂದು ಯಾಕೆ ಮನಸ್ಸು ಹಾತೊರೆಯುತ್ತಿದೆ? ಈ ಒಲವಿನ ಭಾವನೆ ಅದೇಕೆ ಅಂದು ಬಂದಿರಲಿಲ್ಲ? ಬಹುಶಃ ಪೇಟೆಯ ಬದುಕು ನನ್ನ ಮನವನ್ನು ಆ ರೀತಿ ಪರಿವರ್ತಿಸಿರಬಹುದೇ?<br /><br />ಥಳಥಳಿಸುವ ಮಾಲ್ಗಳು, ಸಾಂಪ್ರದಾಯಿಕ ಬದುಕು ಏನೆಂಬುದನ್ನೇ ಮರೆತಿರುವ ಮೂಢರು, ಕೇವಲ ಸ್ವಹಿತಾಸಕ್ತಿಗಾಗಿ ಬೇರೆಯವರ ಬೆನ್ನು ಬಗ್ಗಿಸುವ ಕಾರ್ಪೊರೇಟ್ಗಳು, ಕಾಲ ಬದಲಾಗುತ್ತಿದೆ ನಾವೂ ಬದಲಾಗಬೇಕೆಂದು ತನ್ನತನವನ್ನೇ ಮರೆಯುವ ‘ಪ್ರಜ್ಞಾವಂತರು’, ಹವಾನಿಯಂತ್ರಿತ ಗಾಜಿನ ಕೊಠಡಿಯಲ್ಲಿ ಕುಳಿತು ಭಾರತ ಹಳ್ಳಿಗಳು ಅಭಿವೃದ್ಧಿಯಾಗುತ್ತಿವೆ ಎನ್ನುವ ಮಹಾನ್ ಚಿಂತಕರು... ಇವರೆಲ್ಲರ ನಡುವೆ ಬದುಕು ಸಾಗಿಸುತ್ತಿರುವ ನಮ್ಮಂಥವರು...<br /><br />ಬಹುಶಃ ಇಂತಹ ವಿಚಿತ್ರಗಳ ನಡುವೆ ದಿನದೂಡುವಾಗ ಮನಸ್ಸು ರಿಫ್ರೆಶ್ ಆಗಬೇಕೆಂಬ ಬಯಕೆಯಿಂದ ಯಕ್ಷಗಾನ ನೋಡಲೇಬೇಕೆಂದು ಹಂಬಲ ಮನದಲ್ಲಿ ಆವರಸಿತೇನೋ... ಮುಂದೆ ಹೋದಂತೇ ಇನ್ನು ಏನೆಲ್ಲಾ ಬಯಕೆಗಳು ಮನದಲ್ಲಿ ಮೂಡುತ್ತವೆಯೋ... ಕುತೂಹಲದಿಂದ ಕಾದುನೋಡುತ್ತಿದ್ದೇನೆ...</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com5tag:blogger.com,1999:blog-2818153219058834250.post-42615679718433437822008-12-05T03:27:00.000-08:002008-12-05T22:15:39.389-08:00<span style="font-weight: bold;font-size:180%;" >ನೂರೊಂದು ಕನಸು...ಕನಸಾಗೇ ಉಳಿಯಿತು...</span><br /><br />ನನ್ನ ಬಾಡಿದ್ದ ಬದುಕಿಗೆ ಹೊಳೆವ ದೀಪ್ತಿಯಾದವಳು ನೀನು, ಬದುಕಿನಲ್ಲಿ ಭರವಸೆಯನ್ನೇ ಕಳೆದುಕೊಂಡು, ಎಲ್ಲರ ನಿಂದನೆಗೆ ಗುರಿಯಾಗಿ, ಕಡಿದ ಬಾಳೆ ಗಿಡದಂತಾಗಿದ್ದ ಈ ಖಾಲಿ ಮನಸ್ಸಿಗೆ ಆತ್ಮವಿಶ್ವಾಸ ತುಂಬಿ ಮತ್ತೆ ನನ್ನಲ್ಲಿ ಹೊಸ ಹುರುಪು ಮೊಳಕೆಯೊಡೆಯುವಂತೆ ಮಾಡಿದ ನನ್ನ ರತ್ನ ನೀನು. ಕೈಯಲ್ಲಿ ಒಂದು ಕೆಲಸವೂ ಇಲ್ಲದೆ, ಭವಿಷ್ಯವೇ ಬರಿದಾಗಿ ಕಾಣುತ್ತಿದ್ದಾಗ, ನಿನ್ನ ಸಂಗಡದಿಂದ ಹೊಸ ಉದ್ಯೋಗ ಪ್ರಾಪ್ತಿಯಾಗುವಂತೆ ಮಾಡಿದ್ದು ನೀನು.<br /><br />ಆವತ್ತು ಯಾವುದೋ ವಿಷಯಕ್ಕೆ ಎಲ್ಲರೂ ನನ್ನ ಸ್ನೇಹಕ್ಕೆ ತಿಲಾಂಜಲಿ ಇಟ್ಟಾಗ ಮತ್ತೆ ನನ್ನ ಸಮರ್ಥನೆಗೆ ಸಾಥ್ ನೀಡಿದ ಸಂಗಾತಿ ನೀನು. ಬೇರೆ ಕಡೆ ಉದ್ಯೋಗ ನಿಮಿತ್ತ ತೆರಳುವ ವೇಳೆಗೆ ಯಾವೊಬ್ಬನೂ ಬರದೇ ಇದ್ದರೂ, ನನ್ನಲ್ಲಿ ಸ್ಪೂರ್ತಿ ತುಂಬಿ, ಅತ್ಯಂತ ಆದರದಿಂದ ಬೀಳ್ಕೊಟ್ಟು, ಆ ನಿಲ್ದಾಣದಲ್ಲೇ ನಮ್ಮ ಪ್ರೀತಿ ಬಗ್ಗೆ ನೀನು ಒತ್ತಿ ಒತ್ತಿ ಹೇಳುತ್ತಿದ್ದಾಗ, ನೀನು ನನ್ನೊಂದಿಗಿಲ್ಲದಿದ್ದಾಗ ಯಾಕೀ ಉದ್ಯೋಗ ಎಂದಿದ್ದೆ ನಾನು. ನನ್ನ ಕಣ್ಣಿನಿಂದ ಒಂದು ಹನಿ ಉದುರಿದ ಕೂಡಲೇ ಗೊಳೋ ಎಂದು ಅಂತಿದ್ದ ನಿನ್ನನ್ನು ಸಮಾಧಾನ ಪಡಿಸುವಾಗಲೇ ಹೊತ್ತು ಮೀರಿತ್ತು. ಹೇಗೋ ಒಲ್ಲದ ಮನಸ್ಸಿನಿಂದ ಆ ಕ್ಷಣದಲ್ಲಿ ನಾವಿಬ್ಬರೂ ಬೇರ್ಪಡಬೇಕಾಯಿತು.<br /><br />ಅಂದು ನೀನು ನಿಲ್ದಾಣದಲ್ಲಿ ಅತ್ತಷ್ಟು ಬೇರೆಂದೂ ಅತ್ತಿರಲಿಲ್ಲ ಎಂದು ನೀನು ಫೋನ್ನಲ್ಲಿ ಹೇಳುತ್ತಲೇ ಇರುತ್ತಿದ್ದಿ. ನೀನು ಅತ್ತದ್ದಕ್ಕೆ ನನಗೆ ಒಂಚೂರು ಬೇಸರವಿಲ್ಲ. ಏಕೆಂದರೆ ನೀನು ನನ್ನನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತೀಯಾ ಎಂದು ನನಗೆ ಗೊತ್ತು. ಆ ಪ್ರೀತಿ ನಮ್ಮಿಂದ ಒಂದು ಕ್ಷಣವನ್ನೂ ಕಳೆಯುವುದು ಅಶ್ವಮೇಧ ಯಾಗ ಮಾಡಿದಷ್ಟೇ ಕಷ್ಟ ಎಂಬುದು ಒಬ್ಬ ಪ್ರೇಮಿಯಾಗಿ ನನಗೆ ಗೊತ್ತು. ಅದಕ್ಕಾಗಿಯೇ ಅಳುವಷ್ಟು ಅತ್ತು ಬಿಡು ಎಂದು ನಿಧಾನವಾಗಿಯೇ ನಾನು ಸಮಾಧಾನ ಮಾಡಿದ್ದು.<br /><br />ಅದೇನೆ ಇರಲಿ, 3 ವರ್ಷಗಳ ಮೇಲಾಯ್ತು. ಒಂದು ಬಾರಿಯೂ ನಾನು ಮನೆಗೆ ಹೋಗಿಲ್ಲ. ಕೇವಲ ದೂರವಾಣಿ ಮೂಲಕ ನನ್ನ ಹೆತ್ತವರೊಂದಿಗೆ ಸಂವಹಿಸುತ್ತಿದ್ದೇನೆ. ಅವರಿಗೂ ನನ್ನನ್ನು ನೋಡಬೇಕೆಂಬ ತವಕ. ಆ ತುಡಿತ ನನ್ನಲ್ಲೂ ಇದೆ. ಇಲ್ಲಿಗೆ ಬಂದ ಆರು ತಿಂಗಳೊಳಗೆ ನಾನು ವಾಪಸಾಗಬೇಕೆಂದಿದ್ದೆ. ಅಪ್ಪ ಅಮ್ಮನನ್ನು, ಹಾಗೇ ನಿನ್ನನ್ನು ನೋಡಬೇಕೆಂಬ ಮಹದಾಸೆ ಮನಸ್ಸಿನ ತುತ್ತ ತುದಿಯಲ್ಲಿತ್ತು. ಅದರ ಜೊತೆಗೆ ನಮ್ಮ ಹಳ್ಳಿಗೆ ಹತ್ತಿರವಿದ್ದ ನಗರದ ಬ್ರಾಂಚಿನಲ್ಲೇ ನೀನು ಕೆಲಸ ಮಾಡಬಹುದು. ಟ್ರಾನ್ಸ್ಫರ್ ಮಾಡಲು ನನ್ನಿಂದ ಅಡ್ಡಿಯಿಲ್ಲ ಎಂದು ನನ್ನ ಬಾಸ್ ಹೇಳಿದ್ದರು. ಆದರೆ ಅವಕಾಶವನ್ನು ನಾನು ತಿರಸ್ಕರಿಸಿದ್ದೆ.<br /><br />ಕಾರಣ ನಿನಗೆ ಗೊತ್ತು, ನನಗೆ ಗೊತ್ತು; ಆದರೆ ನಾನು ಫೋನಾಯಿಸಿದಾಗ ಸದಾ ನನ್ನ ಹೆತ್ತವರು ಏಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದಾಗ ಏನೋ ಒಂದು ಉತ್ತರ ಹೇಳಿ ತಪ್ಪಿಸಿಕೊಳ್ಳುತ್ತಿದ್ದೆ. ಊರಿಗೆ ಬಂದರೆ ನಿನ್ನನ್ನು ನೋಡಲು, ಮಾತನಾಡಲು ಮನಸ್ಸು ಹಾತೊರೆಯುತ್ತಿರುತ್ತದೆ. ಆದರೆ ನೀನೇ ಇಲ್ಲದ ಮೇಲೆ ಯಾವ ಸುಖಕ್ಕಾಗಿ ನಾನು ಬರಬೇಕು? ಹೌದು, ನನ್ನ ಹೆತ್ತವರನ್ನು ನೋಡಬೇಕು. ಅವರನ್ನು ಕಾಣದೆ ವರ್ಷಗಳಾಗಿವೆ. ಆದರೆ ನಿನ್ನನ್ನು ಕಳೆದುಕೊಂಡ ದು:ಖದಲ್ಲಿ ಅಪ್ಪ ಅಮ್ಮನಲ್ಲಿ ನಾನು ಲೋಕಾಭಿರಾಮವಾಗಿ ಹೇಗೆ ಮಾತನಾಡಲು ಸಾಧ್ಯ? ವರ್ಷಗಳ ನಂತರ ಮಗ ಊರಿಗೆ ಬಂದರೂ ನಮ್ಮಲ್ಲಿ ಸರಿಯಾಗಿ ಮಾತನಾಡಿಲ್ಲ ಎಂಬ ಕೊರಗು ಅವರನ್ನು ಕಾಡದೇ ಇರದು. ನಾನು ಬಂದರೆ ಒಂದು ರೀತಿಯಲ್ಲಿ ಅವರಿಗೂ ಬೇಸರ. ಆದರೆ ಹಾಗೆ ಮಾಡಲು ಖಂಡಿತಾ ಒಪ್ಪಿಗೆಯಿಲ್ಲ. ಆದರೆ ನಾನು ಬರದಿರದ ಹಿಂದಿನ ವಾಸ್ತವವನ್ನು ಹೇಗೆ ಅವರಿಗೆ ವಿವರಿಸಲಿ?<br /><br />ಗೆಳತಿ, ಊರು ಬಿಟ್ಟು ಬಂದಿದ್ದರೂ, ನಿನ್ನ ನೆನೆಯದೇ ಒಂದು ಕ್ಷಣವೂ ಮುಂದುವರಿಯುತ್ತಿರಲಿಲ್ಲ. ನಿನ್ನಲ್ಲಿ ಒಂದಕ್ಷರ ಮಾತನಾಡದಿದ್ದರೂ ನನಗೆ ದಿನದೂಡಲಾಗುತ್ತಿರಲಿಲ್ಲ. ಆದರೆ ದಿನಕಳೆದಂತೆ ನೀನೆ ನನ್ನನ್ನು ದೂರ ಮಾಡಿದೆ. ಏಕೆ ಹೀಗೆ ಮಾಡುತ್ತಿದ್ದಿ ಎಂದು ಕೇಳಿದರೂ ನೀನು ನನ್ನಲ್ಲಿ ಏನನ್ನೂ ಹೇಳಲಿಲ್ಲ. ಅದೊಂದು ದಿನ ಮಾಮೂಲಿಯಂತೆ ನನ್ನ ಇ-ಮೇಲ್ ನೋಡುತ್ತಿದ್ದ ಸಂದರ್ಭದಲ್ಲಿ ನೀನು ಕಳುಹಿಸಿದ್ದ ಆಮತ್ರಣ ಪತ್ರಿಕೆ ನೋಡಿ ದಂಗುಬಡಿದಂತಾಗಿದ್ದೆ ನಾನು! ಎರಡು ದಿನ ಆಫೀಸಿಗೂ ತೆರಳಿರಲಿಲ್ಲ. ನಿನ್ನ ನೆನಪಿನಲ್ಲೇ ದಿನ ದೂಡುತ್ತಿದ್ದ ನನಗೆ ಈ ರೀತಿಯ ಮೋಸ ಏಕೆ ಮಾಡಿದೆ?<br /><br />ನಿನ್ನಲ್ಲಿ ಉತ್ತರವನ್ನು ನಾನು ಇದುವರೆಗೆ ಕೇಳಿಲ್ಲ. ಆ ಬಳಿಕ ಒಂದು ಬಾರಿಯೂ ನಾವು ಮಾತನಾಡಿಲ್ಲ. ಅದೇಗೋ ನಿನ್ನ ಮದುವೆ ಸಮಾರಂಭದ ಚಿತ್ರಗಳನ್ನು ನಾನು ನೋಡಿದ್ದೆ. ರೇಷ್ಮೆ ಸೀರೆ ಸುತ್ತಿದ್ದ ನಿನ್ನನ್ನು ಮೊದಲ ಬಾರಿ ಸೀರೆಯಲ್ಲಿ ಕಂಡಿದ್ದ ನಾನು ಆ ಸೌಂದರ್ಯವನ್ನು ಹಾಡಿ ಹೊಗಳಬಲ್ಲೆ. ಆದರೆ ಆ ಹಕ್ಕನ್ನು ನಾನಿಂದು ಕಳೆದುಕೊಂಡಿದ್ದೇನೆ ಎಂದು ಅತ್ಯಂತ ನೋವಿನಿಂದ ಹೇಳಿದರೂ, ನಿನ್ನಲ್ಲಿ ಮಾತನಾಡಬೇಕೆಂದು ಮನಸ್ಸು ಹೇಳುತ್ತಿದೆ. ಆದರೆ ಅದು ಅಸಾಧ್ಯ ಎಂದು ಗೊತ್ತಿದ್ದರೂ ನನ್ನ ಮನಸ್ಸೊಪ್ಪುತ್ತಿಲ್ಲ. ನಿನ್ನ ನೋಡಬೇಕು, ನಿನ್ನಲ್ಲಿ ಜಗಳವಾಡಬೇಕೆಂದು ಮನಸ್ಸು ಸಾರಿ ಹೇಳುತ್ತಿದ್ದರೂ, ವಿಧಿ ತನ್ನದೇ ಆಟವಾಡಿದೆ.<br /><br /><span style="font-weight: bold;">ಅಪ್ಪ, ಅಮ್ಮ; ನಾನು ನಿಜವಾಗಿಯೂ ಇದೇ ಕಾರಣಕ್ಕಾಗಿ ಊರಿಗೆ ಬಂದಿಲ್ಲ...ಬರುವ ಯೋಚನೆ ಕೂಡ ಮಾಡಿಲ್ಲ :-( </span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com10tag:blogger.com,1999:blog-2818153219058834250.post-24631568817218682812008-11-27T03:56:00.000-08:002008-11-27T04:31:47.903-08:00<span style="font-size:180%;"><span style="font-weight: bold;">ನಿಜವಾದ ಭಯೋತ್ಪಾದಕರು ಯಾರು?</span></span><br /><br /><br />ಬಹುಶಃ ಕಳೆದ ರಾತ್ರಿ ಮುಂಬೈಯ ಬಹುತೇಕ ಮಂದಿಗೆ ಕಂಡೂ ಕೇಳರಿಯದ ಕರಾಳ ರಾತ್ರಿ. ಗುಜರಾತ್ನಿಂದ ಮೀನುಗಾರರ ದೋಣಿಯಲ್ಲಿ ಜಲಮಾರ್ಗದ ಮೂಲಕ ರಾಜಾರೋಷವಾಗಿ ಮುಂಬೈ ನಗರಿಗೆ ನುಗ್ಗಿದ ಶಸ್ತ್ರಸಜ್ಜಿತ ಭಯೋತ್ಪಾದಕರು, ಹಲವು ನಾಗರಿಕರನ್ನು ಹತ್ಯೆಗೈದದ್ದು ಮಾತ್ರವಲ್ಲ, ಇಡೀ ಮುಂಬೈ ನಗರವೇ ತತ್ತರಿಸುವಂತೆ ಮಾಡಿದ್ದಾರೆ.<br /><br />ಮಾಲೇಗಾಂವ್ ಸ್ಫೋಟದ ಬಳಿಕ ಎರಡನೇ ಬಾರಿ ಉಗ್ರರು ಮುಂಬೈ ನಗರವನ್ನು ಗುರಿಯಾಗಿಸಿದ್ದಾರೆ. ಭಾರತದ ಪ್ರಮುಖ ವಾಣಿಜ್ಯ ನಗರಿ ಉಗ್ರರ ದಾಳದಲ್ಲಿ ಸಿಲುಕಿದೆ. ಎಟಿಎಸ್ ಪಡೆಯ ಮುಖ್ಯಸ್ಥ ಹಾಗೂ ಮಾಲೇಗಾಂವ್ ಸ್ಫೋಟದ ತನಿಖೆ ನಡೆಸುತ್ತಿದ್ದ ಕರ್ಕರೆ ಅವರು ಉಗ್ರರೊಂದಿಗಿನ ಹೋರಾಟದಲ್ಲಿ ಬಲಿಯಾಗಿದ್ದಾರೆ. ಎನ್ಕೌಂಟರ್ ಸ್ಪೆಷಲಿಸ್ಟ್ ಸಲಾಸ್ಕರ್ ತಮ್ಮ<br />ಪ್ರಾಣವನ್ನು ದೇಶಕ್ಕಾಗಿ ತ್ಯಾಗ ಮಾಡಿಯಾಗಿದೆ. ಮತ್ತೊಬ್ಬ ಪೊಲೀಸ್ ಅಮಿತ್ ಕಾಮ್ಟೆ ಅವರೂ ಜೀವ ತೆತ್ತಾಗಿದೆ... ಒಟ್ಟು ಈಗಾಗಲೇ ೧೯ ಪೊಲೀಸರು ಉಗ್ರರೊಂದಿಗಿನ ಕಾಳಗದಲ್ಲಿ ಮೃತಪಟ್ಟಾಗಿದೆ ಎಂದು ವರದಿಯಾಗಿದೆ. ನೂರಾರು ಮಂದಿ ನಾಗರಿಕರು ದಾಳಿಗೆ ಸಿಲುಕಿ, ಹಲವಾರು ಕುಟುಂಬಗಳಿಗೆ ದಿಕ್ಕೇ ತೋಚದಂತಾಗಿದೆ.<br /><br />ದೆಹಲಿಯಲ್ಲಿರುವ ನಾವು ಮುಂಜಾನೆ ಟಿವಿ ನೋಡುತ್ತಿದ್ದಾಗ ಮುಂಬೈ ಹೊತ್ತಿಉರಿಯುತ್ತಿರುವುದು ಸ್ಪಷ್ಟವಾಗಿತ್ತು. ಉಗ್ರರು ನೂರಾರು ಮಂದಿ ನಾಗರಿಕರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದರು. ತಾಜ್ ಹೋಟೆಲ್ ಹೊರಗೆ ಕಾಣುತ್ತಿದ್ದ ದೃಶ್ಯಗಳೆಲ್ಲಾ ಹೃದಯಕಲಕುವಂತಿದ್ದವು. ಪೊಲೀಸರ ವಾಹನವನ್ನೇ ಹೈಜಾಕ್ ಮಾಡಿದ ಉಗ್ರರು ಕಾರಿನೊಳಗಿಂದಲೇ ಗುಂಡಿನ ದಾಳಿ ನಡೆಸುತ್ತಿದ್ದ ದೃಶ್ಯ ಆಧುನಿಕ ಜಗತ್ತಿನ ರಕ್ಕಸರು ರುದ್ರ ನರ್ತನ ನಡೆಸುತ್ತಿರುವಂತಿತ್ತು. ಅಂತಹ ಕಠಿಣ ಸಂದರ್ಭದಲ್ಲೂ ತಮ್ಮ ಪ್ರಾಣವನ್ನು ಯೋಚಿಸದೆ ಪೊಲೀಸರು ಉಗ್ರರ ವಿರುದ್ಧ ಪ್ರತಿ ದಾಳಿ ನಡೆಸುತ್ತಿದ್ದರು.<br /><br />ಆದರೆ ಇಷ್ಟೆಲ್ಲಾ ಆಗುತ್ತಿರುವಾಗ ನಮ್ಮ ಮನೆಯ ಹೊರಗಿನಿಂದ ಜಯಘೋಷಗಳ ಸದ್ದು ಕೇಳಿಬರುತ್ತಿತು. ದೆಹಲಿಯಲ್ಲಿ ಇನ್ನೊಂದು ದಿನದಲ್ಲಿ ವಿಧಾನಸಭಾ ಚುನಾವಣೆ ನಡೆಯು<a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEikSZxV41PIDBAK0i3ldmLkGmCS_KN9avj92P56zZBR1ZY9StZvYt34u-2ubP5cnRgyo8T7-zMP3oZDKErNtcapiXQCkrP91QJyTrY0JXBVaMZW3onn504RBQnS1AFxLtf580G6t5dSF5w/s1600-h/2k81127mumbaiterror1.jpg"><img style="margin: 0pt 10px 10px 0pt; cursor: pointer; width: 320px; height: 187px;" src="https://blogger.googleusercontent.com/img/b/R29vZ2xl/AVvXsEikSZxV41PIDBAK0i3ldmLkGmCS_KN9avj92P56zZBR1ZY9StZvYt34u-2ubP5cnRgyo8T7-zMP3oZDKErNtcapiXQCkrP91QJyTrY0JXBVaMZW3onn504RBQnS1AFxLtf580G6t5dSF5w/s320/2k81127mumbaiterror1.jpg" alt="" id="BLOGGER_PHOTO_ID_5273311797372668786" border="0" /></a>ತ್ತಿರುವುದರಿಂದ ಯಾವುದೋ ಪಕ್ಷದ ಕಾರ್ಯಕರ್ತರು ತಮ್ಮ ಪ್ರಚಾರ ಅಭಿಯಾನವನ್ನು ಭರ್ಜರಿಯಾಗೇ ಅಟ್ಟಹಾಸದ ಮೂಲಕವೇ ನಡೆಸುತ್ತಿದ್ದರು. ಅದೇ ಹೊತ್ತಿಗೆ ನನ್ನ ಮೊಬೈಲ್ ಒಂದು ಮೆಸೇಜ್ ಕೂಡ ಬಂತು. ಕಾಂಗ್ರೆಸ್ ಸರ್ಕಾರ ಭಯೋತ್ಪಾದನೆ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ. ಇನ್ನೆಷ್ಟು ಹೆಣಗಳು ಉರುಳುತ್ತವೋ ಎಂಬುದನ್ನು ನಾವು ಕಾದುನೋಡಬೇಕಷ್ಟೆ ಎಂದೆಲ್ಲಾ ಮೆಸೇಜ್ ತುಂಬಿಹೋಗಿತ್ತು. ಸರಿ ಆ ಮೆಸೇಜ್ ಒತ್ತಟ್ಟಿಗಿರಲಿ, ಇದುವೆರೆಗೆ ಮಾಧ್ಯಮಗಳಲ್ಲಿ ನೋಡಿದ್ದ ಕೆಸರೆರೆಚಾಟಗಳನ್ನು ಎಸ್ಎಂಎಸ್ನಲ್ಲೂ ಓದುವ ದುರ್ಗತಿ ಬಂತೇ ಎಂದು ಆಶ್ಚರ್ಯವಾಯಿತು. ಹೌದು ಇನ್ನೆರಡು ದಿನಗಳಲ್ಲಿ ಚುನಾವಣೆ ಇರುವಾಗ ಮುಂಬೈನಲ್ಲಿ ಉಗ್ರರ ದಾಳಿಯಿಂದ ನಡುಗಿ ಹೋಗಿದ್ದರೆ, ಪ್ರತಿ ಪಕ್ಷಗಳಿಗೆ ಇದಕ್ಕಿಂತ ಸಂತೋಷದ ಸುದ್ದಿ ಬೇರೇನಿದೆ ತಾನೆ? ಚುನವಣಾ ಪ್ರಚಾರದಾದ್ಯಂತ ಇದು ಆಡಳಿತ ಸರ್ಕಾರದ ವೈಫಲ್ಯ ಎಂದು ಅದನ್ನೇ ಎತ್ತಿಹಿಡಿಯುತ್ತಾ, ಇಂತಹ ಬರ್ಬರ ಸ್ಥಿತಿಯಲ್ಲೂ ಅದನ್ನೇ ಚುನಾವಣಾ ಅಸ್ತ್ರವನ್ನಾಗಿ, ಜನಸಾಮಾನ್ಯರನ್ನು ಓಲೈಸುವ ಈ ಕೀಳು ಮಟ್ಟದ ರಾಜಕೀಯ ಫುಡಾರಿಗಳು ಈ ದೇಶವನ್ನು ಎತ್ತ ಕೊಂಡೊಯ್ಯುತ್ತಿದ್ದಾರೆ, ನಮ್ಮ ದೇಶದ ಅಮಾಯಕರು ಇನ್ನೆಷ್ಟು ಜನರು ನೆತ್ತರ ಹೊಳೆಯನ್ನು ಹರಿಸಬೇಕಿದೆ ಎಂಬೆಲ್ಲಾ ಕರಾಳ ಪ್ರಶ್ನೆಗಳು ಮನದಲ್ಲಿ ಮೂಡದೇ ಇರಲಿಲ್ಲ. ಮೊನ್ನೆತಾನೆ ಮಾಲೇಗಾಂವ್ ಸ್ಫೋಟ ಸಂಭವಿಸಿ ಇಡೀ ಮಹಾರಾಷ್ಟ್ರವೇ ನಲುಗಿಹೋಗಿತ್ತು. ಉಗ್ರ ನಿಗ್ರಹ ದಳ ನಡೆಸಿದ ತನಿಖೆ ಮೂಲಕ ಕೆಲವು ಸ್ವಯಂಘೋಷಿತ ಸ್ವಾಮೀಜಿಗಳು ಈ ಉಗ್ರಕೃತ್ಯವನ್ನು ನಡೆಸಿದ್ದು ಎಂದು ತಿಳಿದು ಬಂದ ಕೂಡಲೇ ಕಾಂಗ್ರೆಸ್ನ ಹಲವು ಮಂದಿಯಲ್ಲಿ ಹರ್ಷದ ಹೊನಲು ಮೂಡಿತ್ತು. ಇನ್ನೇನು ಸಾರ್ವತ್ರಿಕ ಚುನಾವಣೆ ದೂರದಲ್ಲೇನಿಲ್ಲ. ಹಾಗೇ ಆರು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಹತ್ತಿರದಲ್ಲಿದ್ದ ಕಾರಣ ಕಾಂಗ್ರೆಸ್ ಮಂದಿಗೆ ‘ಹಿಂದೂ ಭಯೋತ್ಪಾದನೆ’ಯೇ ಚುನಾವಣೆಯ ಪ್ರಮುಖ ಅಸ್ತ್ರವಾಯಿತು. ಇಷ್ಟು ದಿನಗಳ ಕಾಲ ‘ಇಸ್ಲಾ ಭಯೋತ್ಪಾದನೆ’ ಎಂದು ಬೊಬ್ಬಿಡುತ್ತಿದ್ದ ಮಂದಿಯ ವಿರುದ್ಧ ಧ್ವನಿಯೆತ್ತಲು ಕಾಂಗ್ರೆಸ್ ಇದು ದೊಡ್ಡ ಉಡುಗೊರೆಯಾಗೇ ದೊರೆಯಿತು.<br /><br />ಒಟ್ಟಾರೆ ಭಯೋತ್ಪಾದಕರೆಂಬ ಆಧುನಿಕ ಯುಗದ ರಾಕ್ಷಸರ ನಡುವೆ, ಜಡ ವ್ಯವಸ್ಥೆಗೆ ಅಂಟಿಕೊಂಡು ನಾಚೆಕೆಗೇಡಿನ ರಾಜಕೀಯದ ನಡುವೆ, ಬರೀ ಸ್ವಾರ್ಥ, ಅಧಿಕಾರ ದಾಹದಿಂದ ಯಾರ ಬೆನ್ನಿಗೂ ಚೂರಿ ಹಾಕಲು ತಯಾರಾಗಿರುವ, ಜನಸಾಮಾನ್ಯ ಧ್ವನಿಯಗಿರುತ್ತೇವೆ ಎಂದು ಪ್ರಮಾಣ ವಚನ ಮಾಡಿ, ಜನಸಾಮಾನ್ಯರಿಗೆ ಧ್ವನಿ ಎತ್ತದಂತೇ ಮಾಡುವ, ಐದು ವರ್ಷದುದ್ದಕ್ಕೂ ತಮ್ಮ ಜೇಬನ್ನು ಬೇಕಾದಷ್ಟು ತುಂಬಿಸಿ, ದೇಶದ ನಿರ್ಗತಿಕ ಮಂದಿಯ ಜೀವದೊಂದಿಗೆ ಪ್ರತಿದಿನ, ಪ್ರತಿಕ್ಷಣವೂ ಆಟವಾಡುವ ಜಗತ್ತಿನ ಅತಿಕೆಟ್ಟ, ಅತ್ಯಂತ ಹೇಸಿಗೆಯ ಜೀವನ ನಡೆಸುತ್ತಿರುವ ಮಹಾನ್ ರಾಜಕಾರಣಿಗಳ ನಡುವೆ ಇಂದು ನಾವು ಬದುಕುತ್ತಿದ್ದೇವೆ.<br /><br />ಕಳೆದ ಆರೇಳು ತಿಂಗಳಿನಿಂದ ಇಡೀ ರಾಷ್ಟ್ರವೇ ಭಯೋತ್ಪಾಕರ ನಿರಂತರ ದಾಳಿಯಿಂದ ಕಂಗೆಟ್ಟುಹೋಗಿದ್ದರೂ, ಯಾವೊಬ್ಬ ಜನಪ್ರತಿನಿಧಿ ಕೂಡ ಜನಸಾಮಾನ್ಯನ ಬದುಕಿನ ಬಗ್ಗೆ ಯೋಚಿಸಿಲ್ಲ. ದಾಳಿಗಳಲ್ಲಿ ಗಾಯಗೊಂಡ, ಮೃತಪಟ್ಟ ಮಂದಿಯ ಕುಟುಂಬಕ್ಕೆ ಸಾವಿರಗಟ್ಟಲೆ ಸಹಾಯಧನ ಘೋಷಿಸಿ, ಅದನ್ನೂ ನೀಡದೇ, ಈಗ ಮತ್ತೊಂದು ಉದ್ರ ದಾಳಿ ನಡೆದಾಗ ಮತ್ತೆ ಅದೇ ರಾಗ ಎಳೆಯುತ್ತಿದ್ದಾರೆ. ಅತ್ತ ಮುಂಬೈನಲ್ಲಿ ಅಮಾಯಕ ಮಂದಿಯ ಮಾರಣಹೋಮವಾಗುತ್ತಿದ್ದರೆ ಇತ್ತ ರಾಜಕೀಯ ಫುಡಾರಿಗಳು ಚುನಾವಣೆಗೆ ಸಿದ್ಧರಾಗುತ್ತಿದ್ದಾರೆ. ಸದ್ಯ ಬಿಜೆಪಿ, ಕಾಂಗ್ರೆಸ್ ಇಬ್ಬರಿಗೂ ಭಯೋತ್ಪಾದನೆಯೇ ಚುನಾವಣೆಯ ಪ್ರಮುಖ ಅಸ್ತ್ರ. ಆದರೆ ಇವರ ‘ಬ್ಲೇಮ್ ಗೇಮ್’ನ ಮಧ್ಯೆ ನರಳುತ್ತಿರುವವರು ಏನೂ ಅರಿಯದ ಅಮಾಯಕರು. ಈಗ ಹೇಳಿ ನಿಜವಾದ ಭಯೋತ್ಪಾದಕರು ಯಾರೆಂಬುದನ್ನು?ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com2tag:blogger.com,1999:blog-2818153219058834250.post-85880133988748122932008-10-30T02:56:00.000-07:002008-10-30T03:27:36.571-07:00<span style="font-size:180%;"><span style="font-weight: bold;">ನೀನಿರದ ದೀಪಾವಳಿಯೇತಕೆ?</span></span><br /><br /><div style="text-align: left;"><span> <span style="font-size:180%;">ಆ</span> ಮೂರು ದಿನಗಳು ಹೇಗೆ ಕಳೆದುಹೋದವೋ ನನಗಂತೂ ಗೊತ್ತಿಲ್ಲ. ಕಳೆದ ವರ್ಷ ದೀಪಾವಳಿಯಂದು ಸಾಥ್ ನೀಡಿದ್ದ ನೀನು ಈ ಬಾರಿ ನನ್ನನ್ನು ಒಂಟಿಯಾಗುವಂತೆ ಮಾಡಿದ್ದಿ. ನೀನಿಲ್ಲದೆ ಆ ಮೂರು ದಿನಗಳು ಕಾಡಿದ ‘ಒಂಟಿತನ’ ನನ್ನ </span><span>ಬದುಕಿನಲ್ಲ ಇನ್ಯಾವತ್ತೂ ಬರುವು</span><span>ದು ಬೇಡ. ಒಮ್ಮೆ ಯೋಚಿಸು. ಅಂದಿನ ಆ ದಿನಗಳು ಎಷ್ಟು ಸುಂದರವಾಗಿದ್ದವು. ದೀಪಾವಳಿಯ ಒಂದು ದಿನ ಮುನ್ನವೇ ನೀ ನನ್ನ ಮನೆಗೆ ಬಂದಿದ್ದೆ. ನಿನ್ನ ಆಗಮನಕ್ಕಾ</span><span>ಗೇ ತುದಿಗಾಲಲ್ಲಿ ನಿಂತು ಕಾದಿದ್ದ ನಾನು ನೀ ಬಂದ ತಕ್ಷಣವೇ ಸ್ವರ್ಗವೇ ಧರೆಗಿಳಿದು</span><span> ಬಂತೇನೋ ಅಂದುಕೊಂಡಿದ್ದೆ. </span> <span style="font-weight: bold;"><br /><br /></span><span>ಅದು ನೀನು ನಮ್ಮ ಮನೆಗೆ ಮೊದಲ ಬಾರಿ ಬಂದದ್ದು. ನಿನ್ನ ಮ</span><span>ನದಲ್ಲಿದ್ದ ಗೊಂದಲಗಳನ್ನು ನಾನರ್ಥಮಾಡಿಕೊಂಡಿದ್ದೆ. ಅಂದು ರಾತ್ರಿ ನೀ ಹೇಳಿದ ಒಂದೊಂದು ಮಾತುಗಳು </span><span>ಇಂದೂ ನನ್ನ ಕಿವಿಯಲ್ಲಿ ಗಿರಕಿಹೊಡೆಯುತ್ತಲೇ ಇವೆ. ಅಮ್ಮ ನಿನ್ನನ್ನು ಹೋಗುವುದು ಬೇಡ ಎಂದಿದ್ದರೂ, ಹಠ ಮಾಡಿ ನೀನು </span><span>ಬಂದೆ ಎಂಬು</span><span>ದು ನನಗೆ ಚೆನ್ನಾಗಿ ಗೊತ್ತು.</span><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEiYUcKqHGDx0t9d2GdJkT0Zp2KYI6CNkxvJyEQ0nTA9LcZ9jX6AlieVKxH3eMqvL7xKtDF0YO4rUFZLlp8K1a9U3V62semwMAbq-pkq0pPW4GOEdTdWsXui00ITuVMxy2qNAMZXXtdhzMk/s1600-h/raghu2.jpg"><img style="margin: 0pt 0pt 10px 10px; float: right; cursor: pointer; width: 205px; height: 160px;" src="https://blogger.googleusercontent.com/img/b/R29vZ2xl/AVvXsEiYUcKqHGDx0t9d2GdJkT0Zp2KYI6CNkxvJyEQ0nTA9LcZ9jX6AlieVKxH3eMqvL7xKtDF0YO4rUFZLlp8K1a9U3V62semwMAbq-pkq0pPW4GOEdTdWsXui00ITuVMxy2qNAMZXXtdhzMk/s320/raghu2.jpg" alt="" id="BLOGGER_PHOTO_ID_5262884517097301298" border="0" /></a><span> ಅಷ್ಟಕ್ಕೂ ನಮ್ಮಿಬ್ಬರ </span><span>ನಡುವೆ ಇದ್ದ ಪ್ರೀತಿಯೇ ಎಲ್ಲದಕ್ಕೂ ಸಾಕ್ಷಿಯಾಗಿದ್ದ</span><span>ವು. </span> <span>ನಿನಗೆ ಗೊತ್ತೇ, ಅಂದು ನಿನ್ನ ಹೆತ್ತವರಂತೆ ನನ್ನ ಹೆತ್ತವರೂ ಕೂಡ ನೀ ಮನೆಗೆ ಬರುವ ವಿಷಯದ ಬಗ್ಗೆ ಚಕಾರ ಎತ್ತಿದ್ದರು. ಹಾಗಿದ್ದರೂ ಏನೆಲ್ಲಾ ಹೇಳಿ, ಅವರ ಮನವೊಲಿಸಿ,</span><span> ನಿನ್ನನ್ನು ಮನೆಗೆ ಕರೆತರುವಲ್ಲಿ ನಾನು ಯಶಸ್ವಿಯಾಗಿದ್ದೆ. ಅಪ್ಪನಿಗಿಂತಲೂ ಅಮ್ಮ ನಿನ್ನ ವಿಷಯದ </span><span>ಕುರಿತಾಗಿ ಬಹಳಷ್ಟು ವಾ</span><span>ದ ಮಾಡಿ, ನನ್ನ ನಿರ್ಧಾರ ಬದಲಾಯಿಸಲು ಪ್ರಯತ್ನಿಸಿದ್ದರು. ಆದರೆ ನಾನೂ ಅಷ್ಟೇ ಹಠ ಮಾಡಿ, </span><span>ವಾದ ಮಾಡಿ ಅವರ ಬಾಯನ್ನು ಮುಚ್ಚಿಸಿದ್ದೆ. ಇಷ್ಟೆಲ್ಲಾ ಮಾಡಿದ್ದು ನಿನಗಾಗಿ. ನಮ್ಮ ಪ್ರೀತಿಗೆ ಯಾವುದೂ ಅಡ್ಡಗಾಲಾಗದಿರಲಿ ಎಂಬ ಕಾರಣಕ್ಕಾಗಿ.</span><span> </span><span style="font-weight: bold;"><br /><br /></span><span>ನೀನು ಗಮ</span><span>ನಿಸಿದ್ದೆಯಾ, ನೀನು ಬಂದಿದ್ದ ಎರಡನೇ ದಿನದಂದು ನನ್ನ ಅಮ್ಮನಲ್ಲಿ ಕೋಪದ ಛಾಯೆ</span><span> ಅಚ್ಚೊತ್ತಿದ್ದದ್ದನ್ನು. ಅಮ್ಮನಿಗೆ ಏಕೆ ಕೋಪ ಬಂದಿತ್ತು ಎಂಬುದು ನನ</span><span>ಗಾಗಲೇ ಗೊತ್ತಾಗಿತ್ತು. ಅದನ್ನು ಅವರು ನೀ ಹೋದ ಮಾರನೇ ದಿನ ನನ್ನಲ್ಲಿ ಹೇಳಿದ್ದರು</span><span>. ಆದರೆ ಆ ಕೋಪ ಏಕೆ ಎಂಬುದು</span><span> ನಿನಗೆ ಗೊತ್ತಿರಲಿಲ್ಲ. ಬಿ</span><span>ಡು, ಆ ವಿಷಯ ಈಗ ಮಾತಾಡಿ ಪ್ರಯೋಜನವಿಲ್ಲ. </span> <span>ಇರಲಿ, ಆ ಮೂರು ದಿನದ ದೀಪಾವಳಿ ನಮ್ಮಿಬ್ಬರ ಬದುಕಿಗೆ ಹೊಸ ಹೊರಪು ನೀರಲಿದೆ ಎಂದು ನಾವು ಕನಸುಕಂಡಿದ್ದು, ರಾತ್ರಿಯ ಹೊತ್ತಲ್ಲಿ ಎಲ್ಲರೂ ಪಟಾಕಿಗಳ ಲೋಕದಲ್ಲಿ ಸಂ</span><span>ಭ್ರಮ ಪಡುತ್ತಿದ್ದರೆ ನಾವಿಬ್ಬರೂ ನಮ್ಮ ಭಾವನಾಲೋಕದಲ್ಲಿ ಕನಸ ಕಾಣುತ್ತಾ ಹೊತ್ತು ಕಳೆದಿದ್ದೆವು. ನಮ್ಮ ಭವಿಷ್ಯ, ಉದ್ಯೋಗ ಹಾಗೂ ನಮ್ಮ ಮುಂದಿನ ಜೀವನದ ಬಗ್ಗೆ ಸಾಕಷ್ಟು ಹೊತ್ತು ಮಾತನಾಡುತ್ತಾ ಕಾಲ ಕ</span><span>ಳೆದಿದ್ದೆವು. ಆ ಮಾತುಗಳ ಮಧ್ಯೆ ನಾವು ಎಲ್ಲವನ್ನೂ ಮರೆತಿದ್ದೆವು. ನನ್ನ ಹೆತ್ತವರ ಜೊತೆ ದೀಪಾವಳಿ ಆಚರಿಸುವುದನ್ನೂ! ಅದಕ್ಕೆ ಅಂದು ಅಮ್ಮನಿಗೆ ಕೋಪ ಬಂದಿತ್ತು. </span> <span>ಇಷ್ಟೆಲ್ಲಾ ಆಗುವ ಹೊತ್ತಿಗೆ ದೀಪಾವಳಿಯ ಮೂರನೇ ದಿನದ ಅಂ</span><span>ತ್ಯವೂ ಹತ್ತಿರವಾಗಿತ್ತು. ಮಾರನೆ ದಿನದ ಬೆಳಗಿನ ಜಾವದ ಬಸ್ಸಲ್ಲಿ ಹೋಗಲು ನೀನು ಅಣಿಯಾಗಿದ್ದೆ. ಹಾಗಾಗಿ ಆ ರಾತ್ರಿ ನನಗೆ ನಿದ್ದೆಯೇ ಬಂ</span><span>ದಿರಲಿಲ್ಲ. ನೀನು ನನ್ನಿಂದ</span><span> ಮಾರು ದೂರದ ಕೋಣೆಯಲ್ಲಿ ಮಲಗಿದ್ದರೂ, ನಮಗಿಬ್ಬರಿಗೂ ನಿದ್ದೆ ಬಂದಿರಲಿಲ್ಲ ಎಂಬುದು ಇಬ್ಬರಿಗೂ ಗೊತ್ತು. ನಮ್ಮಿ</span><span>ಬ್ಬರ ಮೊಬೈಲ್ಗಳು ಬ್ಯುಸಿಯಾಗಿದ್ದೇ ಇದಕ್ಕೆ ಸಾಕ್ಷಿ.<br /><br />ಸರಿ ಮಾರನೇ ದಿನ ನೀ ಹೊರಟೆ. ದೀಪಾವಳಿ ಮುಗಿದಿತ್ತು. ಮತ್ತದೇ ಮಾಮೂಲಿ ದಿನಗಳು...ನೀನಲ್ಲಿ; ನಾನಿಲ್ಲಿ... ಎಂದುಕೊಂಡು ಬಸ್ಸು ದೂರಸಾಗಿದ್ದರೂ ನಾನು ಟಾ ಟಾ ಮಾಡುತ್ತಲೇ ಇದ್ದೆ.</span><span> </span><span>ಆದರೆ ಈ ವರ್ಷದ ದೀಪಾವಳಿ ನೆನೆಸಿಕೊಂಡಾಗ ನನಗೆ ಕಾಡುತ್ತಿರುವ ವೇದನೆ ಅಷ್ಟಿಷ್ಟಲ್ಲ. ಆ ಮೂರು ದಿನಗಳ ಒಂದು ರಾತ್ರಿಯೂ ಕೂಡ ನನಗೆ ನಿದ್ದೆ ಬಂದಿಲ್ಲ. ಬಂದದ್ದು ಬರೀ ಕಣ್ಣೀರುಗಳು ಮಾತ್ರ. ಏಕೆಂದರೆ ಅಂದು ನಿನ್ನೊಂದಿಗೆ ಆಚರಿಸಿದ ದೀಪಾವಳಿಯೇ ನನ್ನ ಪಾಲಿನ ಕೊನೆಯ ದೀಪಾವಳಿ. ನಮ್ಮ ಬದುಕಿಗೆ ಹೊಸ ಹುರುಪು ನೀಡುವ ದೀಪಾವಳಿ ಇದು ಎಂದು ಆ ರಾತ್ರಿ ಕಂ</span><span>ಡಿದ್ದ ಕನಸು ನಿನ್ನೊಂದಿಗೆ ಛಿದ್ರಛಿದ್ರಗೊಂಡಿತ್ತು. ದೀಪಾವಳಿ ಮುಗಿಸಿ ಅಂದು ನೀನು ಹೊರಟ ಆ ಬಸ್ </span><span>ಅಪಘಾತದಲ್ಲಿ</span><span> ಮೃತಪಟ್ಟವರ ಎದುರು ಕಣ್ಣೀರ ಹೊಳೆ ಹರಿಸಿದ್ದವರಲ್ಲಿ ನಾನೂ ಒಬ್ಬನಾಗಿದ್ದೆ. </span> <span><br /><br />ನಿನ್ನನ್ನು ಕಳೆದುಕೊಂಡು ಇಂದಿಗೆ ಒಂದು ವರ್ಷವಾಯಿತು ನೋಡು. ಈ ದೀಪಾವಳಿಯಂದು ಕಾಡಿದಷ್ಟು ನೀನು ಯಾವತ್ತೂ ಕಾಡಿರಲಿಲ್ಲ. ಎಲ್ಲರೂ ಬೆಳಕಿ</span><a onblur="try {parent.deselectBloggerImageGracefully();} catch(e) {}" href="https://blogger.googleusercontent.com/img/b/R29vZ2xl/AVvXsEj_KLbsJeGeHVgiDteoT54I0PPddqaE_Ty52XutOo2q3RItxL8w1rVSrUNxGI93qq2KmfAzQ4UuP20gtEOrbafu23fLJ7LDFLTxW4QE_l5WQEhYry6-2Z_xER3INaACK72IkzUkKK99uPo/s1600-h/raghu.jpg"><img style="margin: 0pt 10px 10px 0pt; float: left; cursor: pointer; width: 229px; height: 164px;" src="https://blogger.googleusercontent.com/img/b/R29vZ2xl/AVvXsEj_KLbsJeGeHVgiDteoT54I0PPddqaE_Ty52XutOo2q3RItxL8w1rVSrUNxGI93qq2KmfAzQ4UuP20gtEOrbafu23fLJ7LDFLTxW4QE_l5WQEhYry6-2Z_xER3INaACK72IkzUkKK99uPo/s320/raghu.jpg" alt="" id="BLOGGER_PHOTO_ID_5262885815529871122" border="0" /></a><span>ನ ಹಬ್ಬದಲ್ಲಿ ನಿರತರಾ</span><span>ಗಿದ್ದಾರೆ ನಾನು ಮಾತ್ರ ಮನೆಯ ಒಂದು ಮೂಲೆಯಲ್ಲೇ ಕುಳಿತಿದ್ದೆ. ಇಂದು ನೀನಿರದಿದ್ದರೂ; ನೀನು ಕಳುಹಿಸಿದ್ದ ಒಂದೊಂದು ಎಸ್ಎಂಎಸ್ಗಳನ್ನು ನಾ</span><span>ನು ಓದದ ದಿನಗಳಿಲ್ಲ. ನನ್ನ ಒಂದೊಂದು ಕೆಲಸದ ಮುಂಚೆ ನಿನ್ನನ್ನು ನೆನೆಯುತ್ತಲೇ ಇದ್ದೇನೆ. ಇಂದು ನಾನು ಉದ್ಯೋಗ ನಿಮಿತ್ತ ಮನೆಯಿಂದ ಎಷ್ಟೋ ದೂರದಲ್ಲಿದ್ದೇನೆ. ಬಹುಶಃ ನೀನಿರುತ್ತಿದ್ದರೆ ನಾನಿಲ್ಲಿ ಖಂಡಿತಾ ಬರುತ್ತಿರಲಿಲ್ಲ. ಆದರೂ ನೀನು ಇಂದಿಗೂ ನನ್ನ ಜೊತೆಯೇ ಇದ್ದೀಯಾ... ಕತ್ತಲೆ ತುಂಬಿದ ಮನದ ಮನೆಗೆ ಭರವಸೆ ತುಂಬುವ ಬೆಳಕಿನ ಹಾಗೆ.</span><span>..</span><br /></div>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com7tag:blogger.com,1999:blog-2818153219058834250.post-85907530039928965732008-09-19T23:21:00.001-07:002008-09-19T23:23:13.948-07:00<span style="font-weight: bold;font-size:180%;" >ಹೀಗೊಂದು ಸ್ವಾತಂತ್ರ್ಯಗಾಥೆ...<br /></span><br /><span style="font-size:130%;">ಅದು 104 ವರ್ಷದ ಹಿರಿಯ ಜೀವ. 66 ವರ್ಷಗಳ ಹಿಂದೆ ಗಾಂಧೀಜಿ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆಕೊಟ್ಟಾಗ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಎನ್.ಎಚ್. ಹುಚ್ಚುರಾಯಪ್ಪ 'ಕ್ವಿಟ್ ಇಂಡಿಯಾ' ಚಳವಳಿಗೆ ಧುಮುಕಿದ್ದರು. ಅಂದಿನಿಂದ ದೇಶಕ್ಕೆ ಸ್ವಾತಂತ್ರ್ಯ ಬರುವವರೆಗೆ ಹೋರಾಟವನ್ನೇ ಜೀವನವಾಗಿಸಿಕೊಂಡಿದ್ದ ಹುಚ್ಚುರಾಯಪ್ಪ, ಈ ಬಾರಿ ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಕೂಡ ಒಂದು ಹೋರಾಟ ಮಾಡಿದರು. </span><p class="tsik_bodytext"><span style="font-size:130%;">ಇದು ಒಂಥರ ವಿಚಿತ್ರವಾದ ಹೋರಾಟ. ಅವರು ಕರ್ನಾಟಕದಿಂದ ನವದೆಹಲಿಗೆ ಹೊರಟಿದ್ದು, ದೇಶದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಿದ್ದ ಚಹಾಕೂಟದಲ್ಲಿ ಭಾಗವಹಿಸಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಹ್ವಾನದ ಮೇರೆಗೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರಕ್ಕೇ ಸೇರಿರುವ ಹುಚ್ಚುರಾಯಪ್ಪ ಅವರನ್ನು ವಿಮಾನದ ಮೂಲಕ ನವದೆಹಲಿಗೆ ಕರೆದುಕೊಂಡು ಹೋಗುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿತು. ಅದರೆ, ಕೊನೆಯ ಕ್ಷಣದಲ್ಲಿ ನಿಮ್ಮ ಪ್ರಯಾಣದ ವ್ಯವಸ್ಥೆ ನೀವು ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಕಚೇರಿ ಕೈತೊಳೆದುಕೊಂಡಿತು. ಕೊನೆಗೆ ತಮ್ಮ ಸಹಾಯಕ್ಕಾಗಿ ಮಗನನ್ನು ಕರೆದುಕೊಂಡು ರೈಲು ಹತ್ತಿದ ಹಿರಿಯ ಜೀವ ನವದೆಹಲಿ ತಲುಪಿತು. </span></p> <p class="tsik_bodytext"><span style="font-size:130%;">ಇವರಂತೆಯೇ ಕರ್ನಾಟಕದಿಂದ ಇನ್ನೂ ನಾಲ್ವರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ರಾಷ್ಟ್ರಪತಿ ಭವನದಲ್ಲಿನ ವಿಶೇಷ ಚಹಾಕೂಟಕ್ಕೆ ಆಗಮಿಸಿದ್ದರು. ಅವರ ಕಥೆಯೂ ಇದಕ್ಕಿಂತ ಭಿನ್ನವಾಗಿರಲಿಲ್ಲ. ಹುಚ್ಚುರಾಯಪ್ಪ ಅವರಂತೆ ಬಿ. ಶಂಭುಶೆಟ್ಟಿ, ಚನ್ನಪ್ಪಗೌಡ, ಸಿ.ಎಂ ಪಾಲಾಕ್ಷಪ್ಪ ಹಾಗೂ ಎಸ್.ಐ. ಅರುಲ್ದಾಸ್ ಕೂಡ ರಾಜಧಾನಿಗೆ ಬಂದಿಳಿದಿದ್ದರು. ಇವರೆಲ್ಲರ ಜೊತೆ ಸಹಾಯಕ್ಕಾಗಿ ಒಬ್ಬೊಬ್ಬರು ಸಂಬಂಧಿಕರು ಕೂಡ ದೆಹಲಿಗೆ ಬಂದಿದ್ದರು. ಅದು ಸ್ವಂತ ಖರ್ಚಿನಲ್ಲಿ! ರಾಷ್ಟ್ರಪತಿಗಳ ಜೊತೆಗೆ ಚಹಾಕೂಟಕ್ಕೆ ಬನ್ನಿ ಎಂದು ಆಹ್ವಾನಿಸಿದ ಕೇಂದ್ರ ಸರ್ಕಾರವಾಗಲೀ ಅಥವಾ ಅವರನ್ನು ಕಳುಹಿಸಿದ ರಾಜ್ಯ ಸರ್ಕಾರವಾಗಲೀ ವಿಮಾನ ಬಿಡಿ (ಸ್ವಾತಂತ್ರ್ಯ ಹೋರಾಟಗಾರರು ವಿಮಾನಗಳಲ್ಲಿ ಹಾರಾಡಲು ಅರ್ಹರಲ್ಲ. ಏನಿದ್ದರೂ ಖಾದಿ ತೊಟ್ಟ 'ದೇಶಭಕ್ತರು' ಮಾತ್ರ ಸರ್ಕಾರಿ ದುಡ್ಡಿನಲ್ಲಿ ವಿಮಾನವೇರಿ ಹಾರಾಡಲು ಅರ್ಹರು!) ಕನಿಷ್ಠ ಹತ್ತು ರೈಲು ಟಿಕೆಟುಗಳನ್ನು ಖರೀದಿಸಿ ಇವರನ್ನು ದೆಹಲಿಗೆ ಕಳುಹಿಸುವ ಔದಾರ್ಯವನ್ನೂ ತೋರಲಿಲ್ಲ. </span></p> <p class="tsik_bodytext"> <span style="font-size:130%;"><img src="http://www.thesundayindian.com/kannada/20080824/images/drop_2.jpg" vspace="5" align="right" border="0" hspace="5" />ಅದೇ ರೀತಿ ದೇಶದೆಲ್ಲೆಡೆಯಿಂದ ಒಟ್ಟು 294 ಮಂದಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಈ ವರ್ಷದ ಚಹಾ ಕೂಟಕ್ಕೆ ಆಹ್ವಾನಿಸಲಾಗಿತ್ತು. ಪ್ರತಿ ವರ್ಷ ಆಗಸ್ಟ್ 9ರಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ರಾಷ್ಟ್ರಪತಿಗಳು ಚಹಾಕೂಟಕ್ಕೆ ಆಹ್ವಾನಿಸುವುದು ಸಂಪ್ರದಾಯ. ಆ ಸಂಪ್ರದಾಯದ ಸವಿ ಅನುಭವಿಸಲು ಬಂದವರ ಪೈಕಿ ಹೆಚ್ಚಿನ ಪಕ್ಷ ಎಲ್ಲರ ಕಥೆ ಕೂಡ ಇದೇ ಇರಬಹುದು. ಹೀಗೆ ಪಡಬಾರದ ಪಾಡು ಪಟ್ಟು ರಾಜಧಾನಿಯಲ್ಲಿ ಸ್ವಾತಂತ್ರ್ಯ ಸಂಭ್ರಮ ಆಚರಿಸಲು ಬಂದವರಿಗೆ ಸಿಕ್ಕಿದ್ದಾದರೂ ಏನು? ಸುಮಾರು ಎರಡು ಗಂಟೆಗಳಷ್ಟು ಕಾಲ ನಡೆದ ಆ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರಿಗೂ ಶಾಲು ಹೊದಿಸಿ, ವಾಚೊಂದನ್ನು ನೀಡಿ ಸನ್ಮಾನಿಸಲಾಯಿತು. ಉಳಿದಂತೆ ಇವರ ಆಗುಹೋಗುಗಳನ್ನು ಕೇಳುವವರು ಯಾರೂ ಇರಲಿಲ್ಲ. ರಾಷ್ಟ್ರಪತಿಗಳೊಂದಿಗೆ ಚಹಾಕೂಟದಲ್ಲಿ ಭಾಗವಹಿಸಲು ಇವರೆಷ್ಟು ಅರ್ಹರು? ಎಂಬ ಪ್ರಶ್ನೆ ಕೂಡ ಈಗಿನ ಕುಡಿಮೀಸೆಯ ಹುಡುಗರಲ್ಲಿ ಮೂಡಬಹುದು. ಅದು ಅರ್ಥವಾಗಬೇಕಿದ್ದರೆ ಒಮ್ಮೆ ಈ ಹಿರಿಯರ ಜೀವನದತ್ತ ಇಣುಕು ನೋಟ ಹರಿಸಬೇಕು.</span></p> <p class="tsik_bodytext"> <span style="font-size:130%;"><img src="http://www.thesundayindian.com/kannada/20080824/images/drop_3.jpg" vspace="5" align="left" border="0" hspace="5" />81ರ ಹರೆಯದ ಸಿ.ಎಂ. ಪಾಲಾಕ್ಷಪ್ಪ, ವೃತ್ತಿಯಲ್ಲಿ ಆಯುರ್ವೇದ ವೈದ್ಯ. 1947ರಲ್ಲಿ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗವಹಿಸಿದ ಕಾರಣಕ್ಕಾಗಿ ಬೆಂಗಳೂರು ಸೆಂಟ್ರಲ್ ಜೈಲು ಸೇರಿದರು. ಪಾಲಾಕ್ಷಪ್ಪನವರು ಮತ್ತೆ ಬಿಡುಗಡೆಯ ಭಾಗ್ಯ ಕಂಡಿದ್ದು ಕರ್ನಾಟಕ ಏಕೀಕರಣದ ನಂತರ. ನಿಜಲಿಂಗಪ್ಪ, ಹೆಚ್.ಟಿ ದಯಾಳ್, ಕೆ.ಟಿ ಭಾಷ್ಯಂ ಇವರೆಲ್ಲರ ನಿಕಟ ಸಂಪರ್ಕ ಹೊಂದಿದ್ದವರು ಪಾಲಾಕ್ಷಪ್ಪ. ಬಿಡುಗಡೆಯ ನಂತರ ಅವರು ಸಕ್ರಿಯ ರಾಜಕಾರಣಕ್ಕೆ ಧುಮುಕಿದರು. ಕಾಂಗ್ರೆಸ್ ನಾಯಕರೊಂದಿಗೆ ಒಡನಾಟ ಹೊಂದಿದ್ದ ಈ ಸ್ವಾತಂತ್ರ್ಯ ಸೇನಾನಿಗೆ ಇಂದಿನ ಧನಬಲ, ತೋಳ್ಬಲ ಹಾಗೂ ಅಧಿಕಾರ ಲಾಲಸೆಯ ರಾಜಕಾರಣವನ್ನು ಕಂಡಾಗ, ಅಂದು ತಾವು ಸ್ವಲ್ಪ ಎಚ್ಚರಿಕೆ ವಹಿಸಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂಬ ಕಳಕಳಿಯಿದೆ. ಆದರೆ, ಇವರ ಬಗ್ಗೆ ಕಳಕಳಿ ತೋರಿಸುವವರು...? ಅಂದಹಾಗೆ ಸಿ.ಎಂ ಪಾಲಾಕ್ಷಪ್ಪ ಇಂದಿಗೂ ವಾಸವಿರುವುದು ಬಾಡಿಗೆ ಮನೆಯಲ್ಲೇ! ಸುಮಾರು 200ಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಿದ ಬಳಿಕ 2005ರಲ್ಲಿ ರಾಜ್ಯ ಸರ್ಕಾರದಿಂದ ಅವರಿಗೆ ಪಿಂಚಣಿ ಮಂಜೂರಾಗಿದೆ!</span></p> <p class="tsik_bodytext"><span style="font-size:130%;">90 ಹರೆಯದ ಉಡುಪಿ ಮೂಲದ ಶಂಭುಶೆಟ್ಟಿ ಅವರು 1932ರಲ್ಲೇ ಸ್ವಾತಂತ್ರ ಹೋರಾಟಕ್ಕೆ ಕಾಲಿಟ್ಟವರು. ನಂತರ ಹಿಂದಿರುಗಿ ನೋಡಲಿಲ್ಲ. ಏಳನೇ ವರ್ಷಕ್ಕೆ ಶಾಲೆ ತೊರೆದ ಅವರು ಎರಡು ಬಾರಿ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಜೈಲು ಸೇರಿದ್ದರು. ಆದರೆ ಜೈಲಿನಲ್ಲಿ ಕಳೆದ ದಿನಗಳನ್ನು ಅಷ್ಟೇ ರೋಚಕವಾಗಿ ವಿವರಿಸುತ್ತಾರೆ ಶಂಭು ಶೆಟ್ಟಿ. 'ಒಂದು ವಿಶ್ವವಿದ್ಯಾಲಯದಲ್ಲಿನ ಅನುಭವ ಜೈಲಿನಿಂದ ಪಡೆದೆ. ಭಾಷಣ ಹಾಗೂ ಇತರ ಸಕ್ರಿಯ ಚಟುವಟಿಕೆಗಳು ನಮ್ಮ ಹೋರಾಟಕ್ಕೆ ಇನ್ನಷ್ಟು ಇಂಬು ನೀಡಿದ್ದವು ಎಂದು ಅಂದಿನ ದಿನಗಳ ಮೆಲುಕು ಹಾಕುತ್ತಾರೆ ಶೆಟ್ಟರು. ಆದರೆ ಅವರ ಹೋರಾಟ ಮಾತ್ರ ಮುಂದುವರಿಯುತ್ತಲೇ ಇದೆ...</span></p> <p class="tsik_bodytext"><span style="font-size:130%;">ಎಂಬತ್ತೊಂದರ ಹರೆಯದ ಚನ್ನಪ್ಪಗೌಡ ನವಲಗುಂದ ತಾಲ್ಲೂಕಿನ ಸಿರಕೊಲ ಗ್ರಾಮದವರು. ಇನ್ನು ಕೋಲಾರದ ಕೆ.ಜಿ.ಎಫ್.ನ ಅರುಲ್ದಾಸ್ ಕೂಡ ಎಂಬತ್ತರ ಗಡಿ ದಾಟಿದ ವಯೋವೃದ್ಧ ಸ್ವಾತಂತ್ರ್ಯ ಸೇನಾನಿ. ಇವರಿಬ್ಬರೂ ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ತಮ್ಮ ವೈಯಕ್ತಿಕ ಜೀವನವನ್ನು ಮರೆತು ದೇಶಕ್ಕಾಗಿ ಅರ್ಪಿಸಿಕೊಂಡ ಹಿರಿಯರು.</span></p> <p class="tsik_bodytext"><span style="font-size:130%;">ಹೀಗೆ ಈ ಹಿರಿಯರ ಬದುಕಿನಲ್ಲಿ ಇಣುಕು ನೋಟ ಹರಿಸಿದಾಗ ಮಾತ್ರ ಇವರೆಷ್ಟು ಅಮೂಲ್ಯ ಸಂಪತ್ತು ಎನ್ನುವುದು ಅರ್ಥವಾಗುತ್ತದೆ. ಆದರೆ, ಚಹಾಕೂಟದ ಹೆಸರಲ್ಲಿ ಅವರನ್ನು ಹೀಗೆ ಮತ್ತೊಂದು 'ಸ್ವಾತಂತ್ರ್ಯ' ಹೋರಾಟಕ್ಕೆ ಇಳಿಸಿದ್ದು ಮಾತ್ರ ವಿಪರ್ಯಾಸ ಎಂದೇ ಹೇಳಬೇಕು. ಯಾವುದೋ ಒಂದು ಸಂಪ್ರದಾಯದ ಹೆಸರಲ್ಲಿ ಅಂತಹ ವಯೋವೃದ್ಧ ಹೋರಾಟಗಾರರನ್ನು, ಅವರದೇ ಖರ್ಚಿನಲ್ಲಿ ರೈಲು ಹತ್ತಿಸುವ ಈ ವಿಪರ್ಯಾಸಕ್ಕೆ ಯಾರನ್ನು ಹೊಣೆ ಮಾಡಬೇಕು? ಅದೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ವಕ್ಷೇತ್ರಕ್ಕೆ ಸೇರಿದ 104 ವರ್ಷ ವಯಸ್ಸಿನ ಸ್ವಾತಂತ್ರ್ಯ ಹೋರಾಟಗಾರರೊಬ್ಬರನ್ನು ಹೀಗೆ ನಡೆಸಿಕೊಂಡಿದ್ದು ಸಂಸ್ಕೃತಿ ವಾರಸುದಾರರಿಗೆ ಶೋಭೆ ತರುವುದಿಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ಇದು ನಿಮಗೆ ಅರ್ಥವಾದೀತೆ? </span></p>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com1tag:blogger.com,1999:blog-2818153219058834250.post-29027461167189228772008-09-17T14:41:00.000-07:002008-09-19T23:06:23.752-07:00<p style="font-weight: bold;" class="tsik_bodytext"><span style="font-size:180%;">ಓಸಿಯನ್ 'ಟಾಕೀಸ್'ನಲ್ಲಿ 'ಗುಲಾಬಿ'ಯ ಕಂಪು </span></p><p class="tsik_bodytext"><span style=";font-family:Arial;font-size:130%;" ><br /></span></p><p class="tsik_bodytext"><span style=";font-family:Arial;font-size:130%;" >ಅದು ನವದೆಹಲಿಯ ಸಿರಿಫೋರ್ಟ್ ಸಾಂಸ್ಕೃತಿಕ ಸಮುಚ್ಛಯ. ಅಲ್ಲಿ ಜಪಾನ್, ಕೊರಿಯಾ, ಇಸ್ರೇಲ್, ಪಾಕಿಸ್ತಾನ, ಶ್ರೀಲಂಕಾ, ಅಮೆರಿಕ, ಇಂಡೋನೇಷಿಯಾ, ಮೊರೊಕ್ಕೊ, ಈಜಿಪ್ಟ್, ಹಾಂಗ್ಕಾಂಗ್, ಸಿರಿಯಾ, ಫ್ರಾನ್ಸ್, ಭಾರತ ಸೇರಿದಂತೆ ಹತ್ತಾರು ದೇಶಗಳ 200ಕ್ಕಿಂತಲೂ ಅಧಿಕ ಚಲನಚಿತ್ರಗಳು ಪ್ರದರ್ಶನಕ್ಕಾಗಿ ಬಂದಿದ್ದವು. ಕಲಾತ್ಮಕತೆಯಲ್ಲಿ ಅವೆಲ್ಲಾ ಒಂದಕ್ಕಿಂತ ಒಂದು ಹೆಚ್ಚೇ ಎನ್ನಿ. ಜುಲೈ 10ರಿಂದ ಆರಂಭವಾಗಿದ್ದ ಸಿನಿಮಾ ಉತ್ಸವದಲ್ಲಿ ಬರೀ ಚಿತ್ರಗಳು ಮಾತ್ರವಲ್ಲ ನಾನಾ ದೇಶಗಳ, ಬಗೆಬಗೆಯ ಭಾಷೆಯ ಜನರು ನೆರೆದಿದ್ದರು. ಇಂಗ್ಲಿಷ್ ಬಾರದ ಅದೆಷ್ಟೋ ದೇಶದ ಜನರೂ ಇದ್ದುದ್ದರಿಂದ 'ಸಾಮಾನ್ಯ ಸಂವಹನ ಭಾಷೆ'ಯಾಗಲು ಇಂಗ್ಲಿಷ್ಗೆ ಕೂಡಾ ಅಲ್ಲಿ ಕಷ್ಟವೇ ಆಗಿತ್ತು. 'ಓಸಿಯನ್ಸ್ ಸಿನಿಫ್ಯಾನ್ ಚಲಚಿತ್ರೋತ್ಸವ' ಅಂದರೆ ಹಾಗೆಯೇ. ಅಲ್ಲಿ ಭಾಷೆಯ ಗಡಿ ಇಲ್ಲ; ಇದ್ದಿದ್ದರೆ ಕನ್ನಡ ಈ ಚಿತ್ರೋತ್ಸವದಲ್ಲಿ ಮೆರೆಯುವ ಸಾಧ್ಯತೆಯಿತ್ತೇ?</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ಈ ಬಾರಿಯ 10ನೇ 'ಓಸಿಯನ್ (ಅರಬ್ ಹಾಗೂ ಏಷ್ಯಾ) ಚಲನಚಿತ್ರೋತ್ಸವ' ಕೂಡಾ ವಿಶೇಷತೆ ಮೆರೆಯದೆ ಇರಲಿಲ್ಲ. ಆದರೆ ಕನ್ನಡಿಗರಾದ ನಮಗೆ ಎಲ್ಲಕ್ಕಿಂತ ವಿಶೇಷವಾಗಿ ಕಂಡದ್ದು, ಕನ್ನಡದ ಇಬ್ಬರು ಪ್ರತಿಭಾವಂತರು ಅಲ್ಲಿನ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದದ್ದು.</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >'ಗಿರೀಶ್ ಕಾಸರವಳ್ಳಿ' ಅವರ 'ಗುಲಾಬಿ ಟಾಕೀಸ್' ಭಾರತೀಯ ಚಿತ್ರಗಳ ವಿಭಾಗದಲ್ಲಿ 'ಅತ್ಯುತ್ತಮ ಚಿತ್ರ' ಪ್ರಶಸ್ತಿಗೆ ಪಾತ್ರವಾಯಿತು. ಕಾಸರವಳ್ಳಿ ಚಿತ್ರ ಅಂದಮೇಲೆ ಪ್ರಶಸ್ತಿ ಸಿಗದೆ ಇರುವುದು ಹೇಗೆ ಹೇಳಿ? ಈ ಮೊದಲೇ ಅವರ ಹಿಂದಿನ ಕೆಲವು ಚಿತ್ರಗಳಿಗೆ ಅಂತರ್ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು ದೊರಕಿದ್ದವು. ಈಗ 'ಗುಲಾಬಿ ಟಾಕೀಸ್'ನ ಸರದಿ. ಇದೇ ಚಿತ್ರದಲ್ಲಿನ ಅಭಿನಯಕ್ಕಾಗಿ 'ಅತ್ಯುತ್ತಮ ನಟಿ' ಪ್ರಶಸ್ತಿ ಪಡೆದವರು ತಮ್ಮ ಅದ್ಭುತ ನಟನಾ ಶಕ್ತಿಯ ಮೂಲಕ ಕನ್ನಡಿಗರ ಮನೆ-ಮನಗಳನ್ನು ಗೆದ್ದಿರುವ ಹಿರಿಯ ನಟಿ ಉಮಾಶ್ರೀ.</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ಸಿರಿಫೋರ್ಟ್ನಲ್ಲಿ 'ಗುಲಾಬಿ ಟಾಕೀಸ್' ಪ್ರದರ್ಶನಗೊಂಡಾಗ ಚಿತ್ರ ವೀಕ್ಷಿಸಲು ಬೆರಳೆಣಿಕೆಯಷ್ಟು ಕನ್ನಡಿಗರು (ಇತರ ಭಾಷಿಗರನ್ನು ಹೊರತುಪಡಿಸಿ) ಕೂಡಾ ಇರಲಿಲ್ಲ. ಆದರೆ ಕಾಸರವಳ್ಳಿ ಅವರು ತೆರೆಯ ಮೇಲೆ ಮೂಡಿಸಿದ ದೃಶ್ಯಕಾವ್ಯ ಆಸ್ವಾದಿಸಲು ಇತರ ಭಾಷಿಕರಿಗೆ ಯಾವುದೇ ಅಡ್ಡಿಯಾಗಲಿಲ್ಲ. </span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >11 ದಿನಗಳ ಕಾಲ ನವದೆಹಲಿಯ ಸಿರಿಫೋರ್ಟ್ನಲ್ಲಿ ನಡೆದ ಚಿತ್ರೋತ್ಸವಕ್ಕೆ ತೆರೆ ಎಳೆಯುವ ದಿನದ ಆ ಸುಂದರ ಸಂಜೆಯಂದು ಕಿಕ್ಕಿರಿದು ತುಂಬಿದ್ದ ಸಭಾಂಗಣದಲ್ಲಿ ಪ್ರಶಸ್ತಿ ಪಡೆದ ಚಿತ್ರದ ನಿರ್ಮಾಪಕ ಬಸಂತ್ ಕುಮಾರ್ ಪಾಟಿಲ್ ಸಂತಸ ಹಂಚಿಕೊಂಡರು. "ಚಿತ್ರಕ್ಕೆ ಪ್ರಶಸ್ತಿ ದೊರಕಿದ್ದು ನಿಜವಾಗಿಯೂ ಖುಷಿ ತಂದಿದೆ. ನಮ್ಮೆಲ್ಲರ ಪರಿಶ್ರಮಕ್ಕೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿದೆ. ಎಲ್ಲಕ್ಕಿಂತ ಮುಖ್ಯವಾಗಿ ಜನರು ಚಿತ್ರ ಮೆಚ್ಚಿದರು. ಪ್ರಶಸ್ತಿಗಿಂತ ಜನರ ಪ್ರಶಂಸೆಗಳು ನನಗೆ ಸಂತಸ ನೀಡಿದೆ" ಎಂದು ನುಡಿದರು.</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ಚಿತ್ರದ ತಂತ್ರಜ್ಞರಾದಿಯಾಗಿ ಎಲ್ಲರೂ ಹೇಳುವಂತೆ, ಪ್ರಧಾನ ಭೂಮಿಕೆಯಲ್ಲಿರುವ ಉಮಾಶ್ರೀ ಅವರ ನಟನೆಯಂತೂ ಅತ್ಯದ್ಭುತ. ಕರಾವಳಿಯ ಮೀನುಗಾರ ಕುಟುಂಬದ ಮುಸ್ಲಿಂ ಮಹಿಳೆ ಗುಲಾಬಿ (ಗುಲ್ನಾಬಿ) ಪಾತ್ರದಲ್ಲಿ ಕಾಣಿಸಿಕೊಳ್ಳುವ ಉಮಾಶ್ರೀ ಅವರು ಮುಗ್ಧತೆ ಮತ್ತು ಗಾಂಭೀರ್ಯ ಮೇಳೈಸಿದ ಪಾತ್ರವನ್ನು ನಿರ್ವಹಿಸುವಲ್ಲಿ ಸಂಪೂರ್ಣ ಯಶಸ್ಸು ಕಂಡಿದ್ದಾರೆ. ಅವರ ಆ ಪರಿಶ್ರಮಕ್ಕೆ ತಕ್ಕ ಪ್ರತಿಫಲವೂ ದೊರಕಿದೆ. ಕಾಸರವಳ್ಳಿ ಅವರ ಹಿಂದಿನ ಹಲವು ಚಿತ್ರಗಳಲ್ಲಿದ್ದಂತೆ ಇಲ್ಲಿ ಕೂಡ ಮಹಿಳಾ ಪ್ರಾತಿನಿಧ್ಯವೇ ಎದ್ದು ಕಾಣುತ್ತದೆ. ಎಂತಹ ಸಂಕಷ್ಟದ ಸಂದರ್ಭವನ್ನೂ ನಿಭಾಯಿಸುವ ತಾಕತ್ತು ಮಹಿಳೆಗೆ ಕರಗತ ಎಂಬುದನ್ನು 'ಗುಲಾಬಿ' ಪಾತ್ರದ ಮೂಲಕ ನಿರೂಪಿಸಿದ್ದಾರೆ. ಸಂಪೂರ್ಣ ಸಿನಿಮಾ 'ಕುಂದಗನ್ನಡ'ದಲ್ಲಿದ್ದರೂ, ಉಮಾಶ್ರೀ ಸೇರಿದಂತೆ ಇತರ ನಟರ ಸಂಭಾಷಣೆ ನವಿರಾಗಿ ಮೂಡಿಬಂದಿದೆ. ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಮಾತನಾಡಿದ ಉಮಾಶ್ರೀ, "ಇಂದು ನನಗೆ ಈ ಪ್ರಶಸ್ತಿ ಬಂದಿದೆ ಎಂದರೆ ಅದಕ್ಕೆ ನಿರ್ದೇಶಕರೇ ಕಾರಣ. ಇಡೀ ಕರ್ನಾಟಕದ ಜನತೆಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ" ಎಂದಾಗ ಅವರ ಮೊಗದಲ್ಲಿ ಸಂತೃಪ್ತಿಯ ಕಳೆ ಎದ್ದು ಕಾಣುತ್ತಿತ್ತು.<br /></span></p><p class="tsik_bodytext"><span style=";font-family:Arial;font-size:130%;" >ಗುಲಾಬಿ ಪಾತ್ರದ ಕುರಿತು ಮಾತನಾಡಿದ ಕಾಸರವಳ್ಳಿ ಅವರು, "ಗುಲಾಬಿಯ ಒಂಟಿತನ, ಪ್ರೇಮ-ಪ್ರೀತಿಯ ಹಪಹಪಿಯನ್ನು ಇಲ್ಲಿ ಬಿಂಬಿಸಲಾಗಿದೆ. ಒಂದು ಯಂತ್ರದ (ಟಿವಿ) ಮೂಲಕ ಆಕೆ ಇಡೀ ಸಮುದಾಯವನ್ನು ಆಕರ್ಷಿಸುತ್ತಾಳೆ. ಹೀಗೆ ಆಕೆ ತನ್ನ ಗಂಡನ ಪ್ರೀತಿ, ಊರಿನ ಪ್ರೀತಿ, ಸಮುದಾಯದ ಪ್ರೀತಿಗೂ ಪಾತ್ರಳಾಗುತ್ತಾಳೆ. ಆದರೆ ಅದೇ ಯಂತ್ರ ಸಮಾಜ ವಿಭಜನೆಗೂ ಇಲ್ಲಿ ಕಾರಣವಾಗುತ್ತದೆ. ಹಾಗಾಗಿ ಇಲ್ಲಿ ನಾನು 'ಇಮೇಜ್ ಮೇಕಿಂಗ್' ಪ್ರಕ್ರಿಯೆಯ ರಾಜಕೀಯತೆಯನ್ನು ಜನರಿಗೆ ತೋರಿಸುವ ಯತ್ನ ಮಾಡಿದ್ದೇನೆ" ಎಂದು ಹೇಳುತ್ತಾರೆ. </span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ಕೇವಲ ಗುಲಾಬಿಯ ನೋವು-ನಲಿವುಗಳು ಮಾತ್ರವಲ್ಲ, ಹಳ್ಳಿಯ ಜನರ ಹಾಗೂ ಅವರ ಕೌಟುಂಬಿಕ ಬದುಕಿನ ಚಿತ್ರಣವನ್ನು ಕಾಸರವಳ್ಳಿ ಅವರು ನೈಜತೆಯಿಂದ ಚಿತ್ರಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ಕುಟುಂಬದ ಜವಾಬ್ದಾರಿ ಹೊತ್ತ ಪುರುಷರಿಗೆ ಕೌಟುಂಬಿಕ ಜೀವನ ನಿಭಾಯಿಸಲಾಗದೆ ಸಂಕಷ್ಟ ಎದುರಾಗುವುದು, ಪತ್ನಿ ಹಾಗೂ ಮಕ್ಕಳು ಬಡತನದ ಬೇಗೆಯಲ್ಲಿ ಸಿಲುಕಿ ಒದ್ದಾಡುವುದು, ಹಾಗೇ ಆ ಸಂದರ್ಭದಲ್ಲಿ ವಾಸಣ್ಣ ಅಥವಾ ಸುಲೈಮಾನ್ ಪರವಾಗಿ ದುಡಿಯುವುದೋ ಎಂಬ ತುಮುಲಗಳು ಗಂಡಂದಿರ ಮನದಲ್ಲಿ ಸೃಷ್ಟಿಯಾಗುವಂಥ ಸನ್ನಿವೇಶಗಳನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸುವಲ್ಲಿ ಕಾಸರವಳ್ಳಿ ಯಶಸ್ವಿಯಾಗಿದ್ದಾರೆ.</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ಚಿತ್ರದುದ್ದಕ್ಕೂ ಜಾಗತೀಕರಣದ ಪರಿಣಾಮಗಳು ಸೂಚ್ಯವಾಗಿ ಒಡಮೂಡಿದೆ. ಇದರ ಜೊತೆಗೆ ದುಬೈನಲ್ಲಿ ನೆಲೆಸಿದ್ದು, ಹಳ್ಳಿಯಲ್ಲಿ ಮೀನುಗಾರಿಕೆ ಉದ್ಯಮ ನಡೆಸುತ್ತಿದ್ದ ಸುಲೈಮಾನ್ ಹಾಗೂ ಅದೇ ಹಳ್ಳಿಯಲ್ಲಿ ಮೀನುಗಾರಿಕೆ ಕಾರ್ಯದಲ್ಲಿ ನಿರತನಾಗಿದ್ದ ವಾಸಣ್ಣ ಇವರಿಬ್ಬರಿಂದಲೂ ಹಳ್ಳಿ ಜನರು ಶೋಷಣೆಗೊಳಗಾಗುವುದನ್ನು ವಿವಿಧ ಸನ್ನಿವೇಶಗಳಲ್ಲಿ ತೆರೆದಿಡಲಾಗಿದೆ.</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ತಮ್ಮ ಪರಿಧಿಯೊಳಗೆ ಬದುಕನ್ನು ಕಂಡುಕೊಳ್ಳಲಾರದ ಮಾನವನ ಅನಿಶ್ಚಿತತೆಯನ್ನು ಬಿಂಬಿಸುವುದರ ಜೊತೆಗೆ ಹಳ್ಳಿಯಲ್ಲಿನ ಅತೃಪ್ತಿ ಮತೀಯ ಸಂಘರ್ಷಕ್ಕೆ ಕಾರಣವಾಗುವ ಬಗೆಯನ್ನು ಚಿತ್ರದಲ್ಲಿ ಕಾಣಬಹುದು. "ಒಂದು ಸಂಕೀರ್ಣವಾದ ಚಿತ್ರಕಥೆ ಬರೆದು, ಸಮಾಜದ ಎಲ್ಲಾ ಮುಖಗಳನ್ನು ಅನಾವರಣಗೊಳಿಸಿದ್ದೇನೆ" ಎನ್ನುವ ಕಾಸರವಳ್ಳಿ, "ಇಲ್ಲಿ ಹಿಂದೂಗಳೆಲ್ಲರೂ ಕೆಟ್ಟವರು ಅಥವಾ ಒಳ್ಳೆಯವರು ಹಾಗೂ ಮುಸ್ಲಿಮರೆಲ್ಲಾ ಕೆಟ್ಟವರು ಅಥವಾ ಒಳ್ಳೆಯವರು ಎಂದು ಚಿತ್ರಿಸಲಾಗಿಲ್ಲ. ಗುಲಾಬಿಯನ್ನು ಊರಿನಿಂದ ಹೊರ ಅಟ್ಟಿದ್ದು ಆರ್ಥಿಕ ಕಾರಣದಿಂದಾಗಿಯೇ ವಿನಾ ಆಕೆ ಮುಸ್ಲಿಂ ಎಂದಲ್ಲ. ಆಕೆಯ ಗಂಡನೂ ಹಲವು ಅನ್ಯಾಯಗಳನ್ನು ಮಾಡಿದ್ದಾನೆ. ಆಕೆಯನ್ನು ಓಡಿಸುವ ಹಿಂದೆ ಹಳ್ಳಿಯ ಆರ್ಥಿಕತೆಯ ಕಾರಣವೂ ಇದೆ. ಮತ್ತೊಂದು ವಿಚಾರ ಏನೆಂದರೆ ನೋಡುಗರು ಮುಸ್ಲಿಮರಿಂದಲೇ ಇಂದು ಜಗತ್ತಿನಲ್ಲಿ ಎಲ್ಲಾ ಅನ್ಯಾಯಗಳು ನಡೆಯುತ್ತಿವೆ ಎಂದು ಯೋಚಿಸಿದರೆ ಅವರಿಗೆ ಈ ಸಿನಿಮಾವೇ ಒಂದು ದೊಡ್ಡ ಅಪರಾಧವಾಗಿ ಕಾಣಬಹುದು' ಎಂದು ವಿವರಣೆ ನೀಡುತ್ತಾರೆ.</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ಒಟ್ಟಾರೆ ಕನ್ನಡ ಸಿನಿಮಾವೊಂದು ಇಂದು ಮತ್ತೊಮ್ಮೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರೊಂದಿಗೆ ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ನೀಡಿದ್ದಾರೆ ಗಿರೀಶ್ ಕಾಸರವಳ್ಳಿ. ಕಾಸರವಳ್ಳಿ ಅವರ ಚಿತ್ರಕ್ಕೆ ಅಂತರ್ ರಾಷ್ಟ್ರೀಯ ಪ್ರಶಸ್ತಿ ಲಭಿಸುತ್ತಿರುವುದು ಇದು ಮೊದಲನೇ ಬಾರಿ ಅಲ್ಲದಿದ್ದರೂ, ಉಮಾಶ್ರೀ ಅವರ ಪರಿಶ್ರಮಕ್ಕೆ ತಕ್ಕ ಫಲವೆಂಬಂತೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಗೌರವ ದೊರೆತಿದ್ದು ನಿಜಕ್ಕೂ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಅಂದಹಾಗೆ 'ಓಸಿಯನ್ಸ್ ಸಿನಿಫ್ಯಾನ್' ಚಲಚಿತ್ರೋತ್ಸವದಲ್ಲಿ ಪಾಲ್ಗೊಂಡಿದ್ದ ತೀರ್ಪುಗಾರರು ಹಾಗೂ ಸಿನಿಮಾ ಪ್ರಿಯರ ಮನಮೆಚ್ಚಿದ 'ಗುಲಾಬಿ ಟಾಕೀಸ್' ಕಲಾತ್ಮಕ ವಿಭಾಗದಲ್ಲಿ ಸ್ಪರ್ಧಿಸಿ ಪ್ರಶಸ್ತಿ ಬಾಚಿಕೊಂಡಿದ್ದರೂ ಚಿತ್ರ ವೀಕ್ಷಿಸುವಾಗ ಇದು ಯಾವುದೇ ಕಮರ್ಷಿಯಲ್ ಚಿತ್ರಕ್ಕೆ ಕಡಿಮೆಯಿಲ್ಲದಂತೆ ತೋರುವುದು ಮಾತ್ರ ನಿಜ.<br /></span></p><p class="tsik_bodytext"><span style="font-size:130%;">------------------------------------------------------------------------------------------------------------------------<br /></span></p><p class="question"><span style=";font-family:Arial;font-size:130%;" ><span style="font-size:130%;"><span style="font-weight: bold;">ಕಾಸರವಳ್ಳಿ ಅವರು ತಮ್ಮ ಅನುಭವ ಹಂಚಿಕೊಂಡದ್ದು ಹೀಗೆ...</span></span><br /></span></p><p style="font-weight: bold;" class="question"><span style=";font-family:Arial;font-size:130%;" >ಈ ಪ್ರಶಸ್ತಿಯನ್ನು ನೀವು ನಿರೀಕ್ಷಿಸಿದ್ದಿರಾ?</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ಸಿನಿಮಾ ಮಾಡಿದಾಗ ಅದು ಚೆನ್ನಾಗಿದೆಯೋ ಅಥವಾ ಕೆಟ್ಟದಾಗಿದೆಯೋ ನನಗೆ ಗೊತ್ತಾಗುವುದಿಲ್ಲ. ಚಿತ್ರ ವೀಕ್ಷಿಸಿದ ಬಳಿಕ ಕೆಲವರು ಅಸಮಾಧಾನ ವ್ಯಕ್ತಪಡಿಸಿದರೂ, ಇನ್ನು ಕೆಲವರು ಅತ್ಯದ್ಭುತವಾಗಿದೆ ಎಂದು ಬೆನ್ನು ತಟ್ಟಿದರು. ಪ್ರಕಾಶ್ ಬೆಳವಾಡಿ, ಜಿ.ಎಸ್. ಭಾಸ್ಕರ್ ಮತ್ತು ಪಿ. ಶೇಷಾದ್ರಿ ಅವರು ಸೇರಿದಂತೆ ಕೆಲವರು ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದರು. ಆ ನಂತರ ಚಲನಚಿತ್ರೋತ್ಸವಗಳಿಗೂ ನಾನು ಈ ಚಿತ್ರವನ್ನು ಕಳುಹಿಸಿದೆ. ಖ್ಯಾತ ವಿಮರ್ಶಕರಾದ ವಿದ್ಯಾರ್ಥಿ ಚಟರ್ಜಿ, ಪ್ರಸನ್ನ ರಾಮಸ್ವಾಮಿ ಅವರು ಹಲವು ವರ್ಷಗಳ ನಂತರ ಅತ್ಯದ್ಭುತ ಚಿತ್ರ ನೀಡಿದ್ದೀರಿ ಎಂದು ಶ್ಲಾಘಿಸಿದರು. ಮೊದಲ ಸ್ಕ್ರೀನಿಂಗ್ ನೋಡಿದ ನಂತರ ಕೆಲವು ಪ್ರೇಕ್ಷಕರಿಂದ ಇವತ್ತಿನ ಸಂದರ್ಭಕ್ಕೆ ಚಿತ್ರ ಯೋಗ್ಯವಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಯಿತು. ಅಂದೇ ಉಮಾಶ್ರೀ ಅವರಿಗೆ ಪ್ರಶಸ್ತಿ ಬರಬಹುದೇನೋ ಅಂದುಕೊಂಡೆ. </span></p> <span style=";font-family:Arial;font-size:130%;" > </span><p style="font-weight: bold;" class="question"><span style=";font-family:Arial;font-size:130%;" >ಕರಾವಳಿ ಪ್ರದೇಶದಲ್ಲಿ ಚಿತ್ರ ಮಾಡುವಾಗ ಎಂತಹ ಸವಾಲಿತ್ತು?</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ನಿಜ ಹೇಳಬೇಕೆಂದ್ರೆ ನಮಗೆ ಕರಾವಳಿ ಪ್ರದೇಶದ ಬಗ್ಗೆ ಹೆಚ್ಚಿನ ಪರಿಚಯ ಇರಲಿಲ್ಲ. ಇಂತಹ ಸಂದರ್ಭದಲ್ಲೂ ಪರಿಸ್ಥಿತಿಗೆ ಹೊಂದಿಕೊಂಡು ಚಿತ್ರ ಮಾಡುವುದು ಸವಾಲೇ ಆಗಿತ್ತು.</span></p> <span style=";font-family:Arial;font-size:130%;" > </span><p style="font-weight: bold;" class="question"><span style=";font-family:Arial;font-size:130%;" >'ಗುಲಾಬಿ' ಪಾತ್ರಕ್ಕೆ ಉಮಾಶ್ರೀ ಅವರ ಆಯ್ಕೆಗೆ ಕಾರಣ?</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ನಮ್ಮಲ್ಲಿ ಕೆಲವರು ಉಮಾಶ್ರೀ ಅವರು ಕೇವಲ ಕಾಮಿಡಿ ಪಾತ್ರಕ್ಕೆ ಮಾತ್ರ ಯೋಗ್ಯರು ಎಂದು ಅವರ ಹಿನ್ನೆಲೆ ತಿಳಿಯದೆ ವಾದಿಸುತ್ತಾರೆ. ಒಳ್ಳೆ ಪಾತ್ರ ಮಾಡಿಕೊಂಡು ಬಂದಿದ್ದರೂ ಚಿತ್ರದಲ್ಲಿ ಕೆಟ್ಟದಾಗಿ ತೋರಿಸಿದ್ದರೆ ಅದು ನಿರ್ದೇಶಕನ ತಪ್ಪು. ನಾನು ಮೊದಲು ನೋಡುವುದೇನೆಂದರೆ ಭಾವನೆಯನ್ನು ಹೊರ ಚೆಲ್ಲಬಹುದಾದ ಮುಖಲಕ್ಷಣ ಹಾಗೂ ಬಾಡಿ ಲಾಂಗ್ವೇಜ್. ಜೊತೆಗೆ ರಂಗಭೂಮಿ ಹಿನ್ನೆಲೆ ಹಾಗೂ ಪಾತ್ರ ನಿಭಾಯಿಸುವ ಚಾಕಚಕ್ಯತೆ ಕೂಡ ಉಮಾಶ್ರೀ ಅವರಲ್ಲಿತ್ತು.</span></p> <span style=";font-family:Arial;font-size:130%;" > </span><p style="font-weight: bold;" class="question"><span style=";font-family:Arial;font-size:130%;" >ಚಿತ್ರ ಸಂಪೂರ್ಣವಾಗಿ 'ಕುಂದಗನ್ನಡ' ಭಾಷೆಯಲ್ಲಿದೆ. ಕಲಾವಿದರಿಗೆ ಈ ಭಾಷೆ ಮೊದಲೇ ತಿಳಿದಿತ್ತೇ?</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ಚಿತ್ರದಲ್ಲಿ ನಾಲ್ಕು ನಟರು ಬಿಟ್ಟರೆ ಉಳಿದವರು ಕುಂದಾಪುರದವರೇ. ಎಂ.ಡಿ. ಪಲ್ಲವಿ ಅವರು ನೇತ್ರುವಿನ ಪಾತ್ರದಲ್ಲಿದ್ದರೆ, ಕೆ.ಜಿ. ಕೃಷ್ಣಮೂರ್ತಿ ಅವರು ಗುಲಾಬಿ ಗಂಡನ ಪಾತ್ರ ನಿರ್ವಹಿಸಿದ್ದಾರೆ. ನಮ್ಮ ಕೆಲಸ ಸುಲಭವಾಗಲು ಭಂಡಾರ್ಕ್ಸರ್ ಕಾಲೇಜಿನ ಹುಡುಗಿಯೊಬ್ಬಳೂ ಸಹಾಯ ಮಾಡಿದಳು. ಸಂಭಾಷಣೆ ಯಾವ ರೀತಿ ಇರಬೇಕು ಎಂಬ ಬಗ್ಗೆ ಆಕೆ ನಟರಿಗೆ ಸತತವಾಗಿ ಹೇಳಿಕೊಡುತ್ತಿದ್ದಳು. ಇನ್ನು ಡಬ್ಬಿಂಗ್ ಸಮಯದಲ್ಲಿ ನಟ ರಘು ಪಾಂಡೇಶ್ವರ್ ಕೂಡ ಯಾವ ರೀತಿಯಲ್ಲಿ ಮಾತನಾಡಬೇಕೆಂದು ತಿಳಿಹೇಳುತ್ತಿದ್ದರು. ಇಲ್ಲಿ ಒಂದು ಮಾತ್ರ ಸ್ಪಷ್ಟ. ಭಾಷೆ ಬಗ್ಗೆ ಎಚ್ಚರ ಇದ್ದವರು ಯಾವುದೇ ಭಾಷೆಯನ್ನು ಕೂಡ ಬೇಗ ಕಲಿಯುತ್ತಾರೆ. ಎಚ್ಚರ ಇಲ್ಲದಿದ್ದರೆ ಕೊನೆಯವರಿಗೂ ಅದನ್ನು ಕಲಿಯಲು ಸಾಧ್ಯವಾಗುವುದಿಲ್ಲ. ಒಟ್ಟಾರೆ 'ಇಗೋ' ಬಿಟ್ಟು ನಿಜ ಪರಿಶ್ರಮ ಹಾಕಿದರೆ ಯಶಸ್ಸು ಸಾಧ್ಯ.</span></p> <span style=";font-family:Arial;font-size:130%;" > </span><p style="font-weight: bold;" class="question"><span style=";font-family:Arial;font-size:130%;" >'ಗುಲಾಬಿ ಟಾಕೀಸ್'ಗೆ ಪ್ರೇರಣೆ...?</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >2006ರ ಓಸಿಯನ್ ಚಲನಚಿತ್ರೋತ್ಸವದಲ್ಲಿ ನನ್ನ 'ನಾಯಿ ನೆರಳು' ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಸಂದರ್ಭದಲ್ಲಿ ನಾನು ಹೊರಗಿನ ಲಾಬಿಯಲ್ಲಿ ಕುಳಿತಿದ್ದೆ. ಹೀಗೆ ಯೋಚಿಸುತ್ತಿದ್ದಾಗ ಥಟ್ಟನೆ ಮೀನುಗಾರರ ಸಮಸ್ಯೆ ಬಗ್ಗೆ ಚಿತ್ರ ಮಾಡಬೇಕೆಂದು ಲೆಕ್ಕಹಾಕಿದೆ. 'ಇಮೇಜ್ ಮೇಕಿಂಗ್' ಹೇಗೆ ನಮ್ಮಲ್ಲಿ ಪೂರ್ವಸಿದ್ಧವಾದ ನಂಬಿಕೆ ಹಾಗೂ ಅನಿಸಿಕೆಗಳನ್ನು ಹುಟ್ಟುಹಾಕುತ್ತವೆ ಎಂಬುದನ್ನು ತೋರಿಸುವ ಉದ್ದೇಶದಿಂದ 'ಗುಲಾಬಿ ಟಾಕೀಸ್'ನ್ನು ಮಾಡುವ ಕೆಲಸಕ್ಕೆ ಕೈಹಾಕಿದೆ. </span></p> <span style=";font-family:Arial;font-size:130%;" > </span><p style="font-weight: bold;" class="question"><span style=";font-family:Arial;font-size:130%;" >ನಿಮ್ಮ ಹೆಚ್ಚಿನ ಎಲ್ಲಾ` ಚಿತ್ರಗಳಂತೆ ಇದೂ ಸ್ತ್ರೀ ಪ್ರಧಾನ ಚಿತ್ರ.... ಇದಕ್ಕೆ ನಿರ್ದಿಷ್ಟ ಕಾರಣವೇನಾದರು ಇದೆಯೇ?</span></p> <span style=";font-family:Arial;font-size:130%;" > </span><p class="tsik_bodytext"><span style=";font-family:Arial;font-size:130%;" >ನಿರ್ದಿಷ್ಟ ಕಾರಣ ಅಂತ ಹೇಳುವುದು ಕಷ್ಟ. ಅವರ ತಾಳ್ಮೆಯ ಶಕ್ತಿ, ಸಮಸ್ಯೆ ನಿರ್ವಹಿಸುವ ರೀತಿ, ಸೋಲಬಾರದು ಅನ್ನೋ ಒತ್ತಾಸೆಯಿಂದ ಅವರು ಗೆಲ್ಲುತ್ತಾ ಸಾಗುವುದು ನನಗೆ ಇಷ್ಟವಾಗುತ್ತವೆ. ಗುಲಾಬಿಯೂ ಹಾಗೇ. ಊರಿನಿಂದ ಆಕೆಯನ್ನು ಹೊರದಬ್ಬಿದರೂ, 'ಎಲ್ಲಿಯ ತನಕ ಹೆಂಗಸರು ಬಸಿರಾಗುತ್ತಾರೋ ಅಲ್ಲಿಯತನಕ ನನ್ನ ಸೂಲಗಿತ್ತಿಯ ಕೆಲಸಕ್ಕೆ ದಕ್ಕೆ ಬಾರದು. ನಾನು ಹೆದರೋದಿಲ್ಲ, ಬೇರೆ ಕಡೆ ಹೋಗಿ ನನ್ನ ಕೆಲಸ ಮಾಡಿ ಬದುಕುತ್ತೇನೆ' ಎಂದು ಧೈರ್ಯದಿಂದ ನುಡಿಯುತ್ತಾಳೆ. ಈ ಕೆಚ್ಚು ನನ್ನ ಮನ ತಟ್ಟಿತು. </span></p><p class="tsik_bodytext"><span style="font-family:Arial;"><br /></span></p>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com0tag:blogger.com,1999:blog-2818153219058834250.post-39987786397101345712008-07-07T05:38:00.000-07:002008-07-07T05:41:57.349-07:00Dream's lost<strong><span style="color:#999999;"><br />It happened again. The dreams and expectations of Indian Cricket Fans yet again with the wind. Kirsten’s men failed to show their supremacy in the crucial final of the 2008 Asia Cup held at National Stadium Karachi last week. On the other hand spinner Ajantha Mendis, made complete turnaround in the match one handed and made Indian’s to loose the battle horribly.<br /><br />But Question remains unanswered that why Indian’s fails make the success story in the decisive final matches? Since 1999, Indian Cricket team has lost 18 Finals out of 22 and they managed to win only two Final matches, which is really hard to believe!<br /><br />Ok, leave those stats aside, when we look at the fact about what went wrong in the Asia Cup final, Question occurs in the mind, did inexperience and irresponsibility cost India much? Did Dhoni made a mistake by choosing batting second in flat batting track, by knowing the fact that track would help the spinners later on the day. It was a gift to Srilankan’s to bowl under lights with two full time spinners. It was a pressure game and it’s not easy to bat against the experienced bowling attack and that too with two full time spinners rocking at the moment and also by noticing the reality that India doesn’t have a great record by chasing in the crucial final matches, Dhoni made a mistake by bowling first.<br /><br />Those things are history now, but it’s a fact to be noted. Yes, Indian batsman’s are faced Mendis for the first time, but was there a need for Sehwag to go against him without reading his bowling ability. At that moment, Sehwag was well settled, and it was his duty to carry on the innings. But his irresponsible shot and dismissal paved the way for India’s disaster in the Karachi Final. And, this refers to Suresh Raina too because, throughout the tournament he was the man, who was in tremendous form, could have carried a credible innings with Dhoni. But there was no batsman to help Dhoni to complete the proceedings. Although there was much depth in Indian batting line up, no one couldn’t do it for India yet again, showed Indian batsmen’s inability to handle pressure especially in the final battle's.</span></strong>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com0tag:blogger.com,1999:blog-2818153219058834250.post-17411995273718947662008-07-03T23:24:00.000-07:002008-09-19T23:13:10.295-07:00ಪದ್ಮಪ್ರಿಯ ಹುಟ್ಟು ಹಾಕಿದ ಪ್ರಶ್ನೆಗಳಿಗೆ ಉತ್ತರ...?<span style="font-size:130%;">ತನ್ನದೇ ಹೊಸ ಬದುಕನ್ನು ರೂಪಿಸಿಕೊಳ್ಳಲು ಹೊರಟ ಮಹಿಳೆಯೊಬ್ಬರನ್ನು ಸಮಾಜ, ರಾಜಕೀಯ, ಮಾಧ್ಯಮಗಳ ಹಸಿವು ನುಂಗಿ ಹಾಕಿದ ದಾರುಣ ಘಟನೆಯಿದು. ಸ್ವಲ್ಪ ಮಾನವೀಯತೆ, ವಿವೇಚನೆ ತೋರಿದ್ದಲ್ಲಿ ಆ ಜೀವ ಉಳಿದು ಬಿಡುತ್ತಿತ್ತು. ಆದರೆ, ಅದಕ್ಕೆ ಯಾರೂ ಅವಕಾಶ ಮಾಡಿಕೊಡಲಿಲ್ಲ. ಕೊನೆಗೆ ಹೊಸ ಬದುಕಿನ ಹೊಂಗನಸಿನ ನಡುವೆಯೇ ಆ ಜೀವ ನೇಣಿಗೆ ಶರಣಾಯಿತು.<br />ಕರ್ನಾಟಕದ ಉಡುಪಿಯಲ್ಲಿ ಪ್ರಾರಂಭವಾದ ಈ ಪ್ರಕರಣ ರಾಷ್ಟ್ರದ ರಾಜಧಾನಿ ದೆಹಲಿವರೆಗೂ ಬರಬಹುದು ಎಂದು ಯಾರಿಗೂ ಅನಿಸಿರಲಿಲ್ಲ. ಇದುವರೆಗೆ ಸುದ್ದಿಯಾಗದಿದ್ದ ದೆಹಲಿಯ ಯಾವುದೋ ಮೂಲೆಯಲ್ಲಿರುವ ದ್ವಾರಕಾದ ಶಮಾ ಅಪಾರ್ಟ್ಮೆಂಟ್ ಇಂದು ಕರ್ನಾಟಕದ ಬಹುತೇಕ ನಾಗರಿಕರಿಗೆ ಅಪರಿಚಿತವೇನಲ್ಲ. ಒಟ್ಟಾರೆ ರಾಜ್ಯದೆಲ್ಲೆಡೆ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಉಡುಪಿ ಶಾಸಕ, ಬಿಜೆಪಿಯ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಪ್ರಕರಣ ನವದೆಹಲಿಯಲ್ಲಿ ದುರಂತ ಅಂತ್ಯ ಕಾಣುವುದರೊಂದಿಗೆ ಸಾಕಷ್ಟು ಕುತೂಹಲ ಹಾಗೂ ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ.<br />ಈಗ ಪ್ರಕರಣದ ಕೇಂದ್ರಬಿಂದುವಾಗಿ ಹೊರಹೊಮ್ಮಿರುವ ಅತುಲ್ ರಾವ್, ಮೂಲತಃ ಶಾಸಕ ರಘುಪತಿ ಭಟ್ಗೆ ಪರಮಾಪ್ತನಾಗಿದ್ದ. ಆ ಹಿನ್ನೆಲೆಯಲ್ಲಿಯೇ ಅವರ ಪತ್ನಿಗೂ ಆತ ಆತ್ಮೀಯನಾಗಿದ್ದು. ಆತನೊಂದಿಗೆ ಸೇರಿ, ತನ್ನದೇ ಅಪಹರಣದ ನಾಟಕವಾಡಿ ಮನೆತೊರೆದು ಹೊರಟ ಪದ್ಮಪ್ರಿಯ ಉಡುಪಿಯಿಂದ ಗೋವಾಕ್ಕೆ ತೆರಳಿದ್ದು, ನಂತರ ಅಲ್ಲಿಂದ ದೆಹಲಿಗೆ ತಲುಪಿದ್ದು, ದ್ವಾರಕಾದ ಶಮಾ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದು, ಕೊನೆಗೆ ಜೂನ್ 15ರಂದು ಆತ್ಮಹತ್ಯೆಗೆ ಶರಣಾಗಿದ್ದು... ಇವೆಲ್ಲಾ ಈಗ ಇತಿಹಾಸ. ಆದರೆ ಆಕೆಯ ಆತ್ಮಹತ್ಯೆಯೊಂದಿಗೆ ಎಲ್ಲವೂ ಮುಗಿದು ಹೋಯಿತೆ? ಖಂಡಿತಾ ಇಲ್ಲ. ಈ ಪ್ರಕರಣದೊಳಗೆ ಹುದುಗಿರುವ ನಿಗೂಢಗಳತ್ತ ಒಮ್ಮೆ ಕಣ್ಣು ಹಾಯಿಸಿದರೆ ಸಾಕಷ್ಟು ಪ್ರಶ್ನೆಗಳು ಹುಟ್ಟುವುದಂತೂ ಖಚಿತ.<br />ಹಲವು ಗೊಂದಲಗಳ ನಡುವೆ ನವದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಜೂನ್ 16ರಂದು ಪದ್ಮಪ್ರಿಯ ದೇಹದ ಮರಣೋತ್ತರ ಪರೀಕ್ಷೆ ಆರಂಭವಾದ ನಂತರ ಅಲ್ಲಿಗೆ ಭೇಟಿ ನೀಡಿದ ಪತಿ ರಘುಪತಿ ಭಟ್ ಮಾಧ್ಯಮಗಳ ಮುಂದೆ ಏಕಾಏಕಿ ದಾಳಿ ಮಾಡಿದ್ದು ಅತುಲ್ ವಿರುದ್ಧ. ನನ್ನ ಪತ್ನಿಯನ್ನು ಬಲವಂತವಾಗಿ ದೆಹಲಿಗೆ ಕರೆತಂದುದೇ ಅತುಲ್. ಆಕೆಯನ್ನು ಮರುಳು ಮಾಡಿ ಈ ದುರಂತಕ್ಕೆ ಕಾರಣನಾದವನು ಅವನೇ ಎಂಬುದು ನೂರಕ್ಕೆ ನೂರರಷ್ಟು ಸತ್ಯ. ಇಂದಿಗೂ ನಾನವಳ ಮೇಲೆ ಅಪಾರ ನಂಬಿಕೆ, ಪ್ರೀತಿ ಇರಿಸಿದ್ದೇನೆ. ಆಕೆ ಬೇರೆಯವರೊಂದಿಗೆ ಹೋಗುವಂತಹ ಮಹಿಳೆ ಅಲ್ಲ ಎಂಬುದಾಗಿ ಕಣ್ಣೀರಿಟ್ಟರು.<br />ಸರಿ, ತನ್ನ ಧರ್ಮಪತ್ನಿಯ ಮೇಲೆ ಭಟ್ ಇರಿಸಿರುವ ನಂಬಿಕೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂಬುದನ್ನು ಒಪ್ಪತಕ್ಕದ್ದೇ. ಆದರೆ ಉಡುಪಿಯಿಂದ ದೆಹಲಿಯವರೆಗೆ ಒಬ್ಬ ಮಹಿಳೆಯನ್ನು ಬಲವಂತವಾಗಿ ಅಪಹರಿಸಿಕೊಂಡು ಬರಲು ಸಾಧ್ಯವೇ? ಅದೂ ಪ್ರಭಾವಿ ಕುಟುಂಬಕ್ಕೆ ಸೇರಿದ ಪದ್ಮಪ್ರಿಯರಂಥ ಮಹಿಳೆಯನ್ನು! ದೆಹಲಿಯ ದ್ವಾರಕದಲ್ಲಿರುವ ಶಮಾ ಅಪಾರ್ಟ್ಮೆಂಟ್ಗೆ ಭೇಟಿಯಿತ್ತಾಗ ದೊರೆತ ಮಾಹಿತಿ ಹಾಗೂ ದಾಖಲೆಗಳು ಈ ಪ್ರಕರಣದ ದಾರುಣ ಅಂತ್ಯಕ್ಕೆ ಅತುಲ್ ಒಬ್ಬನೇ ಕಾರಣನಲ್ಲ ಎಂಬುದನ್ನು ಸ್ವಷ್ಟವಾಗಿ ಹೇಳುತ್ತವೆ.<br />ಅತುಲ್ ಉಡುಪಿಯಿಂದ ಪದ್ಮಪ್ರಿಯ ಅವರನ್ನು ದೆಹಲಿಗೆ ಕರೆದುಕೊಂಡು ಬಂದಿದ್ದೇನೋ ನಿಜ. ಆದರೆ ಬಲವಂತವಾಗಿ ಅಲ್ಲ. ಇದಕ್ಕೆ ಪದ್ಮಪ್ರಿಯರ ಸಮ್ಮತಿಯೂ ಇತ್ತು. ಇನ್ನೂ ಅಚ್ಚರಿಯ ಸಂಗತಿಯೆಂದರೆ ಅತುಲ್ ಸ್ಥಳೀಯರಲ್ಲಿ ಪದ್ಮಪ್ರಿಯ ತನ್ನ ಪತ್ನಿ ಎಂದೇ ಹೇಳಿಕೊಂಡಿದ್ದ. ಆ ಹೊತ್ತಿಗೆ ಅತುಲ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯದಿದ್ದ ಕಾರಣ ಸ್ಥಳೀಯರು ಪದ್ಮಪ್ರಿಯ ಆತನ ಪತ್ನಿ ಎಂದೇ ಭಾವಿಸಿದ್ದರು. ಹೀಗೆ ಆಡಳಿತ ಪಕ್ಷದ ಪ್ರಭಾವಿ ಶಾಸಕರೊಬ್ಬರ ಪತ್ನಿಯನ್ನು ಅತುಲ್ ತನ್ನ ಪತ್ನಿ ಎಂದು ಧೈರ್ಯವಾಗಿ ತಿಳಿಸಿರುವುದು ಹಾಗೂ ಇದಕ್ಕೆ ಪದ್ಮಪ್ರಿಯ ಅವರ ಸಮ್ಮತಿ ಇದ್ದಿದ್ದನ್ನು ಗಮನಿಸಿದರೆ ಇದೊಂದು ಪೂರ್ವ ನಿಯೋಜಿತ ಯೋಜನೆ ಎನ್ನುವುದು ಸ್ಪಷ್ಟವಾಗುತ್ತದೆ. ಇದಕ್ಕೆ ಪೂರಕವೆಂಬಂತೆ ಅತುಲ್ ಮೇ 22ರಂದೇ ದ್ವಾರಕಾದ ಶಮಾ ಅಪಾರ್ಟ್ಮೆಂಟ್ ಮಾಲೀಕ ಲಖ್ವೀಂದರ್ ಸಿಂಗ್ನೊಂದಿಗೆ ವಾಸ್ತವ್ಯ ದಾಖಲೆ ಪತ್ರ (ರೆಂಟ್ ಅಗ್ರೀಮೆಂಟ್) ಮಾಡಿಕೊಂಡಿದ್ದಾನೆ. ಜೊತೆಗೆ ಈ ದಾಖಲೆ ಪತ್ರದಲ್ಲಿ ಪ್ರೇಮ್ ಲಾಲ್ ಹಾಗೂ ಸುನಿಲ್ ಕೆ. ಆರ್. ಶರ್ಮ ಎಂಬ ಇಬ್ಬರು ಸಾಕ್ಷಿದಾರರು ಸಹಿ ಮಾಡಿದ್ದಾರೆ. ಮುಂಗಡ ಬಾಡಿಗೆ (ರನ್ನಿಂಗ್ ಮಂತ್ ರೆಂಟ್) ಸೇರಿದಂತೆ ತಿಂಗಳ ಬಾಡಿಗೆ ಎಂದು ಒಟ್ಟು 26,200 ರೂ. ಹಾಗೂ ಸ್ಟ್ಯಾಂಪ್ ಡ್ಯೂಟಿ ಎಂದು 3,320 ರೂ.ಗಳನ್ನು ಅತುಲ್ ಶಮಾ ಅಪಾರ್ಟ್ಮೆಂಟ್ ಮಾಲೀಕ ಲಖ್ವಿಂದರ್ ಸಿಂಗ್ಗೆ ನೀಡಿ, ಪದ್ಮಪ್ರಿಯ ಅವರ ದೆಹಲಿ ವಾಸಕ್ಕೆ ಅಪಹರಣ ನಾಟಕಕ್ಕಿಂತ ಮೊದಲೇ ಸಿದ್ಧತೆ ನಡೆಸಿದ್ದ ಎಂದು ದಾಖಲೆಗಳು ದೃಢಪಡಿಸುತ್ತವೆ.<br />ಇವೆಲ್ಲಾ ಸಾಲದು ಎಂಬಂತೆ ಅತುಲ್ ತನ್ನ 'ಮಡದಿ'ಗೆ (ಅತುಲ್ ಹೇಳಿದ್ದ ಪ್ರಕಾರ) ದೆಹಲಿಯಲ್ಲಿ ಓಡಾಡಲು ಕಾರು ಬೇಕೆಂದು ಡಿಎಲ್ 2ಸಿಡಿ 6949 ನಂಬರಿನ 'ವ್ಯಾಗನ್ ಆರ್' ಕಾರೊಂದನ್ನು ಖರೀದಿಸಿದ್ದ. ದ್ವಾರಕಾ ಅಪಾರ್ಟ್ಮೆಂಟ್ನ ತನ್ನ ಮನೆಗೆ ಬೇಕಾದ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದ ಮಾರ್ಕೆಟ್ ಒಂದರಲ್ಲಿ ಪರಿಚಯವಾದ ಮಂಜಿತ್ ಮೋಟಾರ್ಸ್ನ ಮೆಕ್ಯಾನಿಕ್ ಬಳಿ ತನಗೆ ಕಾರೊಂದರ ಅಗತ್ಯವಿದೆ ಎಂದು ತಿಳಿಸಿದ ಅತುಲ್, ದ್ವಾರಕಾ ಮೋಟಾರ್ಸ್ ಹಾಗೂ ಫೈನಾನ್ಸ್ ಮೂಲಕ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದಾನೆ.<br />ಮೆಕ್ಯಾನಿಕ್ ಮೂಲಕ ದ್ವಾರಕಾ ಬಳಿ ಇರುವ ದ್ವಾರಕಾ ಮೋಟಾರ್ಸ್ ಹಾಗೂ ಫೈನಾನ್ಸ್ಗೆ ಜೂನ್ 2ರಂದು ಆಗಮಿಸಿದ ಅತುಲ್ ಕಾರು ಖರೀದಿ ವ್ಯವಹಾರ ನಡೆಸಿದ್ದಾನೆ. ಜೊತೆಗೆ ಫೈನಾನ್ಸ್ ಮಾಲೀಕನಿಗೆ ಮುಂಗಡವಾಗಿ 10,000 ರೂ. ನೀಡಿದ್ದಾನೆ. ನಂತರ ಜೂನ್ 12ರಂದು ದ್ವಾರಕಾ ಫೈನಾನ್ಸ್ಗೆ ಅತುಲ್ ಹಾಗೂ ಪದ್ಮಪ್ರಿಯ ತೆರಳಿ ಮಾತುಕತೆ ನಡೆಸಿ, ಕಾರಿನ ಸಂಪೂರ್ಣ ವೆಚ್ಚ ಪಾವತಿಸಿದ್ದಾರೆ. ಫೈನಾನ್ಸ್ ಮಾಲೀಕ ಹೇಳುವ ಪ್ರಕಾರ ಅತ್ಯಂತ ಗಡಿಬಿಡಿಯಿಂದಿದ್ದ ಅತುಲ್, ತಾನು ಈಗಲೇ ಬೆಂಗಳೂರಿಗೆ ಹೋಗಬೇಕಿದೆ, ಆದಷ್ಟು ಬೇಗ ಎಲ್ಲಾ ವ್ಯವಹಾರಗಳನ್ನು ಮುಗಿಸಬೇಕು ಎಂದು ಹೇಳುತ್ತಿದ್ದ. ಮಂಜಿತ್ ಮೋಟಾರ್ನ ಮೆಕ್ಯಾನಿಕ್ ಕಾರನ್ನು ಅದೇ ದಿನ 12:40ಕ್ಕೆ ಅಪಾರ್ಟ್ಮೆಂಟ್ಗೆ ಕೊಂಡೊಯ್ದಿದ್ದು, ಕಾರನ್ನು ಪದ್ಮಪ್ರಿಯ ಅವರಿಗೆ ಹಸ್ತಾಂತರಿಸಿ ತೆರಳಿದ್ದಾನೆ. ಈ ಕಾರು ವ್ಯವಹಾರದ ಕುರಿತಾದ ಎಲ್ಲಾ ಮಾಹಿತಿಗಳು, ದಾಖಲೆಗಳು ಟಿಎಸ್ಐ ಬಳಿ ಇವೆ.<br />ಒಟ್ಟಾರೆ ಈ ಎಲ್ಲಾ ಅಂಶಗಳಿಂದ ಬಹಳ ಹಿಂದಿನಿಂದಲೇ ಪದ್ಮಪ್ರಿಯ ದೆಹಲಿಯಲ್ಲಿ ಬಂದು ನೆಲೆಸಲು ತಯಾರಿ ನಡೆಸಿದ್ದರು ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ. ಮತ್ತೊಂದು ಅಚ್ಚರಿಯ ಅಂಶ ಏನೆಂದರೆ ಜೂನ್ 15ರಂದು ಡಿಎಲ್ 4ಸಿಎವೈ 6666 ನಂಬರ್ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ 10 ಗಂಟೆಗೆ ಫ್ಲ್ಯಾಟ್ ನಂಬರ್ 20ಕ್ಕೆ ಆಗಮಿಸಿದ್ದು, 12 ಗಂಟೆಯವರೆಗೆ ಅಲ್ಲೇ ಇದ್ದ ಎಂದು ರಿಜಿಸ್ಟರ್ ಹೇಳುತ್ತದೆ. ಆ ವ್ಯಕ್ತಿಯ ಬಗ್ಗೆ ಗಾರ್ಡ್ ಬಳಿ ಕೇಳಿದಾಗ, ಆತ ಯಾರೆಂದು ನನಗೆ ಗೊತ್ತಿಲ್ಲ ಎಂದಿದ್ದಾನೆ. ಅದೇ ದಿನ ಪದ್ಮಪ್ರಿಯ ನೇಣು ಹಾಕಿಕೊಂಡಿದ್ದು!<br />ಅದೇ 15ರಂದು ಅಪರಾಹ್ನ 2:30ಕ್ಕೆ ಅತುಲ್ ಆಗಮಿಸಿದ್ದು, 30 ನಿಮಿಷಗಳ ಕಾಲ ಪದ್ಮಪ್ರಿಯ ಜೊತೆ ಮಾತುಕತೆ ನಡೆಸಿದ್ದಾನೆ. ರಿಜಿಸ್ಟರ್ನಲ್ಲಿ ಅತುಲ್+3 ಎಂದು ದಾಖಲಾಗಿತ್ತು. ಆದರೆ ಗಾರ್ಡ್ ಹೇಳುವ ಪ್ರಕಾರ ಅತುಲ್ ಜೊತೆ ಇಬ್ಬರು ವ್ಯಕ್ತಿಗಳು ಮಾತ್ರ ಇದ್ದರು. ಆದರೆ ಆ ವ್ಯಕ್ತಿಗಳು ಯಾರೆಂದು ಇದುವರೆಗೆ ತಿಳಿದುಬಂದಿಲ್ಲ. ಈ ಮುನ್ನ ಪೊಲೀಸರಲ್ಲಿ ಅತುಲ್ ಜೊತೆ ಇನ್ನು ಮೂವರು ಅಪಾರ್ಟ್ಮೆಂಟ್ಗೆ ತೆರಳಿದ್ದರು ಎಂದು ಹೇಳಲಾಗುತ್ತಿರುವ ಬಗ್ಗೆ ಕೇಳಿದಾಗ, ಪೊಲೀಸರು ಅತುಲ್ ಒಬ್ಬನೇ ತೆರಳಿದ್ದಾನೆ ಎಂದು ಉತ್ತರಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ಯಾರು ಎಂಬುದಕ್ಕೆ ಅವರ ಬಳಿ ಉತ್ತರವಿಲ್ಲ.<br />ಕರ್ನಾಟಕದ ಗೃಹ ಸಚಿವ ವಿ.ಎಸ್. ಆಚಾರ್ಯ ಜೂನ್ 16ರಂದು ಪದ್ಮಪ್ರಿಯ ಮರಣೋತ್ತರ ಪರೀಕ್ಷೆ ನಡೆಯುವ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದರು. ಆಚಾರ್ಯ ಬಳಿ, ಕೋಲಾರದ ಮಾಲೂರಿನಲ್ಲಿ ಪತ್ತೆಯಾಗಿದ್ದಾರೆ ಎಂಬ ತಪ್ಪು ಮಾಹಿತಿಯಿಂದ ಪದ್ಮಪ್ರಿಯ ಅವರಿಗೆ ಶಾಕ್ ಆಗಿರಬಹುದಲ್ಲವೇ? ಎಂದು ಪ್ರಶ್ನಿಸಿದ್ದಕ್ಕೆ, ಶಾಕ್ ಹೇಗೆ ಆಗುತ್ತದೆ? ಅವರು (ಪದ್ಮಪ್ರಿಯ) ದೆಹಲಿಯಲ್ಲಿ ಇರುವ ವಿಷಯ ಪೊಲೀಸರಿಗೆ ಗೊತ್ತಾಗಿದೆ ಎಂದು ತಿಳಿದ ಮೇಲೆ ಪದ್ಮಪ್ರಿಯ ಅವರಿಗೆ ಶಾಕ್ ಆಗಿರಬಹುದು. ದುರದೃಷ್ಟವಷಾತ್ ಅವರು ಆತ್ಮಹತ್ಯೆಗೆ ಶರಣಾದರು. ಇಟ್ಸ್ ನಾಟ್ ಇನ್ ಎನಿಬಡೀಸ್ ಹ್ಯಾಂಡ್ಸ್ ಎಂಬ ವಿವೇಚನಾರಹಿತ ಉತ್ತರ ನೀಡಿದ್ದರು. ಕರ್ನಾಟಕದ ಸರ್ಕಾರ, ಗೃಹ ಸಚಿವರು ಮತ್ತು ಪೊಲೀಸ್ ಇಲಾಖೆ ಸ್ವಲ್ಪ ವಿವೇಚನೆ ತೋರಿದ್ದರೆ ಪದ್ಮಪ್ರಿಯ ನೇಣಿಗೆ ಶರಣಾಗುತ್ತಿರಲಿಲ್ಲ. ಟಿಎಸ್ಐಗೆ ತಿಳಿದ ಮಾಹಿತಿಯ ಪ್ರಕಾರ ಪದ್ಮಪ್ರಿಯ ದೆಹಲಿಯಲ್ಲಿ ಇರುವ ವಿಷಯ ಜೂನ್ 13ರಂದೇ ಅತುಲ್ ಮೂಲಕ ರಘುಪತಿ ಭಟ್ ಮತ್ತು ಅವರ ಗೆಳೆಯರಿಗೆ ಗೊತ್ತಾಗಿದೆ. ಆ ಕ್ಷಣದಿಂದಲೇ ಮೊಬೈಲ್ ಮೂಲಕ ಪದ್ಮಪ್ರಿಯ ಮೇಲೆ ಒತ್ತಡ ಹೇರುವ ತಂತ್ರ ಕೂಡ ಆರಂಭವಾಗಿದೆ. ಈ ತಂತ್ರಕ್ಕೆ ಅತುಲ್ ಅವರನ್ನು ಸಾಧನವಾಗಿ ಬಳಸಿಕೊಳ್ಳಲಾಗಿದೆ. ಆಗ ಮಾಧ್ಯಮದವರನ್ನು ದಾರಿ ತಪ್ಪಿಸುವ ಸಲುವಾಗಿ 'ಮಾಲೂರು ನಾಟಕ'ದ ಬಲೆ ಹೆಣೆಯಲಾಯಿತು. ಬಿಜೆಪಿ ಸರ್ಕಾರ ಈ ಪ್ರಕರಣವನ್ನು 'ತನ್ನ ಪ್ರತಿಷ್ಠೆ' ಎಂದುಕೊಂಡು ಅತಿಯಾಗಿ ವರ್ತಿಸಿದ್ದು, ಮಾಧ್ಯಮಗಳು ಮುಗಿಬಿದ್ದದ್ದು, ರಘುಪತಿ ಭಟ್- ವಿ.ಎಸ್. ಆಚಾರ್ಯ ಒತ್ತಡದ ತಂತ್ರ ಹೇರಿದ್ದರಿಂದಲೇ ಪದ್ಮಪ್ರಿಯ ನೇಣಿಗೆ ಶರಣಾದದ್ದು.<br />'ಮಾಲೂರು ನಾಟಕ'ದ ಬದಲಾಗಿ ಪ್ರಕರಣದ ಕುರಿತು ಆಗ ಪೊಲೀಸರು ಮೌನವಹಿಸಿದ್ದರೆ ಮಾಧ್ಯಮಗಳಲ್ಲಿ ಈ ಕುರಿತಾದ ಸುದ್ದಿ ಆ ಪರಿಯ ಅಲೆ ಎಬ್ಬಿಸುತ್ತಿರಲಿಲ್ಲ. ಇದು ಪದ್ಮಪ್ರಿಯ ಸಾವಿಗೆ ಒಂದು ಕಾರಣವೂ ಹೌದು ಎಂಬ ಅನೇಕರ ವಾದವನ್ನೂ ಇಲ್ಲಿ ತಳ್ಳಿಹಾಕಲು ಸಾಧ್ಯವಿಲ್ಲ. ಏಕೆಂದರೆ ಪದ್ಮಪ್ರಿಯ ಅವರ ಫ್ಲ್ಯಾಟ್ಗೆ ಪೊಲೀಸರು ತೆರಳಿದ್ದ ಸಂದರ್ಭದಲ್ಲಿ ಕನ್ನಡ ಸುದ್ದಿ ವಾಹಿನಿಯೊಂದು ಬಿತ್ತರವಾಗುತ್ತಿತ್ತು ಎಂಬುದನ್ನು ಪೊಲೀಸರೇ ಸ್ಪಷ್ಟಪಡಿಸಿದ್ದಾರೆ. ಒಟ್ಟಾರೆ ಜೂನ್ 14ರಂದು ಮಾಧ್ಯಮಗಳ ಕಣ್ಣಿಗೆ ಮಣ್ಣೆರೆಚಲು ಹೂಡಿದ 'ಮಾಲೂರು ಪ್ರಹಸನ' ಪದ್ಮಪ್ರಿಯ ಅವರ ದುರಂತ ಅಂತ್ಯದಲ್ಲಿ ಹೆಚ್ಚಿನ ಪಾತ್ರವಹಿಸಿತು.<br />ಜೂನ್ 15ರ ರಾತ್ರಿ 2.30ರ ಸುಮಾರಿಗೆ ಪದ್ಮಪ್ರಿಯ ಅವರ ಮೃತ ದೇಹ ವೀಕ್ಷಿಸಿದ್ದ ಗೃಹಸಚಿವ ವಿ.ಎಸ್. ಆಚಾರ್ಯ ಅವರು ಹೇಳುವ ಪ್ರಕಾರ, ಒಂದು ವೇಳೆ 2-10 ಗಂಟೆಗಳ ಮುನ್ನವೇ ನೇಣಿಗೆ ಶರಣಾಗಿದ್ದಾರೆ ಎಂದಾದರೆ, ಅತುಲ್ ಆ ದಿನ 2.30 ಕ್ಕೆ ಪದ್ಮಪ್ರಿಯ ಬಳಿ ತೆರಳಿ ಮಾಡಿದ್ದಾದರೂ ಏನು? ಪೊಲೀಸರು ಆತನನ್ನು ಪದ್ಮಪ್ರಿಯ ಬಳಿ ಹೋಗುವಂತೆ ಹೇಳಿ ಕಂಡುಕೊಂಡ ಸತ್ಯವಾದರೂ ಏನು? ಆ ದಿನ ಅತುಲ್ ಒಬ್ಬನನ್ನೇ (ರಿಜಿಸ್ಟರ್ನಲ್ಲಿ ಅತುಲ್+3 ಎಂದು ದಾಖಲಾಗಿದೆ) ಅಪಾರ್ಟ್ಮೆಂಟ್ ಫ್ಲ್ಯಾಟ್ಗೆ ಕಳುಹಿಸಿದ್ದು ಏಕೆ? ಆ 30 ನಿಮಿಷಗಳ ನಡುವೆ ಅತುಲ್, ಪದ್ಮಪ್ರಿಯ ಜೊತೆ ಮಾತುಕತೆ ನಡೆಸಿದ್ದಾನೆ ಎಂದಾದರೆ, ಕರ್ನಾಟಕ ಪೊಲೀಸರು ದೆಹಲಿ ಪೊಲೀಸರ ಸಹಾಯದಿಂದ ಅದೇ ಹೊತ್ತಿನಲ್ಲಿ ಪದ್ಮಪ್ರಿಯ ಅವರನ್ನು ವಶಕ್ಕೆ ತೆಗೆದುಕೊಳ್ಳಬಹುದಿತ್ತಲ್ಲವೇ? ಇಲ್ಲಿ ಹುಟ್ಟುವ ಇನ್ನೊಂದು ಪ್ರಶ್ನೆಯೆಂದರೆ, ಅತುಲ್ ಮೂಲಕ ತನ್ನನ್ನು (ಪದ್ಮಪ್ರಿಯ ಅವರನ್ನು) ಕರೆದೊಯ್ಯುವ ಹುನ್ನಾರ ಕರ್ನಾಟಕ ಪೊಲೀಸರದ್ದು ಎಂಬ ವಿಷಯದ ಅರಿವಾಗಿ, ಭಯಬೀತರಾದ ಪದ್ಮಪ್ರಿಯ, ಆ ಬಳಿಕ ಆತ್ಮಹತ್ಯೆ ಮಾಡಿಕೊಂಡರೆ? ಉತ್ತರಗಳು ಮಾತ್ರ ಇನ್ನೂ ನಿಗೂಢವಾಗೇ ಇದೆ.<br />ಪತಿ ರಘುಪತಿ ಭಟ್ ಅವರಿಂದ ಸಂಪೂರ್ಣ ದೂರವಾಗಿ ತನ್ನದೇ ಆದ ಬದುಕನ್ನು ರೂಪಿಸಿಕೊಳ್ಳುವ ಗಟ್ಟಿ ನಿರ್ಧಾರ ಮಾಡಿಯೇ ಪದ್ಮಪ್ರಿಯ ದೆಹಲಿಗೆ ಬಂದದ್ದು. ಅದಕ್ಕೆ ಅತುಲ್ ನೆರವಾಗಿದ್ದಾರೆ. ಇನ್ನು ಪೊಲೀಸ್ ಮೂಲಗಳು ಹೇಳುವ ಪ್ರಕಾರ ಅವರಿಬ್ಬರಿಗೆ ಆತ್ಮೀಯ ಸಂಬಂಧ ಇತ್ತು. ಅದು ಅವರವರ ವೈಯಕ್ತಿಕ ಪ್ರಶ್ನೆಗಳು. ಆದರೆ, ಒಬ್ಬ ಮಹಿಳೆ ತನ್ನ ಪತಿಯ ಮೇಲಿನ ನಂಬಿಕೆಯನ್ನು ಸಂಪೂರ್ಣ ಕಳೆದುಕೊಂಡು ತನ್ನದೇ ಆದ ಹೊಸ ಬದುಕಿಗಾಗಿ ಹಂಬಲಿಸಿದ್ದನ್ನು ತಪ್ಪು ಎಂದು ಹೇಳುವ ಹಕ್ಕು ಯಾರಿಗೂ ಇಲ್ಲ. ಆ ವಿಷಯ ಸ್ಪಷ್ಟವಾದ ಮೇಲೆ ಅಂತಹ ಒಬ್ಬ ದಿಟ್ಟ ಮಹಿಳೆಯ ಮೇಲೆ ಒಂದು ರಾಜ್ಯ ಸರ್ಕಾರವೇ ಒತ್ತಡ ಹೇರಿ ಬಲವಂತವಾಗಿ ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದು ಮಾತ್ರ ಹೇಯ ಕೃತ್ಯ.<br />ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ ಪದ್ಮಪ್ರಿಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬದುಕಿದ್ದಾಗ ಸಂಬಂಧಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ವ್ಯಕ್ತಿಯೊಬ್ಬ, ಪತ್ನಿ ಹೆಣವಾದ ಮೇಲೆ ಕಣ್ಣೀರಿನ ಹೊಳೆ ಹರಿಸಿ, ಶವಕ್ಕೆ ಬೆಂಕಿಯಿಟ್ಟೂ ಆಗಿದೆ. ಆದರೀಗ, ಕೇವಲ ಅತುಲ್ ಒಬ್ಬನನ್ನೇ ಈ ಸಾವಿಗೆ ಕಾರಣ ಎಂದು ಬೊಟ್ಟು ಮಾಡುವ ಬದಲು, ಪದ್ಮಪ್ರಿಯ ಅವರು ಅತುಲ್ನೊಂದಿಗೆ ದೆಹಲಿಗೆ ಬಂದು ನೆಲೆಸುವಂತಹ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು ಏಕೆ? ಎಂಬುದರ ಬಗ್ಗೆ ಕೂಲಂಕಷ ತನಿಖೆಯಾಗಬೇಕು. ಆ ತನಿಖೆ ಮಾಡಿ, ನಂತರ ಹೊರಬೀಳುವ ಸತ್ಯವನ್ನು ಅರಗಿಸಿಕೊಳ್ಳುವ ತಾಕತ್ತು ಬಿಜೆಪಿ ಸರ್ಕಾರಕ್ಕಿದೆಯೇ?</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com0tag:blogger.com,1999:blog-2818153219058834250.post-19845101140589304832008-06-14T00:11:00.000-07:002008-12-10T02:33:22.003-08:00<a href="https://blogger.googleusercontent.com/img/b/R29vZ2xl/AVvXsEgyj-Jd6VMWsAHUjfEWhAk_hLJ6hLrpsJG9OGtuIs4yRFfsQ3Nqb8gXPtRyXmLMi5P_Z80OJu4PTK_8kyy2rteEg15FyOKtHWAX8XdZDbYVk6qdZ_AFkE40IU9_2erHlIs5hcPohp7VCYU/s1600-h/images[1].jpg"></a><br /><div align="center"><span style="font-size:180%;"><span style="color:#ff0000;"><strong>ಮಂಕು ಬಡಿದವರ ನಡುವೆ... </strong></span></span></div><br /><div align="center"><span style="font-size:180%;"><span style="color:#ff0000;"><br /></div></span></span><span style="font-size:130%;color:#660000;"><img id="BLOGGER_PHOTO_ID_5211634497881519522" style="FLOAT: left; MARGIN: 0px 10px 10px 0px; CURSOR: hand" alt="" src="https://blogger.googleusercontent.com/img/b/R29vZ2xl/AVvXsEhCssd8r9U86d3oEY_-77BVxDm6aBqGmgx7qxCNcjXCwbGTbEe6JMqNkam7e4W5Ia3H6Xw_PcWvEypCCeVogvyWf_Hz2xI2bOaRWbo3q-t8_uvACq20QxlIld2k-2o0yKtezxiNJwWAsnU/s320/1%5B1%5D.jpg" border="0" />ಬಹುಶಃ ಭಾರತದಲ್ಲಿ ಭಯೋತ್ಪಾದೆ ಅಟ್ಟಹಾಸಕ್ಕೆ ಕೊನೆಯಿಲ್ಲ ಎಂಬುದು ದೃಢವಾಗುತ್ತಿದೆ. ಇತ್ತೀಚೆಗಿನ ಜೈಪುರ ಸ್ಫೋಟ, ಅದಾದ ನಂತರದ ಕೆಲವೇ ದಿನಗಳಲ್ಲಿ ರಾಜಧಾನಿ ನವದೆಹಲಿಯಲ್ಲಿ ಅಬ್ದುಲ್ ರೆಹಮಾನ್ ಎಂಬ ಬಾಂಗ್ಲಾದೇಶೀ ಮೂಲದ ಹುಜಿ ಉಗ್ರಗಾಮಿ ಸಂಘಟನೆಗೆ ಸಂಬಂಧಿಸಿದ ಕಾರ್ಯಕರ್ತನನ್ನು ಬಂಧಿಸಲಾಯಿತು. ಆ ಸಂದರ್ಭದಲ್ಲಿ ಇಡೀ ದೆಹಲಿಯೇ ಅಚ್ಚರಿ ವ್ಯಕ್ತಪಡಿಸಿದ್ದು ತಿಳಿದೇ ಇದೆ. ನಿಜಹೇಳಬೇಕೆಂದರೆ ನವ ದೆಹಲಿ ರೈಲ್ವೇ ನಿಲ್ದಾಣದ ಚೆಲ್ಮ್ಸ್ಫರ್ಡ್ ರಸ್ತೆ ಬಳಿ ಆತನನ್ನು ಪೊಲೀಸರು ಸೆರೆಹಿಡಿದಿದ್ದು ಮಾತ್ರವಲ್ಲ, ರಾಜಧಾನಿಯಲ್ಲಿ ಬಾಂಬ್ ಸ್ಫೋಟಿಸಲು ಹುನ್ನಾರ ನಡೆಸಿದ್ದ ಹುಜಿ ಸಂಘಟನೆಯ ಕೃತ್ಯಕ್ಕೂ ಪೊಲೀಸರು ಕತ್ತರಿ ಹಾಕಿದ್ದರು. ಇಲ್ಲದಿದ್ದಲ್ಲಿ ದೆಹಲಿಯೂ ಸ್ಫೋಟದ ಎಲ್ಲಾ ಸಾಧ್ಯತೆಗಳೂ ಇದ್ದವು.<br />ಇಂದು ಭಯೋತ್ಪಾದಕರ ಮೂಲ ಗುರಿ ಅಮೆರಿಕನ್ನರನ್ನು ಹತ್ತಿಕ್ಕುವಲ್ಲಿ ಆಗಿದ್ದರೂ, ಭಾರತ ಮಾತ್ರ ಭಯೋತ್ಪಾದಕರ ದಾಳದಲ್ಲಿ ಸಿಲುಕಿ ನರಳಾಡುತ್ತಿದೆ. ಭದ್ರತೆ ಹಾಗೂ ರಾಷ್ಟ್ರ ರಕ್ಷಣಾ ವಿಷಯದಲ್ಲಿ ಅಮೆರಿಕಕ್ಕೆ ಸರಿಸಾಟಿ ಯಾರೂ ಇಲ್ಲ. ಆದರೆ ಅದೇ ವಿಷಯ ಭಾರತಕ್ಕೆ ಹೋಲಿಸಿದಾಗ ಫಲಿತಾಂಶ ವ್ಯತಿರಿಕ್ತ. ನಮ್ಮ ರಾಜಕಾರಣಿಗಳಿಗೆ ರಾಷ್ಟ್ರದ ರಕ್ಷಣೆ ಆಗಲಿ ಅಥವಾ ಅಮಾಯಕ ನಾಗರಿಕರ ಹತ್ಯೆ ಎಂದಿಗೂ ಗಮನಿಸಬೇಕಾದ ಅಂಶ ಆಗಿಲ್ಲ. ವೋಟ್ ಬ್ಯಾಂಕ್ ರಾಜಕಾರಣವನ್ನು ಮಾತ್ರ ಮನದಲ್ಲಿಟ್ಟುಕೊಂಡು, ಅಲ್ಪಸಂಖ್ಯಾತರ ಓಲೈಕೆಯಲ್ಲೇ ಮಂತ್ರಿಗಳು (ಶಿವರಾಜ್ ಪಾಟಿಲ್) ಕಾಲ ಕಳೆಯುತ್ತಿದ್ದಾರೆ. ಇಡೀ ಗೃಹಸಚಿವಾಲಯ ಮಾತ್ರ ಕುಂಭಕರ್ಣ ನಿದ್ದೆಯಲ್ಲೇ ದಿನ ದೂಡುತ್ತಿದೆ. ಸಮರ್ಪಕ ರಣತಂತ್ರಗಳ ಮೂಲಕ ಭಯೋತ್ಪಾದಕರ ಕಾಟ ಹತ್ತಿಕ್ಕುವಲ್ಲಿ ಗೃಹ ಸಚಿವರು ಸೋತಿದ್ದಾರೆ. ಆ ಮಧ್ಯೆಯೂ ಅಬು ಸಲೇಂನಂತಹ ಉಗ್ರರನ್ನು ಗಲ್ಲಿಗೇರಿಸಲು ಸಾಧ್ಯವಿಲ್ಲ, ಇದರಿಂದ ಸರಬ್ಜಿತ್ನನ್ನು ಭಾರತಕ್ಕೆ ಕರೆತರುವ ವಿಷಯದಲ್ಲಿ ಹಿನ್ನಡೆಯುಂಟಾಗುತ್ತದೆ ಎಂಬೆಲ್ಲಾ ಜಾರಿಕೊಳ್ಳುವ 'ಸ್ಪಷ್ಟನೆ ನೀಡುತ್ತಾರೆ' ನಮ್ಮ ಮಹಾನ್ ಗೃಹ ಸಚಿವರು.<br />ಇನ್ನು ಬಾಂಗ್ಲಾದಿಂದ ಭಾರತಕ್ಕೆ ಬರುವ ಅಕ್ರಮ ವಲಸಿಗರು ದೇಶಕ್ಕೆ ಮಾರಣಾಂತಿಕವಾಗಿ ಪರಿಣಮಿಸುತ್ತಿರುವುದು ಯಾರಿಗೂ ಘೋರ ವಿಷಯವಾಗಿ ಪರಿಣಮಿಸಿಯೇ ಇಲ್ಲ. ಇಂದು ರಾಜಸ್ಥಾನದಲ್ಲಿ ಒಂದು ಅಂದಾಜಿನ ಪ್ರಕಾರ ೧೦ ಲಕ್ಷ ಬಾಂಗ್ಲಾ ದೇಶದ ಮಂದಿ ನೆಲೆಸಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ ಎಲ್ಲಕ್ಕಿಂತ ದೊಡ್ಡ ದುರಂತವೆಂದರೆ ಇಂತವರನ್ನು ದೇಶದಿಂದ ಮೊದಲು ಓಡಿಸಬೇಕು ಎಂದು ವಾದಿಸುತ್ತಿರವವರ ವಾದವೆಲ್ಲಾ ಪೊಳ್ಳು ಎಂದು ಮಾನವ ಹಕ್ಕುಗಳ ಆಯೋಗದ ಮಂದಿ ವಾದಿಸುತ್ತಾರೆ. ನಫೀಸಾ ಅಲಿ ಅವರಂತಹ 'ಸಮಾಜ ಸುಧಾರಕಿ'ಯರು ಬೇರೆ ದೇಶದ ಮೂಲಸೌಕರ್ಯಗಳನ್ನು ಮೊದಲು ಅಭಿವೃದ್ಧಿಪಡಿಸಬೇಕು ಎಂದು ಉದಾರವಾದ ವ್ಯಕ್ತಪಡಿಸುತ್ತಾರೆ. ಆದರೆ ನಮ್ಮ ದೇಶ ಇಂದು ದುರಂತಗಳ ಗೂಡಾಗಿದ್ದು, ಮೂಲ ಸೌಕರ್ಯ ಬಿಡಿ, ತುತ್ತಿನ ಚೀಲ ತುಂಬಿಸಲೇ ಜನ ಹೆಣಗಾಡುತ್ತಿರುವಾಗ, ನಮ್ಮ ದೇಶದ ದುರವಸ್ಥೆಯನ್ನು ದೂರಮಾಡುವತ್ತ ಕಾರ್ಯೋನ್ಮುಖವಾಗಬೇಕು ಎಂದು ಅವರಿಗೆ ಅನ್ನಿಸುವುದೇ ಇಲ್ಲ. ಏಕೆಂದರೆ ಇವರು 'ಸಮಾಜ ಸುಧಾರಕರು' ಅಲ್ಲವೇ? ಇನ್ನು ನಮ್ಮ ಮಾನವ ಹಕ್ಕು ಆಯೋಗಕ್ಕೆ ಯಾವ ರೀತಿಯಲ್ಲಿ ಮಂಕು ಬಡಿದಿದೆ ಎಂದು ಅರ್ಥವೇ ಆಗುತ್ತಿಲ್ಲ. ಭಾರತದಲ್ಲಿ ಮಹಾದುರಂತಗಳಿಗೆ ನಾಂದಿ ಹಾಡಿರುವ ಭಯೋತ್ಪಾದಕ ಕೃತ್ಯಗಳಲ್ಲಿ ಬಾಂಗ್ಲಾ ದೇಶದ ಉಗ್ರರ ಕೈವಾಡವಿದೆ ಎಂದು ಇಂಟೆಲಿಜೆನ್ಸ್ ಏಜೆನ್ಸಿ ವರದಿ ನೀಡಿದ್ದರೂ ಅದನ್ನು ಮಾನ ಹಕ್ಕುಗಳು ಒಪ್ಪುವ ಸ್ಥಿತಿಯಲ್ಲಿಲ್ಲ. ಇಂಟೆಲಿಜೆನ್ಸ್ ವರದಿ ಯಾವ ಆಧಾರದ ಮೇಲೆ ಈ ವರದಿಗಳನ್ನು ತಯಾರಿಸಿದೆಯೋ ಗೊತ್ತಿಲ್ಲ. ಇದಕ್ಕೆ ಸರಿಯಾದ ಆಧಾರವೂ ಇಲ್ಲ ಎಂದು ಮಾನವ ಹಕ್ಕು ಆಯೋಗದ 'ಮಹಾಪುರುಷ'ರೊಬ್ಬರು ಹೇಳುತ್ತಾರೆ. ಅದೇನೆ ಇರಲಿ, ಹೀಗೆಯೇ 'ದಿವ್ಯ ನಿರ್ಲಕ್ಷ' ವಹಿಸಿದಲ್ಲಿ ಒಂದಲ್ಲಾ ಒಂದು ದಿನ ನಾವೆಲ್ಲರೂ ಇದರ ನೇರ ಪರಿಣಾಮವನ್ನು ಅನುಭವಿಸಲೇ ಬೇಕು. ಈ ಅನುಭವ ಈಗ ಆಗುತ್ತಲೂ ಇದೆ.<br />ವಿಪರ್ಯಾಸ ಏನೆಂದರೆ ಭಯೋತ್ಪಾದನೆಯಿಂದಾಗಿ ದೇಶದ ಬಹುಭಾಗ ಇಂದು ತತ್ತರಿಸಿ ಹೋಗಿದ್ದರೂ ನಮ್ಮ ಫುಡಾರಿಗಳಿಗೆ ವಿಶೇಷ 'ಆಂಟಿ ಟೆರರಿಸಂ' ಕಾನೂನು ಒಂದನ್ನು ರಚಿಸಬೇಕೆಂದು ಅನ್ನಿಸಿಯೇ ಇಲ್ಲ. ನಿಜಹೇಳಬೇಕೆಂದರೆ ಭಯೋತ್ಪಾದನೆಯನ್ನು ತಡೆಗಟ್ಟಲು ಸಮರ್ಪಕ ರಣತಂತ್ರಗಳನ್ನು ಹೂಡಲೇ ಕೇಂದ್ರ ತಡಕಾಡುತ್ತಿದೆ. ಬಹುತೇಕ ಯುವಕರು ಜಿಹಾದಿ ಜಾಲದಲ್ಲಿ ಸೇರಿಕೊಂಡು ದೇಶವನ್ನು ಅಧೋಗತಿಗೆ ಕೊಂಡೊಯ್ಯುತ್ತಿದ್ದರೂ ನಾವಿನ್ನೂ ಏಕೆ ಎಚ್ಚೆತ್ತುಕೊಂಡಿಲ್ಲ? ಇಷ್ಟೆಲ್ಲಾ ಅನಾಹುತಗಳಾಗಿ, ಮುಂಬರುವ ದುರಂತಗಳನ್ನಾದರೂ ತಪ್ಪಿಸುವ ನಿಟ್ಟಿನಲ್ಲಿ ಪೋಟಾ (ಪ್ರಿವೆನ್ಷನ್ ಆಫ್ ಟೆರರಿಸಂ ಆಕ್ಟ್) ಕಾಯ್ದೆ ಜಾರಿಗೆ ತರಬಹುದಲ್ಲವೇ?<br />ಇವೆಲ್ಲದರ ನಡುವೆ ಜಾಗತಿಕ ಶಾಂತಿಯ ನೆಲೆಯಿಂದ ಇಸ್ಲಾಮಿಕ್ ಸಂಸ್ಥೆಗಳಲ್ಲಿ ಒಂದಾದ 'ಜಾಮಿಯಾತ್ ಉಲಾಮ-ಇ-ಹಿಂದ್' ಕೆಲವು ಇತರ ಮುಸ್ಲಿಂ ಸಂಸ್ಥೆಗಳೊಂದಿಗೆ ಭಯೋತ್ಪಾದನೆ ವಿರುದ್ಧ 'ಫತ್ವಾ' ಹೊರಡಿಸಿದ್ದೂ ನಿಜಕ್ಕೂ ಸಂತೋಷದ ವಿಷಯ. ಭಯೋತ್ಪಾದನಾ ಕೃತ್ಯಕ್ಕೆ ಕೇವಲ ಮುಸ್ಲಿಮರನ್ನು ದೂರುವುದು ತಪ್ಪು. ಸಮುದಾಯದ ಇನ್ಯಾರೋ ಕೆಲವರು ಮಾಡಿದ ದುಷ್ಕೃತಕ್ಕೆ ಇಡೀ ಸಮುದಾಯದ ವಿರುದ್ಧವೇ ಆರೊಪ ಹೂಡುವುದು ಪ್ರಜ್ಞಾವಂತ ನಡೆ ಅಲ್ಲ. ಇದರ ಹಿಂದೆ 'ಕಾಣದ ಕೈ'ಗಳೂ ಇರುತ್ತವೆ ಎಂಬುದನ್ನು ನಾವಿಲ್ಲಿ ತಳ್ಳಿಹಾಕಲು ಸಾಧ್ಯವಿಲ್ಲ. ಆದರೆ ಮುಸ್ಲಿಂ ಮೂಲಭೂತವಾದಿಗಳು ತಮ್ಮ ಮೂಢನಂಬಿಕೆಗಳಿಂದ ಹೊರಬರಬೇಕು. ಧರ್ಮದ ಹೆಸರಲ್ಲಿ ಇವರು ಧರ್ಮ ಹಾಗೂ ಸಮಾಜ ರಕ್ಷಣೆ ಮಾಡುತ್ತಿದ್ದಾರೆ ಎಂಬುದು ಹಾಸ್ಯಾಸ್ಪದ.<br />ಒಟ್ಟಾರೆ ನಮ್ಮೊಳಗಿನ ಲೋಪ-ದೋಷಗಳನ್ನು ತಿದ್ದಿಕೊಂಡು, ಸಮರ್ಪಕ ರಣತಂತ್ರಗಳ ಮೂಲಕ ಭಯೋತ್ಪಾದನೆಯ ಮೂಲೋಚ್ಛಾಟನೆ ಸಾಧ್ಯ. ನಮ್ಮ ಜನರ ಅಭಿವೃದ್ಧಿ, ಮೂಲ ಸೌಕರ್ಯಗಳ ಕೊರತೆ ನೀಗಿಸಿ ಸಮಾಜ ರಕ್ಷಣೆಯ ಕಾರ್ಯಕ್ಕೆ ಎಲ್ಲರೂ ಕೈಹಾಕಬೇಕು. ಬೇರೆ ದೇಶದ ಮೂಲ ಸೌಕರ್ಯ ಸರಿ ಪಡಿಸಬೇಕು ಸರಿ, ಆದರೆ ನಮ್ಮ ವ್ಯವಸ್ಥೆಯೇ ಸರಿ ಇಲ್ಲ. ನಮ್ಮಲ್ಲೇ ಕೊರತೆಗಳನ್ನಿಟ್ಟುಕೊಂಡು ಬೇರೆ ದೇಶ ಉದ್ಧಾರ ಮಾಡುತ್ತೇನೆ ಎಂದು ಹೊರಟರೆ, ಅದಕ್ಕೆ ಏನನ್ನಬೇಕೋ ತಿಳಿಯುತ್ತಿಲ್ಲ. ನಫೀಸಾ ಅಲಿ ಹಾಗೂ ಮಾನವ ಹಕ್ಕುಗಳಿಗೆ ಇದು ಅರ್ಥವಾದರೆ ಸಾಕು. </span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com0tag:blogger.com,1999:blog-2818153219058834250.post-30913322953513716262008-03-27T01:43:00.000-07:002008-06-14T02:06:11.678-07:00<div align="center"><span style="font-size:180%;"><strong>ಈತನಿಗೆ ಇನ್ನಾರು ಸಾಟಿ?</strong></span></div><br /><span style="font-size:130%;color:#6600cc;">ಕನ್ನಡದ ಕಂಪು ಅವರ ಹೃದಯದಲ್ಲೇ ಬೇರೂರಿತ್ತು. ಕನ್ನಡ ಭಾಷೆಯಲ್ಲಿ ಅವರಿಗಿದ್ದ ಹಿಡಿತವನ್ನು ಕಂಡೇ ನಾನಂದು ನಿಬ್ಬರಗಾಗಿದ್ದೆ. ಕನ್ನಡ ಭಾಷೆಯನ್ನು ಬಲ್ಲವ ಸುಲಲಿತವಾಗಿ ಕನ್ನಡ ಮಾತನಾಡಿದರೆ ಅದರಲ್ಲಿ ಅಂಥದ್ದೇನೂ ವಿಶೇಷ ಇಲ್ಲ ಬಿಡಿ ಎಂದನಿಸುವುದು ನಿಜ. ಆದರೆ ನಾನೀಗ ಹೇಳಲು ಹೊರಟಿರುವುದು ಒಬ್ಬ ಕನ್ನಡಿಗನ ಕುರಿತಾಗಿಯಂತೂ ಅಲ್ಲ. ಇನ್ನೂ ಹೇಳಬೇಕೆಂದರೆ ಅವರು ಒಬ್ಬ ಭಾರತದವರೇ ಅಲ್ಲ! ಅವರು ಸದ್ಯ ಇರುವುದು ಜರ್ಮನಿಯಲ್ಲಿ. ಹೊರದೇಶದವರಾಗಿದ್ದರೂ, ವಿಶೇಷವಾಗಿ ಹೇಳಬೇಕೆಂದರೆ ಭಾರತದ ಸಂಸ್ಕೃತಿ, ಸಂಪ್ರದಾಯ, ಭಾಷೆ, ನುಡಿ-ನಾಡು ಕಂಡರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಕನ್ನಡ ಭಾಷೆಯನ್ನು ಅರಳು ಹುರಿದಂತೆ ಮಾತನಾಡುವ ಅವರು ಕನ್ನಡ ನಾಡಿನ ಹಿರಿ-ಕಿರಿಯ ಸಾಹಿತಿಗಳು ಹಾಗೂ ಅವರ ಕುರಿತಾಗಿ ಹೆಚ್ಚಿನದೆಲ್ಲವನ್ನೂ ತಿಳಿದುಕೊಂಡಿದ್ದಾರೆ. ಕನ್ನಡ ಸಾಹಿತ್ಯ ಅವರ ನಾಲಿಗೆಯಲ್ಲಿ ಸತ್ವಯುತವಾಗಿ ಹರಿದಾಡುತ್ತಿದೆ! ಅವರ ಮಹತ್ಸಾಧನೆಗಳ ಬಗ್ಗೆ ಇಣುಕು ಹಾಕುತ್ತಾ ಹೋದರೆ ಇನ್ನೂ ಒಂದು ಆಶ್ಚರ್ಯಕಾರಿ ಸತ್ಯ ನಿಮ್ಮ ಕಣ್ಮುಂದೆ ಬಂದು ಕುಳಿತುಕೊಳ್ಳುತ್ತದೆ. ಹೌದು, ಅವರು ಕನ್ನಡ ಭಾಷೆಯಲ್ಲೇ ಡಾಕ್ಟರೇಟ್ ಪದವಿ ಗಳಿಸಿದ್ದಾರೆ!!<br />ಹೆಸರು ರಾಬರ್ಟ್ ಜೆಯ್ದೆನ್ ಬೊಸ್. ದೇಶ ನೆದರ್ ಲ್ಯಾಂಡ್(ಹಾಲೆಂಡ್). ಹುಟ್ಟಿದ್ದು ಕೆನಡಾದಲ್ಲಿ. ತಂದೆ ಹಾಲೆಂಡ್ನವರಾದರೆ ತಾಯಿ ಇಂಡೋನೇಷಿಯಾದವರು. ಸರಿ, ಮೂರು ದೇಶಗಳ ರಕ್ತ ಅವರ ದೇಹದಲ್ಲಿ ಹರಿಯುತ್ತಿದ್ದರೂ, ಅವರ ಮೈಯಲ್ಲಿ ಕನ್ನಡದ ರಕ್ತ ಪ್ರಕಾಶಮಾನವಾಗಿ ಮಿಂಚುತ್ತಿದೆ ಎನ್ನಲಡ್ಡಿಯಿಲ್ಲ ಬಿಡಿ. ಕಳೆದ ವರ್ಷ ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಈ ವ್ಯಕ್ತಿಯ ಜೊತೆ ಮಾತನಾಡುವ ಭಾಗ್ಯ ನನ್ನದಾಗಿತ್ತು. ಒಂದೇ ಸಮನೆ ಕನ್ನಡದಲ್ಲಿ ಉಸುರುತ್ತಿದ್ದ ಅವರ ಮಾತುಗಳೇ ನನ್ನ ಹುಬ್ಬೇರಿಸುವಂತೆ ಮಾಡಿತ್ತು.<br />ರಾಬರ್ಟ್ ಅವರು ಜೈನ ಧರ್ಮಕ್ಕೆ ಮತಾಂತರ ಹೊಂದಿದ ವ್ಯಕ್ತಿ. ಜೈನ ಧರ್ಮದ ಬಗ್ಗೆ ಇನ್ನಷ್ಟು ಅಧ್ಯಯನ ಮಾಡಬೇಕೆಂಬ ಅಭಿಲಾಷೆ ಅವರದ್ದು. ಪ್ರಸ್ತುತ ಜರ್ಮನಿಯ ಮ್ಯೂನಿಕ್ ವಿಶ್ವವಿದ್ಯಾಲಯದಲ್ಲಿ ಭಾರತೀಯ ಸಂಸ್ಕೃತಿ, ಕಲೆ, ಧಾರ್ಮಿಕ ದಾರ್ಶನಿಕತೆಗಳ ಅಡಿಪಾಯವಿರುವ ``ಇಂದಾಲಜಿ'' ಎಂಬ ವಿಷಯದ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ವೀರಶೈವ, ಜೈನತತ್ವಗಳ ಬಗ್ಗೆ ಅತಿಯಾದ ಆಸಕ್ತಿ ಹಾಗೂ ಗೌರವ ಹೊಂದಿದ್ದಾರೆ.<br />ಜರ್ಮನಿಯ ಮ್ಯೂನಿಕ್ನಲ್ಲಿ 1989ರಂದು ``ಕನ್ನಡ ಗದ್ಯ ಸಾಹಿತ್ಯದಲ್ಲಿ ಇರುವ ಸಂಸ್ಕೃತಿಯ ವೈಶಿಷ್ಟ್ಯದ ಕಥಾವಸ್ತುಗಳು'' ಎಂಬ ವಿಷಯದ ಕುರಿತು ಡಾಕ್ಟರೇಟ್ ಪದವಿ ಗಳಿಸಿದ ಅವರು, ಹಾಲೆಂಡ್ ನ ಯೂಟ್ರೆಕ್ಟ್ನಲ್ಲಿ ಇದ್ದ ಕೋಟದ ಪರಮೇಶ್ವರ ಐತಾಳ್ ಅವರಿಂದ ಕನ್ನಡ ಅಭ್ಯಸಿಸಿದರು. ಜೈನ ಧರ್ಮದ ಮೇಲಿನ ಆಸಕ್ತಿ ಅವರನ್ನು ಜೈನ ಧರ್ಮವನ್ನು ಕಲಿಯಲು ಪ್ರೇರೇಪಿಸಿತು.<br />ಶಿವರಾಮ ಕಾರಂತರ ''ಮೂಕಜ್ಜಿಯ ಕನಸುಗಳು'', ''ಹುಚ್ಚುಮನಸ್ಸಿನ ಹತ್ತುಮುಖಗಳು'', ''ಮೈಮನಗಳ ಸುಳಿಯಲ್ಲಿ'', ಕೃತಿಗಳನ್ನು ಎಂದು ಎದೆಯುಬ್ಬಿಸಿ ಹೇಳುವ ರಾಬರ್ಟ್ ಅವರಿಗೆ ಕಾರಂತರ ''ಚೋಮನ ದುಡಿ'' ಹೃದಯಕ್ಕೆ ಬಾರೀ ಹತ್ತಿರವಾಗಿದೆಯಂತೆ. ಹೌದು, ಕಾರಂತರ ಕಾದಂಬರಿಗಳೆಂದರೇ ಎಂಥವರೂ ಪ್ರೀತಿಸುತ್ತಾರೆ ಅಲ್ಲವೇ.<br />''ಕನ್ನಡ ಮಾತನಾಡುವಾಗ ಅಥವಾ ಬರೆಯುವಾಗ ನಾನು ಹಾ.ಮಾ. ನಾಯಕರ ಬಳಿ ಹೋಗುತ್ತಿದ್ದೆ. ನಾನು ಇಂದು ಈ ಇಷ್ಟು ಕನ್ನಡ ಮಾತನಾಡುತ್ತೇನೆ ಎಂದರೆ ಅದರಲ್ಲಿ ನಾಯಕರ ಪಾತ್ರ ಬಹುಮುಖ್ಯವಾದುದು'' ಎಂದು ನಗು ನಗುತ್ತಾ ಅತ್ಯಂತ ಖುಷಿಯಿಂದ ಅವರು ಹೇಳುತ್ತಿದ್ದಾಗ, ಅಯ್ಯೋ, ನನ್ನ ಕನ್ನಡ ಮಾಷ್ಟ್ರು ಇವರೇ ಆಗಬಾರದೇ ಎಂದು ನನಗನಿಸಿದ್ದು ಖಂಡಿತಾ ಸುಳ್ಳಲ್ಲ!<br />ಒಟ್ಟು ಒಂಭತ್ತು ಭಾಷೆಗಳಲ್ಲಿ ಹಿಡಿತ ಸಾಧಿಸಿರುವ ಇವರಿಗೆ, ಸಂಸ್ಕೃತ, ಕನ್ನಡ, ಪ್ರಾಕೃತ, ಹಿಂದಿ, ಬೆಂಗಾಲಿ, ಅಸ್ಸಾಮಿ, ತಮಿಳು, ಉರ್ದು ಹಾಗೂ ಪಾಲಿ ಭಾಷೆಗಳನ್ನು ಮಾತನಾಡುತ್ತಾರೆ. ನಾನು ತುಳುನಾಡಿನವನಾದ್ದರಿಂದ, ತುಳು ಬರುತ್ತಾ ಎಂದು ಕೇಳಿದರೆ, ``ಒಂತೆ ಒಂತೆ ಬರ್ಪುಂಡು, ಆಂಡ ಪಾತೆರುಜಿ ಆತೆ'' ಎಂದು ಮುಗುಳ್ನಗಬೇಕೆ??<br />ಇಂದಿನ ಆಧುನಿಕ ಯುಗದಲ್ಲೂ ನಮ್ಮಲ್ಲಿ ಸಾಂಪ್ರದಾಯಿಕ ಮಡಿವಂತರಿಗೇನೂ ಕಡಿಮೆ ಇಲ್ಲ ಬಿಡಿ. ತಮ್ಮದೇ ಆದ ವಿಚಿತ್ರ ಕಟ್ಟುಪಾಡುಗಳನ್ನು ಈಗಲೂ ಅನುಸರಿಕೊಂಡು ಹೋಗುತ್ತಿರುವರು ನಮ್ಮ ನಡುವೆಯೇ ಇದ್ದಾರೆ. ಇಂಥವರಿಂದ ಸಮಾಜದ ಕೆಳವರ್ಗದ ಹಾಗೂ ಇನ್ನಿತರ ವರ್ಗದ ಜನರು ಇಂದಿಗೂ ನೋವನ್ನು ಅನುಭವಿಸುವುದು ಇದ್ದದ್ದೇ. ಅಂತರಂಗದ ಮಡಿವಂತಿಕೆಯನ್ನು ಕಾಯ್ದುಕೊಳ್ಳದಿದ್ದರೂ, ತೋರಿಕೆಯ ಮಡಿವಂತಿಗೆ ದುಂಬಾಲು ಬಿದ್ದು ಸಾಮಾನ್ಯ ವರ್ಗದವರನ್ನು ನೀಚ ದೃಷ್ಟಿಯಿಂದ ಕಾಣುವ 'ಸ್ವಯಂಘೋಷಿತ' ಮಡಿವಂತರಿಂದ ರಾಬರ್ಟ್ ಅವರಿಗೂ ನೋವುಂಟಾಗಿದೆ! ಆದರೆ ಇವರಿಗೆ ಆದದ್ದು ಕೊಂಚ ಬೇರೆ ರೀತಿಯ ಅನುಭವ.<br />ಒಮ್ಮೆ ಮಾಧ್ವ ಸಿದ್ಧಾಂತದ ಕುರಿತು ಅವರು ಮಾತನಾಡುತ್ತಿದ್ದಾಗ, ಕೆಲವು ಸಾಂಪ್ರದಾಯಿಕ ಮಡಿವಂತರು, ''ಮುಂದಿನ ಜನ್ಮದಲ್ಲಿ ನೀವು ಮಾಧ್ವರಾಗಿ ಹುಟ್ಟಿಬನ್ನಿ. ಆಮೇಲೆ ಮಾಧ್ವ ಸಿದ್ಧಾಂತದ ಕುರಿತು ಮಾತನಾಡುವಿರಂತೆ'' ಎಂದು ತೆಗಳಿದ್ದನ್ನು ಅತ್ಯಂತ ಬೇಸರದಿಂದ ಹೇಳುತ್ತಾರೆ.<br />ಒಬ್ಬ ವ್ಯಕ್ತಿ ಒಂದು ವಿಷಯದ ಬಗ್ಗೆ ಕಲಿಯಲು ಆಸಕ್ತಿ ತೋರಿತಾಗ ಆತನ ಬೆನ್ನುತಟ್ಟಿ ಪ್ರೋತ್ಸಾಹಿಸಬೇಕೆ ಹೊರತು, ಈ ರೀತಿ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದಾಗ, ನಿರಾಶೆ ಹಾಗೂ ಕೊರಗು ಅವರ ಮೊಗದಲ್ಲಿ ಅಚ್ಚೊತ್ತಿ ಕೂತಿತ್ತು.<br />ಅದೇನೆ ಇರಲಿ, ವಿದೇಶಿಗನೊಬ್ಬ ಕನ್ನಡವನ್ನು ಇಷ್ಟು ಸುಂದರವಾಗಿ, ಸ್ವಚ್ಛಂದವಾಗಿ, ಅಷ್ಟೇ ಕೋಮಲ ಧ್ವನಿಯಿಂದ ಮಾತನಾಡುತ್ತಾನೆ ಎಂದಾದರೆ, ನಮ್ಮ ನಡವಳಿಕೆ ಬಗ್ಗೆ ಪ್ರಶ್ನೆ ಮೂಡದೆ ಖಂಡಿತಾ ಇರದು. ಕನ್ನಡ ನಮ್ಮ ಮಾತೃಭಾಷೆ. ಆದರೆ ಪಾಶ್ಚಾತ್ಯರ ಇಂಗ್ಲಿಷ್ ಭಾಷೆಗೆ ನಾವು ಸೋತಾಗಿದೆ. ಹೌದು, ಇಂದು ಇಂಗ್ಲಿಷ್ ಬೇಕು. ಆದರೆ ನಮಗೆ, ನಮ್ಮ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ ಎಂದರೂ ನಾವು ಕಣ್ಮುಚ್ಚಿ ಕುಳಿತಿದ್ದೇವೆ ಎಂದರೆ ಅದಕ್ಕೆ ಏನನ್ನಬೇಕು? ಇದು ನಮ್ಮ ಸ್ವಂತಿಕೆಯ ಪ್ರಶ್ನೆ. ನಮ್ಮವರು ರಾಬರ್ಟ್ ರಂಥವರನ್ನು ನೋಡಿ ಕಲಿವಂಥದ್ದು ಸಾಕಷ್ಟಿದೆ.<br />ಮಸ್ತಕಾಭಿಷೇಕದ ದಿನದಂದು ರತ್ನಗಿರಿ ಬೆಟ್ಟದಲ್ಲಿ ಮಿಂದು ಮೊಳಗುತ್ತಿದ್ದ ಗೊಮ್ಮಟ ಒಂದು ಕಡೆ ಸಂತೋಷ ಕುಣಿದಾಡಿದಂತೆ ಕಂಡುಬರುತ್ತಿದ್ದರೆ, ಇತ್ತ ನಾನು, ವಿದೇಶದಿಂದ ಬಂದ, ಅಷ್ಟೇ ಆತ್ಮೀಯನಂತೆ ಕಂಡು ಬಂದ, ಆಕಸ್ಮಿಕವಾಗಿ ಭೇಟಿ ಮಾಡಿದ ರಾಬರ್ಟ್ ಅವರೊಂದಿಗೆ ಮಾತುಕತೆ ನಡೆಸಿ ಮನದೊಳಗೇ ಹರ್ಷಚಕಿತನಾಗಿ ನಲಿದಾಡುತ್ತಿದ್ದೆ.</span>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com2tag:blogger.com,1999:blog-2818153219058834250.post-80147439351128988322008-02-28T03:55:00.000-08:002008-02-28T04:15:49.418-08:00Home Alone!<strong></strong><br /><p><strong><span style="font-family:arial;">Bangalore: killer city! </span></strong></p><p><strong><span style="font-family:arial;">Safety of women in the city is going out of reach day by day</span></strong></p><p><strong>Tension for home alone ladies, murder, investigation, crime news in media with huge font have been growing to be a regular activity in silicon city.<br />“Subramani calling...” her mobile was ringing impatiently. Subramani was trying to call his wife Geetha however but at the result did not differ. Neither she picked the call nor did she call him back. Conceiving with the idea that she might have gone to her parents Subramani kept quite. But he was unaware that his expectation would go absolutely wrong.<br />She was Geetha, a 33-year-old housewife who was found strangled to death at her residence in Bangalore. Her gold ornaments were missing as were the jewelry s kept in the cupboard and Rs 9,000 cash. As her husband Subrahmani and kids were also ignorant of the fact that their mother had been killed, spent almost 4 hours playing in front of the house.<br />People say Bangalore is burning and to some extent it’s true. As Bangalore is becoming a terror hub, the people are getting tensed each and every day. With that the serial murders of home alone women, condition turn out to be even worse.<br />To the shock of Bangaloreans’ day after it happened again! Yet another home-alone woman found murdered in Bangalore. This time it was of Geethalakshmi Islur a forty years old lonely woman. She was an employee at a remand home. But as you think it was not a murder for currency and gold. Valuables in the house were untouched. As the investigations revealed her own family was involved in a civil dispute!<br />“It was not a murder for gain. The internal disputes with acquaintance resulted in murder. But we got clues about the killers involved in the murder, and you can expect them soon” said Bangalore South, DCP, S. Ravi to TSI.<br />Although this murder was not a ‘murder of gain’, it is an accepted fact that 90% of the women in the city are killed for gain! Last year Bangalore witnessed 48 women murders, 58 dowry deaths, 290 harassment cases and 62 rapes! No wonder city is big time on erroneous corridor.<br />“We have already taken several steps to provide safety to public and police’s are patrolling in every area of the city. ‘Hoysala’ patrol team also working hard for the safety of public” the DCP added.<br />But as the safety of women is going out of reach day by day the harassments, murders of home alone women are increasing at an enormous rate. The effectiveness of night patrolling has been questioned by the public as slaughters are getting their work done easily.<br />It is already proved Bangalore is not a safe ecstasy for women as it is developing into a most terrible city. Not only house wives even the BPO lady staff, college going girls are also becoming prey of the eve teasers and road Romeos. Bangalore records the highest number of dowry deaths in the state and unaccountable rape and eve banter. It is the time to ponder. If you still argue Bangalore is an out of harm's way city for women, you are wrong.<br />First it was Asha Krishnamurthy, strangled to death at her residence in Sheshadripuram on 2007 november 26th. Geetha was the 6th women got slaughted and Geethalakshmi was the 7th. In between 2007 november 26th to 21st february 2008, totally 7 home alone women murders have been taken place in the city.<br />The Police might have successfully caught some of the accused... But one question is left unanswered- Do those children get their Mothers back?</strong></p>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com0tag:blogger.com,1999:blog-2818153219058834250.post-73610106808918552972008-02-06T06:21:00.000-08:002008-12-10T02:33:22.339-08:00<div align="center"><span style="font-size:180%;color:#990000;"><strong>Behold Those Days.....</strong></span></div><br /><div><span style="color:#990000;"></span></div><br /><div><span style="font-size:100%;color:#990000;"><a href="https://blogger.googleusercontent.com/img/b/R29vZ2xl/AVvXsEi8Y1xtXZW-9prZ0pcn-Soa7P8OuObCtNLCsHboGN2NAAg4Owe_nh-TOjDJLUictcOcEZIp0hwXGpxDBynDpxJDck0vTYFxo0jZJVs-c7r1-Ctloi8ByP6EWegy93UpRqOO9fIHUpT_5cY/s1600-h/emeralddream[1].jpg"><img id="BLOGGER_PHOTO_ID_5211663641799361602" style="FLOAT: left; MARGIN: 0px 10px 10px 0px; CURSOR: hand" alt="" src="https://blogger.googleusercontent.com/img/b/R29vZ2xl/AVvXsEi8Y1xtXZW-9prZ0pcn-Soa7P8OuObCtNLCsHboGN2NAAg4Owe_nh-TOjDJLUictcOcEZIp0hwXGpxDBynDpxJDck0vTYFxo0jZJVs-c7r1-Ctloi8ByP6EWegy93UpRqOO9fIHUpT_5cY/s320/emeralddream%5B1%5D.jpg" border="0" /></a>My friend Sunil (Now working in a TV channel) has created a Blog recently which attracted me a lot. It's really a surprising package from him to reunite those class mates, even I can say bench mates and the close ones like him. The main aim of the blog is to bring back those huge memories of college days, the funny things what all we did in those gorgeous days of Life.<br />The word 'memory' itself brings pleasant feeling to the mind, where one runs towards the place from where he can get flashbacks of his life. Now let me tell you the meaning of the word memory. Psychology says that Memory is a organisms ability to store, retain and subsequently retrieve the information.<br />Every one will have his own memory power and based on his mental power one can grasp anything deep earth. But as u know once we go back to the earlier days of life, truly it brings a light smile, a gesture of happiness, bit of cry and a slight angry too. Totally I can say that our body language will be completely different from the normal depending upon the flashback we go.<br />Now let me have a fast run towards flashbacks of my college days. Waaav!! I miss them a lot. I dont know whether they miss me or not. But I miss my close ones and some of my class mates, and not to forget my intimate lecturer's. Me now being alone, with no facial contacts with my friends, always tend to remember my college days, especially the final degree year, at the time I go to sleep. You see, with a free mind, its a nice time to have a journey towards the sweet heaven (so that you can get a wonderful sleep). Because the world will be sleeping (except the robbers, Lovers and some 'special' stupids) at that moment and you will be free from all the pressures, irritations, and your mind will be saying "cool man calm down, now let me to go somewhere else where you can get extra joy, happy which makes you breathe a sigh of relief". Yes, your mind says the right thing, and with no hesitation say yes to that. Yes!! your journey starts now. Take a cool breath, just start thinking your past sweet days which you spent with your friends, intimates, parents, relatives. Yes, you are entering into your own fascinating world of dreams (not excactly dreams but still we can say it as past memorable dreams). You are not aware of anything outside happenings and your body will be covered in a blanket!!<br />Its just a minute to take you to enter into the new world and there you will be blessed to see your same old friends talking to you, enjoying the greatest time with you and yourself being a part of whole enjoyment. See, here you can observe that in a day you will be moved into 3 dissimilar worlds. One is the world of reality, second is the world past memory and finally the world when you go to sleep. Here I can assure you that atleast 2 of them will give you bundle happiness, tremendous joys, package of relief ness and incredible delight and finally a kind of jubilation starts in your mind. I can also say it as a sort satisfaction.<br />Why Make A Journey To The Other Side Of The World When The World Has Come To You?" </span></div>ಕೆ. ರಾಘವ ಶರ್ಮhttp://www.blogger.com/profile/04512752708389887508noreply@blogger.com0